TOP STORIES:

ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ


ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ

ಬೆಳೆಯ ಸಿರಿಯನ್ನು ಮೊಳಕೆಯಲ್ಲೇ ನೋಡಬಹುದಂತೆ ಹಾಗೆಯೇ ಬದುಕ ಪಯಣದಲ್ಲಿ ಹಿಂತಿರುಗಿ ನೋಡಿದಾಗ ಸಾರ್ಥಕತೆಯ ನಿಟ್ಟುಸಿರು ಬರಬೇಕಂತೆ” ಇಂತಹ ಸಾರ್ಥಕತೆಯತ್ತ ಕಲಾ ಜೇವನದೊಂದಿಗೆ ಪಯಣಿಸುತ್ತಿರುವ ನಗುಮೊಗದ ಚೆಲುವ, ಶಾರದೆಯೇ ಮೈದೋರಿದಂತಿರುವ ಮಾತಿನ ಮಲ್ಲ, ಪಾದರಸವೇ ನಾಚುವಂತಹ ಚಾಕಚಕ್ಯತೆಯ ಕಲಾಪ್ರತಿಭೆ
ಸಾಮಾನ್ಯರಲ್ಲಿ ಸಾಮಾನ್ಯನಾಗಿ, ಅಸಮಾನ್ಯ ವ್ಯಕ್ತಿತ್ವವಿರುವ ಈತ ಹಲವಾರು ನಾಟಕ ತಂಡದೊಂದಿಗೆ ತನ್ನನ್ನು ತೊಡಗಿಸಿಕೊಂಡವನು.

*ರಮಾನಂದ ಪೂಜಾರಿ* ಮತ್ತು *ಪುಷ್ಪ* ದಂಪತಿಯ ಮಗನಾಗಿ ಜನಿಸಿದ ಸಂತೋಷ್ ಬಾಲ್ಯದಿಂದಲೇ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಪ್ರತಿಭಾನ್ವಿತ. ಹಾಗಂತ ಪಠ್ಯದ ವಿಚಾರಕ್ಕೆ ಎಂದೂ ಅದು ಅಡ್ಡಿಯಾಗಿರಲಿಲ್ಲ. ಅದಕ್ಕೆ ದ್ಯೋತಕ ಎಂಬಂತೆ ಪಿಯುಸಿ ದಿನಗಳಲ್ಲಿ ಉತ್ತಮ ಅಂಕ ಪಡೆದು ಹಿಂದುಳಿದ ವಿದ್ಯಾರ್ಥಿಗಳ ನಿಲಯದ ಪಟ್ಟಿಯಲ್ಲಿ ಜಿಲ್ಲೆಗೆ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ ಖ್ಯಾತಿ ಇವರದು. ಹಾಗೂ ಸ್ನಾತಕೋತ್ತರ ಪದವಿಯನ್ನು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಪದವಿಪೂರ್ವ ಮತ್ತು ಪದವಿ ಹಂತದಲ್ಲಿ ಕಾಲೇಜಿನ ‘ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್’ ಅವಾರ್ಡ್ ಪಡೆದವರು.

ಕಲೆಯ ಮೇಲೆ ಹೆಚ್ಚಿನ ಒಲವು, ಪ್ರೀತಿ ತೋರಿದ ಇವರು ಜನಪದ ನೃತ್ಯ ಪಟುವಾಗಿ, ಜನಪದ ನೃತ್ಯ ತರಬೇತುದಾರನಾಗಿ ಹಾಗೂ ರಂಗಭೂಮಿ ಕಲಾವಿದನಾಗಿ ಹಲವರು ನಾಟಕಗಳಲ್ಲಿ ಅಭಿನಯಸಿ ಕೀರ್ತಿಗೆ ಪಾತ್ರರದರು. ಬಂಟ್ವಾಳದಲ್ಲಿ ನಡೆಯುವ ಕಲಾಸಿಂಚನದಲ್ಲಿ ಎರಡು ವರ್ಷ ಇವರ ಮುಂದಾಳತ್ವದ ತಂಡ ಜನಪದ ನೃತ್ಯವನ್ನು ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿ ಜನಪದ ನೃತ್ಯದ ಸಿಂಚನವನ್ನು ಹೊರರಾಜ್ಯಕ್ಕೂ ಪರಿಚಯಿಸಿದ ಕೀರ್ತಿ ಇವರದ್ದು. ‘ಕರ್ನಾಟಕ ವೈಭವ ‘ಎಂಬ ಹೆಸರಿನ ಮೂಲಕ ಕರ್ನಾಟಕದ ನೃತ್ಯ ಪ್ರಕಾರ, ಜನಪದ ಕಲೆ ಸಂಸ್ಕೃತಿಯನ್ನು ಪರಿಚಯಿಸುವ ಸಲುವಾಗಿ ಒಂದು ತಂಡ ಕಟ್ಟಿ ತರಬೇತಿ ನೀಡಿ ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.ಇವರು ರಚಿಸಿ ನಿರ್ದೇಶಿಸಿ ಅಭಿನಯಿಸಿದ ಪ್ರಹಸನ ಹಲವಾರು ಕಡೆ ಪ್ರಥಮ ಸ್ಥಾನ ಗಳಿಸಿರುತ್ತದೆ. ಹಲವು ಬೀದಿ ನಾಟಕಗಳ ಮೂಲಕವೂ ನಿರಂತರವಾಗಿ ಜನರ ಮನಸ್ಸಿನಲ್ಲಿ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ.

ರಾಜ್ಯ, ರಾಷ್ಟ್ರಮಟ್ಟದ ಜಾನಪದ, ಸಂಗೀತ ಹಾಗು ಕಲೆಯಲ್ಲಿ ಹಲವು ಪ್ರಶಸ್ತಿಗಳನ್ನು ಪಡೆಯುತ ಮುನ್ನೆಡೆಯುತಿರುವ, ಈ ಯುವ ಪ್ರತಿಭೆಯ ಸಾಧನೆಯನ್ನು ಗುರುತಿಸಿ. ರಾಷ್ಟ್ರ ಮಟ್ಟದ ಪ್ರತಿಭಾ ಪ್ರಶಸ್ತಿ ಪುರಸ್ಕಾರ “ಸಿರಿಗನ್ನಡ ರಾಷ್ಟ್ರೀಯ ಕಲಾ ರತ್ನ” ರಾಷ್ಟ್ರಮಟ್ಟದ ಶ್ರೇಷ್ಟ ಪ್ರಶಸ್ತಿ ನೀಡಿ ಗೌರವಿಸಿದೆ
ಕಲಾಕ್ಷೇತ್ರ ಇವರನ್ನು ಕನ್ನಡ ನಾಡು,ನುಡಿ,ಸೇವೆ,ಶಿಕ್ಷಣ/ಭರತನಾಟ್ಯ,ಸಾಹಿತ್ಯ,ಕಲಾವಿದರ ಮತ್ತು ಸಾಹಿತ್ಯ ಶಿಕ್ಷಣ ಸೇವಾ ಹಾಗೂ ಬಾಲ್ಯದ ಕಲಾ ಚಿಂತನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿಕೊಂಡಿದ್ದಾರೆ
ಪ್ರಸ್ತುತ ಇವರು ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಲ್ಲಿ ಕಾರ್ಯ ನಿರ್ವಶಿಸುತಿದ್ದಾರೆ,
ಅನೇಕ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಇವರು ಬೆಂಗಳೂರು ಯುವವಾಹಿನಿ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಎನ್ನುದಕ್ಕೆ ಹೆಮ್ಮೆಯಾಗುತಿದೆ.
ಈ ಅಪೂರ್ವ ಕಲಾವಿದನಿಗೆ ಸಹೃದಯಿ ಕಲಾಭಿಮಾನಿಗಳ ಆಶೀರ್ವಾದ ಪ್ರೀತಿ ಸದಾ ಇರಲಿ…ಕಲಾ ಮಾತೆ ಶಾರದೆ ಈತನ ಪ್ರತಿಭೆಯನ್ನು ದಿಗಂತಕ್ಕೇರಿಸಲಿ ಇವರು ಕಲಾ ಕ್ಷೇತ್ರದಲ್ಲಿ ಇನ್ನಷ್ಟ್ಟು ಸಾಧನೆಗಳನ್ನು ಮಾಡಲಿ ಎಂದು ಯುವವಾಹಿನಿ ಬೆಂಗಳೂರು ಘಟಕವು ಹಾರೈಸುತ್ತದೆ.

ಪ್ರಚಾರ ನಿರ್ದೇಶಕರು
ಯುವವಾಹಿನಿ (ರಿ) ಬೆಂಗಳೂರು


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »