TOP STORIES:

ಪತ್ರಕರ್ತ ಪ್ರದೀಶ್ ಮರೋಡಿ ಅವರಿಗೆ ಪ.ಗೋ.ಪ್ರಶಸ್ತಿ ಪ್ರದಾನ


ಮಂಗಳೂರು: ಯಾವುದೇ ಆಮಿಷಕ್ಕೆ ಬಲಿಯಾಗದೇ ವಿಶ್ವಾಸರ್ಹತೆಯನ್ನು ಉಳಿಸಿಕೊಂಡು ಪತ್ರಕರ್ತರು ಕಾರ್ಯನಿರ್ವಹಿಸಬೇಕು. ವಿಶ್ವಾಸಾರ್ಹತೆಯೇ ಪತ್ರಕರ್ತರಿಗೆ ಜೀವಾಳ ಎಂದು ಮಂಗಳೂರು ವಿ.ವಿ.ಕುಲಪತಿ ಪ್ರೊ.ಪಿ.ಎಸ್.ಯಡಪಡಿತ್ತಾಯ ಹೇಳಿದ್ದಾರೆ. ಮಂಗಳೂರು ಪತ್ರಿಕಾಭವನದಲ್ಲಿ ಮಂಗಳವಾರ ನಡೆದ ಸಮಾರಂಭದಲ್ಲಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನೀಡುವ ಪ.ಗೋ. ಪ್ರಶಸ್ತಿಯನ್ನು ಪತ್ರಕರ್ತ ಪ್ರದೀಶ್.ಎಚ್.ಮರೋಡಿ ಅವರಿಗೆ ಪ್ರದಾನ ಮಾಡಿ ಅವರು ಮಾತನಾಡಿದರು. ಪತ್ರಕರ್ತರು ಮಾಡುವ ಪ್ರತಿಯೊಂದು ವರದಿಗಳು ನಂಬಿಕೆ ಮತ್ತು ವಿಶ್ವಾಸದಿಂದ ಕೂಡಿರಬೇಕು. ಪ.ಗೊ ಅವರು ಪತ್ರಕರ್ತರಿಗೆ ಆದರ್ಶಪ್ರಾಯರಾಗಿದ್ದರು. ಅವರ ಹೆಸರಿನಲ್ಲಿ ನೀಡುವ ಈ ಪ್ರಶಸ್ತಿ ಗ್ರಾಮೀಣ ಬದುಕಿನ ಬಗ್ಗೆ ಕನ್ನಡಿ ಹಿಡಿಯಲು ಪತ್ರಕರ್ತರಿಗೆ ಪ್ರೇರಣೆಯಾಗಲಿ ಎಂದು ಆಶಿಸಿದರು.

ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘ ವಿಭಿನ್ನವಾಗಿ ಮತ್ತು ಸಮಾಜ ಮುಖಿಯಾಗಿ ಕೆಲಸ ಮಾಡುತ್ತಿದೆ ಎಂದು ಅವರು ಶ್ಲಾಘಿಸಿದರು. ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಪ್ರದೀಶ್.ಎಚ್.ಮರೋಡಿ ಪ.ಗೋ ಅವರ ಹೆಸರಿನಲ್ಲಿ ನೀಡುವ ಪ್ರಶಸ್ತಿ ಪಡೆದಿರುವುದು ಜೀವನದ ಅವಿಸ್ಮರಣೀಯ ಕ್ಷಣ ಎಂದು ಹೇಳಿದರು.
ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು.

ಮುಖ್ಯ ಅತಿಥಿಗಳಾಗಿ ಪಿಡಬ್ಲ್ಯುಡಿ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಚಂದ್ರ ಶೇಖರಯ್ಯ ಭಾಗವಹಿಸಿದ್ದರು. ಈ ಸಂದರ್ಭದಲ್ಲಿ ಪತ್ರಕರ್ತರ ಕ್ಷೇಮಾಭಿವೃದ್ಧಿ ನಿಧಿಗೆ ಚಂದ್ರಶೇಖರಯ್ಯ ಅವರು 50 ಸಾವಿರ ರೂ. ಹಸ್ತಾಂತರಿಸಿದರು. ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾದ ಪುತ್ತೂರು ಡಾ.ಶಿವರಾಮ ಕಾರಂತರ ಬಾಲವನದ ವಿಶೇಷ ಕರ್ತವ್ಯಾಧಿಕಾರಿ ಡಾ.ಸುಂದರ ಕೇನಾಜೆ, ಮತ್ತು ಮಂಗಳೂರು ವಿವಿ ಕಾಲೇಜಿನ ಪತ್ರಿಕೋದ್ಯಮ ವಿಭಾಗದ ಉಪನ್ಯಾಸಕಿ ಡಾ.ಸೌಮ್ಯ ಕೆ.ಬಿ. ಮಾತನಾಡಿದರು.

ಪದ್ಯಾಣ ಗೋಪಾಲಕೃಷ್ಣ ಅವರ ಪುತ್ರ ಪದ್ಯಾಣ ರಾಮಚಂದ್ರ, ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಕಾರ್ಯಕಾರಿಣಿ ಸಮಿತಿ ಸದಸ್ಯ ಬಾಳ ಜಗನ್ನಾಥ ಶೆಟ್ಟಿ ಉಪಸ್ಥಿತರಿದ್ದರು. ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ಸ್ವಾಗತಿಸಿ, ಕಾರ್ಯಕಾರಿ ಸಮಿತಿ ಸದಸ್ಯೆ ಸತ್ಯವತಿ ಪ್ರಶಸ್ತಿ ವಿಜೇತರ ಪರಿಚಯ ಮಾಡಿದರು.ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ವಂದಿಸಿದರು. ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್ ಕಾರ್ಯಕ್ರಮ ನಿರೂಪಿಸಿದರು.


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »