TOP STORIES:

FOLLOW US

ನೃತ್ಯಪಟು ಬಹುಮುಖ ಬಾಲ ಪ್ರತಿಭೆ ದಿಶಾ ಕೆ ಪೂಜಾರಿ


‘ಬೆಳೆಯುವ ಸಿರಿ ಮೊಳಕೆಯಲ್ಲಿ’ ಎಂಬ ಮಾತಿನಂತೆ ಚಿಕ್ಕ ವಯಸ್ಸಿನಲ್ಲೇ ಹಲವು ಪ್ರಶಸ್ತಿಗಳನ್ನು ಮುಡಿಗೆರಿಸಿ ಕೊಂಡವಳು.’ಮೂರ್ತಿ ಚಿಕ್ಕದಾದರು ಕೀರ್ತಿ ದೊಡ್ಡದು’ ಎನ್ನುವಾಗೆ ಇನ್ನೂ 11 ವರ್ಷದಲ್ಲೇ ಜಿಲ್ಲಾಮಟ್ಟ,ರಾಜ್ಯ ಮಟ್ಟದವರೆಗೆ ತನ್ನ ಪ್ರತಿಭೆಯನ್ನು ಪ್ರದರ್ಶಿಸಿ ಸೈ ಎನಿಸಿಕೊಂಡು,ಸಾಧನೆಯ ಹಾದಿಯಲ್ಲಿ ಹೆಜ್ಜೆಗಳನ್ನಿಡುತ್ತ ಸಾಗುತ್ತಿರುವ ಹೆಮ್ಮೆಯ ನೃತ್ಯಪಟು ಬಹುಮುಖ ಬಾಲ ಪ್ರತಿಭೆ ದಿಶಾ.ಕೆ.ಪೂಜಾರಿ.

ಬಂಟ್ವಾಳ ತಾಲೂಕಿನ ಬರಿಮಾರು ಗ್ರಾಮದ ಕೇಶವ ಪೂಜಾರಿ ಮತ್ತು ರಾಜೀವಿ.ಕೆ ದಂಪತಿಗಳ ಮೊದಲನೆ ಸುಪುತ್ರಿಯಾಗಿ 6/10/2009ರಲ್ಲಿ ಜನಿಸಿದರು. ಒಂದು ಸಹೋದರ ಒಳಗೊಂಡ ಚಿಕ್ಕ ಸಂಸಾರ ಇವರದ್ದು. ಪ್ರಸ್ತುತ ಪ್ರಾಥಮಿಕ ವಿದ್ಯಾಭ್ಯಾಸವನ್ನು ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ 5 ನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ.

ಚಿಕ್ಕ ವಯಸ್ಸಿನಲ್ಲೇ ನೃತ್ಯದಲ್ಲಿ ಆಸಕ್ತಿ ಇದ್ದ ಇವರು, ಈಗಾಗಲೇ 500 ಮಿಕ್ಕಿ ವೇದಿಕೆಯಲ್ಲಿ ತನ್ನ ಕಲೆಯನ್ನು ಪ್ರದರ್ಶಿಸಿದ್ದಾರೆ.ಇಷ್ಟೇ ಅಲ್ಲದೆ ಯಕ್ಷಗಾನ,ನಾಟಕ,ಚಿತ್ರಕಲೆ,ಯೋಗ,ಭರತನಾಟ್ಯ,ಸಂಗೀತ ಮತ್ತು ನಿರೂಪಣೆ ಕ್ಷೇತ್ರದಲ್ಲು ಮುಂಚೂಣಿಯಲ್ಲಿರುವುದು ಇವರಲ್ಲಿ ಇರುವ ಪ್ರತಿಭೆಗೆ ಸಾಕ್ಷಿಯಾಗಿದೆ. ಚಿಕ್ಕ ವಯಸ್ಸಿನಲ್ಲೇ ಹತ್ತು-ಹಲವು ಸಂಘ-ಸಂಸ್ಥೆಗಳು ಸನ್ಮಾನಗಳು ಇವರ ಮಡಿಲಿಗೆ ಸೇರಿದೆ. ಸ್ಥಳೀಯ ಟಿ.ವಿ ಚಾನೆಲ್ ಗಳು ನಡೆಸಿದ ಡ್ಯಾನ್ಸ್ ಸ್ಪರ್ಧೆಯಲ್ಲಿ ಪಾಲ್ಗೊಂಡು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ‘ರಾರಾಸಂ ಫೌಂಡೇಶನ್ ರವರು ನಡೆಸಿದ ಡ್ಯಾನ್ಸ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ ಯುವವಾಹಿನಿ ನಡೆಸುವ ‘ಡೆನ್ನಾನ ಡೆನ್ನಾನ’ ಜಿಲ್ಲಾಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಿ ಜನರ ಮನಸ್ಸನ್ನು ಗೆದ್ದ ಹೆಮ್ಮೆಯ ಬಾಲ ಸಾಧಕಿ.#Namma Tv ಚಾನೆಲ್ ನಡೆಸಿದ ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಮತ್ತು ‘ಬಿಟ್ ದಿ ಬಿಟ್’ ನೃತ್ಯ ಸ್ಪರ್ಧೆಯಲ್ಲಿ, ‘ವಾಯ್ಸ್ ಝೊನ್’ ಏರ್ಪಡಿಸಿದ ‘ನಮ್ಮ ಡ್ಯಾನ್ಸ್ ಚಾಂಪಿಯನ್’ ಟಿ.ವಿ ಶೋನಲ್ಲಿ ಉತ್ತಮ ಪ್ರದರ್ಶನ ನೀಡಿದ್ದಾರೆ.

#Bodhi media ಆಯೋಜಿಸಿದ “ಗೋಲ್ಡನ್ ಬುಕ್ ಆಪ್ ವರ್ಲ್ಡ್ ರೆಕಾರ್ಡ್” ನೃತ್ಯ ಸ್ಪರ್ಧೆಯಲ್ಲಿ ಭಾಗವಹಿಸಿ ಪ್ರಮಾಣ ಪತ್ರ ಗಳಿಸಿದ್ದಾರೆ. “ಡ್ಯಾನ್ಸ್ ಮಾಡಿ ಬಹುಮಾನ ಗೆಲ್ಲಿರಿ” ಎನ್ನುವ ವಿಭಿನ್ನ ಡ್ಯಾನ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿ ಚಿನ್ನದ ಪದಕ ಗಳಿಸಿದ ಕೀರ್ತಿ ಈ ಬಾಲ ಪ್ರತಿಭೆಯದ್ದು, ಇಷ್ಟೇ ಅಲ್ಲದೆ ಮಾಜಿ ಸಚಿವರಾದ ರಮನಾಥ ರೈರವರಿಂದ ಸನ್ಮಾನವನ್ನು ಗಿಟ್ಟಿಸಿಕೊಂಡು,ಹೆಗ್ಗಳಿಕೆ ಮಾತುಗಳನ್ನಾಡಿ,ಶುಭ ಹಾರೈಸಿದ್ದಾರೆ. ಕನ್ನಡ ಚಲನಚಿತ್ರದಲ್ಲಿ ಬಾಲ ನಟಿಯಾಗಿ ಬಣ್ಣ ಹಚ್ಚಿ ನಟನೆ ಮಾಡಿರುವುದು ಇವರ ಸಾಧನೆಯ ದೊಡ್ಡ ಹೆಜ್ಜೆ ಆಗಿದೆ ಮತ್ತು ಈ ಚಲನಚಿತ್ರಯು ಸಾಧ್ಯದಲ್ಲೆ ಬಿಡುಗಡೆಗೊಳ್ಳಲಿದೆ.ಚಿಕ್ಕ ವಯಸ್ಸಿನಲ್ಲೇ ಹಲವು ಶಾರ್ಟ್ ಫಿಲ್ಮ್ ಮತ್ತು ಆಲ್ಬಮ್ ಸಾಂಗ್ ನಲ್ಲಿ ಪಾತ್ರಗಳನ್ನು ಮಾಡಿ ನಟನೆಯಲ್ಲು ತಮ್ಮ ಛಾಪುನ್ನು ಮೂಡಿಸಿದ್ದಾರೆ.

ಹತ್ತು ಹಲವು ಪ್ರಶಸ್ತಿ,ಸನ್ಮಾನಗಳನ್ನು ಬಾಚಿಕೊಂಡಿರುವ ದಿಶಾರವರು ಮತ್ತು ಈಗಾಗಲೇ ಹಲವು ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಇವರು ಪ್ರಸ್ತುತ ‘ಶ್ರೀ ಚಿಂತಾಮಣಿ ಡ್ಯಾನ್ಸ್ ಗ್ರೂಪ್’ ಕಡೇಶಿವಾಲಯದ ತಂಡದ ನಾಯಕ ಮತ್ತು ಕೋರಿಯೊಗ್ರಾಪರ್ ಆದ ಮಹೇಶ್ ಕುಲಾಲ್ ಇವರಿಂದ ನೃತ್ಯವನ್ನು ಅಭ್ಯಾಸ ಮಾಡುತ್ತಿದ್ದಾರೆ.

 

ನಿಮ್ಮೆಲ್ಲಾ ಕನಸು ನನಸಾಗಲಿ,ಸಾಧನೆಯ ಶಿಖರವು ಇನ್ನಷ್ಟು ಎತ್ತರಕ್ಕೆ ಬೆಳೆಯಲಿ,ಸಾಧನೆಯ ಹಾದಿ ಸುಗಮವಾಗಲಿ,ಇನ್ನಷ್ಟು ಅವಕಾಶಗಳು ನಿಮ್ಮ ಮಡಿಲಿಗೆ ಸೇರಲಿ,ಪ್ರಶಸ್ತಿ ಪುರಸ್ಕಾರಗಳು ನಿಮಗೆ ಹರಸಿ ಬರಲಿ ಎನ್ನುವ ಶುಭಾಶಯಗಳೊಂದಿಗೆ,ನೃತ್ಯ ಲೋಕದಲ್ಲಿ ಇನ್ನೂ ಎತ್ತರದ ಸ್ಥಾನಕ್ಕೇರಲು ಈ ಪ್ರತಿಭೆಯನ್ನು ಹರಸಿ,ಹಾರೈಸಿ,ಆರ್ಶಿವಾದಿಸೋಣ ಎನ್ನುವ ಕೋರಿಕೆ.

✍ ರಾಜೇಶ್ ಎಸ್ ಬಲ್ಯ


Share:

More Posts

Category

Send Us A Message

Related Posts

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »

ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ ಆಯ್ಕೆ


Share       ಪುತ್ತೂರು: ಸವಣೂರಿನ ಅಖಿಲ ಪೂಜಾರಿ ಅವರು ಪೊಲೀಸ್ ಇಲಾಖೆಯ ಎಸ್.ಐ. ಹುದ್ದೆಗೆ ಆಯ್ಕೆಯಾಗಿದ್ದಾರೆ. ಕರ್ನಾಟಕ ರಾಜ್ಯ ಪೊಲೀಸ್‌ ಇಲಾಖೆಯ ಸಿವಿಲ್ ಪೊಲೀಸ್ ಸಬ್ ಇನ್ಸೆಕ್ಟರ್ ಪರೀಕ್ಷೆಯಲ್ಲಿ ತೇರ್ಗಡೆಯಾಗಿರುವ ಅಖಿಲ ಪೂಜಾರಿ ಅವರು ಎಸ್.ಐ.ಹುದ್ದೆಗೆ


Read More »