TOP STORIES:

FOLLOW US

ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ .


ಅಗಣಿತ ಮಹಿಮಾನ್ವಿತರಾದ ಕೋಟಿ ಚೆನ್ನಯರು ಹಾಗೂ ಮಾತೆ ದೇಯಿ ಬೈದೆತಿಯ ಪುಣ್ಯ ನೆಲೆಯಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯು ಸಮಸ್ತ ಆಸ್ತಿಕ ಬಂಧುಗಳ ಭಕ್ತಿ,ಶ್ರದ್ದೆ,ಇಚ್ಚಾಶಕ್ತಿಯ ಕ್ಷೇತ್ರವೆನಿಸಿ ಅಭೂತಪೂರ್ವ ಜೀರ್ಣೊದ್ದಾರದೊಂದಿಗೆ ಕಂಗೊಳಿಸುತ್ತಿರುವುದು ಧನ್ಯ ಸಂಗತಿ.ವಿಶ್ವ ಬಿಲ್ಲವರ ಸ್ವಾಭಿಮಾನದ ಪ್ರತೀಕವೆಂಬಂತೆ ಈ ಸ್ಥಾನ ಬಿಂಬಿತಗೊಂಡಿದ್ದೂ ಹೆಮ್ಮೆಯ ಅಂಶ.ಸಮಸ್ತ ಭಕ್ತರ ಪವಿತ್ರ ತಾಣವಾಗಿ ದಿನದಿಂದ ದಿನಕ್ಕೆ ಉತ್ತುಂಗ ಸ್ಥಿತಿಯಲ್ಲಿದ್ದ ಇಲ್ಲಿ ಪ್ರಸಕ್ತ ಆಡಳಿತಾತ್ಮಕ ವಿಚಾರದಲ್ಲಿ ನ್ಯಾಯಾಲಯದವರೆಗೆ ಹೋಗಿರುವಂತದ್ದು ಖೇಧಕರ.
ಅಭಿಪ್ರಾಯ ವ್ಯತ್ಯಾಸ ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿ ಮತ್ತು ಎಲ್ಲರಲ್ಲಿ ಇರುವಂತದ್ದೆ.ಆದರೆ ಅದನ್ನೆ ಮುಖ್ಯವಾಗಿಸಿಕೊಂಡು ಹಠವಾದಿತನದ ಧೋರಣೆಯು ಸಮಸ್ತ ಭಕ್ತರಿಗೆ ಹಾಗೂ ಸಮಾಜಬಾಂಧವರಿಗೆ ನೋವಿನ ಸಂಗತಿ.ಇಡೀ ಸಮಾಜ ಹಲವಾರು ಒಳಿತಿನ ನಿರೀಕ್ಷೆಗಳನ್ನಿಟ್ಟುಕೊಂಡು ಮತ್ತು ಭಕ್ತಿಯ ನೆಲೆಯಲ್ಲಿ ತನುಮನಧನ ಸಹಕಾರ ನೀಡಿದ ಐತಿಹಾಸಿಕ ಸಂದರ್ಭಗಳನ್ನು ಮತ್ತು ಭವ್ಯ ಸಮಾರಂಭಗಳನ್ನು ಮರೆತು ಇದೀಗ ಪ್ರತಿಷ್ಠೆ ಮೆರೆಯಲು ಪ್ರಯತ್ನಿಸುತ್ತಿರುವುದು ಉತ್ತಮ ಬೆಳವಣಿಗೆಯಲ್ಲ.ನ್ಯಾಯಾಲಯ ಎಂದಾಕ್ಷಣ ಅಲ್ಲಿ ನಿಯಮಾನುಸಾರವಾಗಿ ವಾದ ಪ್ರತಿವಾದದ ಬೆಳವಣಿಗೆಗಳು ಯಾವ ದಿನ ಕೊನೆಯಾಗುತ್ತದೆ ಎಂಬುದು ಸ್ಪಷ್ಟವಿಲ್ಲದ ವಿಚಾರ.ಆದುದರಿಂದ ನಮ್ಮ ಮುಖಂಡರುಗಳಾಗಲಿ,ಸ್ಥಳಕ್ಕೆ ಸಂಬಂಧ ಪಟ್ಟವರಾಗಲಿ ಎಲ್ಲಾ ಆತುರ, ಆಕ್ರೋಶಗಳನ್ನು ಕರಗಿಸಿಕೊಂಡು ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ ಎಲ್ಲ ಭಿನ್ನಮತಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದು ಸಮಂಜಸವಾಗಿದೆ.ಒಂದಷ್ಟು ಗೊಂದಲ ಹಾಗೂ ತಪ್ಪು ಸಂದೇಶಗಳು ಸಾರ್ವತ್ರಿಕಗೊಳ್ಳುವ ಮುಂಚೆಯೆ ನಮ್ಮ ನಡುವಿನ,ಸಹಮತ, ಸಹೋದರತ್ವ ಸಾಬೀತಾಗಲಿ.ನಾವೆಲ್ಲರೂ ಒಗ್ಗೂಡಿಕೊಂಡು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗೋಣ

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ).


Share:

More Posts

Category

Send Us A Message

Related Posts

ಬಿರುವೆರ್ ಕುಡ್ಲ ಸಂಘಟನೆಯಿಂದ ಯುವವಾಹಿನಿಗೆ ಗೌರವದ ಸನ್ಮಾನ.. ಕೇಂದ್ರ ಸಮಿತಿಯ ಅಧ್ಯಕ್ಷರಾದ ಹರೀಶ್ ಕೆ ಪೂಜಾರಿ ಸನ್ಮಾನ ಸ್ವೀಕಾರ


Share       ಮಂಗಳೂರು : ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರ ಬಿರುವೆರ್ ಕುಡ್ಲ(ರಿ) ಮಂಗಳೂರು ಸಂಘಟನಯ ದಶಮಾನೋತ್ಸವದ ಸವಿನೆನಪಿಗಾಗಿ, ರಾಜ್ಯದ ಪ್ರತಿಷ್ಠಿತ ಯುವವಾಹಿನಿ ಸಂಸ್ಥೆಯು ಕಳೆದ 36 ವರ್ಷಗಳ ಸಮಾಜಮುಖಿ ಸೇವೆಯನ್ನು ಗುರುತಿಸಿ ಗೌರವಿಸಿ ಗೌರವದ


Read More »

ದೇಯಿ ಬೈದೆತಿ- ಕೋಟಿ ಚೆನ್ನಯರ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿ ಎಂಬ ಪುಣ್ಯಭೂಮಿ


Share       ಗೆಜ್ಜೆಗಿರಿ ನಂದನ ಬಿತ್ತಲ್ ಎಂಬ ಹೆಸರು ಕೇಳುತ್ತಿದ್ದಂತೆ ಮೈ ರೋಮಾಂಚನಗೊಳ್ಳುತ್ತದೆ. ಕ್ಷೇತ್ರದ ಇತಿಹಾಸವನ್ನು ಕೇಳುವಾಗ ಅವಳಿ ವೀರಪುರುಷರ ಮೂಲಸ್ಥಾನ ಯಾವುದು ಎಂಬ ಪ್ರಶ್ನೆಗೂ ಉತ್ತರ ಸಿಗುತ್ತದೆ. ಅಂತಹ ಪುಣ್ಯ-ಪವಿತ್ರ ಭೂಮಿಯಲ್ಲಿ ದೇಯಿ ಬೈದೈತಿ


Read More »

” ನವ ಕರ್ನಾಟಕ ರತ್ನ ” ಪ್ರಶಸ್ತಿಗೆ ಸತೀಶ್ ಕುಮಾರ್ ಬಜಾಲ್ ಆಯ್ಕೆ


Share       ಬೆಂಗಳೂರು: ವಿದೇಶಗಳಲ್ಲಿ ನೆಲೆಸಿರುವ ಕನ್ನಡಿಗರನ್ನು ಒಂದುಗೂಡಿಸುವ ಉದ್ದೇಶದಿಂದ ಇದೇ ಮೊದಲ ಬಾರಿಗೆ ಅ. 4 ಮತ್ತು 5ರಂದು ಬೆಂಗಳೂರಿನಲ್ಲಿ ಅನಿವಾಸಿ ಕನ್ನಡಿಗರ ಸಮ್ಮೇಳನವನ್ನು ಆಯೋಜಿಸಲಾಗಿದ್ದು, ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ನಡೆಯಲಿದ್ದು. ಅಂದು


Read More »

ಊದುಪೂಜೆಯಲ್ಲಿ ಪಿಲಿಯಾವೇಶ ಎಷ್ಟು ಸರಿ?


Share       ಇನ್ನು ಪಿಲಿಕೋಲ ನೋಡಲು ವರ್ಷಕ್ಕೊಮ್ಮೆ ಕಾಪುವಿಗೆ ಹೋಗಬೇಕಾಗಿಲ್ಲ. ಅಷ್ಟಮಿ, ಚೌತಿ, ಮಾರ್ನೆಮಿಗಳಲ್ಲಿ ನಮ್ಮೂರಿನಲ್ಲೂ ಪಿಲಿಕೋಲಗಳು ಆರಂಭವಾಗಿವೆ. ಹಿಂದೆ ಅಪೂರ್ವವಾಗಿ ಎಲ್ಲಾದರೂ ಒಂದು ಕಡೆ ಊದುಹಾಕುವಾಗ ವೇಷಸಂಕಲ್ಪಿಸಿಕೊಂಡವನಿಗೆ ಆವೇಶ ಆಗುವುದಿತ್ತು. ಹೀಗೆ ಆವೇಶವಾಗುವುದು ಶುಭಲಕ್ಷಣ


Read More »

ದುಬೈ: ದುಬೈ ಬಿಲ್ಲವಸ್ ಫ್ಯಾಮಿಲಿ ವತಿಯಿಂದ ನಡೆದ 170 ನೇ ಬ್ರಹ್ಮ ಶ್ರೀ ನಾರಾಯಣ ಗುರುಜಯಂತಿ


Share       ದುಬೈ: ಬಿಲ್ಲವಸ್ ಫ್ಯಾಮಿಲಿ ದುಬೈ ಇವರ ವತಿಯಿಂದ ಬ್ರಹ್ಮ ಶ್ರೀ ನಾರಾಯಣ ಗುರುವರ್ಯರ 170 ನೇ ಗುರು ಜಯಂತಿಯು ದುಬೈ ನ ಗ್ಲೆಂಡಲೆ ಇಂಟರ್ ನ್ಯಾಷನಲ್ ಸ್ಕೂಲ್ ನಲ್ಲಿ  ಭಾನುವಾರದಂದು ವಿಜೃಂಭಣೆಯಿಂದ ನಡೆಯಿತು.


Read More »

ಸಾಲುಮರದ ತಿಮ್ಮಕ್ಕ ಪ್ರಶಸ್ತಿ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಆಯ್ಕೆಯಾದ ಧನ್ವಿ ಪೂಜಾರಿ


Share       ಮರವಂತೆ : ಈ ಬಾರಿಯ ಸಾಲುಮರದ ತಿಮ್ಮಕ್ಕ ನ್ಯಾಷನಲ್ ಗ್ರೀನರಿ ಬಾಲ ಪುರಸ್ಕಾರ 2024 ಪ್ರಶಸ್ತಿಗೆ ಮರವಂತೆಯ ಧನ್ವಿ ಪೂಜಾರಿ ಆಯ್ಕೆಯಾಗಿದ್ದಾರೆ. ಮರವಂತೆಯ ಜ್ಯೋತಿ ಚಂದ್ರಶೇಖರ ಪೂಜಾರಿ ಇವರ ಪುತ್ರಿಯಾಗಿದ್ದು ಪ್ರಸ್ತುತ ಜನತಾ


Read More »