TOP STORIES:

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!


ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ.

ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ.

ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀಟರ್‌ ಓಡುವುದು ನಿಜವಾದರೂ, ಕೆಲವು ಕಡೆಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಇಲ್ಲದೇ ಪರದಾಡುವ ಸ್ಥಿತಿ ಇದೆ. ಅಂಥವರಿಗೆ ಇನ್ನೊಂದು ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಪುದುಚೇರಿ ಮೂಲದ ವಿಜಯನ್ ಪ್ರೇಮಾನಂದ್.

ಇದರ ಬೆನ್ನಲ್ಲೇ ಯಾರೂ ಊಹಿಸದ ಹೊಸದೊಂದು ತಂತ್ರಜ್ಞಾನವನ್ನು ಇವರು ಕಂಡುಹಿಡಿದಿದ್ದಾರೆ. ಅದೇನೆಂದರೆ ಇವರು ಕಂಡುಹಿಡಿದಿರುವ ಬೈಕ್‌ ಅನ್ನು ಚಾರ್ಜ್‌ ಮಾಡುವ ಅಗತ್ಯ ಕೂಡ ಇಲ್ಲ, ಹಾಗೆಂದು ಪೆಟ್ರೋಲ್‌ ಬೇಡ್ವವೇ ಬೇಡ. ಹಾಗಿದ್ದರೆ ಅದೆಂಥ ತಂತ್ರಜ್ಞಾನ ಅಂದಿರಾ?

ವಿಜಯನ್ ಅವರು ಕಂಡುಹಿಡಿದಿರುವ ಈ ಬೈಕ್‌ನಲ್ಲಿ ಇರುವ ಎರಡು ಬ್ಯಾಟರಿಗಳು ತಂತಾನೇ ಚಾರ್ಜ್‌ ಆಗುತ್ತವೆ, ಅದೂ ಗಾಡಿ ಓಡ್ತಾ ಓಡ್ತಾನೆ ಇದು ಚಾರ್ಜ್‌ ಆಗುತ್ತದೆ. ನೀವು ಚಾರ್ಜಿಂಗ್ ಸ್ಟೇಷನ್‌ಗೆ ಹೋಗಬೇಕಾಗಿಲ್ಲ. ಚಲಿಸುವಾಗ ಬೈಕ್‌ ತಂತಾನೇಯಾಗಿ ಚಾರ್ಜ್ ಆಗುತ್ತದೆ, ಇದರಿಂದ ವಿದ್ಯುತ್ ಉಳಿತಾಯ ಕೂಡ ಆಗುತ್ತದೆ ಎನ್ನುತ್ತಾರೆ ವಿಜಯನ್‌. ಇದಕ್ಕಾಗಿ ಇವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆಯಿಂದ ಪೇಟೆಂಟ್‌ ಕೂಡ ಪಡೆದುಕೊಂಡಿದ್ದಾರೆ.

‘ವಿದ್ಯುತ್‌ ಚಾರ್ಜಿಂಗ್‌ ಪಾಯಿಂಟ್‌ಗಳು ಬೇಕೆಂದ ಕಡೆಗಳಲ್ಲಿ ಸಿಗುವುದಿಲ್ಲ. ನಾನು ಕಂಡುಹಿಡಿದಿರುವ ಈ ಬೈಕ್‌ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಚಾರ್ಜಿಂಗ್ ಸ್ಟೇಷನ್‌ನಲ್ಲಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಇದರಲ್ಲಿ ಇರುವ ಬ್ಯಾಟರಿಗಳು ಪರಸ್ಪರ ಚಾರ್ಜ್ ಆಗುವಂತೆ ವಿನ್ಯಾಸ ಮಾಡಲಾಗಿದೆ. ಈ ಎರಡೂ ಬ್ಯಾಟರಿಗಳು ಚಾರ್ಜ್ ಆಗುವುದರಿಂದ ಶಕ್ತಿಯ ಬಳಕೆ ತುಂಬಾ ಕಡಿಮೆಯಾಗುತ್ತದೆ. ಇದರ ಅರ್ಥ ಬೇರೆ ಬ್ಯಾಟರಿಗಳಂತೆ ಬೇಗನೆ ಚಾರ್ಜ್‌ ಖಾಲಿಯಾಗುವುದಿಲ್ಲ’ ಎನ್ನುತ್ತಾರೆ ವಿಜಯನ್‌.

ಈ ತಂತ್ರಜ್ಞಾನವನ್ನು ಬಳಸಲು, ಹಲವು ವಾಹನ ತಯಾರಕರನ್ನು ಕೋರಲಾಗಿದೆ. ಕಂಪನಿಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಇದೆಲ್ಲಾ ಓಕೆಯಾದರೆ ಇನ್ನು ಯಾವುದೇ ಸಮಸ್ಯೆ ಇರದ ಬೈಕ್‌ಗಳು ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿವೆ ಎನ್ನುವುದು ಅವರ ವಿಶ್ವಾಸ.


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »