TOP STORIES:

ಪುಷ್ಪರಾಜ್ ಅಮಿನ್ ಮತ್ತು ತಂಡದಿಂದ ಮೈಕ್ರೋ ಲೈಟ್ ಸೀ ಪ್ಲೇನ್ ತಯಾರು – ಬೇಕಿದೆ ಸರಕಾರದ ಸಹಾಯ ಹಸ್ತ


ಉಡುಪಿ: ಒಂದೆಡೆ ಸರಕಾರಗಳು ದೇಶೀಯ ಉತ್ಪನ್ನ, ಸಂಶೋಧನೆಗಳಿಗೆ ಒತ್ತು ನೀಡಿ ಸ್ವದೇಶದಲ್ಲಿ ತಯಾರಾಗುವ ಅವಿಶ್ಕಾರಗಳಿಗೆ ವೇದಿಕೆ ಒಗದಿಸಲು ಚಿಂತನೆ ನಡೆಸುತ್ತಿದೆ. ಆದರೆ ಮತ್ತೊಂದೆಡೆ ಉಡುಪಿಯ ಹೆಜಮಾಡಿ ಎಂಬ ಪುಟ್ಟ ಹಳ್ಳಿಯಲ್ಲಿ ದೇಶದಲ್ಲೇ ಮೊದಲು ಎನ್ನುವ ರೀತಿಯಲ್ಲಿ ಸಂಶೋಧನೆ ಒಂದು ನಡೆದಿದ್ದು ಸರಕಾರದ ಸಹಾಯ ಹಸ್ತದ ನಿರೀಕ್ಷೆಯಲ್ಲಿದೆ.

ಉಡುಪಿಯ ಗಡಿಭಾಗ ಹೆಜಮಾಡಿ ಎಂಬ ಪುಟ್ಟ ಗ್ರಾಮದಲ್ಲಿ ಉತ್ಸಾಹಿ ಯುವ ಪಡೆ ತಮ್ಮದೇ ಸ್ವಂತ ಬಂಡವಾಳದೊಂದಿಗೆ ದೇಶದಲ್ಲೇ ಮೊದಲು ಎಂಬಂತೆ ಮೈಕ್ರೋ ಲೈಟ್ ಸೀ ಪ್ಲೇನ್ ಒಂದನ್ನು ತಯಾರು ಮಾಡಿದ್ದಾರೆ. ಈ ಸೀ ಪ್ಲೇನ್ ದೇಶೀಯ ನಿರ್ಮಿತ ಪ್ರಥಮ ಸೀ ಪ್ಲೇನ್ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಇಲ್ಲಿನ ಪುಷ್ಪರಾಜ್ ಅಮಿನ್ ಎಂಬವರು ಈ ಯೋಜನೆಯ ರೂವಾರಿ. 8 ಮಂದಿ ಯುವಕ ಯುವತಿಯರ ಜೊತೆ ಗೂಡಿ ಈ ಸೀ ಪ್ಲೇನ್ ಅನ್ನು ತಯಾರಿಸಿದ್ದು ಇಲ್ಲಿನ ಶಾಂಭವಿ ನದಿಯಲ್ಲಿ ಯಶಸ್ವಿ ಪ್ರಾಯೋಗಿಕ ಹಾರಾಟ ಕೂಡಾ ನಡೆದಿದೆ, 1 ವರ್ಷದ ಕಠಿಣ ಪರಿಶ್ರಮ ಮತ್ತು ಸಂಶೋಧನೆಯ ಫಲವಾಗಿ ಸೀ ಪ್ಲೇನ್ ನಿರ್ಮಾಣವಾಗಿದ್ದು ಸುಮಾರು 7 ರಿಂದ 8 ಲಕ್ಷ.ರೂ. ವೆಚ್ಚ ತಗುಲಿದೆ.

“ಸಣ್ಣದಿಂದಲೇ ನನಗೆ ವಿಮಾನ ಹಾರಿಸಬೇಕು ಎಂಬ ಆಸೆ ಇದ್ದಿತ್ತು. ಕಳೆದ ಕೆಲ ವರ್ಷಗಳಲ್ಲಿ ಸಣ್ಣ ಸಣ್ಣ ವಿಮಾನದ ಮಾಡೆಲ್‌‌ಗಳನ್ನು ಮಾಡಿದ್ದೇನೆ. ಹಲವಾರು ಮಕ್ಕಳಿಗೆ ತರಬೇತಿಯನ್ನು ಕೂಡಾ ನೀಡಿದ್ದೇನೆ. ಓರ್ವ ವ್ಯಕ್ತಿ ಕುಳಿತುಕೊಂಡು ಹೋಗುವಂತಹ ವಿಮಾನ ಮಾಡಬೇಕು ಎಂಬ ಆಸೆ ಇದ್ದಿತ್ತು. ಆದರೆ ವಿಮಾನ ಮಾಡುವುದು ತುಂಬಾ ಕಷ್ಟಕರ. ಆಕಾಶದಲ್ಲಿ ಹಾರುವ ವಿಮಾನ ತಯಾರಿಸಲು ಜಾಗದ ಕೊರತೆ ಮತ್ತು ಹಣದ ಅವಶ್ಯಕತೆ ಕೂಡಾ ಇತ್ತು ಹೀಗಾಗಿ ನೀರಿನಲ್ಲಿ ಹೋಗುವ ವಿಮಾನವನ್ನು ತಯಾರಿಸಿದೆವು. ನನ್ನ ಮನೆಯ ಹತ್ತಿರವೇ ನದಿ ಇರುವುದರಿಂದ ಇದರ ಪ್ರಾಯೋಗಿಕ ಪ್ರಯೋಗಕ್ಕೆ ಮತ್ತು ಇನ್ನಿತರ ಕೆಲಸಕ್ಕೆ ಕೂಡಾ ಸುಲಭವಾಗಿತ್ತು. ಈ ಯೋಜನೆಗೆ ಸಹಕಾರಿಯಾಗುವಂತೆ ಸರಕಾರ ನಮಗೆ ಒಂದು ಸಣ್ಣ ಮಟ್ಟದ ವರ್ಕ್ ಶಾಪ್ ಮತ್ತು ಅಗತ್ಯ ಸವಲತ್ತುಗಳನ್ನು ಒದಗಿಸಿ ಕೊಡಬೇಕು” ಎನ್ನುತ್ತಾರೆ ಈ ತಂಡದ ಮುಖ್ಯಸ್ಥರು ಮತ್ತು ಮಾರ್ಗದರ್ಶಕರು ಆದ ಪುಷ್ಪರಾಜ್ ಅಮಿನ್.

ಈ ಇಡೀ ಸೀ ಪ್ಲೇನ್ ತಯಾರಾದದ್ದು ಪುಷ್ಪರಾಜ್ ಅವರ ಮನೆಯ ಅಂಗಳ ಗದ್ದೆ, ಮತ್ತು ತೋಟದಲ್ಲಿ. ಯಾವುದೇ ದೊಡ್ಡ ವರ್ಕ್ ಶಾಪ್ ಇಲ್ಲದೇ, ಆಧುನಿಕ ಉಪಕಣಗಳು ಇಲ್ಲದೇ ತಮ್ಮಲ್ಲಿ ಲಭ್ಯವಿರುವ ಉಪಕರಣಗಳನ್ನು ಬಳಸಿ ಈ ಸೀ ಪ್ಲೇನ್ ಅನ್ನು ತಯಾರು ಮಾಡಿದ್ದಾರೆ, ತಂಡದಲ್ಲಿ ಪುಷ್ಪರಾಜ್ ಅಮೀನ್ ಸೇರಿದಂತೆ, ಟ್ರೈನಿ ಪೈಲಟ್ ವಿನಯಾ ಯು, ಯಾಚ್ ಕ್ಯಾಪ್ಟನ್ ವಸುರಾಜ್ ಅಮಿನ್, ವೃತ್ತಿಪರ ಡ್ರೋನ್‌‌ ಆಪರೇಟರ್ ಅಭಿಷೇಕ್ ಎಂ ಕೋಟ್ಯಾನ್, ಏರೋನಾಟಿಕಲ್ ವಿದ್ಯಾರ್ಥಿ ಉತ್ಸವ್ ಉಮೇಶ್, ಏರೋನಾಟಿಕಲ್ ಪ್ರಾಧ್ಯಾಪಕ ಶಯನಿ ರಾವ್, ರೇಶ್ಮಾ ಬಂಗೇರ, ಅಶ್ವಿನಿ ರಾವ್ ಸೇರಿದ್ದಾರೆ.

“ಈ ಸೀ ಪ್ಲೇನ್ 190 ಕೆಜಿ ಇದ್ದು, ಓರ್ವ ಪೈಲಟ್ ಕುಳಿತುಕೊಂಡು ಸಂಚರಿಸಲು ಸಾಧ್ಯವಿದೆ. ನಮ್ಮ ಪ್ರಥಮ ಪ್ರಯತ್ನದಲ್ಲೇ ನಾವು ಯಶಸನ್ನು ಕಂಡಿದ್ದೇವೆ. ನಮ್ಮ ದೇಶದಲ್ಲಿ ಇಷ್ಟು ಕಡಿಮೆ ವೆಚ್ಚ ಮತ್ತು ಸಮಯದಲ್ಲಿ ತಯಾರಾಗಿರುವ ಪ್ರಥಮ ವಿಮಾನ ಇದು. ಇದನ್ನು ದ್ವೀಪಗಳ ನಡುವೆ ಸಂಚಾರಕ್ಕೆ, ನೆರೆ ಸಂಧರ್ಭದಲ್ಲಿ ಪರಿಹಾರ ಕಾರ್ಯಕ್ಕೆ, ಪ್ರವಾಸೋದ್ಯಮಕ್ಕೆ, ಬಳಕೆ ಮಾಡಬಹುದು. ಆದರೆ ಸರಿಯಾದ ವರ್ಕ್ ಶಾಪ್, ಉಪಕರಣಗಳು ಇಲ್ಲದೇ ಈ ಪ್ರಯೋಗ ಯಶಸ್ವಿಯಾಗಿದೆ” ಎನ್ನುತ್ತಾರೆ ತಂಡದ ಸದಸ್ಯ ಶಯನಿ ರಾವ್.

ದೃತಿ ಮೈಕ್ರೋಲೈಟ್ ಸೀ ಪ್ಲೇನ್ ಎಂದು ಇದನ್ನು ಹೆಸರಿಸಲಾಗಿದ್ದು ಸುಮಾರು 120 ಕೆಜಿ ಭಾರವಿದೆ. 33 ಹೆಚ್.ಪಿ ಮೋಟಾರ್ ಅನ್ನು ಈ ಸೀ ಪ್ಲೇನ್‌‌ಗಾಗಿ ಬಳಸಲಾಗಿದೆ. ಗ್ರೇಡ್ ಅಲುಮಿನಿಯಂ, ಫೋಮ್, ಫೈಬರ್ ಬಟ್ಟೆ, ನೈಲಾನ್ ಬಟ್ಟೆ ಮತ್ತು ಇನ್ನಿತರ ಸಾಮಾಗ್ರಿಗಳನ್ನು ಈ ಸೀ ಪ್ಲೇನ್ ತಯಾರಿಯಲ್ಲಿ ಬಳಸಲಾಗಿದೆ. ತಂಡವು ಸೂಕ್ತ ಪರಿಕರ, ವ್ಯವಸ್ಥೆಗಳು ಲಭ್ಯವಾದಲ್ಲಿ ಮುಂದಿನ ದಿನಗಳಲ್ಲಿ 4,610 ಸೀಟರ್ ಸೀ ಪ್ಲೇನ್ ಗಳನ್ನು ತಯಾರಿಸಲು ಕೂಡಾ ಯೋಜನೆ ಹಾಕಿಕೊಳ್ಳುತ್ತಿದೆ.

ಈ ಪ್ರಯೋಗಕ್ಕೆ ಆಗಿರುವ ಖರ್ಚು ವೆಚ್ಚ ಎಲ್ಲವನ್ನೂ ತಂಡದ ಸದಸ್ಯರು, ಸ್ನೇಹಿತರು, ಮತ್ತು ಸಾಲ ಮಾಡುವ ಮೂಲಕ ನಿಭಾಯಿಸಿದ್ದಾರೆ.

ಈ ಮೊದಲು ಗುಜರಾತಿನ ಅಹಮದಾಬಾದ್‌ನಲ್ಲಿ ವಿದೇಶದಿಂದ ತರಿಸಿದ್ದ ಸೀ ಪ್ಲೇನ್ ಅನ್ನು ಪ್ರಧಾನಿ ಮೋದಿಯವರು ಉದ್ಘಾಟನೆ ಮಾಡಿ ಅದರಲ್ಲಿ ಪ್ರಯಾಣವನ್ನು ಕೂಡಾ ಮಾಡಿದ್ದರು. ಆದರೆ ದೇಶೀಯ ನಿರ್ಮಿತ ಪ್ರಥಮ ಸೀ ಪ್ಲೇನ್‌ಗೆ ಇದೀಗ ಅಗತ್ಯ ಬೆಂಬಲ ಬೇಕಾಗಿದೆ. ಸರಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಈ ಕುರಿತು ಗಮನಹರಿಸಿ ಈ ಯುವ ಅವಿಷ್ಕಾರಿಗಳಿಗೆ ನೆರವಾಗಬೇಕಿದೆ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »