TOP STORIES:

ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣ ಕನಸಿಗೆ ಬೆನ್ನೆಲುಬಾದವರು ಜಯ ಸಿ.ಸುವರ್ಣ


ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಮುಂಬೈ ಬಿಲ್ಲವ ಭವನದ ರೂವಾರಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಹತ್ತು ಹಲವಾರು ಕೊಡುಗೆಗಳನ್ನು ನೀಡಿದವರು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣದ ಕನಸ್ಸಿಗೆ ಬೆಂಬಲವಾಗಿ ನಿಂತವರು.

ಮುಂಬೈ ಗುಜರಾತ್ ಸೇರಿದಂತೆ ದೇಶ ವಿದೇಶಗಳ ಬಿಲ್ಲವರನ್ನು ಸಂಪರ್ಕಿಸಿ ಆರ್ಥಿಕ ಸಂಪನ್ಮೂಲ ಕ್ರೋಡಿಕರಿಸಿ ಜನಾರ್ದನ ಪೂಜಾರಿಯವರ ಕನಸ್ಸಿನ ಯೋಜನೆ ಶ್ರೀ ಕ್ಷೇತ್ರದ ನವೀಕರಣ ಹಾಗೂ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಮುಂಬೈ ಬಿಲ್ಲವರ ಅಸೋಸಿಯೇಶನ್ ಹಿರಿಯರಿಂದ ಸ್ಪಾಪಿತವಾದ ಭಾರತ್ ಕೋ- ಅಪರೇಟಿವ್ ಬ್ಯಾಂಕಿನ ಚುಕ್ಕಾಣಿ ಹಿಡಿದು ಆಗ ಕೇವಲ 5 ಶಾಖೆಗಳಿದ್ದ ಅದನ್ನು ಜನಾರ್ದನ ಪೂಜಾರಿಯವರ ಬೆಂಬಲದೊಂದಿಗೆ ಇಂದು 100ಕ್ಕೂ ಅಧಿಕ ಶಾಖೆಗಳ ವಿಸ್ತರಣೆಯೊಂದಿಗೆ ಸಮಾಜದ ಸಾವಿರಾರು ಮಂದಿಗೆ ಉದ್ಯೋಗ, ಲಕ್ಷಾಂತರ ಮಂದಿಗೆ ಸಾಲದ ಮೂಲಕ ಆರ್ಥಕ ಶಕ್ತಿ ನೀಡಿ ಅವರ ವ್ಯವಹಾರಕ್ಕೆ ನೆರವಾದ ಜಯ ಸಿ ಸುವರ್ಣರ ಇಚ್ಛಾಶಕ್ತಿಯಿಂದಾಗಿ ಇಂದು ಭಾರತ್ ಕೋ-ಅಪರೇಟಿವ್ ಬ್ಯಾಂಕ್ ದೇಶದ ಪ್ರತಿಷ್ಠಿತ ಬ್ಯಾಂಕ್ ಎಂಬ ಹೆಗ್ಗಳಿಕೆಯೊಂದಿಗೆ ಹಲವಾರು ಪ್ರಶಸ್ತಿ ಗೌರವಗಳಿಗೆ ಪಾತ್ರವಾಗಿದೆ.

ತಿಳಿದು ಬರೋದು ಜನನ.ತಿಳಿಯದೆ ಬರೋದು ಮರಣ.ತಿಳಿದು ಬದುಕುವುದೇ ಜೀವನ..ಇವರೇ ಸಾರ್ಥಕ ಬದುಕಿನ ನಮ್ಮ ಜಯ ಸಿ ಸುವರ್ಣ. ಬದುಕಿನುದ್ದಕ್ಕೂ ಜಗತ್ತಿನಲ್ಲಿ ಸ್ರಷ್ಟಿಯಾದ ಎಲ್ಲರನ್ನೂ, ಎಲ್ಲವನ್ನೂ ಪ್ರೀತಿಸುತ್ತಾ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶ ಗಳನ್ನು ಪಾಲಿಸುತ್ತಾ, ಕೂಡಿ ಬಾಳಿ, ದಾನ ಮಾಡಿ ಮಾಡಿ, ಕೊಟ್ಟು ಕೊಟ್ಟು ಹಿಗ್ಗದೇ ಸರ್ವ ಸಮಾಜದ ಒಬ್ಬ ಮಹಾನ್ ಜನನಾಯಕರಾಗಿದ್ದರು.

ಗೋರೆಗಾವ್‌‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಭಾರತ್ ಬ್ಯಾಂಕ್ ನ ಅಭಿವೃದ್ಧಿ ರೂವಾರಿ, ಮಾಜಿ ಕಾರ್ಯಾಧ್ಯಕ್ಷರು, ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಮಾಜಿ ಅಧ್ಯಕ್ಷರು, ಮಾರ್ಗ ದರ್ಶಕರು,ಬಿಲ್ಲವರ ಮಹಾ ಮಂಡಲದ ಮಾಜಿ ಅಧ್ಯಕ್ಷರು, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಹಾಗೇನೇ ಸಾಯಿ ವೆಜ್ ಹೋಟೆಲ್ ಗ್ರೂಪ್ನ ಸ್ಥಾಪಕರು ಆದ ಸಂಘಟಕರಾಗಿದ್ದ ಅವರು ನಮ್ಮ ನಿಮ್ಮ ಜನನಾಯಕರಾಗಿದ್ದರು. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಈ ಮೂಲಕ ಪ್ರಾರ್ಥಿಸುವ.


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »