TOP STORIES:

ಪಾರ್ಲೆ ಜಿ ಪ್ಯಾಕೆಟ್​ನಲ್ಲಿರುವ ಮಗು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ


ಜೀವನದಲ್ಲಿ ಒಮ್ಮೆಯಾದರೂ ನೀವು ಪಾರ್ಲೆ ಜಿ ಬಿಸ್ಕತ್ತನ್ನು ತಿಂದೇ ಇರ್ತೀರಾ..! ಆದರೆ ಈ ಬಿಸ್ಕತ್ತಿಗೆ ಪಾರ್ಲೆ ಜಿ ಎಂಬ ಹೆಸರು ಹೇಗೆ ಬಂತು ಅಂತಾ ಎಂದಾದರೂ ಯೋಚನೆ ಮಾಡಿದ್ದೀರಾ..?‌ ಈ ಬಿಸ್ಕತ್ತು ತಯಾರಿಕೆಯ ಕಾರ್ಯವನ್ನು ಮುಂಬೈನ ವಿಲೇ ಪಾರ್ಲೆಯಲ್ಲಿ ಆರಂಭಿಸಲಾಯ್ತು.

ಇದೇ ಕಾರಣಕ್ಕೆ ಪಾರ್ಲೆ ಎಂಬ ಪದವನ್ನು ಬಳಕೆ ಮಾಡಲಾಯ್ತು. ಆದರೆ ಪಾರ್ಲೆ ಜಿ ಯಲ್ಲಿರುವ ‘ಜಿ’ ಅಂದರೆ ಏನು..? ಆ ಪ್ಯಾಕೆಟ್​ನಲ್ಲಿರುವ ಮಗು ಯಾರು..? ಎಂಬ ಪ್ರಶ್ನೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ.

ಪಾರ್ಲೆ ಉತ್ಪನ್ನಗಳು 1929ರಿಂದ ಆರಂಭವಾದವು. ಮೊದಲು ಈ ಕಾರ್ಖಾನೆಯಲ್ಲಿ ಕೆಲಸ ಮಾಡ್ತಾ ಇದ್ದದ್ದು ಕೇವಲ 12 ಮಂದಿ ಮಾತ್ರ. ಆಗ ಈ ಬಿಸ್ಕತ್ತಿನ ಹೆಸರು ಪಾರ್ಲೆ – ಗ್ಲುಕೋ ಎಂದಾಗಿತ್ತು. 80 ದಶಕದ ಆರಂಭದವರೆಗೂ ಅದೇ ಹೆಸರನ್ನು ಮುಂದುವರಿಸಲಾಗಿತ್ತು. ಆದರೆ 1981ರಲ್ಲಿ ಕಂಪನಿಯು ಗ್ಲುಕೋ ಎಂಬ ಪದವನ್ನು ಶಾರ್ಟ್ ಮಾಡಿ ಪಾರ್ಲೆ ಜಿ ಎಂದು ಬದಲಾಯಿಸಿದೆ. 80 ದಶಕದಲ್ಲಿ ಈ ಬಿಸ್ಕತ್ತು ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರ ಫೇವರಿಟ್​ ಆಗಿ ಬದಲಾಗಿತ್ತು. ಮಕ್ಕಳಿಗೆ ಈ ಬಿಸ್ಕತ್ತು ಇಷ್ಟವಾದ ಬಳಿಕ ಪಾರ್ಲೆ ಜಿ ಯಲ್ಲಿದ್ದ ಜಿಯನ್ನು ಜೀನಿಯಸ್​ ಎಂದು ಬದಲಾಯಿಸಲಾಯ್ತು. ಆದರೂ ಪ್ಯಾಕೆಟ್​ ಮೇಲೆ ಜಿ ಎಂದೇ ಬರೆಯಲಾಗಿತ್ತು.

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು..?

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು ಎಂಬದು ಒಂದು ಮಿಲಿಯನ್​ ಡಾಲರ್ ಪ್ರಶ್ನೆಯಾಗಿದೆ. ಹಲವು ದಶಕಗಳೇ ಕಳೆದರೂ ಸಹ ಈ ಮಗು ಯಾರು ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರವಿಲ್ಲ.

ಆದರೆ ಮೂರು ಹೆಸರುಗಳನ್ನು ಸಾಮಾನ್ಯವಾಗಿ ಹೇಳಲಾಗುತ್ತೆ. ನೀರು ದೇಶಪಾಂಡೆ, ಸುಧಾ ಮೂರ್ತಿ ಹಾಗೂ ಗುಂಜನ್​ ಗುಂಡಾನಿಯಾ ಹೆಸರು ಹೆಚ್ಚು ಪ್ರಚಲಿತದಲ್ಲಿದೆ. ಈ ಮೂವರಲ್ಲಿ ಒಬ್ಬರ ಬಾಲ್ಯದ ಪೋಟೋ ಇದು ಎಂದು ಅನೇಕರು ಹೇಳುತ್ತಾರೆ.ಅದರಲ್ಲೂ ನೀರೂ ದೇಶಪಾಂಡೆ ಹೆಸರು ಹೆಚ್ಚಾಗಿ ಕೇಳಲಾಗುತ್ತಿದೆ.

ಹಲವು ಪತ್ರಿಕೆಗಳಲ್ಲಿ ನೀರು ದೇಶಪಾಂಡೆ ಅವರ ಫೋಟೋ ಸಹಿತ ಸುದ್ದಿ ಪ್ರಕಟವಾಗಿತ್ತು. ಈ ಚಿತ್ರವು ನಾಗ್ಪುರದ ನಿವಾಸಿ 65 ವರ್ಷದ ನೀರು ಅವರ ಬಾಲ್ಯದ ಚಿತ್ರ ಎಂದು ಹಲವಾರು ಮಾಧ್ಯಮ ವರದಿಗಳು ಹೇಳಿವೆ. ನೀರೂ ಅವರ ಈ ಚಿತ್ರವನ್ನು ಆಕೆ 4 ವರ್ಷದವಳಿದ್ದಾಗ ತೆಗೆದದ್ದು ಎಂದು ಸುದ್ದಿಯಲ್ಲಿ ಹೇಳಲಾಗಿತ್ತು. ಅವರ ತಂದೆ ವೃತ್ತಿಪರ ಛಾಯಾಗ್ರಾಹಕ ಅಲ್ಲ, ಆದ್ದರಿಂದ ಅವರು ಸುಮ್ಮನೇ ಒಂದು ಫೋಟೋ ತೆಗೆದಿದ್ದರು. ಆ ಫೋಟೊ ಎಷ್ಟು ಚೆನ್ನಾಗಿ ಬಂದಿತ್ತು ಅಂದರೆ ಅದೇ ಫೋಟೋವನ್ನು ಪಾರ್ಲೆ ಜಿ ಪ್ಯಾಕಿಂಗ್​​ಗೆ ಆಯ್ಕೆ ಮಾಡಿಕೊಂಡಿತು ಎಂದು ಹೇಳಲಾಗುತ್ತದೆ.

ಈ ಸುದ್ದಿ ವೈರಲ್​ ಆಗುತ್ತಿದ್ದಂತೆಯೇ ಪಾರ್ಲೆ ಪ್ರಾಡಕ್ಟ್​ನಿಂದ ಸ್ಪಷ್ಟನೆ ನೀಡಲಾಗಿದೆ. ಎಲ್ಲಾ ವದಂತಿಗಳಿಗೆ ಪೂರ್ಣವಿರಾಮ ಹಾಕಿದ ಗ್ರೂಪ್​​ನ ಪ್ರಾಡಕ್ಟ್​ ಮ್ಯಾನೇಜರ್​ ಮಯಂಕ್​ ಷಾ, ಪ್ಯಾಕೆಟ್​ನಲ್ಲಿ ಕಂಡುಬರುವ ಮಗು ಒಂದು ಇಲ್ಯೂಸ್ಟ್ರೇಷನ್​ ಆಗಿದೆ. ಇದನ್ನು 60ರ ದಶಕದಲ್ಲಿ ಮಾಡಲಾಗಿದೆ. ಇಲ್ಲಿ ಯಾವುದೇ ಮಗುವಿನ ಫೋಟೋವನ್ನು ಕಂಪನಿ ಬಳಕೆ ಮಾಡಿಲ್ಲ. ಈ ಚಿತ್ರವನ್ನು ಎವರೆಸ್ಟ್​​ ಕ್ರಿಯೇಟಿವ್​ ಏಜೆನ್ಸಿ ಸಿದ್ದಪಡಿಸಿದೆ ಎಂದು ಹೇಳಿದ್ದಾರೆ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »