TOP STORIES:

FOLLOW US

ಪ್ರತಿಭೆಗಳ ಪರಿಚಯದಲ್ಲಿಂದು ಹೇಳ ಹೊರಟಿರುವುದು ಒಂದೇ ಕುಟುಂಬದ ಇಬ್ಬರು ಕಲಾ ಪ್ರತಿಭೆಗಳ ಕುರಿತು.


ನೆಟ್ಟಣಿಗೆ ,ಮುಳ್ಳೇರಿಯಾದ ರತ್ನಾಕರ್ , ನಿಶಾ ದಂಪತಿಗಳ ಮಕ್ಕಳಾದಂತಹಪ್ರತೀತಿ ಹಾಗೂ ಈಕೆಯ ಅಣ್ಣ ಪ್ರಥಮ್ ಇಬ್ಬರು ಕೂಡ ಬಹುಮುಖ ಪ್ರತಿಭೆಗಳಾಗಿದ್ದು ಕೊಂಡು ಹಲವಾರು ಸಂಘ-ಸಂಸ್ಧೆಗಳಲ್ಲಿ ತಮ್ಮ‌ಕಲಾ ಪ್ರತಿಭೆಯನ್ನು ಪ್ರದರ್ಶಿಸಿರುತ್ತಾರೆ.

ಹೆಸರು: ಪ್ರತೀತಿ ಪೂಜಾರಿ ನೆಟ್ಟಣಿಗೆ ಇವಳು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆ ಈಶ್ವರಮಂಗಳ , ಇಲ್ಲಿ ಎರಡನೇ ತರಗತಿಯಲ್ಲಿ ಕಲಿಯುತ್ತಿದ್ದಾಳೆ..
ಮೊದಲೇ ಹೇಳಿದಂತೆ ಇವಳು ಬಹುಮುಖ ಪ್ರತಿಭೆಯಾಗಿದ್ದುಕೊಂಡು ತಮ್ಮ ಸಣ್ಣ ವಯಸ್ಸಿನಲ್ಲಿಯೇ ನೃತ್ಯ , ಭರತನಾಟ್ಯ , ಯಕ್ಷಗಾನ , ಸಂಗೀತ ದಲ್ಲಿ ಆಸಕ್ತಿ ವಹಿಸಿಕೊಂಡು ಹಲವಾರು ವೇದಿಕೆಯಲ್ಲಿ , ನೃತ್ಯ ಪ್ರದರ್ಶನ ಮಾಡಿದ್ದಾಳೆ.

ಭರತನಾಟ್ಯ ವನ್ನು ವಿದುಷಿ ವಿದ್ಯಾಲಕ್ಷ್ಮಿ ಕುಂಬ್ಲೆ ಇವರಿಂದ ಕಲಿಯುತ್ತಿದ್ದಾಳೆ. ಯಕ್ಷಗಾನವನ್ನು ಗುರುಗಳಾದ ಶಶಿಧರ ಬಜಾಕೆರೆ ಇವರಿಂದ ಅಭ್ಯಾಸಿಸುತ್ತಿದ್ದಾಳೆ. ಈಗಾಗಲೇ “ಗಿರಿಜಾ ಕಲಾಣ್ಯ” ಯಕ್ಷಗಾನದಲ್ಲಿ ಷಣ್ಮುಖ ನಾಗಿಯೂ, “ಮೆದಿನಿ ನಿರ್ಮಾಣ ಮಹಿಷಮರ್ದಿನೀ” ಯಕ್ಷಗಾನದಲ್ಲಿ ಯಕ್ಷನಾಗಿಯೂ ಅದ್ಬುತ ಪ್ರದರ್ಶನವನ್ನು ನೀಡಿರುವುದರ ಮುಖೇನವಾಗಿ ಇವಳ ಈ ಪಾತ್ರವನ್ನು ಮೆಚ್ಚಿ ಸಂಘಸಂಸ್ಥೆಯವರು ಅಭನಂದಿಸಿದ್ದಾರೆ.

ಇದಿಷ್ಟೇ ಅಲ್ಲದೇ ಶಾಲೆಯಲ್ಲಿ ನಡೆಯುವ ಪ್ರತಿಯೊಂದು ಸ್ಬರ್ಧೆಯಲ್ಲಿ ಸ್ವರ್ಧಿಸಿ , ಪ್ರತಿಯೊಂದು ಚಟುವಟಿಕೆಯಲ್ಲಿ ಭಾಗವಹಿಸಿ ಪ್ರಥಮ ಬಹುಮಾನ ಪಡೆದುಕೊಳ್ಳುತ್ತಾಳೆ. ಅಲ್ಲದೇ ಕಲಿಕೆಯಲ್ಲಿಯೂ ಮುಂದಿರುವ ಇವಳು ಆಟೋಟ ದಲ್ಲಿ ಭಾಗವಹಿಸಿ ಬಹುಮಾನ ತನ್ನದಾಗಿಸಿಕೊಂಡಿದ್ದಾಳೆ. Lock down ಸಮಯದಲ್ಲಿ ಒಂದು ವರ್ಷದಿಂದ online ನ ಸ್ಬರ್ಧೆಯಲ್ಲಿಯೂ ಭಾಗವಹಿಸಿರುತ್ತಾಳೆ. ಹೀಗೆ ಗಡಿನಾಡಿನ ಪ್ರತಿಭೆ ಪ್ರತೀತಿಯೂ ಇನ್ನು ಹೆಚ್ಚು ಹೆಚ್ಚು ಸಾಧನೆಯನ್ನು ಮಾಡುವಂತಾಗಲಿ ಶುಭವಾಗಲಿ.

ಹೆಸರು:ಪ್ರಥಮ್ ಪೂಜಾರಿ ನೆಟ್ಟಣಿಗೆ ಇವನು ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಎಂಟನೇ ತರಗತಿಯಲ್ಲಿ ಕಲಿಯುತ್ತಿದ್ದಾನೆ. ಇವನಿಗೆ ದೊಡ್ಡವನಾದ ಮೇಲೆ ಸೇನೆಗೆ ಸೇರಬೇಕೆಂಬ ಕನಸಿದೆ. ಬಹುಮುಖ ಪ್ರತಿಭೆಯಾಗಿ ಗುರುತಿಸಿಕೊಂಡಿರುವ ಪ್ರಥಮ್ ಹಲವಾರು ವೇದಿಕೆಗಳಲ್ಲಿ, ನೃತ್ಯ, ಯಕ್ಷಗಾನ, ಕರಾಟೆ ಕಾರ್ಯಕ್ರಮ ಕೊಟ್ಟಿದ್ದಾನೆ.

ಆಟೋಟದಲ್ಲಿ ಹೆಚ್ಚಿನ ಆಸಕ್ತಿ ಹೊಂದಿದ್ದು.. ತಾಲೂಕು ಮಟ್ಟದಲ್ಲಿ ಭಾಗವಹಿಸಿದ್ದಾನೆ..7ನೇ ತರಗತಿಯಲ್ಲಿ ಶಾಲೆಯಲ್ಲಿ ಚಾಂಪಿಯನ್ ಶಿಪ್ ಪಡೆದು ಕೊಂಡಿದ್ದಾನೆ.. ಇನ್ನೂ ಹಲವಾರು ಚಟುವಟಿಕೆ ಯಲ್ಲೂ ಭಾಗವಹಿಸಿ ಬಹುಮಾನ ಪಡೆದುಕೊಂಡಿದ್ದಾನೆ. Online ನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ದಲ್ಲಿ ಭಾಗವಹಿಸಿದ್ದಾನೆ. ಇನ್ನು ಮುಂದೆಯು ಕೂಡ ಹೆಚ್ಚು ಹೆಚ್ಚು ಸಾಧನೆಯನ್ನು ಮಾಡುವಂತಾಗಲಿ.

ಕಲೆಯನ್ನು ಯಾರು ಪ್ರೀತಿಸುವರೋ , ಕಲೆ ಅವರಿಗೆ ತಾನಾಗಿಯೇ ‌ಒಲಿದು ಬರುತ್ತದೆ.. ಅಂತೆಯೇ ಇಂದು ಈ ಇಬ್ಬರು ಕಲಾ ಪ್ರತಿಭೆಗಳನ್ನು ಪರಿಚಯಿಸುದರ ಜೊತೆಗೆ ಈ ಲೇಖನದ ಮೂಲಕ ಇವರ ಪ್ರತಿಭೆಗೆ ಪ್ರೋತ್ಸಾಹದ ಬೆಳಕಾಗುವ ಉದ್ದೇಶ ವಾಗಿದೆ.


Share:

More Posts

Category

Send Us A Message

Related Posts

ಬಹರೈನ್ ನಲ್ಲಿ ನಡೆದ ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಅಧ್ಯಕ್ಷರಾಗಿ ರಾಜ್ ಕುಮಾರ್ ಆಯ್ಕೆ


Share       ಮುಂಬಯಿ, (ಆರ್‌ಬಿಐ) ಜ.೧೧ : ಅನಿವಾಸಿ ಭಾರತೀಯ ಸಮಿತಿ ಕರ್ನಾಟಕ ಬಹರೈನ್ ಇದರ ನೂತನ ಸಮಿತಿಯ ಪದಗ್ರಹನ ಹಾಗೂ ಕರ್ನಾಟಕ ಸಂಗಮ ಸಾಂಸ್ಕೃತಿಕ ಕಾರ್ಯಕ್ರಮ ಬಹರೈನ್ ನ ದಿ ಇಂಡಿಯಾನ್ ಕ್ಲಬ್ ಸಭಾಂಗಣದಲ್ಲಿ


Read More »

ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ ಆಮಂತ್ರಣ ಬಿಡುಗಡೆ


Share       ಯುವವಾಹಿನಿ(ರಿ) ಕೂಳೂರು ಘಟಕ ಪದಗ್ರಹಣ ಸಮಾರಂಭದಲ್ಲಿ ಗೆಜ್ಜೆಗಿರಿ ಜಾತ್ರಾ ಮಹೋತ್ಸವದ  ಆಮಂತ್ರಣ ಬಿಡುಗಡೆ ಗೆಜ್ಜೆಗಿರಿಯ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಯುವವಾಹಿನಿ ಪದಗ್ರಹಣ ಕಾರ್ಯಕ್ರಮದಲ್ಲಿ ಯುವ ವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷರಾದ ಲೋಕೇಶ್


Read More »

26ರಂದು ದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವಕ್ಕೆ ಪಾಲ್ಗೊಳ್ಳಲು ಕೇಂದ್ರ ಸರಕಾರದಿಂದ ಕೇಶವ ಕೋಟ್ಯಾನ್ ಅವರಿಗೆ ಆಹ್ವಾನ


Share       ಎಲ್ಲರ ಸಹಕಾರದಿಂದ ಸಾಧ್ಯವಾದ ಸಾಧನೆ. 80ನೇ ಬಡಗಬೆಟ್ಟು ವ್ಯಾಪ್ತಿಯಲ್ಲಿ ಮನೆ ಮನೆಗೆ ಕುಡಿಯುವ ನೀರು ಪೊರೈಸುವ ಕೇಂದ್ರ ಸರಕಾರದ ಮಹತ್ವಕಾಂಕ್ಷಿ ಯೋಜನೆಯನ್ನು ಸಮರ್ಥವಾಗಿ ಅನುಷ್ಠಾನ ಮಾಡುವಲ್ಲಿ ಉಡುಪಿ ಜಿಲ್ಲಾ ಪಂಚಾಯತಿ ಅಧಿಕಾರಿಗಳು, ನಮ್ಮಗ್ರಾಮ


Read More »

ಭರತನಾಟ್ಯದಲ್ಲಿ ವಿಧುಷಿ ಎಂಬ ಗೌರವ ಪಡೆದ ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು


Share       ವಿಧುಷಿ ಅದಿತಿ ಪೂಜಾರಿ ಅವರಿಗೆ ಅಭಿನಂದನೆಗಳು  ನಿತ್ಯಾನಂದ ಮತ್ತು ತುಳಸಿಯವರ ಪುತ್ರಿ ಗುರು ವಿಧುಷಿ ಪ್ರತಿಮಾ ಶ್ರೀಧರ್ ಮತ್ತು ಶ್ರೀಧರ ಹೊಳ್ಳ ಅವರ ಮಾರ್ಗದರ್ಶನದಲ್ಲಿ ಭರತಾಂಜಲಿ (ಆರ್) ಕೊಟ್ಟಾರದಲ್ಲಿ ಕಲಿಕೆ ಅದಿತಿ ಅವರು


Read More »

ಅನಿತಾ ಪಿ.ತಾಕೊಡೆಯವರ ಸುವರ್ಣಯುಗ ಕೃತಿಗೆ ಡಾ. ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನ ಮುಂಬಯಿ ವತಿಯಿಂದ “ವಿಕಾಸ ಪುಸ್ತಕ ಬಹುಮಾನ”


Share       ಮುಂಬಯಿ:- ಹಿರಿಯ ಸಾಹಿತಿ, ಲೇಖಕ, ಪ್ರಾಧ್ಯಾಪಕ ಡಾ.ವಿಶ್ವನಾಥ ಕಾರ್ನಾಡ್ ಪ್ರತಿಷ್ಠಾನವು ಮುಂಬಯಿ ಕನ್ನಡ ಪುಸ್ತಕ ಸಂಸ್ಕೃತಿಯನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಕೊಡಮಾಡುತ್ತಾ ಬಂದ ಪುಸ್ತಕ ಬಹುಮಾನ ಯೋಜನೆಯಂತೆ 2023-24ರ ಸಾಲಿನ ವಿಕಾಸ’ ಪುಸ್ತಕ ಬಹುಮಾನಕ್ಕೆ,


Read More »

ಒಮಾನ್ ಬಿಲ್ಲವಾಸ್ ಕೂಟದ ನೂತನ ಅಧ್ಯಕ್ಷರಾಗಿ ಶ್ರೀಯುತ ಉಮೇಶ್ ಬಂಟ್ವಾಳ್ ಆಯ್ಕೆ


Share       ಬಂಟ್ವಾಳದವರಾಗಿರುವ ಉಮೇಶ್ ಬಂಟ್ವಾಳ್ ಅವರು ಮಂಗಳೂರು ವಿಶ್ವವಿದ್ಯಾಲಯ ವಾಣಿಜ್ಯ ಪದವಿಯನ್ನು ಪಡೆದಿದ್ದಾರೆ.   ಮಸ್ಕತ್ ನ ಒಮಾನ್ ದೇಶದಲ್ಲಿ ಸುಮಾರು 36 ವರ್ಷದಿಂದ ಅಲ್ ರ‌‌ವಾಸ್ ಹೋಲ್ಡಿಂಗ್ ಬಿಸಿನೆಸ್ ಕಂಪನಿಯಲ್ಲಿ ಮ್ಯಾನೇಜರ್ ಆಗಿ


Read More »