TOP STORIES:

FOLLOW US

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!


ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ.

ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ.

ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀಟರ್‌ ಓಡುವುದು ನಿಜವಾದರೂ, ಕೆಲವು ಕಡೆಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಇಲ್ಲದೇ ಪರದಾಡುವ ಸ್ಥಿತಿ ಇದೆ. ಅಂಥವರಿಗೆ ಇನ್ನೊಂದು ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಪುದುಚೇರಿ ಮೂಲದ ವಿಜಯನ್ ಪ್ರೇಮಾನಂದ್.

ಇದರ ಬೆನ್ನಲ್ಲೇ ಯಾರೂ ಊಹಿಸದ ಹೊಸದೊಂದು ತಂತ್ರಜ್ಞಾನವನ್ನು ಇವರು ಕಂಡುಹಿಡಿದಿದ್ದಾರೆ. ಅದೇನೆಂದರೆ ಇವರು ಕಂಡುಹಿಡಿದಿರುವ ಬೈಕ್‌ ಅನ್ನು ಚಾರ್ಜ್‌ ಮಾಡುವ ಅಗತ್ಯ ಕೂಡ ಇಲ್ಲ, ಹಾಗೆಂದು ಪೆಟ್ರೋಲ್‌ ಬೇಡ್ವವೇ ಬೇಡ. ಹಾಗಿದ್ದರೆ ಅದೆಂಥ ತಂತ್ರಜ್ಞಾನ ಅಂದಿರಾ?

ವಿಜಯನ್ ಅವರು ಕಂಡುಹಿಡಿದಿರುವ ಈ ಬೈಕ್‌ನಲ್ಲಿ ಇರುವ ಎರಡು ಬ್ಯಾಟರಿಗಳು ತಂತಾನೇ ಚಾರ್ಜ್‌ ಆಗುತ್ತವೆ, ಅದೂ ಗಾಡಿ ಓಡ್ತಾ ಓಡ್ತಾನೆ ಇದು ಚಾರ್ಜ್‌ ಆಗುತ್ತದೆ. ನೀವು ಚಾರ್ಜಿಂಗ್ ಸ್ಟೇಷನ್‌ಗೆ ಹೋಗಬೇಕಾಗಿಲ್ಲ. ಚಲಿಸುವಾಗ ಬೈಕ್‌ ತಂತಾನೇಯಾಗಿ ಚಾರ್ಜ್ ಆಗುತ್ತದೆ, ಇದರಿಂದ ವಿದ್ಯುತ್ ಉಳಿತಾಯ ಕೂಡ ಆಗುತ್ತದೆ ಎನ್ನುತ್ತಾರೆ ವಿಜಯನ್‌. ಇದಕ್ಕಾಗಿ ಇವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆಯಿಂದ ಪೇಟೆಂಟ್‌ ಕೂಡ ಪಡೆದುಕೊಂಡಿದ್ದಾರೆ.

‘ವಿದ್ಯುತ್‌ ಚಾರ್ಜಿಂಗ್‌ ಪಾಯಿಂಟ್‌ಗಳು ಬೇಕೆಂದ ಕಡೆಗಳಲ್ಲಿ ಸಿಗುವುದಿಲ್ಲ. ನಾನು ಕಂಡುಹಿಡಿದಿರುವ ಈ ಬೈಕ್‌ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಚಾರ್ಜಿಂಗ್ ಸ್ಟೇಷನ್‌ನಲ್ಲಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಇದರಲ್ಲಿ ಇರುವ ಬ್ಯಾಟರಿಗಳು ಪರಸ್ಪರ ಚಾರ್ಜ್ ಆಗುವಂತೆ ವಿನ್ಯಾಸ ಮಾಡಲಾಗಿದೆ. ಈ ಎರಡೂ ಬ್ಯಾಟರಿಗಳು ಚಾರ್ಜ್ ಆಗುವುದರಿಂದ ಶಕ್ತಿಯ ಬಳಕೆ ತುಂಬಾ ಕಡಿಮೆಯಾಗುತ್ತದೆ. ಇದರ ಅರ್ಥ ಬೇರೆ ಬ್ಯಾಟರಿಗಳಂತೆ ಬೇಗನೆ ಚಾರ್ಜ್‌ ಖಾಲಿಯಾಗುವುದಿಲ್ಲ’ ಎನ್ನುತ್ತಾರೆ ವಿಜಯನ್‌.

ಈ ತಂತ್ರಜ್ಞಾನವನ್ನು ಬಳಸಲು, ಹಲವು ವಾಹನ ತಯಾರಕರನ್ನು ಕೋರಲಾಗಿದೆ. ಕಂಪನಿಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಇದೆಲ್ಲಾ ಓಕೆಯಾದರೆ ಇನ್ನು ಯಾವುದೇ ಸಮಸ್ಯೆ ಇರದ ಬೈಕ್‌ಗಳು ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿವೆ ಎನ್ನುವುದು ಅವರ ವಿಶ್ವಾಸ.


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »