TOP STORIES:

FOLLOW US

ಪ್ರತಿಷ್ಠಿತ ಬಿಲ್ಲವ ಸಾಧಕರಿಗೆ “ಗುರು ಶ್ರೀ“ ಪ್ರಶಸ್ತಿ ಪ್ರಧಾನ ಮತ್ತು ಗುರು ಜಯಂತಿ


 

ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ದಿನಾಂಕ 9-9-2022 ರಂದು ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು, ಸಭಾ ಕಾರ್ಯಕ್ರಮ ಮತ್ತು ಮಹಾಪೂಜೇಯೊಂದಿಗೆ ಸಂಪನ್ನಗೊಳ್ಳಲಿದೆ.

ನಮ್ಮ ಸಂಘವು ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಬಿಲ್ಲವ ಸಮಾಜದಲ್ಲಿ, ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸೇವೆ ಸಲ್ಲಿಸುತ್ತಿರುವ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ನೀಡುವ ಸನ್ಮಾನದ ಪ್ರಶಸ್ತಿಯೇ “ಗುರು ಶ್ರೀ ‘.. ಪ್ರಸಕ್ತ ಸಾಲಿನಲ್ಲಿ ಐದು ಕ್ಷೇತ್ರವನ್ನು ಆಯ್ಕೆ ಮಾಡಿದ್ದೇವೆ. 1) ಸಹಕಾರ ಕ್ಷೇತ್ರ,2) ಆಧ್ಯಾತ್ಮಿಕ ಕ್ಷೇತ್ರ 3)ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರ 4) ಯುವಜನ ಮತ್ತು ಕ್ರೀಡಾ ಕ್ಷೇತ್ರ,5)ವೈದ್ಯಕೀಯ ಕ್ಷೇತ್ರ (ಮಹಿಳೆ ).

“ ಗುರು ಶ್ರೀ “ ಪ್ರಶಸ್ತಿ ಗೆ ಆಯ್ಕೆ ಯಾದ ಗಣ್ಯರು.

1) ಸಹಕಾರ ಕ್ಷೇತ್ರ : ಶ್ರೀಯುತ ಚಿತ್ತರಂಜನ್ ಬೋಳಾರ್.. ಸ್ಥಾಪಕರು ಆತ್ಮಶಕ್ತಿ ವಿವಿದೊದ್ದೇಶ ಸಹಕಾರಿ ಸಂಘ.

2) ಆಧ್ಯಾತ್ಮಿಕ ಕ್ಷೇತ್ರ: ಶ್ರೀಯುತ ಎ ವಿದ್ಯಾಧರ್..ಅನುವಂಶಿಕ ಆಡಳಿತ ಮೊಕ್ತೆಸರರು, ಶ್ರೀ ಅರಸುಮುಂಡಿತ್ತಾಯ ದೈವಸ್ಥಾನ ಅತ್ತಾವರ.

3) ಕಲೆ ಮತ್ತು ಸಂಸ್ಕೃತಿಕ ಕ್ಷೇತ್ರ.. ಶ್ರೀಯುತ ಅರವಿಂದ್ ಬೋಳಾರ್.. ಭಾರತೀಯ ಚಲನಚಿತ್ರ ನಟ.

 

4) ಯುವಜನ ಮತ್ತು ಕ್ರೀಡಾ ಕ್ಷೇತ್ರ.ಶ್ರೀಯುತ ದೀಪಕ್ ಅಂಚನ್.. ರಾಜ್ಯ ಮಟ್ಟದ ಕುಸ್ತಿ ಪಟು.

 

5) ವೈದ್ಯಕೀಯ ಕ್ಷೇತ್ರ…ಡಾ. ಮನಿಷಾ. ಏನ್. ಅಸೋಸಿಯೇಟ್ ಪ್ರೊಫೆಸರ್ ENT ಡಿಪಾರ್ಟ್ಮೆಂಟ್ ಕೆಎಂಸಿ ಮಂಗಳೂರು.

ಈ ಐವರು ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ವೇದವ್ಯಾಸ ಕಾಮತ್, ಶಾಸಕರು ಮಂಗಳೂರು ದಕ್ಷಿಣ ವಿಧಾನ ಸಭಾ, ಶ್ರೀ ಉಮಾನಾಥ್ ಕೋಟ್ಯಾನ್ ಶಾಸಕರು ಮೂಲ್ಕಿ ಮೂಡಬಿದ್ರಿ,ಶ್ರೀ ಪ್ರೇಮಾನಂದ ಶೆಟ್ಟಿ, ಮೇಯರ್ ಮಂಗಳೂರು ಮಹಾನಗರ ಪಾಲಿಕೆ.ಶ್ರೀ ಪಿ. ರಮಾನಾಥ್ ಹೆಗ್ಡೆ ಆಡಳಿತ ಮೊಕ್ತೇಸರರು ಶ್ರೀ ಮಹೋತೋಭಾರ ಮಂಗಾದೇವಿ.ಶ್ರೀ ಬಿ ಅಶೋಕ್ ಕುಮಾರ್ ಮೊಕ್ತೇಸರರು ಬೋಳಾರ ಮಾರಿಗುಡಿ, ಶ್ರೀ ಆರ್ ಪದ್ಮರಾಜ್ ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ ಮಂಗಳೂರು ಇವರು ಭಾಗಾವಹಿಸಲಿದ್ದಾರೆ.ಬಿಲ್ಲವ ಸಂಘ ಮಂಗಳಾದೇವಿ ವತಿಯಿಂದ ಇದೇ ಕಾರ್ಯಕ್ರಮ ದಲ್ಲಿ ಅಶಕ್ತರಿಗೆ ಸಹಾಯಧನವನ್ನು ನೀಡಲಿದ್ದೇವೆ ಎಂದು ಕಾರ್ಯಕ್ರಮ ಸಂಚಾಲಕರಾದ ಶ್ರೀ ರಾಜರತ್ನ ಸನಿಲ್ ತಿಳಿಸಿದರು. ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ಪೂಜಾರಿ, ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ, ಸದಸ್ಯರಾದ ಶ್ರೀ ಕೀರ್ತಿರಾಜ್, ಶ್ರೀ ಮೋನಪ್ಪ ಹಾಜರಿದ್ದರು. ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ ಸ್ವಾಗತಿಸಿದರು.


Share:

More Posts

Category

Send Us A Message

Related Posts

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »

ಬಿಲ್ಲವ ಸಮಾಜಕ್ಕಾಗಿ ಪಂದ್ಯಾಟದ ಜೊತೆಗೆ ಆರ್ಥಿಕ ಯೋಜನೆಯನ್ನು ರೂಪಿಸಿದ ರುವಾರಿ ವಿಶ್ವನಾಥ ಪೂಜಾರಿ ಕಡ್ತಲ


Share       ಆದರಣೀಯ ಕ್ಷಣಗಳನ್ನು ‌ಮತ್ತೊಮ್ಮೆ ಮರಳಿಸಿ ವಿದೇಶದ  ಮಣ್ಣಲ್ಲೂ ಬಿಲ್ಲವರನ್ನು ಒಗ್ಗೂಡಿಸಿಕೊಂಡು ಒಂದು ಪಂದ್ಯಾಟ ನಡೆಸುವುದು ಕಷ್ಟ ಎಂಬ ಸನ್ನಿವೇಶದಲ್ಲಿ ಮಾಡಿಯೇ ಸಿದ್ಧ ಎಂಬ ಸ್ಪಷ್ಟ ನಿಲುವಿನೊಂದಿಗೆ ಎಲ್ಲರಿಗೂ ಇಷ್ಟವಾಗಿಸಿದ ಕ್ರಿಕೆಟ್ ಪಂದ್ಯಾಟ ಮಾಡಿ


Read More »