TOP STORIES:

FOLLOW US

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!


ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ.

ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ.

ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀಟರ್‌ ಓಡುವುದು ನಿಜವಾದರೂ, ಕೆಲವು ಕಡೆಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಇಲ್ಲದೇ ಪರದಾಡುವ ಸ್ಥಿತಿ ಇದೆ. ಅಂಥವರಿಗೆ ಇನ್ನೊಂದು ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಪುದುಚೇರಿ ಮೂಲದ ವಿಜಯನ್ ಪ್ರೇಮಾನಂದ್.

ಇದರ ಬೆನ್ನಲ್ಲೇ ಯಾರೂ ಊಹಿಸದ ಹೊಸದೊಂದು ತಂತ್ರಜ್ಞಾನವನ್ನು ಇವರು ಕಂಡುಹಿಡಿದಿದ್ದಾರೆ. ಅದೇನೆಂದರೆ ಇವರು ಕಂಡುಹಿಡಿದಿರುವ ಬೈಕ್‌ ಅನ್ನು ಚಾರ್ಜ್‌ ಮಾಡುವ ಅಗತ್ಯ ಕೂಡ ಇಲ್ಲ, ಹಾಗೆಂದು ಪೆಟ್ರೋಲ್‌ ಬೇಡ್ವವೇ ಬೇಡ. ಹಾಗಿದ್ದರೆ ಅದೆಂಥ ತಂತ್ರಜ್ಞಾನ ಅಂದಿರಾ?

ವಿಜಯನ್ ಅವರು ಕಂಡುಹಿಡಿದಿರುವ ಈ ಬೈಕ್‌ನಲ್ಲಿ ಇರುವ ಎರಡು ಬ್ಯಾಟರಿಗಳು ತಂತಾನೇ ಚಾರ್ಜ್‌ ಆಗುತ್ತವೆ, ಅದೂ ಗಾಡಿ ಓಡ್ತಾ ಓಡ್ತಾನೆ ಇದು ಚಾರ್ಜ್‌ ಆಗುತ್ತದೆ. ನೀವು ಚಾರ್ಜಿಂಗ್ ಸ್ಟೇಷನ್‌ಗೆ ಹೋಗಬೇಕಾಗಿಲ್ಲ. ಚಲಿಸುವಾಗ ಬೈಕ್‌ ತಂತಾನೇಯಾಗಿ ಚಾರ್ಜ್ ಆಗುತ್ತದೆ, ಇದರಿಂದ ವಿದ್ಯುತ್ ಉಳಿತಾಯ ಕೂಡ ಆಗುತ್ತದೆ ಎನ್ನುತ್ತಾರೆ ವಿಜಯನ್‌. ಇದಕ್ಕಾಗಿ ಇವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆಯಿಂದ ಪೇಟೆಂಟ್‌ ಕೂಡ ಪಡೆದುಕೊಂಡಿದ್ದಾರೆ.

‘ವಿದ್ಯುತ್‌ ಚಾರ್ಜಿಂಗ್‌ ಪಾಯಿಂಟ್‌ಗಳು ಬೇಕೆಂದ ಕಡೆಗಳಲ್ಲಿ ಸಿಗುವುದಿಲ್ಲ. ನಾನು ಕಂಡುಹಿಡಿದಿರುವ ಈ ಬೈಕ್‌ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಚಾರ್ಜಿಂಗ್ ಸ್ಟೇಷನ್‌ನಲ್ಲಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಇದರಲ್ಲಿ ಇರುವ ಬ್ಯಾಟರಿಗಳು ಪರಸ್ಪರ ಚಾರ್ಜ್ ಆಗುವಂತೆ ವಿನ್ಯಾಸ ಮಾಡಲಾಗಿದೆ. ಈ ಎರಡೂ ಬ್ಯಾಟರಿಗಳು ಚಾರ್ಜ್ ಆಗುವುದರಿಂದ ಶಕ್ತಿಯ ಬಳಕೆ ತುಂಬಾ ಕಡಿಮೆಯಾಗುತ್ತದೆ. ಇದರ ಅರ್ಥ ಬೇರೆ ಬ್ಯಾಟರಿಗಳಂತೆ ಬೇಗನೆ ಚಾರ್ಜ್‌ ಖಾಲಿಯಾಗುವುದಿಲ್ಲ’ ಎನ್ನುತ್ತಾರೆ ವಿಜಯನ್‌.

ಈ ತಂತ್ರಜ್ಞಾನವನ್ನು ಬಳಸಲು, ಹಲವು ವಾಹನ ತಯಾರಕರನ್ನು ಕೋರಲಾಗಿದೆ. ಕಂಪನಿಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಇದೆಲ್ಲಾ ಓಕೆಯಾದರೆ ಇನ್ನು ಯಾವುದೇ ಸಮಸ್ಯೆ ಇರದ ಬೈಕ್‌ಗಳು ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿವೆ ಎನ್ನುವುದು ಅವರ ವಿಶ್ವಾಸ.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »