TOP STORIES:

ಪಾರ್ಲೆ ಜಿ ಪ್ಯಾಕೆಟ್​ನಲ್ಲಿರುವ ಮಗು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ


ಜೀವನದಲ್ಲಿ ಒಮ್ಮೆಯಾದರೂ ನೀವು ಪಾರ್ಲೆ ಜಿ ಬಿಸ್ಕತ್ತನ್ನು ತಿಂದೇ ಇರ್ತೀರಾ..! ಆದರೆ ಈ ಬಿಸ್ಕತ್ತಿಗೆ ಪಾರ್ಲೆ ಜಿ ಎಂಬ ಹೆಸರು ಹೇಗೆ ಬಂತು ಅಂತಾ ಎಂದಾದರೂ ಯೋಚನೆ ಮಾಡಿದ್ದೀರಾ..?‌ ಈ ಬಿಸ್ಕತ್ತು ತಯಾರಿಕೆಯ ಕಾರ್ಯವನ್ನು ಮುಂಬೈನ ವಿಲೇ ಪಾರ್ಲೆಯಲ್ಲಿ ಆರಂಭಿಸಲಾಯ್ತು.

ಇದೇ ಕಾರಣಕ್ಕೆ ಪಾರ್ಲೆ ಎಂಬ ಪದವನ್ನು ಬಳಕೆ ಮಾಡಲಾಯ್ತು. ಆದರೆ ಪಾರ್ಲೆ ಜಿ ಯಲ್ಲಿರುವ ‘ಜಿ’ ಅಂದರೆ ಏನು..? ಆ ಪ್ಯಾಕೆಟ್​ನಲ್ಲಿರುವ ಮಗು ಯಾರು..? ಎಂಬ ಪ್ರಶ್ನೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ.

ಪಾರ್ಲೆ ಉತ್ಪನ್ನಗಳು 1929ರಿಂದ ಆರಂಭವಾದವು. ಮೊದಲು ಈ ಕಾರ್ಖಾನೆಯಲ್ಲಿ ಕೆಲಸ ಮಾಡ್ತಾ ಇದ್ದದ್ದು ಕೇವಲ 12 ಮಂದಿ ಮಾತ್ರ. ಆಗ ಈ ಬಿಸ್ಕತ್ತಿನ ಹೆಸರು ಪಾರ್ಲೆ – ಗ್ಲುಕೋ ಎಂದಾಗಿತ್ತು. 80 ದಶಕದ ಆರಂಭದವರೆಗೂ ಅದೇ ಹೆಸರನ್ನು ಮುಂದುವರಿಸಲಾಗಿತ್ತು. ಆದರೆ 1981ರಲ್ಲಿ ಕಂಪನಿಯು ಗ್ಲುಕೋ ಎಂಬ ಪದವನ್ನು ಶಾರ್ಟ್ ಮಾಡಿ ಪಾರ್ಲೆ ಜಿ ಎಂದು ಬದಲಾಯಿಸಿದೆ. 80 ದಶಕದಲ್ಲಿ ಈ ಬಿಸ್ಕತ್ತು ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರ ಫೇವರಿಟ್​ ಆಗಿ ಬದಲಾಗಿತ್ತು. ಮಕ್ಕಳಿಗೆ ಈ ಬಿಸ್ಕತ್ತು ಇಷ್ಟವಾದ ಬಳಿಕ ಪಾರ್ಲೆ ಜಿ ಯಲ್ಲಿದ್ದ ಜಿಯನ್ನು ಜೀನಿಯಸ್​ ಎಂದು ಬದಲಾಯಿಸಲಾಯ್ತು. ಆದರೂ ಪ್ಯಾಕೆಟ್​ ಮೇಲೆ ಜಿ ಎಂದೇ ಬರೆಯಲಾಗಿತ್ತು.

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು..?

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು ಎಂಬದು ಒಂದು ಮಿಲಿಯನ್​ ಡಾಲರ್ ಪ್ರಶ್ನೆಯಾಗಿದೆ. ಹಲವು ದಶಕಗಳೇ ಕಳೆದರೂ ಸಹ ಈ ಮಗು ಯಾರು ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರವಿಲ್ಲ.

ಆದರೆ ಮೂರು ಹೆಸರುಗಳನ್ನು ಸಾಮಾನ್ಯವಾಗಿ ಹೇಳಲಾಗುತ್ತೆ. ನೀರು ದೇಶಪಾಂಡೆ, ಸುಧಾ ಮೂರ್ತಿ ಹಾಗೂ ಗುಂಜನ್​ ಗುಂಡಾನಿಯಾ ಹೆಸರು ಹೆಚ್ಚು ಪ್ರಚಲಿತದಲ್ಲಿದೆ. ಈ ಮೂವರಲ್ಲಿ ಒಬ್ಬರ ಬಾಲ್ಯದ ಪೋಟೋ ಇದು ಎಂದು ಅನೇಕರು ಹೇಳುತ್ತಾರೆ.ಅದರಲ್ಲೂ ನೀರೂ ದೇಶಪಾಂಡೆ ಹೆಸರು ಹೆಚ್ಚಾಗಿ ಕೇಳಲಾಗುತ್ತಿದೆ.

ಹಲವು ಪತ್ರಿಕೆಗಳಲ್ಲಿ ನೀರು ದೇಶಪಾಂಡೆ ಅವರ ಫೋಟೋ ಸಹಿತ ಸುದ್ದಿ ಪ್ರಕಟವಾಗಿತ್ತು. ಈ ಚಿತ್ರವು ನಾಗ್ಪುರದ ನಿವಾಸಿ 65 ವರ್ಷದ ನೀರು ಅವರ ಬಾಲ್ಯದ ಚಿತ್ರ ಎಂದು ಹಲವಾರು ಮಾಧ್ಯಮ ವರದಿಗಳು ಹೇಳಿವೆ. ನೀರೂ ಅವರ ಈ ಚಿತ್ರವನ್ನು ಆಕೆ 4 ವರ್ಷದವಳಿದ್ದಾಗ ತೆಗೆದದ್ದು ಎಂದು ಸುದ್ದಿಯಲ್ಲಿ ಹೇಳಲಾಗಿತ್ತು. ಅವರ ತಂದೆ ವೃತ್ತಿಪರ ಛಾಯಾಗ್ರಾಹಕ ಅಲ್ಲ, ಆದ್ದರಿಂದ ಅವರು ಸುಮ್ಮನೇ ಒಂದು ಫೋಟೋ ತೆಗೆದಿದ್ದರು. ಆ ಫೋಟೊ ಎಷ್ಟು ಚೆನ್ನಾಗಿ ಬಂದಿತ್ತು ಅಂದರೆ ಅದೇ ಫೋಟೋವನ್ನು ಪಾರ್ಲೆ ಜಿ ಪ್ಯಾಕಿಂಗ್​​ಗೆ ಆಯ್ಕೆ ಮಾಡಿಕೊಂಡಿತು ಎಂದು ಹೇಳಲಾಗುತ್ತದೆ.

ಈ ಸುದ್ದಿ ವೈರಲ್​ ಆಗುತ್ತಿದ್ದಂತೆಯೇ ಪಾರ್ಲೆ ಪ್ರಾಡಕ್ಟ್​ನಿಂದ ಸ್ಪಷ್ಟನೆ ನೀಡಲಾಗಿದೆ. ಎಲ್ಲಾ ವದಂತಿಗಳಿಗೆ ಪೂರ್ಣವಿರಾಮ ಹಾಕಿದ ಗ್ರೂಪ್​​ನ ಪ್ರಾಡಕ್ಟ್​ ಮ್ಯಾನೇಜರ್​ ಮಯಂಕ್​ ಷಾ, ಪ್ಯಾಕೆಟ್​ನಲ್ಲಿ ಕಂಡುಬರುವ ಮಗು ಒಂದು ಇಲ್ಯೂಸ್ಟ್ರೇಷನ್​ ಆಗಿದೆ. ಇದನ್ನು 60ರ ದಶಕದಲ್ಲಿ ಮಾಡಲಾಗಿದೆ. ಇಲ್ಲಿ ಯಾವುದೇ ಮಗುವಿನ ಫೋಟೋವನ್ನು ಕಂಪನಿ ಬಳಕೆ ಮಾಡಿಲ್ಲ. ಈ ಚಿತ್ರವನ್ನು ಎವರೆಸ್ಟ್​​ ಕ್ರಿಯೇಟಿವ್​ ಏಜೆನ್ಸಿ ಸಿದ್ದಪಡಿಸಿದೆ ಎಂದು ಹೇಳಿದ್ದಾರೆ.


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »