TOP STORIES:

FOLLOW US

ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ


ಪ್ರತಿಭೆಗಳ ಆನಾವರಣದಲ್ಲಿ ಯುವ ಕಲಾ ಪ್ರತಿಭೆ ಸಂತೋಷ್ ಪೂಜಾರಿ

ಬೆಳೆಯ ಸಿರಿಯನ್ನು ಮೊಳಕೆಯಲ್ಲೇ ನೋಡಬಹುದಂತೆ ಹಾಗೆಯೇ ಬದುಕ ಪಯಣದಲ್ಲಿ ಹಿಂತಿರುಗಿ ನೋಡಿದಾಗ ಸಾರ್ಥಕತೆಯ ನಿಟ್ಟುಸಿರು ಬರಬೇಕಂತೆ” ಇಂತಹ ಸಾರ್ಥಕತೆಯತ್ತ ಕಲಾ ಜೇವನದೊಂದಿಗೆ ಪಯಣಿಸುತ್ತಿರುವ ನಗುಮೊಗದ ಚೆಲುವ, ಶಾರದೆಯೇ ಮೈದೋರಿದಂತಿರುವ ಮಾತಿನ ಮಲ್ಲ, ಪಾದರಸವೇ ನಾಚುವಂತಹ ಚಾಕಚಕ್ಯತೆಯ ಕಲಾಪ್ರತಿಭೆ
ಸಾಮಾನ್ಯರಲ್ಲಿ ಸಾಮಾನ್ಯನಾಗಿ, ಅಸಮಾನ್ಯ ವ್ಯಕ್ತಿತ್ವವಿರುವ ಈತ ಹಲವಾರು ನಾಟಕ ತಂಡದೊಂದಿಗೆ ತನ್ನನ್ನು ತೊಡಗಿಸಿಕೊಂಡವನು.

*ರಮಾನಂದ ಪೂಜಾರಿ* ಮತ್ತು *ಪುಷ್ಪ* ದಂಪತಿಯ ಮಗನಾಗಿ ಜನಿಸಿದ ಸಂತೋಷ್ ಬಾಲ್ಯದಿಂದಲೇ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡ ಪ್ರತಿಭಾನ್ವಿತ. ಹಾಗಂತ ಪಠ್ಯದ ವಿಚಾರಕ್ಕೆ ಎಂದೂ ಅದು ಅಡ್ಡಿಯಾಗಿರಲಿಲ್ಲ. ಅದಕ್ಕೆ ದ್ಯೋತಕ ಎಂಬಂತೆ ಪಿಯುಸಿ ದಿನಗಳಲ್ಲಿ ಉತ್ತಮ ಅಂಕ ಪಡೆದು ಹಿಂದುಳಿದ ವಿದ್ಯಾರ್ಥಿಗಳ ನಿಲಯದ ಪಟ್ಟಿಯಲ್ಲಿ ಜಿಲ್ಲೆಗೆ ಅಗ್ರಸ್ಥಾನಿಯಾಗಿ ಹೊರಹೊಮ್ಮಿದ ಖ್ಯಾತಿ ಇವರದು. ಹಾಗೂ ಸ್ನಾತಕೋತ್ತರ ಪದವಿಯನ್ನು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಪದವಿಪೂರ್ವ ಮತ್ತು ಪದವಿ ಹಂತದಲ್ಲಿ ಕಾಲೇಜಿನ ‘ಬೆಸ್ಟ್ ಔಟ್ ಗೋಯಿಂಗ್ ಸ್ಟೂಡೆಂಟ್’ ಅವಾರ್ಡ್ ಪಡೆದವರು.

ಕಲೆಯ ಮೇಲೆ ಹೆಚ್ಚಿನ ಒಲವು, ಪ್ರೀತಿ ತೋರಿದ ಇವರು ಜನಪದ ನೃತ್ಯ ಪಟುವಾಗಿ, ಜನಪದ ನೃತ್ಯ ತರಬೇತುದಾರನಾಗಿ ಹಾಗೂ ರಂಗಭೂಮಿ ಕಲಾವಿದನಾಗಿ ಹಲವರು ನಾಟಕಗಳಲ್ಲಿ ಅಭಿನಯಸಿ ಕೀರ್ತಿಗೆ ಪಾತ್ರರದರು. ಬಂಟ್ವಾಳದಲ್ಲಿ ನಡೆಯುವ ಕಲಾಸಿಂಚನದಲ್ಲಿ ಎರಡು ವರ್ಷ ಇವರ ಮುಂದಾಳತ್ವದ ತಂಡ ಜನಪದ ನೃತ್ಯವನ್ನು ಪ್ರದರ್ಶಿಸಿ ಪ್ರಥಮ ಸ್ಥಾನ ಪಡೆದುಕೊಂಡಿರುತ್ತಾರೆ. ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರ ಮಟ್ಟದ ಶಿಬಿರದಲ್ಲಿ ಭಾಗವಹಿಸಿ ಜನಪದ ನೃತ್ಯದ ಸಿಂಚನವನ್ನು ಹೊರರಾಜ್ಯಕ್ಕೂ ಪರಿಚಯಿಸಿದ ಕೀರ್ತಿ ಇವರದ್ದು. ‘ಕರ್ನಾಟಕ ವೈಭವ ‘ಎಂಬ ಹೆಸರಿನ ಮೂಲಕ ಕರ್ನಾಟಕದ ನೃತ್ಯ ಪ್ರಕಾರ, ಜನಪದ ಕಲೆ ಸಂಸ್ಕೃತಿಯನ್ನು ಪರಿಚಯಿಸುವ ಸಲುವಾಗಿ ಒಂದು ತಂಡ ಕಟ್ಟಿ ತರಬೇತಿ ನೀಡಿ ಪ್ರದರ್ಶಿಸಿ ಸೈ ಎನಿಸಿಕೊಂಡಿದ್ದಾರೆ.ಇವರು ರಚಿಸಿ ನಿರ್ದೇಶಿಸಿ ಅಭಿನಯಿಸಿದ ಪ್ರಹಸನ ಹಲವಾರು ಕಡೆ ಪ್ರಥಮ ಸ್ಥಾನ ಗಳಿಸಿರುತ್ತದೆ. ಹಲವು ಬೀದಿ ನಾಟಕಗಳ ಮೂಲಕವೂ ನಿರಂತರವಾಗಿ ಜನರ ಮನಸ್ಸಿನಲ್ಲಿ ಜಾಗೃತಿ ಮೂಡಿಸುತ್ತಾ ಬಂದಿದ್ದಾರೆ.

ರಾಜ್ಯ, ರಾಷ್ಟ್ರಮಟ್ಟದ ಜಾನಪದ, ಸಂಗೀತ ಹಾಗು ಕಲೆಯಲ್ಲಿ ಹಲವು ಪ್ರಶಸ್ತಿಗಳನ್ನು ಪಡೆಯುತ ಮುನ್ನೆಡೆಯುತಿರುವ, ಈ ಯುವ ಪ್ರತಿಭೆಯ ಸಾಧನೆಯನ್ನು ಗುರುತಿಸಿ. ರಾಷ್ಟ್ರ ಮಟ್ಟದ ಪ್ರತಿಭಾ ಪ್ರಶಸ್ತಿ ಪುರಸ್ಕಾರ “ಸಿರಿಗನ್ನಡ ರಾಷ್ಟ್ರೀಯ ಕಲಾ ರತ್ನ” ರಾಷ್ಟ್ರಮಟ್ಟದ ಶ್ರೇಷ್ಟ ಪ್ರಶಸ್ತಿ ನೀಡಿ ಗೌರವಿಸಿದೆ
ಕಲಾಕ್ಷೇತ್ರ ಇವರನ್ನು ಕನ್ನಡ ನಾಡು,ನುಡಿ,ಸೇವೆ,ಶಿಕ್ಷಣ/ಭರತನಾಟ್ಯ,ಸಾಹಿತ್ಯ,ಕಲಾವಿದರ ಮತ್ತು ಸಾಹಿತ್ಯ ಶಿಕ್ಷಣ ಸೇವಾ ಹಾಗೂ ಬಾಲ್ಯದ ಕಲಾ ಚಿಂತನೆಗಳನ್ನು ಗುರುತಿಸಿ ಈ ಪ್ರಶಸ್ತಿಗೆ ಆಯ್ಕೆ ಮಾಡಿಕೊಂಡಿದ್ದಾರೆ
ಪ್ರಸ್ತುತ ಇವರು ಬೆಂಗಳೂರಿನ ಪ್ರತಿಷ್ಠಿತ ಸಂಸ್ಥೆಯಲ್ಲಿ ಕಾರ್ಯ ನಿರ್ವಶಿಸುತಿದ್ದಾರೆ,
ಅನೇಕ ಸಾಮಾಜಿಕ ಸಂಘ ಸಂಸ್ಥೆಗಳಲ್ಲಿ ಸಕ್ರಿಯವಾಗಿ ಸೇವೆ ಸಲ್ಲಿಸುತ್ತಿರುವ ಇವರು ಬೆಂಗಳೂರು ಯುವವಾಹಿನಿ ಕಲೆ ಮತ್ತು ಸಾಹಿತ್ಯ ನಿರ್ದೇಶಕರು ಎನ್ನುದಕ್ಕೆ ಹೆಮ್ಮೆಯಾಗುತಿದೆ.
ಈ ಅಪೂರ್ವ ಕಲಾವಿದನಿಗೆ ಸಹೃದಯಿ ಕಲಾಭಿಮಾನಿಗಳ ಆಶೀರ್ವಾದ ಪ್ರೀತಿ ಸದಾ ಇರಲಿ…ಕಲಾ ಮಾತೆ ಶಾರದೆ ಈತನ ಪ್ರತಿಭೆಯನ್ನು ದಿಗಂತಕ್ಕೇರಿಸಲಿ ಇವರು ಕಲಾ ಕ್ಷೇತ್ರದಲ್ಲಿ ಇನ್ನಷ್ಟ್ಟು ಸಾಧನೆಗಳನ್ನು ಮಾಡಲಿ ಎಂದು ಯುವವಾಹಿನಿ ಬೆಂಗಳೂರು ಘಟಕವು ಹಾರೈಸುತ್ತದೆ.

ಪ್ರಚಾರ ನಿರ್ದೇಶಕರು
ಯುವವಾಹಿನಿ (ರಿ) ಬೆಂಗಳೂರು


Share:

More Posts

Category

Send Us A Message

Related Posts

ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ


Share       ಶ್ರೀ ಗುರು ಸೇವಾ ಸಮಿತಿ ಬಹರೈನ್ ಬಿಲ್ಲವಾಸ್ ಕೂಟದ ವತಿಯಿಂದ 14-02-2025 ರಂದು ಅಧ್ಯಕ್ಷರಾದ ಹರೀಶ್ ಪೂಜಾರಿ ಅವರ ಅಧ್ಯಕ್ಷತೆಯಲ್ಲಿಂದು ಶ್ರೀ ಕ್ಷೇತ್ರ ಗೆಜ್ಜೆಗಿರಿ ಜಾತ್ರೋತ್ಸವದ ಆಮಂತ್ರಣ ಪತ್ರಿಕೆಯನ್ನು ಬಹರೈನ್ ನಲ್ಲಿ ಬಿಡುಗಡೆ


Read More »

ಸರ್ಕಾರಿ ಆಸ್ಪತ್ರೆಗಳಲ್ಲಿದೆ ಗುಣಮಟ್ಟದ ಚಿಕಿತ್ಸೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಶ್ಲಾಘನೆ


Share       ಮಂಗಳೂರು: ಸರ್ಕಾರಿ ಆಸ್ಪತ್ರೆಗಳಲ್ಲೂ ಗುಣಮಟ್ಟದ ಚಿಕಿತ್ಸೆ ಸಿಗುತ್ತದೆ ಎನ್ನುವುದಕ್ಕೆ ವೆನ್ಲಾಕ್ ಆಸ್ಪತ್ರೆ ಉತ್ತಮ ನಿದರ್ಶನ. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ತಾತ್ಸಾರ ಬೇಡ ಎಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪದ್ಮರಾಜ್ ಆರ್. ಪೂಜಾರಿ ಹೇಳಿದರು.


Read More »

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »