TOP STORIES:

ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ


ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ

ಬೆಳೆಯ ಸಿರಿಯನ್ನು ಮೊಳಕೆಯಲ್ಲೇ ನೋಡಬಹುದಂತೆ ಹಾಗೆಯೇ ಬದುಕ ಪಯಣದಲ್ಲಿ ಹಿಂತಿರುಗಿ ನೋಡಿದಾಗ ಸಾರ್ಥಕತೆಯ ನಿಟ್ಟುಸಿರು ಬರಬೇಕಂತೆ” ಇಂತಹ ಸಾರ್ಥಕತೆಯತ್ತ ಕಲಾ ಜೇವನದೊಂದಿಗೆ ಪಯಣಿಸುತ್ತಿರುವ ನಗುಮೊಗದ ಚೆಲುವ, ಶಾರದೆಯೇ ಮೈದೋರಿದಂತಿರುವ ಮಾತಿನ ಮಲ್ಲ, ಪಾದರಸವೇ ನಾಚುವಂತಹ ಚಾಕಚಕ್ಯತೆಯ ಕಲಾಪ್ರತಿಭೆ
ಸಾಮಾನ್ಯರಲ್ಲಿ ಸಾಮಾನ್ಯನಾಗಿ, ಅಸಮಾನ್ಯ ವ್ಯಕ್ತಿತ್ವವಿರುವ ಈತ ಹಲವಾರು ನಾಟಕ ತಂಡದೊಂದಿಗೆ ತನ್ನನ್ನು ತೊಡಗಿಸಿಕೊಂಡವನು.

*ರಮಾನಂದ ಪೂಜಾರಿ* ಮತ್ತು *ಪುಷ್ಪ* ದಂಪತಿಯ ಮಗನಾಗಿ ಜನಿಸಿದ ಸಂತೋಷ್ ಬಾಲ್ಯದಿಂದಲೇ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಪ್ರತಿಭಾನ್ವಿತ. ಹಾಗಂತ ಪಠ್ಯದ ವಿಚಾರಕ್ಕೆ ಎಂದೂ ಅದು ಅಡ್ಡಿಯಾಗಿರಲಿಲ್ಲ. ಅದಕ್ಕೆ ದ್ಯೋತಕ ಎಂಬಂತೆ ಪಿಯುಸಿ ದಿನಗಳಲ್ಲಿ ಉತ್ತಮ ಅಂಕ ಪಡೆದು ಹಿಂದುಳಿದ ವಿದ್ಯಾರ್ಥಿಗಳ ನಿಲಯದ ಪಟ್ಟಿಯಲ್ಲಿ ಜಿಲ್ಲೆಗೆ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ ಖ್ಯಾತಿ ಇವರದು. ಹಾಗೂ ಸ್ನಾತಕೋತ್ತರ ಪದವಿಯನ್ನು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಪದವಿಪೂರ್ವ ಮತ್ತು ಪದವಿ ಹಂತದಲ್ಲಿ ಕಾಲೇಜಿನ ‘ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್’ ಅವಾರ್ಡ್ ಪಡೆದವರು.

ಕಲೆಯ ಮೇಲೆ ಹೆಚ್ಚಿನ ಒಲವು, ಪ್ರೀತಿ ತೋರಿದ ಇವರು ಜನಪದ ನೃತ್ಯ ಪಟುವಾಗಿ, ಜನಪದ ನೃತ್ಯ ತರಬೇತುದಾರನಾಗಿ ಹಾಗೂ ರಂಗಭೂಮಿ ಕಲಾವಿದನಾಗಿ ಹಲವರು ನಾಟಕಗಳಲ್ಲಿ ಅಭಿನಯಸಿ ಕೀರ್ತಿಗೆ ಪಾತ್ರರದರು. ಬಂಟ್ವಾಳದಲ್ಲಿ ನಡೆಯುವ ಕಲಾಸಿಂಚನದಲ್ಲಿ ಎರಡು ವರ್ಷ ಇವರ ಮುಂದಾಳತ್ವದ ತಂಡ ಜನಪದ ನೃತ್ಯವನ್ನು ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿ ಜನಪದ ನೃತ್ಯದ ಸಿಂಚನವನ್ನು ಹೊರರಾಜ್ಯಕ್ಕೂ ಪರಿಚಯಿಸಿದ ಕೀರ್ತಿ ಇವರದ್ದು. ‘ಕರ್ನಾಟಕ ವೈಭವ ‘ಎಂಬ ಹೆಸರಿನ ಮೂಲಕ ಕರ್ನಾಟಕದ ನೃತ್ಯ ಪ್ರಕಾರ, ಜನಪದ ಕಲೆ ಸಂಸ್ಕೃತಿಯನ್ನು ಪರಿಚಯಿಸುವ ಸಲುವಾಗಿ ಒಂದು ತಂಡ ಕಟ್ಟಿ ತರಬೇತಿ ನೀಡಿ ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.ಇವರು ರಚಿಸಿ ನಿರ್ದೇಶಿಸಿ ಅಭಿನಯಿಸಿದ ಪ್ರಹಸನ ಹಲವಾರು ಕಡೆ ಪ್ರಥಮ ಸ್ಥಾನ ಗಳಿಸಿರುತ್ತದೆ. ಹಲವು ಬೀದಿ ನಾಟಕಗಳ ಮೂಲಕವೂ ನಿರಂತರವಾಗಿ ಜನರ ಮನಸ್ಸಿನಲ್ಲಿ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ.

ರಾಜ್ಯ, ರಾಷ್ಟ್ರಮಟ್ಟದ ಜಾನಪದ, ಸಂಗೀತ ಹಾಗು ಕಲೆಯಲ್ಲಿ ಹಲವು ಪ್ರಶಸ್ತಿಗಳನ್ನು ಪಡೆಯುತ ಮುನ್ನೆಡೆಯುತಿರುವ, ಈ ಯುವ ಪ್ರತಿಭೆಯ ಸಾಧನೆಯನ್ನು ಗುರುತಿಸಿ. ರಾಷ್ಟ್ರ ಮಟ್ಟದ ಪ್ರತಿಭಾ ಪ್ರಶಸ್ತಿ ಪುರಸ್ಕಾರ “ಸಿರಿಗನ್ನಡ ರಾಷ್ಟ್ರೀಯ ಕಲಾ ರತ್ನ” ರಾಷ್ಟ್ರಮಟ್ಟದ ಶ್ರೇಷ್ಟ ಪ್ರಶಸ್ತಿ ನೀಡಿ ಗೌರವಿಸಿದೆ
ಕಲಾಕ್ಷೇತ್ರ ಇವರನ್ನು ಕನ್ನಡ ನಾಡು,ನುಡಿ,ಸೇವೆ,ಶಿಕ್ಷಣ/ಭರತನಾಟ್ಯ,ಸಾಹಿತ್ಯ,ಕಲಾವಿದರ ಮತ್ತು ಸಾಹಿತ್ಯ ಶಿಕ್ಷಣ ಸೇವಾ ಹಾಗೂ ಬಾಲ್ಯದ ಕಲಾ ಚಿಂತನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿಕೊಂಡಿದ್ದಾರೆ
ಪ್ರಸ್ತುತ ಇವರು ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಲ್ಲಿ ಕಾರ್ಯ ನಿರ್ವಶಿಸುತಿದ್ದಾರೆ,
ಅನೇಕ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಇವರು ಬೆಂಗಳೂರು ಯುವವಾಹಿನಿ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಎನ್ನುದಕ್ಕೆ ಹೆಮ್ಮೆಯಾಗುತಿದೆ.
ಈ ಅಪೂರ್ವ ಕಲಾವಿದನಿಗೆ ಸಹೃದಯಿ ಕಲಾಭಿಮಾನಿಗಳ ಆಶೀರ್ವಾದ ಪ್ರೀತಿ ಸದಾ ಇರಲಿ…ಕಲಾ ಮಾತೆ ಶಾರದೆ ಈತನ ಪ್ರತಿಭೆಯನ್ನು ದಿಗಂತಕ್ಕೇರಿಸಲಿ ಇವರು ಕಲಾ ಕ್ಷೇತ್ರದಲ್ಲಿ ಇನ್ನಷ್ಟ್ಟು ಸಾಧನೆಗಳನ್ನು ಮಾಡಲಿ ಎಂದು ಯುವವಾಹಿನಿ ಬೆಂಗಳೂರು ಘಟಕವು ಹಾರೈಸುತ್ತದೆ.

ಪ್ರಚಾರ ನಿರ್ದೇಶಕರು
ಯುವವಾಹಿನಿ (ರಿ) ಬೆಂಗಳೂರು


Related Posts

ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ ಸೀಯಾಳಾಭಿಷೇಕ


Share        ಕುದ್ರೋಳಿಯಲ್ಲಿ ವಿಶ್ವಶಾಂತಿಗಾಗಿ ಶತ ಸೀಯಾಳಾಭಿಷೇಕ ಮಂಗಳೂರು: ಜಗತ್ತಿನಾದ್ಯಂತ ಯುದ್ಧದ ಕಾರ್ಮೋಡ ಆವರಿಸಿರುವುದರಿಂದ ವಿಶ್ವ ಶಾಂತಿಗಾಗಿ ಶ್ರೀ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನ ಆಡಳಿತ ಮತ್ತು ಅಭಿವೃದ್ಧಿ ಸಮಿತಿ ನೇತೃತ್ವದಲ್ಲಿ ಗುರುವಾರ ಬೆಳಗ್ಗೆ ಶತ


Read More »

ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ ಕೋಟ್ಯಾನ್‌ಗೆ ಬ್ರಾಂಡ್ ಮಂಗಳೂರು ಪ್ರಶಸ್ತಿ ಪ್ರದಾನ


Share        ವಿಕ ಸುದ್ದಿಲೋಕ ಮಂಗಳೂರು ಸೌಹಾರ್ದತೆ ಬಿಂಬಿಸುವ ವರದಿಗೆ ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ನೀಡುವ ‘ಬ್ಯಾಂಡ್ ಮಂಗಳೂರು’ ಪ್ರಶಸ್ತಿಗೆ ವಿಜಯ ಕರ್ನಾಟಕ ಪತ್ರಿಕೆಯ ಹಿರಿಯ ವರದಿಗಾರ ನಮ್ಮ ಸಮಾಜದ ಹೆಮ್ಮೆಯ ವಿಜಯ


Read More »

ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯ ಕೋಟ್ಯಾನ್ ಬ್ರ್ಯಾಂಡ್ ಮಂಗಳೂರು ಪ್ರಶಸ್ತಿಗೆ ಆಯ್ಕೆ


Share        ಮಂಗಳೂರು: ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಸೌಹಾರ್ದ ಬಿಂಬಿಸುವ ವರದಿಗೆ ನೀಡಲಾಗುವ “ಬ್ರ‍್ಯಾಂಡ್ ಮಂಗಳೂರು” ಪ್ರಶಸ್ತಿಗೆ ವಿಜಯ ಕರ್ನಾಟಕ ಹಿರಿಯ ವರದಿಗಾರ ವಿಜಯಕೋಟ್ಯಾನ್ ಪಡು  ಆಯ್ಕೆಯಾಗಿದ್ದಾರೆ. ವಿಜಯ ಕರ್ನಾಟಕ ಪತ್ರಿಕೆಯಲ್ಲಿ 2024 ಅಕ್ಟೋಬರ್


Read More »

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ ಚಾರಿಟೇಬಲ್ ಟ್ರಸ್ಟ್( ರಿ) ಇದರ ನೂತನ ಅಧ್ಯಕ್ಷರಾಗಿ ಕೆ. ಸಂಜೀವ ಪೂಜಾರಿ ಆಯ್ಕೆ


Share        ಶ್ರೀ ಕ್ಷೇತ್ರ ಗೆಜ್ಜೆಗಿರಿಯ ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಅಭಿವೃದ್ಧಿ  ಚಾರಿಟೇಬಲ್ ಟ್ರಸ್ಟ್(ರಿ) ಇದರ ನೂತನ ಅಧ್ಯಕ್ಷರಾಗಿ ಬಿರ್ವ ಸೆಂಟರ್ ಇದರ ಮಾಲಕರಾದ  ಕೆ ಸಂಜೀವ ಪೂಜಾರಿ ಇವರನ್ನು ಕಂಕನಾಡಿ ಬ್ರಹ್ಮ


Read More »

8ನೇ ವಯಸ್ಸಿನಲ್ಲಿ ಕಪೋತಾಸನದ ಭಂಗಿಯಲ್ಲಿ ವಿಶ್ವ ದಾಖಲೆ ಮಾಡಿದ ಬಾಲಕಿ ಕುಮಾರಿ ಶರಣ್ಯ ಶರತ್!


Share        ಮಂಗಳೂರು, ಜೂ. 20 ಪನ್ನೀರಿನ ಸೈಂಟ್ ಮೇರೀಸ್ ವಿದ್ಯಾಸಂಸ್ಥೆಯಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿರುವ ಕುಮಾರಿ ಶರಣ್ಯ ಶರತ್ ಅವರು ತನ್ನ ಎಂಟನೆಯ ವಯಸ್ಸಿನಲ್ಲಿ ಯೋಗಾಸನದ ಕಪೋತಾಸನದ ಭಂಗಿಯಲ್ಲಿ ಇಂಡಿಯಾ ಬುಕ್ ಆಫ್ ರೆಕಾರ್ಡ್


Read More »

ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಡಳಿತ ಸಮಿತಿ ಅಧ್ಯಕ್ಷರಾಗಿ ಎಚ್.ಎಸ್.ಜಯರಾಜ್ ಆಯ್ಕೆ


Share        ಮಂಗಳೂರು: ಬ್ರಹ್ಮಶ್ರೀ ನಾರಾಯಣಗುರುಗಳು ಪ್ರತಿಷ್ಠಾಪಿಸಿದ ಕರ್ನಾಟಕದ ಏಕೈಕ ಕ್ಷೇತ್ರ ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಸಮಗ್ರ ಅಭಿವೃದ್ಧಿ ಹಿತದೃಷ್ಟಿಯಿಂದ ಆಡಳಿತ ಸಮಿತಿ ಮತ್ತು ಅಭಿವೃದ್ಧಿ ಸಮಿತಿ ಜಂಟಿ ಸಭೆ ಕೇಂದ್ರದ ಮಾಜಿ ಸಚಿವ


Read More »