TOP STORIES:

FOLLOW US

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!


ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ.

ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ.

ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀಟರ್‌ ಓಡುವುದು ನಿಜವಾದರೂ, ಕೆಲವು ಕಡೆಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಇಲ್ಲದೇ ಪರದಾಡುವ ಸ್ಥಿತಿ ಇದೆ. ಅಂಥವರಿಗೆ ಇನ್ನೊಂದು ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಪುದುಚೇರಿ ಮೂಲದ ವಿಜಯನ್ ಪ್ರೇಮಾನಂದ್.

ಇದರ ಬೆನ್ನಲ್ಲೇ ಯಾರೂ ಊಹಿಸದ ಹೊಸದೊಂದು ತಂತ್ರಜ್ಞಾನವನ್ನು ಇವರು ಕಂಡುಹಿಡಿದಿದ್ದಾರೆ. ಅದೇನೆಂದರೆ ಇವರು ಕಂಡುಹಿಡಿದಿರುವ ಬೈಕ್‌ ಅನ್ನು ಚಾರ್ಜ್‌ ಮಾಡುವ ಅಗತ್ಯ ಕೂಡ ಇಲ್ಲ, ಹಾಗೆಂದು ಪೆಟ್ರೋಲ್‌ ಬೇಡ್ವವೇ ಬೇಡ. ಹಾಗಿದ್ದರೆ ಅದೆಂಥ ತಂತ್ರಜ್ಞಾನ ಅಂದಿರಾ?

ವಿಜಯನ್ ಅವರು ಕಂಡುಹಿಡಿದಿರುವ ಈ ಬೈಕ್‌ನಲ್ಲಿ ಇರುವ ಎರಡು ಬ್ಯಾಟರಿಗಳು ತಂತಾನೇ ಚಾರ್ಜ್‌ ಆಗುತ್ತವೆ, ಅದೂ ಗಾಡಿ ಓಡ್ತಾ ಓಡ್ತಾನೆ ಇದು ಚಾರ್ಜ್‌ ಆಗುತ್ತದೆ. ನೀವು ಚಾರ್ಜಿಂಗ್ ಸ್ಟೇಷನ್‌ಗೆ ಹೋಗಬೇಕಾಗಿಲ್ಲ. ಚಲಿಸುವಾಗ ಬೈಕ್‌ ತಂತಾನೇಯಾಗಿ ಚಾರ್ಜ್ ಆಗುತ್ತದೆ, ಇದರಿಂದ ವಿದ್ಯುತ್ ಉಳಿತಾಯ ಕೂಡ ಆಗುತ್ತದೆ ಎನ್ನುತ್ತಾರೆ ವಿಜಯನ್‌. ಇದಕ್ಕಾಗಿ ಇವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆಯಿಂದ ಪೇಟೆಂಟ್‌ ಕೂಡ ಪಡೆದುಕೊಂಡಿದ್ದಾರೆ.

‘ವಿದ್ಯುತ್‌ ಚಾರ್ಜಿಂಗ್‌ ಪಾಯಿಂಟ್‌ಗಳು ಬೇಕೆಂದ ಕಡೆಗಳಲ್ಲಿ ಸಿಗುವುದಿಲ್ಲ. ನಾನು ಕಂಡುಹಿಡಿದಿರುವ ಈ ಬೈಕ್‌ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಚಾರ್ಜಿಂಗ್ ಸ್ಟೇಷನ್‌ನಲ್ಲಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಇದರಲ್ಲಿ ಇರುವ ಬ್ಯಾಟರಿಗಳು ಪರಸ್ಪರ ಚಾರ್ಜ್ ಆಗುವಂತೆ ವಿನ್ಯಾಸ ಮಾಡಲಾಗಿದೆ. ಈ ಎರಡೂ ಬ್ಯಾಟರಿಗಳು ಚಾರ್ಜ್ ಆಗುವುದರಿಂದ ಶಕ್ತಿಯ ಬಳಕೆ ತುಂಬಾ ಕಡಿಮೆಯಾಗುತ್ತದೆ. ಇದರ ಅರ್ಥ ಬೇರೆ ಬ್ಯಾಟರಿಗಳಂತೆ ಬೇಗನೆ ಚಾರ್ಜ್‌ ಖಾಲಿಯಾಗುವುದಿಲ್ಲ’ ಎನ್ನುತ್ತಾರೆ ವಿಜಯನ್‌.

ಈ ತಂತ್ರಜ್ಞಾನವನ್ನು ಬಳಸಲು, ಹಲವು ವಾಹನ ತಯಾರಕರನ್ನು ಕೋರಲಾಗಿದೆ. ಕಂಪನಿಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಇದೆಲ್ಲಾ ಓಕೆಯಾದರೆ ಇನ್ನು ಯಾವುದೇ ಸಮಸ್ಯೆ ಇರದ ಬೈಕ್‌ಗಳು ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿವೆ ಎನ್ನುವುದು ಅವರ ವಿಶ್ವಾಸ.


Share:

More Posts

Category

Send Us A Message

Related Posts

ಶಾಸಕ ಸುನಿಲ್ ಕುಮಾರ್ ಸಹೋದರ ಸುಜಿತ್‌ ಕುಮಾರ್‌ ನಿಧನ


Share       ಕಾರ್ಕಳ: ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಸಹೋದರ ಸುಜಿತ್ ಕುಮಾರ್ (53) ಶುಕ್ರವಾರ (ಮೇ 23) ಅನಾರೋಗ್ಯದಿಂದ ನಿಧನರಾಗಿದ್ದಾರೆ.   ಅಂತಿಮ ವಿಧಿ ವಿಧಾನವು ಇಂದು ಶುಕ್ರವಾರ ನೆಕ್ಲಾಜೆ ಮನೆಯಲ್ಲಿ ಸಂಜೆ 6


Read More »

ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿಗೆ ಪುಣೆಯ ಸಮಾಜಸೇವಕ   “ವಿಶ್ವನಾಥ ಪೂಜಾರಿ ಕಡ್ತಲ’ ಆಯ್ಕೆ


Share       ಪುಣೆ :ಪುಣೆ ಬಿಲ್ಲವ ಸಮಾಜ ಸೇವಾ ಸಂಘ ಇದರ ಅಧ್ಯಕ್ಷ ,ಸಾಮಾಜಿಕ ಚಟುವಟಿಕೆಗಳಲ್ಲಿ ಸದಾ ಗುರುತಿಸಿಕೊಂಡಿರುವ ವಿಶ್ವನಾಥ ಪೂಜಾರಿ ಕಡ್ತಲ ಇವರು ಪ್ರತಿಷ್ಠಿತ ಅಂತಾರಾಷ್ಟ್ರೀಯ ಆರ್ಯಭಟ ಪ್ರಶಸ್ತಿ -2025  ಗೆ ಆಯ್ಕೆಯಾಗಿರುತ್ತಾರೆ .


Read More »

ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ 1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ


Share       ಅಯೋಧ್ಯೆಯಲ್ಲಿ ಮಹಾಮಂಡಲೇಶ್ಚರ  1008 ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ಮುಂದಾಳತ್ವದಲ್ಲಿ 4 ಅಂತಸ್ತಿನ ಶಾಖಾ ಮಠಕ್ಕೆ ಭೂಮಿ ಪೂಜೆ,ಶಿಲಾನ್ಯಾಸ ಯತೀವರ್ಯರು, ಸಚಿವ ಮಾಂಕಳ್ ವೈದ್ಯ, ಶಾಸಕ ಹರೀಶ್ ಪೂಂಜ, ಸೇರಿದಂತೆ ಬೆಳ್ತಂಗಡಿಯಿಂದ ಸುಮಾರು 200


Read More »

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »