TOP STORIES:

ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ


ಡೈನಿಂಗ್ ಟೇಬಲ್ ಮೇಲೆ ಕೂತು ಊಟ ಮಾಡುತ್ತಿದ್ದೀರಾ? ನೆಲದ ಮೇಲೆ ಕುಳಿತು ಆಹಾರ ಸೇವಿಸುವುದರ ಪ್ರಯೋಜನ ತಿಳಿಯಿರಿ

ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

ಬದಲಾದ ಕಾಲಕ್ಕೆ ತಕ್ಕಂತೆ ಮನುಷ್ಯನ ಜೀವನಶೈಲಿಯಲ್ಲಿಯೂ ಬದಲಾವಣೆಯಾಗಿದೆ. ಒಂದು ಕಾಲದಲ್ಲಿ ಹೆಚ್ಚು ದೈಹಿಕ ಚಟುವಟಿಕೆ, ಕಡಿಮೆ ಮಾನಸಿಕ ಚಟುವಟಿಕೆ ಇತ್ತು. ಆದರೆ ಈಗ ಪರಿಸ್ಥಿತಿಗಳು ಸಂಪೂರ್ಣವಾಗಿ ಬದಲಾಗಿವೆ. ಜೀವನಶೈಲಿಯಲ್ಲಿನ ಬದಲಾವಣೆಗಳು ಮಾನವನ ಆಹಾರ ಪದ್ಧತಿ ಮತ್ತು ಆಹಾರ ಸೇವನೆಯಲ್ಲಿಯೂ ಕೂಡ ಬದಲಾವಣೆಗಳನ್ನು ತಂದಿದೆ. ಹಿಂದೆ ನೆಲದ ಮೇಲೆ ಎಲ್ಲರೂ ಒಟ್ಟಾಗಿ ಕುಳಿತು ಊಟ ಮಾಡುತ್ತಿದ್ದರು. ಆದರೆ ಈಗ ಡೈನಿಂಗ್ ಟೇಬಲ್ ಮೇಲೆ ಕುಳಿತು ಊಟ ಮಾಡುತ್ತಾರೆ. ಇದೇ ಪರಿಸ್ಥಿತಿ ಈಗ ಹೆಚ್ಚಿನ ಮನೆಗಳಲ್ಲಿ ಕಾಣಿಸಿಕೊಳ್ಳುತ್ತಿದೆ. ಆದರೆ ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಹಲವಾರು ಪ್ರಯೋಜನಗಳಿವೆ. ಹಾಗಿದ್ದರೆ ಅದ್ಯಾವುದು ಎಂದು ತಿಳಿದುಕೊಳ್ಳೊಣ.

ನೆಲದ ಮೇಲೆ ಕುಳಿತು ಊಟ ಮಾಡುವುದರಿಂದಾಗುವ ಪ್ರಯೋಜನಗಳು

ಸುಲಭವಾಗಿ ಜೀರ್ಣವಾಗುತ್ತದೆ
ನೆಲದ ಮೇಲೆ ಕುಳಿತು ಆಹಾರವನ್ನು ಸೇವಿಸುವುದರಿಂದ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ. ತಟ್ಟೆ ಕೆಳಗೆ ಇರುವುದರಿಂದ ಪ್ರತಿ ಬಾರಿಯೂ ಹಿಂದಕ್ಕೆ ಮತ್ತು ಮುಂದಕ್ಕೆ ಚಲಿಸುವಂತೆ ಮಾಡುತ್ತದೆ. ಹೀಗೆ ಮಾಡುವುದರಿಂದ ಹೊಟ್ಟೆಯ ಸ್ನಾಯುಗಳು ಕ್ರಿಯಾಶೀಲವಾಗುತ್ತವೆ. ಇದರೊಂದಿಗೆ ತೆಗೆದುಕೊಂಡ ಆಹಾರ ಸುಲಭವಾಗಿ ಜೀರ್ಣವಾಗುತ್ತದೆ.

ತೂಕ ನಷ್ಟ
ನೆಲದ ಮೇಲೆ ಕುಳಿತು ಊಟ ಮಾಡುವುದರಿಂದ ಕಶೇರುಖಂಡಗಳು ನೆಟ್ಟಗಾಗುತ್ತವೆ. ಅಲ್ಲದೇ ಮಾಹಿತಿಯು ಮೆದುಳಿಗೆ ಸುಲಭವಾಗಿ ತಲುಪುತ್ತದೆ. ಇದರೊಂದಿಗೆ, ಮೆದುಳು ಹೊಟ್ಟೆ ತುಂಬಿದೆ ಎಂದು ತ್ವರಿತವಾಗಿ ಗುರುತಿಸುತ್ತದೆ ಮತ್ತು ಅದು ಎಂದು ಹೇಳುತ್ತದೆ. ಆ ಮೂಲಕ ತೂಕ ನಷ್ಟಕ್ಕೂ ಸಹಾಯ ಮಾಡುತ್ತದೆ.

ಸ್ನಾಯು ನೋವು ಕಡಿಮೆಯಾಗುತ್ತದೆ
ಇತ್ತೀಚಿನ ದಿನಗಳಲ್ಲಿ ಚಕ್ಕರಮಟ್ಟೆ ಹಾಕಿ ನೆಲದ ಮೇಲೆ ಕುಳಿತುಕೊಳ್ಳುವುದು ಸಂಪೂರ್ಣವಾಗಿ ಕಡಿಮೆಯಾಗಿದೆ. ಹೆಚ್ಚುತ್ತಿರುವ ಕುರ್ಚಿ, ಸೋಫಾಗಳ ಬಳಕೆಯಿಂದ ಎಲ್ಲರೂ ಮೇಲೆ ಕುಳಿತುಕೊಳ್ಳುವಂತಾಗಿದೆ. ಆದರೆ ನೆಲದ ಮೇಲೆ ಕುಳಿತುಕೊಳ್ಳುವುದರಿಂದ ಸ್ನಾಯುಗಳು ಮತ್ತು ಕೀಲುಗಳ ಮೇಲಿನ ಒತ್ತಡ ಕಡಿಮೆಯಾಗುತ್ತದೆ. ಹಾಗೆಯೇ ಬೆನ್ನು ನೋವು ಮತ್ತು ಇನ್ನಿತರ ಸ್ನಾಯು ಸಮಸ್ಯೆ ದೂರವಾಗುತ್ತದೆ.

ರಕ್ತ ಸಂಚಾರ ಉತ್ತಮಗೊಳ್ಳುತ್ತದೆ
ನೆಲದ ಮೇಲೆ ಕುಳಿತುಕೊಳ್ಳುವುದರಿಂದ ರಕ್ತ ಸಂಚಾರ ಉತ್ತಮಗೊಳ್ಳುತ್ತದೆ. ಕುರ್ಚಿಗಳ ಮೇಲೆ ಕುಳಿತುಕೊಳ್ಳುವುದರಿಂದ ಹೃದಯಕ್ಕೆ ಸರಿಯಾಗಿ ರಕ್ತ ಪರಿಚಲನೆಯಾಗುವುದಿಲ್ಲ. ಅಂದರೆ ರಕ್ತ ಸಂಚಾರವನ್ನು ಇದು ತಡೆಯುತ್ತದೆ. ಹಾಗಾಗಿ ಊಟ ಮಾಡುವಾಗ ನೆಲದ ಮೇಲೆ ಕುಳಿತು ತಿನ್ನುವುದರಿಂದ ಹಲವಾರು ಪ್ರಯೋಜನಗಳಿವೆ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »