TOP STORIES:

ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ


ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ

ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

ಬದಲಾದ ಕಾಲಕ್ಕೆ ತಕ್ಕಂತೆ ಮನುಷ್ಯನ ಜೀವನಶೈಲಿಯಲ್ಲಿಯೂ ಬದಲಾವಣೆಯಾಗಿದೆ. ಒಂದು ಕಾಲದಲ್ಲಿ ಹೆಚ್ಚು ದೈಹಿಕ ಚಟುವಟಿಕೆ, ಕಡಿಮೆ ಮಾನಸಿಕ ಚಟುವಟಿಕೆ ಇತ್ತು. ಆದರೆ ಈಗ ಪರಿಸ್ಥಿತಿಗಳು ಸಂಪೂರ್ಣವಾಗಿ ಬದಲಾಗಿವೆ. ಜೀವನಶೈಲಿಯಲ್ಲಿನ ಬದಲಾವಣೆಗಳು ಮಾನವನ ಆಹಾರ ಪದ್ಧತಿ ಮತ್ತು ಆಹಾರ ಸೇವನೆಯಲ್ಲಿಯೂ ಕೂಡ ಬದಲಾವಣೆಗಳನ್ನು ತಂದಿದೆ. ಹಿಂದೆ ನೆಲದ ಮೇಲೆ ಎಲ್ಲರೂ ಒಟ್ಟಾಗಿ ಕುಳಿತು ಊಟ ಮಾಡುತ್ತಿದ್ದರು. ಆದರೆ ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದಾಗುವ ಪ್ರಯೋಜನಗಳು

ಸುಲಭವಾಗಿ ಜೀರ್ಣವಾಗುತ್ತದೆ
ನೆಲದ ಮೇಲೆ ಕುಳಿತು ಆಹಾರವನ್ನು ಸೇವಿಸುವುದರಿಂದ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ. ತಟ್ಟೆ ಕೆಳಗೆ ಇರುವುದರಿಂದ ಪ್ರತಿ ಬಾರಿಯೂ ಹಿಂದಕ್ಕೆ ಮತ್ತು ಮುಂದಕ್ಕೆ ಚಲಿಸುವಂತೆ ಮಾಡುತ್ತದೆ. ಹೀಗೆ ಮಾಡುವುದರಿಂದ ಹೊಟ್ಟೆಯ ಸ್ನಾಯುಗಳು ಕ್ರಿಯಾಶೀಲವಾಗುತ್ತವೆ. ಇದರೊಂದಿಗೆ ತೆಗೆದುಕೊಂಡ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ.

ತೂಕ ನಷ್ಟ
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಕಶೇರುಖಂಡಗಳು ನೆಟ್ಟಗಾಗುತ್ತವೆ. ಅಲ್ಲದೇ ಮಾಹಿತಿಯು ಮೆದುಳಿಗೆ ಸುಲಭವಾಗಿ ತಲುಪುತ್ತದೆ. ಇದರೊಂದಿಗೆ, ಮೆದುಳು ಹೊಟ್ಟೆ ತುಂಬಿದೆ ಎಂದು ತ್ವರಿತವಾಗಿ ಗುರುತಿಸುತ್ತದೆ ಮತ್ತು ಅದು ಎಂದು ಹೇಳುತ್ತದೆ. ಆ ಮೂಲಕ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.

ಸ್ನಾಯು ನೋವು ಕಡಿಮೆಯಾಗುತ್ತದೆ
ಇತ್ತೀಚಿನ ದಿನಗಳಲ್ಲಿ ಚಕ್ಕರಮಟ್ಟೆ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವುದು ಸಂಪೂರ್ಣವಾಗಿ ಕಡಿಮೆಯಾಗಿದೆ. ಹೆಚ್ಚುತ್ತಿರುವ ಕುರ್ಚಿ, ಸೋಫಾಗಳ ಬಳಕೆಯಿಂದ ಎಲ್ಲರೂ ಮೇಲೆ ಕುಳಿತುಕೊಳ್ಳುವಂತಾಗಿದೆ. ಆದರೆ ನೆಲದ ಮೇಲೆ ಕುಳಿತುಕೊಳ್ಳುವುದರಿಂದ ಸ್ನಾಯುಗಳು ಮತ್ತು ಕೀಲುಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಹಾಗೆಯೇ ಬೆನ್ನು ನೋವು ಮತ್ತು ಇನ್ನಿತರ ಸ್ನಾಯು ಸಮಸ್ಯೆ ದೂರವಾಗುತ್ತದೆ.

ರಕ್ತ ಸಂಚಾರ ಉತ್ತಮಗೊಳ್ಳುತ್ತದೆ
ನೆಲದ ಮೇಲೆ ಕುಳಿತುಕೊಳ್ಳುವುದರಿಂದ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಕುರ್ಚಿಗಳ ಮೇಲೆ ಕುಳಿತುಕೊಳ್ಳುವುದರಿಂದ ಹೃದಯಕ್ಕೆ ಸರಿಯಾಗಿ ರಕ್ತ ಪರಿಚಲನೆಯಾಗುವುದಿಲ್ಲ. ಅಂದರೆ ರಕ್ತ ಸಂಚಾರವನ್ನು ಇದು ತಡೆಯುತ್ತದೆ. ಹಾಗಾಗಿ ಊಟ ಮಾಡುವಾಗ ನೆಲದ ಮೇಲೆ ಕುಳಿತು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »