TOP STORIES:

FOLLOW US

ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ .


ಅಗಣಿತ ಮಹಿಮಾನ್ವಿತರಾದ ಕೋಟಿ ಚೆನ್ನಯರು ಹಾಗೂ ಮಾತೆ ದೇಯಿ ಬೈದೆತಿಯ ಪುಣ್ಯ ನೆಲೆಯಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯು ಸಮಸ್ತ ಆಸ್ತಿಕ ಬಂಧುಗಳ ಭಕ್ತಿ,ಶ್ರದ್ದೆ,ಇಚ್ಚಾಶಕ್ತಿಯ ಕ್ಷೇತ್ರವೆನಿಸಿ ಅಭೂತಪೂರ್ವ ಜೀರ್ಣೊದ್ದಾರದೊಂದಿಗೆ ಕಂಗೊಳಿಸುತ್ತಿರುವುದು ಧನ್ಯ ಸಂಗತಿ.ವಿಶ್ವ ಬಿಲ್ಲವರ ಸ್ವಾಭಿಮಾನದ ಪ್ರತೀಕವೆಂಬಂತೆ ಈ ಸ್ಥಾನ ಬಿಂಬಿತಗೊಂಡಿದ್ದೂ ಹೆಮ್ಮೆಯ ಅಂಶ.ಸಮಸ್ತ ಭಕ್ತರ ಪವಿತ್ರ ತಾಣವಾಗಿ ದಿನದಿಂದ ದಿನಕ್ಕೆ ಉತ್ತುಂಗ ಸ್ಥಿತಿಯಲ್ಲಿದ್ದ ಇಲ್ಲಿ ಪ್ರಸಕ್ತ ಆಡಳಿತಾತ್ಮಕ ವಿಚಾರದಲ್ಲಿ ನ್ಯಾಯಾಲಯದವರೆಗೆ ಹೋಗಿರುವಂತದ್ದು ಖೇಧಕರ.
ಅಭಿಪ್ರಾಯ ವ್ಯತ್ಯಾಸ ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿ ಮತ್ತು ಎಲ್ಲರಲ್ಲಿ ಇರುವಂತದ್ದೆ.ಆದರೆ ಅದನ್ನೆ ಮುಖ್ಯವಾಗಿಸಿಕೊಂಡು ಹಠವಾದಿತನದ ಧೋರಣೆಯು ಸಮಸ್ತ ಭಕ್ತರಿಗೆ ಹಾಗೂ ಸಮಾಜಬಾಂಧವರಿಗೆ ನೋವಿನ ಸಂಗತಿ.ಇಡೀ ಸಮಾಜ ಹಲವಾರು ಒಳಿತಿನ ನಿರೀಕ್ಷೆಗಳನ್ನಿಟ್ಟುಕೊಂಡು ಮತ್ತು ಭಕ್ತಿಯ ನೆಲೆಯಲ್ಲಿ ತನುಮನಧನ ಸಹಕಾರ ನೀಡಿದ ಐತಿಹಾಸಿಕ ಸಂದರ್ಭಗಳನ್ನು ಮತ್ತು ಭವ್ಯ ಸಮಾರಂಭಗಳನ್ನು ಮರೆತು ಇದೀಗ ಪ್ರತಿಷ್ಠೆ ಮೆರೆಯಲು ಪ್ರಯತ್ನಿಸುತ್ತಿರುವುದು ಉತ್ತಮ ಬೆಳವಣಿಗೆಯಲ್ಲ.ನ್ಯಾಯಾಲಯ ಎಂದಾಕ್ಷಣ ಅಲ್ಲಿ ನಿಯಮಾನುಸಾರವಾಗಿ ವಾದ ಪ್ರತಿವಾದದ ಬೆಳವಣಿಗೆಗಳು ಯಾವ ದಿನ ಕೊನೆಯಾಗುತ್ತದೆ ಎಂಬುದು ಸ್ಪಷ್ಟವಿಲ್ಲದ ವಿಚಾರ.ಆದುದರಿಂದ ನಮ್ಮ ಮುಖಂಡರುಗಳಾಗಲಿ,ಸ್ಥಳಕ್ಕೆ ಸಂಬಂಧ ಪಟ್ಟವರಾಗಲಿ ಎಲ್ಲಾ ಆತುರ, ಆಕ್ರೋಶಗಳನ್ನು ಕರಗಿಸಿಕೊಂಡು ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ ಎಲ್ಲ ಭಿನ್ನಮತಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದು ಸಮಂಜಸವಾಗಿದೆ.ಒಂದಷ್ಟು ಗೊಂದಲ ಹಾಗೂ ತಪ್ಪು ಸಂದೇಶಗಳು ಸಾರ್ವತ್ರಿಕಗೊಳ್ಳುವ ಮುಂಚೆಯೆ ನಮ್ಮ ನಡುವಿನ,ಸಹಮತ, ಸಹೋದರತ್ವ ಸಾಬೀತಾಗಲಿ.ನಾವೆಲ್ಲರೂ ಒಗ್ಗೂಡಿಕೊಂಡು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗೋಣ

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ).


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »