TOP STORIES:

FOLLOW US

ಪ್ರತಿಷ್ಠಿತ ಬಿಲ್ಲವ ಸಾಧಕರಿಗೆ “ಗುರು ಶ್ರೀ“ ಪ್ರಶಸ್ತಿ ಪ್ರಧಾನ ಮತ್ತು ಗುರು ಜಯಂತಿ


 

ಬ್ರಹ್ಮ ಶ್ರೀ ನಾರಾಯಣ ಗುರುಗಳ 168 ಜಯಂತಿ ಪ್ರಯುಕ್ತ ಗುರು ಪೂಜೆಯನ್ನು ದಿನಾಂಕ 9-9-2022 ರಂದು ಮಂಗಳಾದೇವಿ ಪ್ರಾಂಗಣ ದಲ್ಲಿ ನಡೆಸಲು ನಿರ್ಧರಿಸಿದ್ದೇವೆ. ಕಾರ್ಯಕ್ರಮವು ಭಜನೆಯೊಂದಿಗೆ ಪ್ರಾರಂಭಗೊಂಡು, ಸಭಾ ಕಾರ್ಯಕ್ರಮ ಮತ್ತು ಮಹಾಪೂಜೇಯೊಂದಿಗೆ ಸಂಪನ್ನಗೊಳ್ಳಲಿದೆ.

ನಮ್ಮ ಸಂಘವು ಪ್ರಪ್ರಥಮ ಬಾರಿಗೆ ಪ್ರತಿಷ್ಠಿತ ಬಿಲ್ಲವ ಸಮಾಜದಲ್ಲಿ, ವಿವಿಧ ಕ್ಷೇತ್ರದಲ್ಲಿ ತನ್ನದೇ ಆದ ಸೇವೆ ಸಲ್ಲಿಸುತ್ತಿರುವ ಗಣ್ಯ ವ್ಯಕ್ತಿಗಳನ್ನು ಗುರುತಿಸಿ ನೀಡುವ ಸನ್ಮಾನದ ಪ್ರಶಸ್ತಿಯೇ “ಗುರು ಶ್ರೀ ‘.. ಪ್ರಸಕ್ತ ಸಾಲಿನಲ್ಲಿ ಐದು ಕ್ಷೇತ್ರವನ್ನು ಆಯ್ಕೆ ಮಾಡಿದ್ದೇವೆ. 1) ಸಹಕಾರ ಕ್ಷೇತ್ರ,2) ಆಧ್ಯಾತ್ಮಿಕ ಕ್ಷೇತ್ರ 3)ಕಲೆ ಮತ್ತು ಸಾಂಸ್ಕೃತಿಕ ಕ್ಷೇತ್ರ 4) ಯುವಜನ ಮತ್ತು ಕ್ರೀಡಾ ಕ್ಷೇತ್ರ,5)ವೈದ್ಯಕೀಯ ಕ್ಷೇತ್ರ (ಮಹಿಳೆ ).

“ ಗುರು ಶ್ರೀ “ ಪ್ರಶಸ್ತಿ ಗೆ ಆಯ್ಕೆ ಯಾದ ಗಣ್ಯರು.

1) ಸಹಕಾರ ಕ್ಷೇತ್ರ : ಶ್ರೀಯುತ ಚಿತ್ತರಂಜನ್ ಬೋಳಾರ್.. ಸ್ಥಾಪಕರು ಆತ್ಮಶಕ್ತಿ ವಿವಿದೊದ್ದೇಶ ಸಹಕಾರಿ ಸಂಘ.

2) ಆಧ್ಯಾತ್ಮಿಕ ಕ್ಷೇತ್ರ: ಶ್ರೀಯುತ ಎ ವಿದ್ಯಾಧರ್..ಅನುವಂಶಿಕ ಆಡಳಿತ ಮೊಕ್ತೆಸರರು, ಶ್ರೀ ಅರಸುಮುಂಡಿತ್ತಾಯ ದೈವಸ್ಥಾನ ಅತ್ತಾವರ.

3) ಕಲೆ ಮತ್ತು ಸಂಸ್ಕೃತಿಕ ಕ್ಷೇತ್ರ.. ಶ್ರೀಯುತ ಅರವಿಂದ್ ಬೋಳಾರ್.. ಭಾರತೀಯ ಚಲನಚಿತ್ರ ನಟ.

 

4) ಯುವಜನ ಮತ್ತು ಕ್ರೀಡಾ ಕ್ಷೇತ್ರ.ಶ್ರೀಯುತ ದೀಪಕ್ ಅಂಚನ್.. ರಾಜ್ಯ ಮಟ್ಟದ ಕುಸ್ತಿ ಪಟು.

 

5) ವೈದ್ಯಕೀಯ ಕ್ಷೇತ್ರ…ಡಾ. ಮನಿಷಾ. ಏನ್. ಅಸೋಸಿಯೇಟ್ ಪ್ರೊಫೆಸರ್ ENT ಡಿಪಾರ್ಟ್ಮೆಂಟ್ ಕೆಎಂಸಿ ಮಂಗಳೂರು.

ಈ ಐವರು ಸಾಧಕರಿಗೆ ಪ್ರಶಸ್ತಿ ನೀಡಲಾಗುವುದು.

ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶ್ರೀ ವೇದವ್ಯಾಸ ಕಾಮತ್, ಶಾಸಕರು ಮಂಗಳೂರು ದಕ್ಷಿಣ ವಿಧಾನ ಸಭಾ, ಶ್ರೀ ಉಮಾನಾಥ್ ಕೋಟ್ಯಾನ್ ಶಾಸಕರು ಮೂಲ್ಕಿ ಮೂಡಬಿದ್ರಿ,ಶ್ರೀ ಪ್ರೇಮಾನಂದ ಶೆಟ್ಟಿ, ಮೇಯರ್ ಮಂಗಳೂರು ಮಹಾನಗರ ಪಾಲಿಕೆ.ಶ್ರೀ ಪಿ. ರಮಾನಾಥ್ ಹೆಗ್ಡೆ ಆಡಳಿತ ಮೊಕ್ತೇಸರರು ಶ್ರೀ ಮಹೋತೋಭಾರ ಮಂಗಾದೇವಿ.ಶ್ರೀ ಬಿ ಅಶೋಕ್ ಕುಮಾರ್ ಮೊಕ್ತೇಸರರು ಬೋಳಾರ ಮಾರಿಗುಡಿ, ಶ್ರೀ ಆರ್ ಪದ್ಮರಾಜ್ ಕೋಶಾಧಿಕಾರಿ ಶ್ರೀ ಗೋಕರ್ಣನಾಥ ದೇವಸ್ಥಾನ ಕುದ್ರೋಳಿ ಮಂಗಳೂರು ಇವರು ಭಾಗಾವಹಿಸಲಿದ್ದಾರೆ.ಬಿಲ್ಲವ ಸಂಘ ಮಂಗಳಾದೇವಿ ವತಿಯಿಂದ ಇದೇ ಕಾರ್ಯಕ್ರಮ ದಲ್ಲಿ ಅಶಕ್ತರಿಗೆ ಸಹಾಯಧನವನ್ನು ನೀಡಲಿದ್ದೇವೆ ಎಂದು ಕಾರ್ಯಕ್ರಮ ಸಂಚಾಲಕರಾದ ಶ್ರೀ ರಾಜರತ್ನ ಸನಿಲ್ ತಿಳಿಸಿದರು. ಬಿಲ್ಲವ ಸಂಘದ ಅಧ್ಯಕ್ಷರಾದ ಶ್ರೀ ಕೃಷ್ಣಪ್ಪ ಪೂಜಾರಿ, ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ, ಸದಸ್ಯರಾದ ಶ್ರೀ ಕೀರ್ತಿರಾಜ್, ಶ್ರೀ ಮೋನಪ್ಪ ಹಾಜರಿದ್ದರು. ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ ಸ್ವಾಗತಿಸಿದರು.


Share:

More Posts

Category

Send Us A Message

Related Posts

ಶ್ರೀ ಸತೀಶ್ ಕುಮಾರ್ ಬಜಾಲ್ ರಿಗೆ “ ಬಿಲ್ಲವ ಸಂಜೀವಿನಿ “ ಬಿರುದು ಗೌರವ ಪ್ರಧಾನ – ಬಿಲ್ಲವ ಸಂಘ ಪುಣೆ


Share       ವರ್ಲ್ಡ್ ಬಿಲ್ಲವಾಸ್ ಪ್ರೀಮಿಯರ್ ಲೀಗ್ 2025 ನ ಅದ್ಭುತ ಕಾರ್ಯಕ್ರಮದಲ್ಲಿ ಸೌಧಿ ಬಿಲ್ಲವಾಸ್ ದಮ್ಮಾಮ್ ಸಂಘದ ಅಧ್ಯಕ್ಷರಾದ ಶ್ರೀ ಸತೀಶ್ ಕುಮಾರ್ ಅಂಚನ್ ಬಜಾಲ್ ರಿಗೆ ಬಿಲ್ಲವ ಸಂಘ ಪುಣೆ ಯು ಅತಿಥಿ


Read More »

ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ


Share       ಮಂಗಳೂರು: ಸಾಧಕರ ಜೊತೆ ಕದ್ರಿ ಶ್ರೀ ಮಂಜುನಾಥ ಕ್ಷೇತ್ರದ ಆಡಳಿತ ಸಮಿತಿಗೆ ನೇಮಕದ ಬಗ್ಗೆ ರಾಜೇಂದ್ರ ಚಿಲಿಂಬಿ ಯವರಿಗೆ ಕಲ್ಕೂರ ಪ್ರತಿಷ್ಠಾನದ ಆತ್ಮೀಯ ಅಭಿನಂದನೆ. ಕಲ್ಕೂರ ಪ್ರತಿಷ್ಠಾನದ ವತಿಯಿಂದ ಯುಗಾದಿ ಮಹೋತ್ಸವ, ವಿಷು


Read More »

ಪೊಲೀಸ್ ಸಬ್ ಇನ್ಸಸ್ಪೆಕ್ಟರ್ ಪ್ರದೀಪ್ ಪೂಜಾರಿಯವರಿಗೆ ಮುಖ್ಯಮಂತ್ರಿ ಚಿನ್ನದ ಪದಕ


Share       ಕೆಯ್ಯೂರು: ಕೆಯ್ಯೂರು ಗ್ರಾಮದ ಪಿ.ಎಸ್.ಐ ಪ್ರದೀಪ್ ಪೂಜಾರಿ 2023ನೇ ವರ್ಷದ ಮುಖ್ಯಮಂತ್ರಿ ಚಿನ್ನದ ಪದಕಕ್ಕೆ ಭಾಜನರಾಗಿದ್ದಾರೆ. ಮೂರನೇ ಬೆಟಾಲಿಯನ್ ಫೆರೆಡ್ ಗ್ರೌಂಡ್ ಕೆಎಸ್ಆರ್ಪಿ  ಕೊರಮಂಗಲ ಬೆಂಗಳೂರಿನಲ್ಲಿ ಎ.2ರಂದು ಪ್ರಶಸ್ತಿ ಪ್ರಧಾನ ನಡೆಯಲಿದೆ ಪ್ರದೀಪ್ ಪೂಜಾರಿ


Read More »

ಕದ್ರಿ ಮಂಜುನಾಥ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಗೆ ರಾಜೇಂದ್ರ ಚಿಲಿಂಬಿ ಆಯ್ಕೆ


Share       ಸಾಮಾಜಿಕ ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಇವರು ಸಲ್ಲಿಸಿರುವ  ಸೇವೆಯನ್ನು ಪರಿಗಣಿಸಿ ಈ ಆಯ್ಕೆ ನಡೆದಿರುತ್ತದೆ. ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ  ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಮಾಧ್ಯಮ ವಕ್ತಾರ, ಮಂಗಳೂರು ಚಿಲಿಂಬಿ ಸ್ವಾಮಿ


Read More »

ಜವಾಹರ್ ಬಾಲ್ ಮಂಚ್ ಇದರ ದಕ್ಷಿಣ ಕನ್ನಡ ಜಿಲ್ಲಾ ಮುಖ್ಯ ಸಂಯೋಜಕರಾಗಿ ನ್ಯಾಯವಾದಿ ಶ್ರೀಮತಿ ಶೈಲಜಾ ರಾಜೇಶ್ ಆಯ್ಕೆ


Share       ಬಂಟ್ವಾಳ : ಕರ್ನಾಟಕ ಸರ್ಕಾರದ ಪ್ರತಿಷ್ಟಿತ ಕಿತ್ತೂರು ರಾಣಿ ಚೆನ್ನಮ್ಮ ಪುರಸ್ಕೃತರು, ವಾತ್ಸಲ್ಯಮಯಿ ಮಹಿಳಾ ಅಭಿವೃದ್ಧಿ ಮತ್ತು ಸಂಶೋಧನಾ ಸಂಸ್ಥೆ ರಿ ಇದರ ಸಂಸ್ಥಾಪಕರು, ಬಂಟ್ವಾಳ ತಾಲೂಕು ಬಿಲ್ಲವ ಮಹಿಳಾ ಸಮಿತಿಯ ಅಧ್ಯಕ್ಷೆ,


Read More »

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »