TOP STORIES:

FOLLOW US

ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣ ಕನಸಿಗೆ ಬೆನ್ನೆಲುಬಾದವರು ಜಯ ಸಿ.ಸುವರ್ಣ


ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಮುಂಬೈ ಬಿಲ್ಲವ ಭವನದ ರೂವಾರಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಹತ್ತು ಹಲವಾರು ಕೊಡುಗೆಗಳನ್ನು ನೀಡಿದವರು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣದ ಕನಸ್ಸಿಗೆ ಬೆಂಬಲವಾಗಿ ನಿಂತವರು.

ಮುಂಬೈ ಗುಜರಾತ್ ಸೇರಿದಂತೆ ದೇಶ ವಿದೇಶಗಳ ಬಿಲ್ಲವರನ್ನು ಸಂಪರ್ಕಿಸಿ ಆರ್ಥಿಕ ಸಂಪನ್ಮೂಲ ಕ್ರೋಡಿಕರಿಸಿ ಜನಾರ್ದನ ಪೂಜಾರಿಯವರ ಕನಸ್ಸಿನ ಯೋಜನೆ ಶ್ರೀ ಕ್ಷೇತ್ರದ ನವೀಕರಣ ಹಾಗೂ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಮುಂಬೈ ಬಿಲ್ಲವರ ಅಸೋಸಿಯೇಶನ್ ಹಿರಿಯರಿಂದ ಸ್ಪಾಪಿತವಾದ ಭಾರತ್ ಕೋ- ಅಪರೇಟಿವ್ ಬ್ಯಾಂಕಿನ ಚುಕ್ಕಾಣಿ ಹಿಡಿದು ಆಗ ಕೇವಲ 5 ಶಾಖೆಗಳಿದ್ದ ಅದನ್ನು ಜನಾರ್ದನ ಪೂಜಾರಿಯವರ ಬೆಂಬಲದೊಂದಿಗೆ ಇಂದು 100ಕ್ಕೂ ಅಧಿಕ ಶಾಖೆಗಳ ವಿಸ್ತರಣೆಯೊಂದಿಗೆ ಸಮಾಜದ ಸಾವಿರಾರು ಮಂದಿಗೆ ಉದ್ಯೋಗ, ಲಕ್ಷಾಂತರ ಮಂದಿಗೆ ಸಾಲದ ಮೂಲಕ ಆರ್ಥಕ ಶಕ್ತಿ ನೀಡಿ ಅವರ ವ್ಯವಹಾರಕ್ಕೆ ನೆರವಾದ ಜಯ ಸಿ ಸುವರ್ಣರ ಇಚ್ಛಾಶಕ್ತಿಯಿಂದಾಗಿ ಇಂದು ಭಾರತ್ ಕೋ-ಅಪರೇಟಿವ್ ಬ್ಯಾಂಕ್ ದೇಶದ ಪ್ರತಿಷ್ಠಿತ ಬ್ಯಾಂಕ್ ಎಂಬ ಹೆಗ್ಗಳಿಕೆಯೊಂದಿಗೆ ಹಲವಾರು ಪ್ರಶಸ್ತಿ ಗೌರವಗಳಿಗೆ ಪಾತ್ರವಾಗಿದೆ.

ತಿಳಿದು ಬರೋದು ಜನನ.ತಿಳಿಯದೆ ಬರೋದು ಮರಣ.ತಿಳಿದು ಬದುಕುವುದೇ ಜೀವನ..ಇವರೇ ಸಾರ್ಥಕ ಬದುಕಿನ ನಮ್ಮ ಜಯ ಸಿ ಸುವರ್ಣ. ಬದುಕಿನುದ್ದಕ್ಕೂ ಜಗತ್ತಿನಲ್ಲಿ ಸ್ರಷ್ಟಿಯಾದ ಎಲ್ಲರನ್ನೂ, ಎಲ್ಲವನ್ನೂ ಪ್ರೀತಿಸುತ್ತಾ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶ ಗಳನ್ನು ಪಾಲಿಸುತ್ತಾ, ಕೂಡಿ ಬಾಳಿ, ದಾನ ಮಾಡಿ ಮಾಡಿ, ಕೊಟ್ಟು ಕೊಟ್ಟು ಹಿಗ್ಗದೇ ಸರ್ವ ಸಮಾಜದ ಒಬ್ಬ ಮಹಾನ್ ಜನನಾಯಕರಾಗಿದ್ದರು.

ಗೋರೆಗಾವ್‌‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಭಾರತ್ ಬ್ಯಾಂಕ್ ನ ಅಭಿವೃದ್ಧಿ ರೂವಾರಿ, ಮಾಜಿ ಕಾರ್ಯಾಧ್ಯಕ್ಷರು, ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಮಾಜಿ ಅಧ್ಯಕ್ಷರು, ಮಾರ್ಗ ದರ್ಶಕರು,ಬಿಲ್ಲವರ ಮಹಾ ಮಂಡಲದ ಮಾಜಿ ಅಧ್ಯಕ್ಷರು, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಹಾಗೇನೇ ಸಾಯಿ ವೆಜ್ ಹೋಟೆಲ್ ಗ್ರೂಪ್ನ ಸ್ಥಾಪಕರು ಆದ ಸಂಘಟಕರಾಗಿದ್ದ ಅವರು ನಮ್ಮ ನಿಮ್ಮ ಜನನಾಯಕರಾಗಿದ್ದರು. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಈ ಮೂಲಕ ಪ್ರಾರ್ಥಿಸುವ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »