TOP STORIES:

ಪೆಟ್ರೋಲೂ ಬೇಡ. ಚಾರ್ಜ್‌ ಮಾಡೋ ಅಗತ್ಯನೂ ಇಲ್ಲ- ಓಡ್ತಾ ಓಡ್ತಾ ಚಾರ್ಜ್‌ ಆಗತ್ತೆ ಈ ಇ- ಬೈಕ್‌!


ನವದೆಹಲಿ: ವಾಯುಮಾಲಿನ್ಯವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪೆಟ್ರೋಲ್‌ ಬಳಕೆ ಕಡಿಮೆ ಮಾಡುವ ಉದ್ದೇಶದಿಂದ ಇಲೆಕ್ಟ್ರಿಕಲ್‌ ಗಾಡಿಗಳು ಬೀದಿಗಿಳಿದಿವೆ. ಬೈಕ್‌, ಸ್ಕೂಟರ್‌ ಅಷ್ಟೇ ಏಕೆ ಬಸ್ಸುಗಳು ಕೂಡ ಎಲೆಕ್ಟ್ರಿಕ್‌ ಆಗಿ ಪರಿವರ್ತನೆಗೊಂಡಿವೆ.

ಇದಾಗಲೇ ಇಲೆಕ್ಟ್ರಿಕ್‌ ಬೈಕ್‌ಗಳು ಭರ್ಜರಿ ಮಾರಾಟ ಕೂಡ ಆಗುತ್ತಿವೆ.

ಇಲೆಕ್ಟ್ರಿಕ್‌ ಚಾರ್ಜಿಂಗ್‌ ಬೈಕ್‌ಗಳು ನೂರಾರು ಕಿಲೋ ಮೀಟರ್‌ ಓಡುವುದು ನಿಜವಾದರೂ, ಕೆಲವು ಕಡೆಗಳಲ್ಲಿ ಚಾರ್ಜಿಂಗ್‌ ಪಾಯಿಂಟ್‌ ಇಲ್ಲದೇ ಪರದಾಡುವ ಸ್ಥಿತಿ ಇದೆ. ಅಂಥವರಿಗೆ ಇನ್ನೊಂದು ಗುಡ್‌ ನ್ಯೂಸ್‌ ಕೊಟ್ಟಿದ್ದಾರೆ ಪುದುಚೇರಿ ಮೂಲದ ವಿಜಯನ್ ಪ್ರೇಮಾನಂದ್.

ಇದರ ಬೆನ್ನಲ್ಲೇ ಯಾರೂ ಊಹಿಸದ ಹೊಸದೊಂದು ತಂತ್ರಜ್ಞಾನವನ್ನು ಇವರು ಕಂಡುಹಿಡಿದಿದ್ದಾರೆ. ಅದೇನೆಂದರೆ ಇವರು ಕಂಡುಹಿಡಿದಿರುವ ಬೈಕ್‌ ಅನ್ನು ಚಾರ್ಜ್‌ ಮಾಡುವ ಅಗತ್ಯ ಕೂಡ ಇಲ್ಲ, ಹಾಗೆಂದು ಪೆಟ್ರೋಲ್‌ ಬೇಡ್ವವೇ ಬೇಡ. ಹಾಗಿದ್ದರೆ ಅದೆಂಥ ತಂತ್ರಜ್ಞಾನ ಅಂದಿರಾ?

ವಿಜಯನ್ ಅವರು ಕಂಡುಹಿಡಿದಿರುವ ಈ ಬೈಕ್‌ನಲ್ಲಿ ಇರುವ ಎರಡು ಬ್ಯಾಟರಿಗಳು ತಂತಾನೇ ಚಾರ್ಜ್‌ ಆಗುತ್ತವೆ, ಅದೂ ಗಾಡಿ ಓಡ್ತಾ ಓಡ್ತಾನೆ ಇದು ಚಾರ್ಜ್‌ ಆಗುತ್ತದೆ. ನೀವು ಚಾರ್ಜಿಂಗ್ ಸ್ಟೇಷನ್‌ಗೆ ಹೋಗಬೇಕಾಗಿಲ್ಲ. ಚಲಿಸುವಾಗ ಬೈಕ್‌ ತಂತಾನೇಯಾಗಿ ಚಾರ್ಜ್ ಆಗುತ್ತದೆ, ಇದರಿಂದ ವಿದ್ಯುತ್ ಉಳಿತಾಯ ಕೂಡ ಆಗುತ್ತದೆ ಎನ್ನುತ್ತಾರೆ ವಿಜಯನ್‌. ಇದಕ್ಕಾಗಿ ಇವರು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ಕೈಗಾರಿಕಾ ನೀತಿ ಮತ್ತು ಪ್ರಚಾರ ಇಲಾಖೆಯಿಂದ ಪೇಟೆಂಟ್‌ ಕೂಡ ಪಡೆದುಕೊಂಡಿದ್ದಾರೆ.

‘ವಿದ್ಯುತ್‌ ಚಾರ್ಜಿಂಗ್‌ ಪಾಯಿಂಟ್‌ಗಳು ಬೇಕೆಂದ ಕಡೆಗಳಲ್ಲಿ ಸಿಗುವುದಿಲ್ಲ. ನಾನು ಕಂಡುಹಿಡಿದಿರುವ ಈ ಬೈಕ್‌ ಈ ಸಮಸ್ಯೆಯನ್ನು ನಿವಾರಿಸುತ್ತದೆ. ಚಾರ್ಜಿಂಗ್ ಸ್ಟೇಷನ್‌ನಲ್ಲಿ ಸಮಯವನ್ನು ವ್ಯರ್ಥ ಮಾಡುವ ಅಗತ್ಯವಿಲ್ಲ. ಇದರಲ್ಲಿ ಇರುವ ಬ್ಯಾಟರಿಗಳು ಪರಸ್ಪರ ಚಾರ್ಜ್ ಆಗುವಂತೆ ವಿನ್ಯಾಸ ಮಾಡಲಾಗಿದೆ. ಈ ಎರಡೂ ಬ್ಯಾಟರಿಗಳು ಚಾರ್ಜ್ ಆಗುವುದರಿಂದ ಶಕ್ತಿಯ ಬಳಕೆ ತುಂಬಾ ಕಡಿಮೆಯಾಗುತ್ತದೆ. ಇದರ ಅರ್ಥ ಬೇರೆ ಬ್ಯಾಟರಿಗಳಂತೆ ಬೇಗನೆ ಚಾರ್ಜ್‌ ಖಾಲಿಯಾಗುವುದಿಲ್ಲ’ ಎನ್ನುತ್ತಾರೆ ವಿಜಯನ್‌.

ಈ ತಂತ್ರಜ್ಞಾನವನ್ನು ಬಳಸಲು, ಹಲವು ವಾಹನ ತಯಾರಕರನ್ನು ಕೋರಲಾಗಿದೆ. ಕಂಪನಿಗಳ ಪ್ರತಿಕ್ರಿಯೆಗಾಗಿ ಕಾಯುತ್ತಿದ್ದೇನೆ. ಇದೆಲ್ಲಾ ಓಕೆಯಾದರೆ ಇನ್ನು ಯಾವುದೇ ಸಮಸ್ಯೆ ಇರದ ಬೈಕ್‌ಗಳು ಶೀಘ್ರದಲ್ಲಿ ಮಾರುಕಟ್ಟೆಗೆ ಬರಲಿವೆ ಎನ್ನುವುದು ಅವರ ವಿಶ್ವಾಸ.


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »