TOP STORIES:

ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣ ಕನಸಿಗೆ ಬೆನ್ನೆಲುಬಾದವರು ಜಯ ಸಿ.ಸುವರ್ಣ


ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಮುಂಬೈ ಬಿಲ್ಲವ ಭವನದ ರೂವಾರಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಹತ್ತು ಹಲವಾರು ಕೊಡುಗೆಗಳನ್ನು ನೀಡಿದವರು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣದ ಕನಸ್ಸಿಗೆ ಬೆಂಬಲವಾಗಿ ನಿಂತವರು.

ಮುಂಬೈ ಗುಜರಾತ್ ಸೇರಿದಂತೆ ದೇಶ ವಿದೇಶಗಳ ಬಿಲ್ಲವರನ್ನು ಸಂಪರ್ಕಿಸಿ ಆರ್ಥಿಕ ಸಂಪನ್ಮೂಲ ಕ್ರೋಡಿಕರಿಸಿ ಜನಾರ್ದನ ಪೂಜಾರಿಯವರ ಕನಸ್ಸಿನ ಯೋಜನೆ ಶ್ರೀ ಕ್ಷೇತ್ರದ ನವೀಕರಣ ಹಾಗೂ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಮುಂಬೈ ಬಿಲ್ಲವರ ಅಸೋಸಿಯೇಶನ್ ಹಿರಿಯರಿಂದ ಸ್ಪಾಪಿತವಾದ ಭಾರತ್ ಕೋ- ಅಪರೇಟಿವ್ ಬ್ಯಾಂಕಿನ ಚುಕ್ಕಾಣಿ ಹಿಡಿದು ಆಗ ಕೇವಲ 5 ಶಾಖೆಗಳಿದ್ದ ಅದನ್ನು ಜನಾರ್ದನ ಪೂಜಾರಿಯವರ ಬೆಂಬಲದೊಂದಿಗೆ ಇಂದು 100ಕ್ಕೂ ಅಧಿಕ ಶಾಖೆಗಳ ವಿಸ್ತರಣೆಯೊಂದಿಗೆ ಸಮಾಜದ ಸಾವಿರಾರು ಮಂದಿಗೆ ಉದ್ಯೋಗ, ಲಕ್ಷಾಂತರ ಮಂದಿಗೆ ಸಾಲದ ಮೂಲಕ ಆರ್ಥಕ ಶಕ್ತಿ ನೀಡಿ ಅವರ ವ್ಯವಹಾರಕ್ಕೆ ನೆರವಾದ ಜಯ ಸಿ ಸುವರ್ಣರ ಇಚ್ಛಾಶಕ್ತಿಯಿಂದಾಗಿ ಇಂದು ಭಾರತ್ ಕೋ-ಅಪರೇಟಿವ್ ಬ್ಯಾಂಕ್ ದೇಶದ ಪ್ರತಿಷ್ಠಿತ ಬ್ಯಾಂಕ್ ಎಂಬ ಹೆಗ್ಗಳಿಕೆಯೊಂದಿಗೆ ಹಲವಾರು ಪ್ರಶಸ್ತಿ ಗೌರವಗಳಿಗೆ ಪಾತ್ರವಾಗಿದೆ.

ತಿಳಿದು ಬರೋದು ಜನನ.ತಿಳಿಯದೆ ಬರೋದು ಮರಣ.ತಿಳಿದು ಬದುಕುವುದೇ ಜೀವನ..ಇವರೇ ಸಾರ್ಥಕ ಬದುಕಿನ ನಮ್ಮ ಜಯ ಸಿ ಸುವರ್ಣ. ಬದುಕಿನುದ್ದಕ್ಕೂ ಜಗತ್ತಿನಲ್ಲಿ ಸ್ರಷ್ಟಿಯಾದ ಎಲ್ಲರನ್ನೂ, ಎಲ್ಲವನ್ನೂ ಪ್ರೀತಿಸುತ್ತಾ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶ ಗಳನ್ನು ಪಾಲಿಸುತ್ತಾ, ಕೂಡಿ ಬಾಳಿ, ದಾನ ಮಾಡಿ ಮಾಡಿ, ಕೊಟ್ಟು ಕೊಟ್ಟು ಹಿಗ್ಗದೇ ಸರ್ವ ಸಮಾಜದ ಒಬ್ಬ ಮಹಾನ್ ಜನನಾಯಕರಾಗಿದ್ದರು.

ಗೋರೆಗಾವ್‌‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಭಾರತ್ ಬ್ಯಾಂಕ್ ನ ಅಭಿವೃದ್ಧಿ ರೂವಾರಿ, ಮಾಜಿ ಕಾರ್ಯಾಧ್ಯಕ್ಷರು, ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಮಾಜಿ ಅಧ್ಯಕ್ಷರು, ಮಾರ್ಗ ದರ್ಶಕರು,ಬಿಲ್ಲವರ ಮಹಾ ಮಂಡಲದ ಮಾಜಿ ಅಧ್ಯಕ್ಷರು, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಹಾಗೇನೇ ಸಾಯಿ ವೆಜ್ ಹೋಟೆಲ್ ಗ್ರೂಪ್ನ ಸ್ಥಾಪಕರು ಆದ ಸಂಘಟಕರಾಗಿದ್ದ ಅವರು ನಮ್ಮ ನಿಮ್ಮ ಜನನಾಯಕರಾಗಿದ್ದರು. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಈ ಮೂಲಕ ಪ್ರಾರ್ಥಿಸುವ.


Related Posts

ಬಿಲ್ಲವಾಸ್ ಕತಾರ್ ನ ಸ್ವರ ಲಹರಿಗೆ ಸ್ವರ ಸೇರಿಸಿ ಕುಣಿದು ಕುಪ್ಪಳಿಸಿದ ಜನಸ್ತೋಮ


Share        ಬಿಲ್ಲವಾಸ್ ಕತಾರ್  ಆಯೋಜಿಸಿದ  ಸ್ವರ ಲಹರಿ, ಸಂಗೀತ ಸಂಜೆ ಕಾರ್ಯಕ್ರಮ  ದಿನಾಂಕ  ಮೇ 30, 2025 ರಂದು ಡಿ.ಪಿ.ಎಸ್. ಎಂ.ಐ.ಎಸ್ ಅಲ್ ವಕ್ರ   ಸಭಾಂಗಣದಲ್ಲಿ ನವ ಇತಿಹಾಸವನ್ನು ಸೃಷ್ಟಿಸಿತು.  ಅದ್ಭುತ ಸಂಗೀತ


Read More »

ಬಿಕ್ಕಳಿಕೆ ಬಂದಾಗ ಈ ಸರಳ ಟೆಕ್ನಿಕ್ ಟ್ರೈ ಮಾಡಿ ನೋಡಿ, ತಕ್ಷಣ ಕಡಿಮೆಯಾಗುತ್ತೆ


Share        ಬಿಕ್ಕಳಿಕೆ ಯಾರಿಗೆ ಬರಲ್ಲ ಹೇಳಿ? ಅದರಲ್ಲಿಯೂ ಈ ಬಿಕ್ಕಳಿಕೆ ಯಾರನ್ನೂ ಹೇಳಿ, ಕೇಳಿ ಬರುವಂತದ್ದಲ್ಲ. ಆದರೆ ಅವು ಬಂದಾಗ ಎಲ್ಲರ ಮುಂದೆ ಮುಜುಗರ ಆಗುವುದು ಮಾತ್ರ ತಪ್ಪುವುದಿಲ್ಲ. ಏಕೆಂದರೆ ಇದು ಯಾವಾಗ ಬೇಕಾದರೂ


Read More »

ಭಾರತೀಯ ಸೇನೆಯಲ್ಲಿ ಲೆಫ್ಟಿನೆಂಟ್ ಗೆಜೆಟೆಡ್ ಅಧಿಕಾರಿಯಾಗಿ ಆಯ್ಕೆಯಾದ ಸುದೀಪ್ ರಾಜ್ ಮನೆಗೆ ಸೌದಿ ಬಿಲ್ಲಾವಾಸ್ ಅಧ್ಯಕ್ಷರಾದ ಸತೀಶ್ ಕುಮಾರ್ ಬಜಾಲ್ ಭೇಟಿ


Share        ಮಂಗಳೂರು: ಕೇಂದ್ರ ಲೋಕಸೇವಾ ಆಯೋಗ (UPSC) ನಡೆಸಲಾದ ಪರೀಕ್ಷೆಯಲ್ಲಿ ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಆಯ್ಕೆಯಾದ ಮಂಗಳೂರಿನ ಚಿಲಿಂಬಿ ಆದರ್ಶನಗರದ ಸುದೀಪ್ ರಾಜ್ ಅವರ ಮನೆಗೆ ತೆರಳಿ ಸೌದಿ ಬಿಲ್ಲಾವಾಸ್


Read More »

UPSC ನಡೆಸಲಾದ ಪರೀಕ್ಷೆಯಲ್ಲಿ. ಲೆಫ್ಟಿನೆಂಟ್ (ವರ್ಗ -1 )ಗೆಜೆಟೆಡ್ ಅಧಿಕಾರಿ ಯಾಗಿ ಸುದೀಪ್ ರಾಜ್ ಆಯ್ಕೆ


Share        ಕೇಂದ್ರ ಲೋಕಸೇವಾ ಆಯೋಗ (UPSC), ಮೇ 23, 2025 ರಂದು ಕಂಬೈನ್ಡ್ ಡಿಫೆನ್ಸ್ ಸರ್ವೀಸಸ್ (CDS) ಪರೀಕ್ಷೆ (II), 2024 ರ ಅಂತಿಮ ಮೆರಿಟ್ ಪಟ್ಟಿಯನ್ನು ಬಿಡುಗಡೆ ಮಾಡಿದೆ, ಅದರಲ್ಲಿ ನಮ್ಮ ಬಿಲ್ಲವ


Read More »

ಮೊಂಟೆಪದವು ಕೋಡಿಯಲ್ಲಿ ಗುಡ್ಡ ಕುಸಿತ; ಪದ್ಮರಾಜ್ ಆರ್.ಪೂಜಾರಿ ಭೇಟಿ ಮಾಡಿ ಸಾಂತ್ವನ


Share        ಮಂಗಳೂರು: ಕರ್ನಾಟಕದ ಕರಾವಳಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಸಂಭವಿಸಿ ಮೂವರು ಸಾವನ್ನಪ್ಪಿದ್ದಾರೆ. ಒಬ್ಬ ಮಹಿಳೆ ಮತ್ತು ಆಕೆಯ ಮಗುವನ್ನು ಅವಶೇಷಗಳಿಂದ ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಗಂಭೀರವಾಗಿದೆ


Read More »

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share        ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »