TOP STORIES:

FOLLOW US

ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣ ಕನಸಿಗೆ ಬೆನ್ನೆಲುಬಾದವರು ಜಯ ಸಿ.ಸುವರ್ಣ


ಮಂಗಳೂರು: ಬಿಲ್ಲವರ ಮಹಾಮಂಡಲದ ಸ್ಥಾಪಕಾಧ್ಯಕ್ಷ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ, ಭಾರತ್ ಕೋ-ಅಪರೇಟಿವ್ ಬ್ಯಾಂಕ್ ನ ಮಾಜಿ ಅಧ್ಯಕ್ಷ, ಮೂಲ್ಕಿ ಜಯ ಸಿ. ಸುವರ್ಣ (82) ಬುಧವಾರ ಬೆಳಗ್ಗಿನ ಜಾವ ಮುಂಬೈಯಲ್ಲಿ ನಿಧನರಾಗಿದ್ದಾರೆ.

ಮುಂಬೈಯಲ್ಲಿ ಬಿಲ್ಲವರಿಗೆ ಸ್ಫೂರ್ತಿಯಾಗಿ, ಸಮಸ್ತ ಬಿಲ್ಲವ ಸಮಾಜವನ್ನು ಒಂದಾಗಿಸಿ, ಬಿಲ್ಲವ ಸಂಘಟನೆಗಳಿಗೆ ಶಕ್ತಿಯಾಗಿ, ಮುಂಬೈ ಬಿಲ್ಲವ ಭವನದ ರೂವಾರಿಯಾಗಿ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಚಿಂತನೆಗಳನ್ನು ಬದುಕಿನಲ್ಲಿ ಅಳವಡಿಸಿಕೊಂಡು ಬಿಲ್ಲವ ಸಮಾಜದ ಅಭಿವೃದ್ಧಿಗೆ ಹತ್ತು ಹಲವಾರು ಕೊಡುಗೆಗಳನ್ನು ನೀಡಿದವರು. ಕೇಂದ್ರದ ಮಾಜಿ ಸಚಿವ ಬಿ.ಜನಾರ್ದನ ಪೂಜಾರಿಯವರ ಕುದ್ರೋಳಿ ಕ್ಷೇತ್ರದ ನವೀಕರಣದ ಕನಸ್ಸಿಗೆ ಬೆಂಬಲವಾಗಿ ನಿಂತವರು.

ಮುಂಬೈ ಗುಜರಾತ್ ಸೇರಿದಂತೆ ದೇಶ ವಿದೇಶಗಳ ಬಿಲ್ಲವರನ್ನು ಸಂಪರ್ಕಿಸಿ ಆರ್ಥಿಕ ಸಂಪನ್ಮೂಲ ಕ್ರೋಡಿಕರಿಸಿ ಜನಾರ್ದನ ಪೂಜಾರಿಯವರ ಕನಸ್ಸಿನ ಯೋಜನೆ ಶ್ರೀ ಕ್ಷೇತ್ರದ ನವೀಕರಣ ಹಾಗೂ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಮುಂಬೈ ಬಿಲ್ಲವರ ಅಸೋಸಿಯೇಶನ್ ಹಿರಿಯರಿಂದ ಸ್ಪಾಪಿತವಾದ ಭಾರತ್ ಕೋ- ಅಪರೇಟಿವ್ ಬ್ಯಾಂಕಿನ ಚುಕ್ಕಾಣಿ ಹಿಡಿದು ಆಗ ಕೇವಲ 5 ಶಾಖೆಗಳಿದ್ದ ಅದನ್ನು ಜನಾರ್ದನ ಪೂಜಾರಿಯವರ ಬೆಂಬಲದೊಂದಿಗೆ ಇಂದು 100ಕ್ಕೂ ಅಧಿಕ ಶಾಖೆಗಳ ವಿಸ್ತರಣೆಯೊಂದಿಗೆ ಸಮಾಜದ ಸಾವಿರಾರು ಮಂದಿಗೆ ಉದ್ಯೋಗ, ಲಕ್ಷಾಂತರ ಮಂದಿಗೆ ಸಾಲದ ಮೂಲಕ ಆರ್ಥಕ ಶಕ್ತಿ ನೀಡಿ ಅವರ ವ್ಯವಹಾರಕ್ಕೆ ನೆರವಾದ ಜಯ ಸಿ ಸುವರ್ಣರ ಇಚ್ಛಾಶಕ್ತಿಯಿಂದಾಗಿ ಇಂದು ಭಾರತ್ ಕೋ-ಅಪರೇಟಿವ್ ಬ್ಯಾಂಕ್ ದೇಶದ ಪ್ರತಿಷ್ಠಿತ ಬ್ಯಾಂಕ್ ಎಂಬ ಹೆಗ್ಗಳಿಕೆಯೊಂದಿಗೆ ಹಲವಾರು ಪ್ರಶಸ್ತಿ ಗೌರವಗಳಿಗೆ ಪಾತ್ರವಾಗಿದೆ.

ತಿಳಿದು ಬರೋದು ಜನನ.ತಿಳಿಯದೆ ಬರೋದು ಮರಣ.ತಿಳಿದು ಬದುಕುವುದೇ ಜೀವನ..ಇವರೇ ಸಾರ್ಥಕ ಬದುಕಿನ ನಮ್ಮ ಜಯ ಸಿ ಸುವರ್ಣ. ಬದುಕಿನುದ್ದಕ್ಕೂ ಜಗತ್ತಿನಲ್ಲಿ ಸ್ರಷ್ಟಿಯಾದ ಎಲ್ಲರನ್ನೂ, ಎಲ್ಲವನ್ನೂ ಪ್ರೀತಿಸುತ್ತಾ, ಬ್ರಹ್ಮಶ್ರೀ ನಾರಾಯಣಗುರುಗಳ ತತ್ವ ಸಂದೇಶ ಗಳನ್ನು ಪಾಲಿಸುತ್ತಾ, ಕೂಡಿ ಬಾಳಿ, ದಾನ ಮಾಡಿ ಮಾಡಿ, ಕೊಟ್ಟು ಕೊಟ್ಟು ಹಿಗ್ಗದೇ ಸರ್ವ ಸಮಾಜದ ಒಬ್ಬ ಮಹಾನ್ ಜನನಾಯಕರಾಗಿದ್ದರು.

ಗೋರೆಗಾವ್‌‌ನ ಜಯಪ್ರಕಾಶ್ ಹೋಟೆಲ್ ಮಾಲೀಕ, ಭಾರತ್ ಬ್ಯಾಂಕ್ ನ ಅಭಿವೃದ್ಧಿ ರೂವಾರಿ, ಮಾಜಿ ಕಾರ್ಯಾಧ್ಯಕ್ಷರು, ಬಿಲ್ಲವರ ಅಸೋಸಿಯೇಷನ್ ಮುಂಬೈ ಇದರ ಮಾಜಿ ಅಧ್ಯಕ್ಷರು, ಮಾರ್ಗ ದರ್ಶಕರು,ಬಿಲ್ಲವರ ಮಹಾ ಮಂಡಲದ ಮಾಜಿ ಅಧ್ಯಕ್ಷರು, ಕುದ್ರೋಳಿ ಗೋಕರ್ಣ ಕ್ಷೇತ್ರದ ಅಭಿವೃದ್ಧಿಯ ಹರಿಕಾರ ಹಾಗೇನೇ ಸಾಯಿ ವೆಜ್ ಹೋಟೆಲ್ ಗ್ರೂಪ್ನ ಸ್ಥಾಪಕರು ಆದ ಸಂಘಟಕರಾಗಿದ್ದ ಅವರು ನಮ್ಮ ನಿಮ್ಮ ಜನನಾಯಕರಾಗಿದ್ದರು. ಮೃತರ ಆತ್ಮಕ್ಕೆ ದೇವರು ಚಿರಶಾಂತಿ ನೀಡಲಿ ಎಂದು ಈ ಮೂಲಕ ಪ್ರಾರ್ಥಿಸುವ.


Share:

More Posts

Category

Send Us A Message

Related Posts

ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್


Share       ಸರ್ವಸಮಾನತೆಯ ಧಾರ್ಮಿಕ ತೆಯನ್ನು ಸಾಮಾಜಿಕ ನ್ಯಾಯದ ಪಥದಲ್ಲಿ ಮುನ್ನಡೆಸುವಲ್ಲಿ ಮುಂಚೂಣಿಯಲ್ಲಿ ಕೆಲಸ ಮಾಡಿದವರು ಜನಾರ್ಧನ ಪೂಜಾರಿ ಹಾಗೂ ಅವರ ಜೊತೆ ಗಟ್ಟಿಯಾಗಿ ನಿಂತವರು ಪದ್ಮರಾಜ್ ಆರ್ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರ ಬ್ರಹ್ಮ


Read More »

ಬಂಟ್ವಾಳ: ಬಾಳೆಕಲ್ಲು ಗರಡಿಮನೆ ದೇವಕಿ ನಿಧನ


Share       ಬಂಟ್ವಾಳ: ಬಾಳೆಕಲ್ಲು ಗರಡಿಮನೆ ಶ್ರೀ ಕೊರಗಪ್ಪ ಪೂಜಾರಿಯವರ ಧರ್ಮಪತ್ನಿ ಶ್ರೀಮತಿ ದೇವಕಿ(85 ವ ) ಇವರು 21.10.2024 ನೇ ಸೋಮವಾರ ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಚೇತರಿಸಿಕೊಂಡಿದ್ದರು. ಎರಡು


Read More »

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »