TOP STORIES:

ಪದ್ಮರಾಜ್ ಸರ್ ಬಗ್ಗೆ ನನಗೂ ಒಂದಿಷ್ಟು ಹೇಳಲೇಬೇಕು


ಪದ್ಮರಾಜ್ ಸರ್ ಬಗ್ಗೆ ನನಗೂ ಒಂದಿಷ್ಟು ಹೇಳಲೇಬೇಕು……

ಪದ್ಮರಾಜ್ ಸರ್ ರವರು ಕೇವಲ ವ್ಯಕ್ತಿಯಲ್ಲ, ಅವರೊಂದು ಶಕ್ತಿ.ಅವರ ಜೊತೆ ಮಾತನಾಡುವಾಗ ಆ ಶಕ್ತಿಯ ಪ್ರಭಾವ ನಮ್ಮ ಮೇಲೆ ಪ್ರವಹಿಸುತ್ತದೆ ಹಾಗೂ ವಿಶೇಷವಾದ ಭಕ್ತಿಭಾವ,ಗೌರವ ಮೂಡುತ್ತದೆ.ಅಷ್ಟೊಂದು ಆಕರ್ಷಣೀಯ ವ್ಯಕ್ತಿತ್ವ. ಅವರಾಡುವ ಮಾತುಗಳು ಕೇವಲ ಬಾಯಿಂದ ಹೊರಡುವುದಲ್ಲ,ಹ್ರದಯದಿಂದ ಮೂಡುವಂತಹದ್ದು.ಮಾತಿನಲ್ಲಿ ಎಲ್ಲಿಯೂ ಕಲ್ಮಷವಿಲ್ಲ.ನೇರ ನಡೆನುಡಿಯ,ಪ್ರೀತಿ ತುಂಬಿದ, ಸೌಜನ್ಯಯುತ ಮಾತುಗಳು ಎಂತಹವರನ್ನೂ ಮಂತ್ರಮುಗ್ಧರನ್ನಾಗಿಸುತ್ತದೆ.ಯಾರ ಜೊತೆ ಮಾತನಾಡುವಾಗಲೂ ಮುಖದಲ್ಲಿ ಮೂಡುವ ಮಂದಹಾಸ ಮುಗುಳ್ನಗೆಯಲ್ಲಿ ಪ್ರಾಮಾಣಿಕತೆ, ಪ್ರೀತಿ ತುಂಬಿರುತ್ತದೆ.ನೊಂದವರು,ಶೋಷಿತರು ಯಾರೇ ಅವರನ್ನು ಸಂಪರ್ಕಿಸಲಿ,ಕೂಡಲೇ ಸ್ಪಂದಿಸುವ ಮಾನವೀಯ ಹ್ರದಯವಿದೆ.ಬ್ರಹ್ಮಶ್ರೀ ನಾರಾಯಣ ಗುರುಗಳ ಅನುಯಾಯಿಯಾಗಿ,ಅವರ ತತ್ವಾದರ್ಶದಂತೆ ಸರ್ವಧರ್ಮೀಯರನ್ನು ಸಮಾನರಂತೆ ಕಾಣುವ ಹ್ರದಯ ವೈಶಾಲ್ಯತೆ. ಅನ್ಯಾಯಕ್ಕೊಳಗಾದ ಜನರಿಗೆ ನ್ಯಾಯ ದೊರಕಿಸಿ ಕೊಡುವ ಧೀಮಂತ ನಾಯಕ.*
_ಎಳೆಯ ಪ್ರಾಯದಲ್ಲೇ ಎಲ್ಲಾ ಸದ್ಗುಣಗಳನ್ನು ಮೈಗೂಡಿಸಿ, ನಾರಾಯಣ ಗುರುಗಳು ತಮ್ಮ ದಿವ್ಯಹಸ್ತದಿಂದ ಪ್ರತಿಷ್ಠಾಪಿಸಿದ ಕರ್ನಾಟಕ ರಾಜ್ಯದ ಏಕೈಕ ಕ್ಷೇತ್ರವಾದ ಕುದ್ರೋಳಿ ದೇವಾಲಯದಲ್ಲಿ ದೀರ್ಘಕಾಲದಿಂದ ಕೋಶಾಧಿಕಾರಿಯಾಗಿ ಆಡಳಿತ ಮಂಡಳಿಯೊಳಗಡೆ ಹಳೇ ಬೇರು,ಹೊಸ ಚಿಗುರು ಎಂಬಂತೆ ಎಲ್ಲಾ ಹಿರಿಯರ ಗೌರವಕ್ಕೆ ಪಾತ್ರರಾಗಿ,ಬಡವರ ಕಣ್ಮಣಿ – ನಡೆದಾಡುವ ದೇವರೆಂದೇ ಖ್ಯಾತರಾದ ಶ್ರೀ.ಜನಾರ್ದನ ಪೂಜಾರಿಯವರ ಮಾರ್ಗದರ್ಶನದಲ್ಲಿ ಬೆಳಗಿದ ಬಿಲ್ಲವ ಸಮಾಜದ ಕಣ್ಮಣಿಯಾಗಿ,ಯುವಕರ ಪಾಲಿಗೆ ಸ್ಪೂರ್ತಿಯ ಚಿಲುಮೆಯಾದ ಪದ್ಮರಾಜ್ ರವರಿಗೆ ನಿಜಕ್ಕೂ ಬಿಲ್ಲವ ಸಮಾಜವನ್ನು ಮುನ್ನಡೆಸುವ ಶಕ್ತಿ ಇದೆ.ಈಗಾಗಲೇ ಅದೆಷ್ಟೋ ಬಿಲ್ಲವ ಸಮಾಜದ ಸಂಘಟನೆಯೊಳಗೆ ಭಿನ್ನಮತ ತಲೆದೋರಿದಾಗ ಎಲ್ಲರೂ ಹುಡುಕಿಕೊಂಡು ಬರುವುದು ಪದ್ಮರಾಜ್ ರವರ ಬಳಿಗೆ. ಎರಡೂ ಕಡೆಯವರನ್ನು ಕುಳ್ಳಿರಿಸಿ,ತನ್ನ ಮಾತಿನ ಶಕ್ತಿಯಿಂದ ಐಕ್ಯತೆ ಸಾಧಿಸಿದ ಸಮನ್ವಯಕಾರ. ರಾಜಕೀಯದಲ್ಲಿ ಎಲ್ಲಿಯೂ ಗುರುತಿಸಿಕೊಳ್ಳದೆ,ಎಲ್ಲರ ಪ್ರೀತಿ ವಿಶ್ವಾಸಗಳಿಸಿದ ಪದ್ಮರಾಜ್ ರವರನ್ನು ಅಜಾತಶತ್ರು ಎಂದರೆ ತಪ್ಪಾಗಲಾರದು.ದೇಶದಲ್ಲೇ ಗಮನ ಸೆಳೆದಿರುವ ಕುದ್ರೋಳಿ ಕ್ಷೇತ್ರಕ್ಕೆ ಭೇಟಿ ನೀಡುವ ಲಕ್ಷಾಂತರ ಭಕ್ತಾಧಿಗಳ ನೇರ ಸಂಪರ್ಕ ಹಾಗೂ ಅವರನ್ನು ಹೆಸರು ಕರೆದು ಪ್ರೀತಿಯಿಂದ ಮಾತನಾಡಿಸುವ ಗುಣದ ಮೂಲಕ ಅವರ ನೆನಪು ಶಕ್ತಿಯ ಅಗಾಧತೆಯನ್ನು ಎತ್ತಿ ತೋರಿಸುತ್ತದೆ._
*ಇಂತಹ ಅಪಾರ ಪಾಂಡಿತ್ಯ ಹೊಂದಿದ ಪದ್ಮರಾಜ್ ರವರು ಗೋಕರ್ಣಾ ದೇವರ ದಯೆಯಿಂದ,ಬ್ರಹ್ಮಶ್ರೀ ನಾರಾಯಣ ಗುರುಗಳ ಪ್ರೇರಣೆಯಿಂದ ಕೊರೋನಾ ಸಂಕಷ್ಟದ ಕಾಲದಲ್ಲೂ ಯಾವ ಕ್ಷೇತ್ರದಿಂದಲೂ ಸಾಧ್ಯವಾಗದ ಕೆಲಸವನ್ನು ಪದ್ಮರಾಜ್ ರವರು ಸ್ವತಃ ಮುಂದಡಿಯಿಟ್ಟು, ಅದೆಷ್ಟೋ ಮಾನವೀಯ ಹ್ರದಯಗಳನ್ನು ಒಟ್ಟು ಸೇರಿಸಿ, ಸುಮಾರು 350 ಕ್ವಿಂಟಾಲ್ ಅಕ್ಕಿಯನ್ನು ಆರ್ಥಿಕವಾಗಿ ಸಂಕಷ್ಟದಲ್ಲಿದ್ದ ಸಾವಿರಾರು ಕುಟುಂಬಗಳಿಗೆ ನೇರವಾಗಿ ಮನೆ ಬಾಗಿಲಿಗೆ ತಲುಪಿಸಿದ್ದು ನಿಜಕ್ಕೂ ಅತ್ಯದ್ಭುತವಾಗಿದೆ. ಕೋರೋನಾ ನೆಪದಲ್ಲಿ ದಸರಾ ಉತ್ಸವವನ್ನು ಮಾಡಲು ಜಿಲ್ಲಾಡಳಿತ ನಿರಾಕರಿಸಿದಾಗ, ಜನರ ಪರವಾಗಿ ತಮ್ಮ ವಾದವನ್ನು ಸಮರ್ಥವಾಗಿ ಮಂಡಿಸಿ ಜಿಲ್ಲಾಧಿಕಾರಿಗಳನ್ನು ಹಾಗೂ ಜನಪ್ರತಿನಿಧಿಗಳನ್ನು ಹುಬ್ಬೇರಿಸುವಂತೆ ಮಾಡಿದ ನಿಜವಾದ ಜನನಾಯಕ.ಇವರ ಮುತುವರ್ಜಿಯಿಂದ ಹಾಗೂ ಜನಾರ್ದನ ಪೂಜಾರಿಯವರ ಮಾರ್ಗದರ್ಶನದಿಂದಲೇ ಈ ಬಾರಿ ನಮ್ಮ ದಸರಾ ನಮ್ಮ ಸುರಕ್ಷೆ ಎಂಬ ಘೋಷವಾಕ್ಯದೊಂದಿಗೆ ಯಶಸ್ವಿ ದಸರಾ ನಡೆದಿರುವುದನ್ನು ನಾವೆಂದೂ ಮರೆಯಬಾರದು.ದಸರಾ ಉತ್ಸವದಲ್ಲಿ ಹುಲಿವೇಷಕ್ಕೆ ಅನುಮತಿ ನೀಡಲು ಜಿಲ್ಲಾಡಳಿತ ನಿರಾಕರಿಸಿದಾಗ ಹುಲಿ ವೇಷ ದಸರಾ ಹಬ್ಬದ ವಿಶೇಷತೆ,ಹಿಂದೂ ಧಾರ್ಮಿಕತೆಯ ಪ್ರತೀಕವೆಂದು ಸಾರಿ ಜಿಲ್ಲಾಡಳಿತದ ಮೇಲೆ ಒತ್ತಡ ಹಾಕಿ ಹುಲಿವೇಷಕ್ಕೆ ಅವಕಾಶ ದೊರಕಿಸಿ ಕೊಟ್ಟ ನಿಜವಾದ ಧಾರ್ಮಿಕ ನಾಯಕರು. ಈ ಬಾರಿಯ ದಸರಾ ಉತ್ಸವವನ್ನು ಸವಾಲಾಗಿ ಸ್ವೀಕರಿಸಿ, ಸಂಘಸಂಸ್ಥೆಗಳನ್ನು ಹಾಗೂ ಹಿರಿಯ ಕಿರಿಯರೆನ್ನದೆ ಎಲ್ಲರನ್ನೂ ಪ್ರೀತಿಯಿಂದ ತನ್ನತ್ತ ಸೆಳೆದು,ಸ್ವಯಂಸ್ಪೂರ್ತಿಯಿಂದ ಸ್ವಯಂಸೇವಕರಾಗಿ ದುಡಿಯುವಂತೆ ಪ್ರೇರೇಪಿಸಿ, ಜಗದ್ವಿಖ್ಯಾತ ಮಂಗಳೂರು ದಸರಾವನ್ನು ಮತ್ತೊಮ್ಮೆ ಯಶಸ್ವಿಗೊಳಿಸಿ ವಿಶ್ವಭೂಪಟದಲ್ಲಿ ಅಜರಾಮರವಾಗಿ ಬೆಳಗುವಂತೆ ಮಾಡಿದ ಕಾರ್ಯದಲ್ಲಿ ಪದ್ಮರಾಜ್ ರವರು ನಿಜಕ್ಕೂ ಕೇಂದ್ರಬಿಂದು.*

ನಿತೀಶ್ ಪೂಜಾರಿ ಮರೋಳಿ
ಮಂಗಳೂರು


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »