TOP STORIES:

ಪೆರಾಜೆಯ ರಿಕ್ಷಾ ಚಾಲಕ ಅಣ್ಣಿ ಪೂಜಾರಿ ಯವರಿಂದ ವ್ಯಾಕ್ಸಿನ್ ಮತ್ತು ತುರ್ತು ಚಿಕಿಸ್ಥೆಗೆ ಉಚಿತ ರಿಕ್ಷಾ ಸೇವೆ


ಬಂಟ್ವಾಳ: ಕೋವಿಡ್ ನಿಯಂತ್ರಣ ಸಾಧಿಸಲು ಕೋವಿಡ್ ಲಸಿಕೆಯೊಂದೇ ರಾಮಬಾಣವಾಗಿದ್ದು ಪ್ರತಿಯೊಬ್ಬರೂ ಕೋವಿಡ್ ಲಸಿಕೆ ಪಡೆಯುವುದೇ ಅಂತಿಮ ಪರಿಹಾರವಾಗಿದೆ.

ಈ ನಿಟ್ಟಿನಲ್ಲಿ ಕೋವಿಡ್ ಲಸಿಕೆ ನೀಡುವ ಕಾರ್ಯದಲ್ಲಿವ ಸರಕಾರದ ಜೊತೆ ಸಂಘ ಸಂಸ್ಥೆಗಳು ಕೈಜೋಡಿಸಿದೆ. ಆದರೆ ಇಲ್ಲೊಬ್ಬರು ನನ್ನ ಗ್ರಾಮ ಕೊರೊನಾ ಮುಕ್ತವಾಗಬೇಕು ಪ್ರತಿಯೊಬ್ಬ ರೂ ಲಸಿಕೆ ಪಡೆಯ ಬೇಕು ಎಂಬ ಆಶಯದಿಂದ ಲಸಿಕೆ ಪಡೆಯಲು ಹೋಗುವವರಿಗೆ ಉಚಿತವಾಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಕೆಲಸದಲ್ಲಿ ತೊಡಗಿದ್ದಾರೆ.

ವೃತ್ತಿಯಲ್ಲಿ ಸಾಮಾನ್ಯ ರಂತೆ ಓರ್ವ ರಿಕ್ಷಾ ಚಾಲಕ, ಮಾಣಿ ರಿಕ್ಷಾ ಪಾರ್ಕ್ ನಲ್ಲಿ ದುಡಿಯುವ ಪೆರಾಜೆ ಗ್ರಾಮದ ಅಣ್ಣಿ ಪೂಜಾರಿ ಅವರದ್ದು ಲಾಕ್ ಡೌನ್ ಅವಧಿಯಲ್ಲಿ ವಿಶೇಷ ಸೇವೆ. ಪೆರಾಜೆ ಗ್ರಾಮದಿಂದ ಲಸಿಕೆ ಪಡೆಯಲು ಆಸ್ಪತ್ರೆಗೆ ತೆರಳುವವರು ಇವರ ಮೊಬೈಲ್ ಗೆ ಒಂದು ಕಾಲ್ ಮಾಡಿದರೆ ಸಾಕು ಅವರು ಹೇಳಿದ ವಿಳಾಸಕ್ಕೆ ಪಟ್ಟಂತೆ ಹಾಜರಾಗುತ್ತಾರೆ.

ಅಲ್ಲಿಂದ ಅವರು ಹೇಳಿದ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಲಸಿಕೆ ಪಡೆದು ಹಿಂತಿರುಗಿ ಮನೆಗೆ ಸೇಫ್ ಆಗಿ ತಲುಪಿಸುವ ಕೆಲಸ ಕಳೆದ ಕೆಲ ದಿನದಿಂದ ಮಾಡುತ್ತಿದ್ದ ಇವರ ಕಾರ್ಯ ವೈಖರಿ ಗೆ ಪೆರಾಜೆ ಗ್ರಾಮಸ್ಥರು ಹ್ಯಾಟ್ಸ್ ಆಫ್ ಎಂದು ಅಭಿನಂದಿಸಿದ್ದಾರೆ.

ಅಂದಾ ಹಾಗೆ ಇವರು ಕೇವಲ ಲಸಿಕೆ ಪಡೆಯಲು ಮಾತ್ರವಲ್ಲದೆ ತುರ್ತು ಸ್ಥಿತಿಯಲ್ಲಿರು ಅನಾರೋಗ್ಯ ಪೀಡಿತ ರನ್ನು ಉಚಿತವಾಗಿ ಆಸ್ಪತ್ರೆಗೆ ದಾಖಲಿಸುವ ಕೆಲಸ ನಿರಂತರವಾಗಿ ಇವರು ಮಾಡುತ್ತಿದ್ದಾರೆ. ಇಂತಹ ರಿಕ್ಷಾ ಚಾಲಕರ ಸೇವೆ ನಿಜಕ್ಕೂ ಶ್ಲಾಘನೀಯ ಕಾರ್ಯವಾಗಿದೆ.

ವ್ಯಾಟ್ಸ್ ಆಪ್ ಗ್ರೂಪ್ ನಲ್ಲಿ ಪ್ರಚಾರ

ಪ್ರಸ್ತುತ ಲಾಕ್ ಡೌನ್ ಅವಧಿಯಾಗಿದ್ದು ಲಸಿಕೆ ಪಡೆಯಲು
ನಮ್ಮ ಪೆರಾಜೆ ಗ್ರಾಮದ ಬಡಜನರಿಗಾಗಿ ವ್ಯಾಕ್ಸಿನ್ ಮತ್ತು ತುರ್ತು ಚಿಕಿಸ್ಥೆಗೆ ಉಚಿತವಾಗಿ ರಿಕ್ಷಾ ಸೇವೆಯನ್ನು ನೀಡಲಿದ್ದಾರೆ (ಪೆರಾಜೆಯಿಂದ ಮಾಣಿ ಅರೋಗ್ಯ ಕೇಂದ್ರ)

ಅಣ್ಣಿ ಪೂಜಾರಿ : 9880264457

ಈ ರೀತಿಯಲ್ಲಿ ಪೆರಾಜೆ ಗ್ರಾಮದ ಯುವಕರು ಇವರ ಸೇವೆಯ ಬಗ್ಗೆ ಜನರಿಗೆ ಬೇರೆ ಬೇರೆ ಸ್ಥಳೀಯ ವ್ಯಾಟ್ಸ್ ಆಫ್ ಗ್ರೂಪ್ ಗಳ ಮೂಲಕ ತಿಳಿಯಪಡಿಸಿದ್ದಾರೆ.


Related Posts

ಬಿಲ್ಲವರ ಉನ್ನತಿಯಲ್ಲಿ ನಾರಾಯಣ ಗುರುಗಳ ಪಾತ್ರ ಗುರುತರವಾದುದು ಡಾ.ಮುಕೇಶ್ ಕುಮಾರ್


Share        ಮುಂಬಯಿ ಒಂದು ಕಾಲದಲ್ಲಿ ಮೇಲ್ವರ್ಗದವರಿಂದ ಅಸ್ಪ್ರಶ್ಯರೆನಿಸಿಕೊಂಡು ಸಮಾಜದಿಂದ ಬಹಿಷ್ಕೃತರಾದ ಬಿಲ್ಲವರು ಶ್ರೀಮಂತವಾದ ಸಂಸ್ಕೃತಿಯ ಹಿನ್ನೆಲೆಯಿಂದ ಬಂದವರು. ದಾರ್ಶನಿಕ ನಾರಾಯಣ ಗುರುಗಳ ಮಾರ್ಗದರ್ಶನವನ್ನೇ ಸ್ಫೂರ್ತಿಯಾಗಿಸಿಕೊಂಡು ಹಲವಾರು ಸಂಘರ್ಷಗಳನ್ನು ಎದುರಿಸಿಯೂ ಬಿಲ್ಲರು ಉನ್ನತ ಸ್ಥಾನಮಾನವನ್ನು ಗಳಿಸಿಕೊಂಡರು.


Read More »

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »