TOP STORIES:

ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ


ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ

ಬೆಳೆಯ ಸಿರಿಯನ್ನು ಮೊಳಕೆಯಲ್ಲೇ ನೋಡಬಹುದಂತೆ ಹಾಗೆಯೇ ಬದುಕ ಪಯಣದಲ್ಲಿ ಹಿಂತಿರುಗಿ ನೋಡಿದಾಗ ಸಾರ್ಥಕತೆಯ ನಿಟ್ಟುಸಿರು ಬರಬೇಕಂತೆ” ಇಂತಹ ಸಾರ್ಥಕತೆಯತ್ತ ಕಲಾ ಜೇವನದೊಂದಿಗೆ ಪಯಣಿಸುತ್ತಿರುವ ನಗುಮೊಗದ ಚೆಲುವ, ಶಾರದೆಯೇ ಮೈದೋರಿದಂತಿರುವ ಮಾತಿನ ಮಲ್ಲ, ಪಾದರಸವೇ ನಾಚುವಂತಹ ಚಾಕಚಕ್ಯತೆಯ ಕಲಾಪ್ರತಿಭೆ
ಸಾಮಾನ್ಯರಲ್ಲಿ ಸಾಮಾನ್ಯನಾಗಿ, ಅಸಮಾನ್ಯ ವ್ಯಕ್ತಿತ್ವವಿರುವ ಈತ ಹಲವಾರು ನಾಟಕ ತಂಡದೊಂದಿಗೆ ತನ್ನನ್ನು ತೊಡಗಿಸಿಕೊಂಡವನು.

*ರಮಾನಂದ ಪೂಜಾರಿ* ಮತ್ತು *ಪುಷ್ಪ* ದಂಪತಿಯ ಮಗನಾಗಿ ಜನಿಸಿದ ಸಂತೋಷ್ ಬಾಲ್ಯದಿಂದಲೇ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಪ್ರತಿಭಾನ್ವಿತ. ಹಾಗಂತ ಪಠ್ಯದ ವಿಚಾರಕ್ಕೆ ಎಂದೂ ಅದು ಅಡ್ಡಿಯಾಗಿರಲಿಲ್ಲ. ಅದಕ್ಕೆ ದ್ಯೋತಕ ಎಂಬಂತೆ ಪಿಯುಸಿ ದಿನಗಳಲ್ಲಿ ಉತ್ತಮ ಅಂಕ ಪಡೆದು ಹಿಂದುಳಿದ ವಿದ್ಯಾರ್ಥಿಗಳ ನಿಲಯದ ಪಟ್ಟಿಯಲ್ಲಿ ಜಿಲ್ಲೆಗೆ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ ಖ್ಯಾತಿ ಇವರದು. ಹಾಗೂ ಸ್ನಾತಕೋತ್ತರ ಪದವಿಯನ್ನು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಪದವಿಪೂರ್ವ ಮತ್ತು ಪದವಿ ಹಂತದಲ್ಲಿ ಕಾಲೇಜಿನ ‘ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್’ ಅವಾರ್ಡ್ ಪಡೆದವರು.

ಕಲೆಯ ಮೇಲೆ ಹೆಚ್ಚಿನ ಒಲವು, ಪ್ರೀತಿ ತೋರಿದ ಇವರು ಜನಪದ ನೃತ್ಯ ಪಟುವಾಗಿ, ಜನಪದ ನೃತ್ಯ ತರಬೇತುದಾರನಾಗಿ ಹಾಗೂ ರಂಗಭೂಮಿ ಕಲಾವಿದನಾಗಿ ಹಲವರು ನಾಟಕಗಳಲ್ಲಿ ಅಭಿನಯಸಿ ಕೀರ್ತಿಗೆ ಪಾತ್ರರದರು. ಬಂಟ್ವಾಳದಲ್ಲಿ ನಡೆಯುವ ಕಲಾಸಿಂಚನದಲ್ಲಿ ಎರಡು ವರ್ಷ ಇವರ ಮುಂದಾಳತ್ವದ ತಂಡ ಜನಪದ ನೃತ್ಯವನ್ನು ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿ ಜನಪದ ನೃತ್ಯದ ಸಿಂಚನವನ್ನು ಹೊರರಾಜ್ಯಕ್ಕೂ ಪರಿಚಯಿಸಿದ ಕೀರ್ತಿ ಇವರದ್ದು. ‘ಕರ್ನಾಟಕ ವೈಭವ ‘ಎಂಬ ಹೆಸರಿನ ಮೂಲಕ ಕರ್ನಾಟಕದ ನೃತ್ಯ ಪ್ರಕಾರ, ಜನಪದ ಕಲೆ ಸಂಸ್ಕೃತಿಯನ್ನು ಪರಿಚಯಿಸುವ ಸಲುವಾಗಿ ಒಂದು ತಂಡ ಕಟ್ಟಿ ತರಬೇತಿ ನೀಡಿ ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.ಇವರು ರಚಿಸಿ ನಿರ್ದೇಶಿಸಿ ಅಭಿನಯಿಸಿದ ಪ್ರಹಸನ ಹಲವಾರು ಕಡೆ ಪ್ರಥಮ ಸ್ಥಾನ ಗಳಿಸಿರುತ್ತದೆ. ಹಲವು ಬೀದಿ ನಾಟಕಗಳ ಮೂಲಕವೂ ನಿರಂತರವಾಗಿ ಜನರ ಮನಸ್ಸಿನಲ್ಲಿ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ.

ರಾಜ್ಯ, ರಾಷ್ಟ್ರಮಟ್ಟದ ಜಾನಪದ, ಸಂಗೀತ ಹಾಗು ಕಲೆಯಲ್ಲಿ ಹಲವು ಪ್ರಶಸ್ತಿಗಳನ್ನು ಪಡೆಯುತ ಮುನ್ನೆಡೆಯುತಿರುವ, ಈ ಯುವ ಪ್ರತಿಭೆಯ ಸಾಧನೆಯನ್ನು ಗುರುತಿಸಿ. ರಾಷ್ಟ್ರ ಮಟ್ಟದ ಪ್ರತಿಭಾ ಪ್ರಶಸ್ತಿ ಪುರಸ್ಕಾರ “ಸಿರಿಗನ್ನಡ ರಾಷ್ಟ್ರೀಯ ಕಲಾ ರತ್ನ” ರಾಷ್ಟ್ರಮಟ್ಟದ ಶ್ರೇಷ್ಟ ಪ್ರಶಸ್ತಿ ನೀಡಿ ಗೌರವಿಸಿದೆ
ಕಲಾಕ್ಷೇತ್ರ ಇವರನ್ನು ಕನ್ನಡ ನಾಡು,ನುಡಿ,ಸೇವೆ,ಶಿಕ್ಷಣ/ಭರತನಾಟ್ಯ,ಸಾಹಿತ್ಯ,ಕಲಾವಿದರ ಮತ್ತು ಸಾಹಿತ್ಯ ಶಿಕ್ಷಣ ಸೇವಾ ಹಾಗೂ ಬಾಲ್ಯದ ಕಲಾ ಚಿಂತನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿಕೊಂಡಿದ್ದಾರೆ
ಪ್ರಸ್ತುತ ಇವರು ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಲ್ಲಿ ಕಾರ್ಯ ನಿರ್ವಶಿಸುತಿದ್ದಾರೆ,
ಅನೇಕ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಇವರು ಬೆಂಗಳೂರು ಯುವವಾಹಿನಿ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಎನ್ನುದಕ್ಕೆ ಹೆಮ್ಮೆಯಾಗುತಿದೆ.
ಈ ಅಪೂರ್ವ ಕಲಾವಿದನಿಗೆ ಸಹೃದಯಿ ಕಲಾಭಿಮಾನಿಗಳ ಆಶೀರ್ವಾದ ಪ್ರೀತಿ ಸದಾ ಇರಲಿ…ಕಲಾ ಮಾತೆ ಶಾರದೆ ಈತನ ಪ್ರತಿಭೆಯನ್ನು ದಿಗಂತಕ್ಕೇರಿಸಲಿ ಇವರು ಕಲಾ ಕ್ಷೇತ್ರದಲ್ಲಿ ಇನ್ನಷ್ಟ್ಟು ಸಾಧನೆಗಳನ್ನು ಮಾಡಲಿ ಎಂದು ಯುವವಾಹಿನಿ ಬೆಂಗಳೂರು ಘಟಕವು ಹಾರೈಸುತ್ತದೆ.

ಪ್ರಚಾರ ನಿರ್ದೇಶಕರು
ಯುವವಾಹಿನಿ (ರಿ) ಬೆಂಗಳೂರು


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »