TOP STORIES:

ಪೊಲೀಸ್ ಇಲಾಖೆಯಲ್ಲಿ ಗೈದ ಸಾಧನೆಗಾಗಿ ಮುಖ್ಯಮಂತ್ರಿ ಚಿನ್ನದ ಪದಕದಿಂದ ಪುರಸ್ಕೃತನಾದ ಗೋಪಾಲಕೃಷ್ಣ .ಕೆ ಬಜ್ಪೆ


ಮಂಗಳೂರು: ಮಂಗಳೂರಿನ ಕುಲಶೇಖರದ ವಾಮಯ್ಯ ಪೂಜಾರಿ ಮತ್ತು ಚಂದ್ರಾವತಿ ದಂಪತಿ ಸುಪುತ್ರರಾದ ಗೋಪಾಲಕೃಷ್ಣ .ಕೆ ಬಜೆ ಇವರು ಈ ಭುವಿಯ ಬೆಳಕನ್ನು ಕಂಡ ಇವರು ಸುಸಂಸ್ಕೃತ ವಾತಾವರಣದೊಂದಿಗೆ ಸಂಪದ್ಭರಿತ ಸ್ನಾತಕೋತ್ತರ ಪದವಿ ಶಿಕ್ಷಣ ದೊಂದಿಗೆ ಒಟ್ಟು ಸಮೃದ್ಧಿಯನ್ನು ಸಂಪಾದಿಸಿದವರು.1996 ರಲ್ಲಿ ಪೊಲೀಸ್ ಇಲಾಖೆಗೆ ಸೇರ್ಪಡೆಗೊಂಡು ಪ್ರಥಮವಾಗಿ ವಿಟ್ಲ ಠಾಣಾ ಬಳಿಕ ಬಜ್ಪೆ ,ನಂತರ ಪದೋನ್ನತಿ ಹೊಂದಿ ಕಾವೂರು ಠಾಣೆಯಲ್ಲಿ ಸೇವೆ ಸಲ್ಲಿಸುತ್ತಾ ಪ್ರಸ್ತುತ ಮಂಗಳೂರು ವಿಮಾನ ನಿಲ್ದಾಣದಲ್ಲಿ ಪೊಲೀಸ್ ಇಲಾಖಾ ಸಂಪರ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಪ್ರಸ್ತುತ ಇವರು MBA ಟೂರಿಸಂ ಮಾಡುತ್ತಾ ಇದ್ದಾರೆ. ಇದರ ಪೂರ್ವದಲ್ಲಿ ಹೆದ್ದಾರಿ ಗಸ್ತು ಪಡೆಯಲ್ಲಿ ಕಾರ್ಯನಿರ್ವಹಿಸಿ ಕಠಿಣ ಅಪರಾಧ ಪ್ರಕರಣಗಳನ್ನು ಬೇಧಿಸಿದ ಹೆಚ್ಚುಗಾರಿಕೆ ಇವರದ್ದು.

ಜನಸ್ನೇಹಿ ಪೊಲೀಸ್ ಎಂದೇ ಗುರುತಿಸಲ್ಪಡುವ ಇವರು ಅಪರಾಧ ಮುಕ್ತ ಸಮಾಜ ನಿರ್ಮಾಣದ ಪ್ರಯತ್ನದಲ್ಲಿ ಬಹಳಷ್ಟು ದೂರ ಸಾಗಿ ಬಂದವರು.

ಈ ನೆಲೆಯಲ್ಲಿ ಸೀಮಾತೀತವಾಗಿ ಶಿಕ್ಷಣ ಸಂಸ್ಥೆಗಳ ಸದಸ್ಯರುಗಳಿಗೆ ಮಾಹಿತಿ ಕಾರ್ಯಕ್ರಮಗಳನ್ನು ವ್ಯಕ್ತಿತ್ವ ವಿಕಸನ ಚಟುವಟಿಕೆಗಳನ್ನು ಸದಾ ನಡೆಸಿಕೊಂಡು ಬಂದವರು.

ಶಿಸ್ತಿ ಜೀವನ ಮೌಲ್ಯ ವ್ಯಕ್ತಿ ವಿಕಸನ,ವ್ಯಕ್ತಿತ್ವ ನಿರ್ಮಾಣ ಪರಿಸರ ಪ್ರೇಮ ವನಮಹೋತ್ಸವ ,ಸ್ವಚ್ಛತಾಅಭಿಯಾನ.ಸಾವಯವ ,ಎರೆಹುಳು ಗೊಬ್ಬರ ತಯಾರಿ ತರಬೇತಿ ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕ ಪಾವತಿ ,ಅಸಹಾಯಕರಿಗೆ ಸಹಾಯ,ಉಚಿತ ಆರೋಗ್ಯ ಶಿಬಿರ,ಕಣ್ಣಿನ ಉಚಿತ ತಪಾಸಣೆ ಮತ್ತು ಕನ್ನಡಕ ವಿತರಣೆ,ಇಲಾಖಾ ಪ್ರಶಿಕ್ಷಾಣಾರ್ಥಿಗಳಿಗೆ ಸಂಪನ್ಮೂಲ ವ್ಯಕ್ತಿಯಾಗಿಯೂ ಪರಿಚಯಿಸಿಕೊಂಡವರು ಗೋಪಾಲಕೃಷ್ಣ .ಕೆ ಬಜ್ಪೆ.


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »