TOP STORIES:

FOLLOW US

ಪಾರ್ಲೆ ಜಿ ಪ್ಯಾಕೆಟ್​ನಲ್ಲಿರುವ ಮಗು ಯಾರು? ಇಲ್ಲಿದೆ ಸಂಪೂರ್ಣ ಮಾಹಿತಿ


ಜೀವನದಲ್ಲಿ ಒಮ್ಮೆಯಾದರೂ ನೀವು ಪಾರ್ಲೆ ಜಿ ಬಿಸ್ಕತ್ತನ್ನು ತಿಂದೇ ಇರ್ತೀರಾ..! ಆದರೆ ಈ ಬಿಸ್ಕತ್ತಿಗೆ ಪಾರ್ಲೆ ಜಿ ಎಂಬ ಹೆಸರು ಹೇಗೆ ಬಂತು ಅಂತಾ ಎಂದಾದರೂ ಯೋಚನೆ ಮಾಡಿದ್ದೀರಾ..?‌ ಈ ಬಿಸ್ಕತ್ತು ತಯಾರಿಕೆಯ ಕಾರ್ಯವನ್ನು ಮುಂಬೈನ ವಿಲೇ ಪಾರ್ಲೆಯಲ್ಲಿ ಆರಂಭಿಸಲಾಯ್ತು.

ಇದೇ ಕಾರಣಕ್ಕೆ ಪಾರ್ಲೆ ಎಂಬ ಪದವನ್ನು ಬಳಕೆ ಮಾಡಲಾಯ್ತು. ಆದರೆ ಪಾರ್ಲೆ ಜಿ ಯಲ್ಲಿರುವ ‘ಜಿ’ ಅಂದರೆ ಏನು..? ಆ ಪ್ಯಾಕೆಟ್​ನಲ್ಲಿರುವ ಮಗು ಯಾರು..? ಎಂಬ ಪ್ರಶ್ನೆ ಯಕ್ಷಪ್ರಶ್ನೆಯಾಗಿಯೇ ಉಳಿದಿದೆ.

ಪಾರ್ಲೆ ಉತ್ಪನ್ನಗಳು 1929ರಿಂದ ಆರಂಭವಾದವು. ಮೊದಲು ಈ ಕಾರ್ಖಾನೆಯಲ್ಲಿ ಕೆಲಸ ಮಾಡ್ತಾ ಇದ್ದದ್ದು ಕೇವಲ 12 ಮಂದಿ ಮಾತ್ರ. ಆಗ ಈ ಬಿಸ್ಕತ್ತಿನ ಹೆಸರು ಪಾರ್ಲೆ – ಗ್ಲುಕೋ ಎಂದಾಗಿತ್ತು. 80 ದಶಕದ ಆರಂಭದವರೆಗೂ ಅದೇ ಹೆಸರನ್ನು ಮುಂದುವರಿಸಲಾಗಿತ್ತು. ಆದರೆ 1981ರಲ್ಲಿ ಕಂಪನಿಯು ಗ್ಲುಕೋ ಎಂಬ ಪದವನ್ನು ಶಾರ್ಟ್ ಮಾಡಿ ಪಾರ್ಲೆ ಜಿ ಎಂದು ಬದಲಾಯಿಸಿದೆ. 80 ದಶಕದಲ್ಲಿ ಈ ಬಿಸ್ಕತ್ತು ಮಕ್ಕಳಿಂದ ಹಿಡಿದು ವಯಸ್ಕರವರೆಗೂ ಎಲ್ಲರ ಫೇವರಿಟ್​ ಆಗಿ ಬದಲಾಗಿತ್ತು. ಮಕ್ಕಳಿಗೆ ಈ ಬಿಸ್ಕತ್ತು ಇಷ್ಟವಾದ ಬಳಿಕ ಪಾರ್ಲೆ ಜಿ ಯಲ್ಲಿದ್ದ ಜಿಯನ್ನು ಜೀನಿಯಸ್​ ಎಂದು ಬದಲಾಯಿಸಲಾಯ್ತು. ಆದರೂ ಪ್ಯಾಕೆಟ್​ ಮೇಲೆ ಜಿ ಎಂದೇ ಬರೆಯಲಾಗಿತ್ತು.

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು..?

 

ಪಾರ್ಲೆ ಜಿ ಬಿಸ್ಕತ್ತಿನ ಪ್ಯಾಕೆಟ್​ನಲ್ಲಿರುವ ಮಗು ಯಾರು ಎಂಬದು ಒಂದು ಮಿಲಿಯನ್​ ಡಾಲರ್ ಪ್ರಶ್ನೆಯಾಗಿದೆ. ಹಲವು ದಶಕಗಳೇ ಕಳೆದರೂ ಸಹ ಈ ಮಗು ಯಾರು ಎಂಬ ಪ್ರಶ್ನೆಗೆ ಸ್ಪಷ್ಟ ಉತ್ತರವಿಲ್ಲ.

ಆದರೆ ಮೂರು ಹೆಸರುಗಳನ್ನು ಸಾಮಾನ್ಯವಾಗಿ ಹೇಳಲಾಗುತ್ತೆ. ನೀರು ದೇಶಪಾಂಡೆ, ಸುಧಾ ಮೂರ್ತಿ ಹಾಗೂ ಗುಂಜನ್​ ಗುಂಡಾನಿಯಾ ಹೆಸರು ಹೆಚ್ಚು ಪ್ರಚಲಿತದಲ್ಲಿದೆ. ಈ ಮೂವರಲ್ಲಿ ಒಬ್ಬರ ಬಾಲ್ಯದ ಪೋಟೋ ಇದು ಎಂದು ಅನೇಕರು ಹೇಳುತ್ತಾರೆ.ಅದರಲ್ಲೂ ನೀರೂ ದೇಶಪಾಂಡೆ ಹೆಸರು ಹೆಚ್ಚಾಗಿ ಕೇಳಲಾಗುತ್ತಿದೆ.

ಹಲವು ಪತ್ರಿಕೆಗಳಲ್ಲಿ ನೀರು ದೇಶಪಾಂಡೆ ಅವರ ಫೋಟೋ ಸಹಿತ ಸುದ್ದಿ ಪ್ರಕಟವಾಗಿತ್ತು. ಈ ಚಿತ್ರವು ನಾಗ್ಪುರದ ನಿವಾಸಿ 65 ವರ್ಷದ ನೀರು ಅವರ ಬಾಲ್ಯದ ಚಿತ್ರ ಎಂದು ಹಲವಾರು ಮಾಧ್ಯಮ ವರದಿಗಳು ಹೇಳಿವೆ. ನೀರೂ ಅವರ ಈ ಚಿತ್ರವನ್ನು ಆಕೆ 4 ವರ್ಷದವಳಿದ್ದಾಗ ತೆಗೆದದ್ದು ಎಂದು ಸುದ್ದಿಯಲ್ಲಿ ಹೇಳಲಾಗಿತ್ತು. ಅವರ ತಂದೆ ವೃತ್ತಿಪರ ಛಾಯಾಗ್ರಾಹಕ ಅಲ್ಲ, ಆದ್ದರಿಂದ ಅವರು ಸುಮ್ಮನೇ ಒಂದು ಫೋಟೋ ತೆಗೆದಿದ್ದರು. ಆ ಫೋಟೊ ಎಷ್ಟು ಚೆನ್ನಾಗಿ ಬಂದಿತ್ತು ಅಂದರೆ ಅದೇ ಫೋಟೋವನ್ನು ಪಾರ್ಲೆ ಜಿ ಪ್ಯಾಕಿಂಗ್​​ಗೆ ಆಯ್ಕೆ ಮಾಡಿಕೊಂಡಿತು ಎಂದು ಹೇಳಲಾಗುತ್ತದೆ.

ಈ ಸುದ್ದಿ ವೈರಲ್​ ಆಗುತ್ತಿದ್ದಂತೆಯೇ ಪಾರ್ಲೆ ಪ್ರಾಡಕ್ಟ್​ನಿಂದ ಸ್ಪಷ್ಟನೆ ನೀಡಲಾಗಿದೆ. ಎಲ್ಲಾ ವದಂತಿಗಳಿಗೆ ಪೂರ್ಣವಿರಾಮ ಹಾಕಿದ ಗ್ರೂಪ್​​ನ ಪ್ರಾಡಕ್ಟ್​ ಮ್ಯಾನೇಜರ್​ ಮಯಂಕ್​ ಷಾ, ಪ್ಯಾಕೆಟ್​ನಲ್ಲಿ ಕಂಡುಬರುವ ಮಗು ಒಂದು ಇಲ್ಯೂಸ್ಟ್ರೇಷನ್​ ಆಗಿದೆ. ಇದನ್ನು 60ರ ದಶಕದಲ್ಲಿ ಮಾಡಲಾಗಿದೆ. ಇಲ್ಲಿ ಯಾವುದೇ ಮಗುವಿನ ಫೋಟೋವನ್ನು ಕಂಪನಿ ಬಳಕೆ ಮಾಡಿಲ್ಲ. ಈ ಚಿತ್ರವನ್ನು ಎವರೆಸ್ಟ್​​ ಕ್ರಿಯೇಟಿವ್​ ಏಜೆನ್ಸಿ ಸಿದ್ದಪಡಿಸಿದೆ ಎಂದು ಹೇಳಿದ್ದಾರೆ.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »