TOP STORIES:

FOLLOW US

ನೃತ್ಯಪಟು ಬಹುಮುಖ ಬಾಲ ಪ್ರತಿಭೆ ದಿಶಾ ಕೆ ಪೂಜಾರಿ


‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬ ಮಾತಿನಂತೆ ಚಿಕ್ಕ ವಯಸ್ಸಿನಲ್ಲೇ ಹಲವು ಪ್ರಶಸ್ತಿಗಳನ್ನು ಮುಡಿಗೆರಿಸಿ ಕೊಂಡವಳು.’ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು’ ಎನ್ನುವಾಗೆ ಇನ್ನೂ 11 ವರ್ಷದಲ್ಲೇ ಜಿಲ್ಲಾಮಟ್ಟ,ರಾಜ್ಯ ಮಟ್ಟದವರೆಗೆ ತನ್ನ ಪ್ರತಿಭೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡು,ಸಾಧನೆಯ ಹಾದಿಯಲ್ಲಿ ಹೆಜ್ಜೆಗಳನ್ನಿಡುತ್ತ ಸಾಗುತ್ತಿರುವ ಹೆಮ್ಮೆಯ ನೃತ್ಯಪಟು ಬಹುಮುಖ ಬಾಲ ಪ್ರತಿಭೆ ದಿಶಾ.ಕೆ.ಪೂಜಾರಿ.

ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕೇಶವ ಪೂಜಾರಿ ಮತ್ತು ರಾಜೀವಿ.ಕೆ ದಂಪತಿಗಳ ಮೊದಲನೆ ಸುಪುತ್ರಿಯಾಗಿ 6/10/2009ರಲ್ಲಿ ಜನಿಸಿದರು. ಒಂದು ಸಹೋದರ ಒಳಗೊಂಡ ಚಿಕ್ಕ ಸಂಸಾರ ಇವರದ್ದು. ಪ್ರಸ್ತುತ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ.

ಚಿಕ್ಕ ವಯಸ್ಸಿನಲ್ಲೇ ನೃತ್ಯದಲ್ಲಿ ಆಸಕ್ತಿ ಇದ್ದ ಇವರು, ಈಗಾಗಲೇ 500 ಮಿಕ್ಕಿ ವೇದಿಕೆಯಲ್ಲಿ ತನ್ನ ಕಲೆಯನ್ನು ಪ್ರದರ್ಶಿಸಿದ್ದಾರೆ.ಇಷ್ಟೇ ಅಲ್ಲದೆ ಯಕ್ಷಗಾನ,ನಾಟಕ,ಚಿತ್ರಕಲೆ,ಯೋಗ,ಭರತನಾಟ್ಯ,ಸಂಗೀತ ಮತ್ತು ನಿರೂಪಣೆ ಕ್ಷೇತ್ರದಲ್ಲು ಮುಂಚೂಣಿಯಲ್ಲಿರುವುದು ಇವರಲ್ಲಿ ಇರುವ ಪ್ರತಿಭೆಗೆ ಸಾಕ್ಷಿಯಾಗಿದೆ. ಚಿಕ್ಕ ವಯಸ್ಸಿನಲ್ಲೇ ಹತ್ತು-ಹಲವು ಸಂಘ-ಸಂಸ್ಥೆಗಳು ಸನ್ಮಾನಗಳು ಇವರ ಮಡಿಲಿಗೆ ಸೇರಿದೆ. ಸ್ಥಳೀಯ ಟಿ.ವಿ ಚಾನೆಲ್ ಗಳು ನಡೆಸಿದ ಡ್ಯಾನ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ‘ರಾರಾಸಂ ಫೌಂಡೇಶನ್ ರವರು ನಡೆಸಿದ ಡ್ಯಾನ್ಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ ಯುವವಾಹಿನಿ ನಡೆಸುವ ‘ಡೆನ್ನಾನ ಡೆನ್ನಾನ’ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜನರ ಮನಸ್ಸನ್ನು ಗೆದ್ದ ಹೆಮ್ಮೆಯ ಬಾಲ ಸಾಧಕಿ.#Namma Tv ಚಾನೆಲ್ ನಡೆಸಿದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ‘ಬಿಟ್ ದಿ ಬಿಟ್’ ನೃತ್ಯ ಸ್ಪರ್ಧೆಯಲ್ಲಿ, ‘ವಾಯ್ಸ್ ಝೊನ್’ ಏರ್ಪಡಿಸಿದ ‘ನಮ್ಮ ಡ್ಯಾನ್ಸ್ ಚಾಂಪಿಯನ್’ ಟಿ.ವಿ ಶೋನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

#Bodhi media ಆಯೋಜಿಸಿದ “ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್” ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಗಳಿಸಿದ್ದಾರೆ. “ಡ್ಯಾನ್ಸ್ ಮಾಡಿ ಬಹುಮಾನ ಗೆಲ್ಲಿರಿ” ಎನ್ನುವ ವಿಭಿನ್ನ ಡ್ಯಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ ಕೀರ್ತಿ ಈ ಬಾಲ ಪ್ರತಿಭೆಯದ್ದು, ಇಷ್ಟೇ ಅಲ್ಲದೆ ಮಾಜಿ ಸಚಿವರಾದ ರಮನಾಥ ರೈರವರಿಂದ ಸನ್ಮಾನವನ್ನು ಗಿಟ್ಟಿಸಿಕೊಂಡು,ಹೆಗ್ಗಳಿಕೆ ಮಾತುಗಳನ್ನಾಡಿ,ಶುಭ ಹಾರೈಸಿದ್ದಾರೆ. ಕನ್ನಡ ಚಲನಚಿತ್ರದಲ್ಲಿ ಬಾಲ ನಟಿಯಾಗಿ ಬಣ್ಣ ಹಚ್ಚಿ ನಟನೆ ಮಾಡಿರುವುದು ಇವರ ಸಾಧನೆಯ ದೊಡ್ಡ ಹೆಜ್ಜೆ ಆಗಿದೆ ಮತ್ತು ಈ ಚಲನಚಿತ್ರಯು ಸಾಧ್ಯದಲ್ಲೆ ಬಿಡುಗಡೆಗೊಳ್ಳಲಿದೆ.ಚಿಕ್ಕ ವಯಸ್ಸಿನಲ್ಲೇ ಹಲವು ಶಾರ್ಟ್ ಫಿಲ್ಮ್ ಮತ್ತು ಆಲ್ಬಮ್ ಸಾಂಗ್ ನಲ್ಲಿ ಪಾತ್ರಗಳನ್ನು ಮಾಡಿ ನಟನೆಯಲ್ಲು ತಮ್ಮ ಛಾಪುನ್ನು ಮೂಡಿಸಿದ್ದಾರೆ.

ಹತ್ತು ಹಲವು ಪ್ರಶಸ್ತಿ,ಸನ್ಮಾನಗಳನ್ನು ಬಾಚಿಕೊಂಡಿರುವ ದಿಶಾರವರು ಮತ್ತು ಈಗಾಗಲೇ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇವರು ಪ್ರಸ್ತುತ ‘ಶ್ರೀ ಚಿಂತಾಮಣಿ ಡ್ಯಾನ್ಸ್ ಗ್ರೂಪ್’ ಕಡೇಶಿವಾಲಯದ ತಂಡದ ನಾಯಕ ಮತ್ತು ಕೋರಿಯೊಗ್ರಾಪರ್ ಆದ ಮಹೇಶ್ ಕುಲಾಲ್ ಇವರಿಂದ ನೃತ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ.

 

ನಿಮ್ಮೆಲ್ಲಾ ಕನಸು ನನಸಾಗಲಿ,ಸಾಧನೆಯ ಶಿಖರವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ,ಸಾಧನೆಯ ಹಾದಿ ಸುಗಮವಾಗಲಿ,ಇನ್ನಷ್ಟು ಅವಕಾಶಗಳು ನಿಮ್ಮ ಮಡಿಲಿಗೆ ಸೇರಲಿ,ಪ್ರಶಸ್ತಿ ಪುರಸ್ಕಾರಗಳು ನಿಮಗೆ ಹರಸಿ ಬರಲಿ ಎನ್ನುವ ಶುಭಾಶಯಗಳೊಂದಿಗೆ,ನೃತ್ಯ ಲೋಕದಲ್ಲಿ ಇನ್ನೂ ಎತ್ತರದ ಸ್ಥಾನಕ್ಕೇರಲು ಈ ಪ್ರತಿಭೆಯನ್ನು ಹರಸಿ,ಹಾರೈಸಿ,ಆರ್ಶಿವಾದಿಸೋಣ ಎನ್ನುವ ಕೋರಿಕೆ.

✍ ರಾಜೇಶ್ ಎಸ್ ಬಲ್ಯ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »