TOP STORIES:

ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ .


ಅಗಣಿತ ಮಹಿಮಾನ್ವಿತರಾದ ಕೋಟಿ ಚೆನ್ನಯರು ಹಾಗೂ ಮಾತೆ ದೇಯಿ ಬೈದೆತಿಯ ಪುಣ್ಯ ನೆಲೆಯಾದ ಶ್ರೀ ಕ್ಷೇತ್ರ ಗೆಜ್ಜೆಗಿರಿಯು ಸಮಸ್ತ ಆಸ್ತಿಕ ಬಂಧುಗಳ ಭಕ್ತಿ,ಶ್ರದ್ದೆ,ಇಚ್ಚಾಶಕ್ತಿಯ ಕ್ಷೇತ್ರವೆನಿಸಿ ಅಭೂತಪೂರ್ವ ಜೀರ್ಣೊದ್ದಾರದೊಂದಿಗೆ ಕಂಗೊಳಿಸುತ್ತಿರುವುದು ಧನ್ಯ ಸಂಗತಿ.ವಿಶ್ವ ಬಿಲ್ಲವರ ಸ್ವಾಭಿಮಾನದ ಪ್ರತೀಕವೆಂಬಂತೆ ಈ ಸ್ಥಾನ ಬಿಂಬಿತಗೊಂಡಿದ್ದೂ ಹೆಮ್ಮೆಯ ಅಂಶ.ಸಮಸ್ತ ಭಕ್ತರ ಪವಿತ್ರ ತಾಣವಾಗಿ ದಿನದಿಂದ ದಿನಕ್ಕೆ ಉತ್ತುಂಗ ಸ್ಥಿತಿಯಲ್ಲಿದ್ದ ಇಲ್ಲಿ ಪ್ರಸಕ್ತ ಆಡಳಿತಾತ್ಮಕ ವಿಚಾರದಲ್ಲಿ ನ್ಯಾಯಾಲಯದವರೆಗೆ ಹೋಗಿರುವಂತದ್ದು ಖೇಧಕರ.
ಅಭಿಪ್ರಾಯ ವ್ಯತ್ಯಾಸ ಸಾಮಾನ್ಯವಾಗಿ ಎಲ್ಲಾ ಕಡೆಗಳಲ್ಲಿ ಮತ್ತು ಎಲ್ಲರಲ್ಲಿ ಇರುವಂತದ್ದೆ.ಆದರೆ ಅದನ್ನೆ ಮುಖ್ಯವಾಗಿಸಿಕೊಂಡು ಹಠವಾದಿತನದ ಧೋರಣೆಯು ಸಮಸ್ತ ಭಕ್ತರಿಗೆ ಹಾಗೂ ಸಮಾಜಬಾಂಧವರಿಗೆ ನೋವಿನ ಸಂಗತಿ.ಇಡೀ ಸಮಾಜ ಹಲವಾರು ಒಳಿತಿನ ನಿರೀಕ್ಷೆಗಳನ್ನಿಟ್ಟುಕೊಂಡು ಮತ್ತು ಭಕ್ತಿಯ ನೆಲೆಯಲ್ಲಿ ತನುಮನಧನ ಸಹಕಾರ ನೀಡಿದ ಐತಿಹಾಸಿಕ ಸಂದರ್ಭಗಳನ್ನು ಮತ್ತು ಭವ್ಯ ಸಮಾರಂಭಗಳನ್ನು ಮರೆತು ಇದೀಗ ಪ್ರತಿಷ್ಠೆ ಮೆರೆಯಲು ಪ್ರಯತ್ನಿಸುತ್ತಿರುವುದು ಉತ್ತಮ ಬೆಳವಣಿಗೆಯಲ್ಲ.ನ್ಯಾಯಾಲಯ ಎಂದಾಕ್ಷಣ ಅಲ್ಲಿ ನಿಯಮಾನುಸಾರವಾಗಿ ವಾದ ಪ್ರತಿವಾದದ ಬೆಳವಣಿಗೆಗಳು ಯಾವ ದಿನ ಕೊನೆಯಾಗುತ್ತದೆ ಎಂಬುದು ಸ್ಪಷ್ಟವಿಲ್ಲದ ವಿಚಾರ.ಆದುದರಿಂದ ನಮ್ಮ ಮುಖಂಡರುಗಳಾಗಲಿ,ಸ್ಥಳಕ್ಕೆ ಸಂಬಂಧ ಪಟ್ಟವರಾಗಲಿ ಎಲ್ಲಾ ಆತುರ, ಆಕ್ರೋಶಗಳನ್ನು ಕರಗಿಸಿಕೊಂಡು ಪ್ರಾತಃಸ್ಮರಣೀಯ ದೇಯಿಬೈದೆತಿ,ಕೋಟಿಚೆನ್ನಯರ ಕಾರ್ಣಿಕಕ್ಕೆ ಶರಣಾಗಿ ಎಲ್ಲ ಭಿನ್ನಮತಗಳನ್ನು ಸೌಹಾರ್ದಯುತವಾಗಿ ಬಗೆಹರಿಸಿಕೊಳ್ಳುವುದು ಸಮಂಜಸವಾಗಿದೆ.ಒಂದಷ್ಟು ಗೊಂದಲ ಹಾಗೂ ತಪ್ಪು ಸಂದೇಶಗಳು ಸಾರ್ವತ್ರಿಕಗೊಳ್ಳುವ ಮುಂಚೆಯೆ ನಮ್ಮ ನಡುವಿನ,ಸಹಮತ, ಸಹೋದರತ್ವ ಸಾಬೀತಾಗಲಿ.ನಾವೆಲ್ಲರೂ ಒಗ್ಗೂಡಿಕೊಂಡು ಒಳ್ಳೆಯ ಬೆಳವಣಿಗೆಗೆ ಸಾಕ್ಷಿಯಾಗೋಣ

ಪ್ರವೀಣ್ ಎಂ ಪೂಜಾರಿ
ಅಧ್ಯಕ್ಷರು
ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ(ರಿ).


Related Posts

ಸ್ವಾಮಿಗಳ ಚಿತ್ರ ಮತ್ತು ಪ್ರತಿಮೆಯ ಮುಂದೆ ರಾಜ್ಯಪಾಲರೊಂದಿಗೆ ಇರುವ ಚಿತ್ರ


Share         ಶಿವಗಿರಿ: ರಾಜ್ಯಪಾಲ ಆರ್.ವಿ. ಅರ್ಲೆಕ್ಕರ್ ಅವರು ರಾಜಭವನದ ಅತಿಥಿ ಕೊಠಡಿಯಲ್ಲಿ ಶ್ರೀ ನಾರಾಯಣ ಗುರುಗಳ ಚಿತ್ರ ಮತ್ತು ಕಂಚಿನ ಪ್ರತಿಮೆಯನ್ನು ಸ್ವಾಮಿಗಳಿಗೆ ತೋರಿಸಿದರು. ಅತಿಥಿ ಕೊಠಡಿಯನ್ನು ಪ್ರವೇಶಿಸುವಾಗ ಮೊದಲು ನೋಡುವುದು ಗುರುಗಳ ಚಿತ್ರ.


Read More »

ಕವಿ ಗವಿಸಿದ್ದ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ “ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಬಿಡುಗಡೆ


Share         ಅ.26: ಕವಿ ಗವಿಸಿದ್ಧ ಎನ್. ಬಳ್ಳಾರಿ ಸಾಹಿತ್ಯೋತ್ಸವದಲ್ಲಿ ಅನಿತಾ ಪಿ. ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ಕವನ ಸಂಕಲನ ಬಿಡುಗಡೆ, ಪ್ರಶಸ್ತಿ ಪ್ರದಾನ,ಸಾಹಿತ್ಯ ಚರ್ಚೆ ಮುಂಬಯಿ, ಅ.23-  ಖ್ಯಾತ ಬಂಡಾಯ ಕವಿ ಗವಿಸಿದ್ದ ಎನ್. ಬಳ್ಳಾರಿ


Read More »

ಮಂಗಳೂರು: ಅಳದಂಗಡಿಯ ಶ್ರೀಮತಿ ಅನುಷಾ ಪ್ರಸಾದ್ ಪೂಜಾರಿ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ


Share         ಮಣಿಪಾಲ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ (Manipal Institute of Technology, Manipal) ನ ಗಣಿತಶಾಸ್ತ್ರ ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ ಅನುಷಾ ಎಲ್ ಅವರು ಮಂಡಿಸಿದ “A study on N-Covering


Read More »

ಬ್ರಿಟನ್ ಬಿಲ್ಲವ ಬಳಗ ಯುಕೆ ದೇಶದಲ್ಲಿ ಉತ್ಸಾಹದಿಂದ ಉದ್ಘಾಟನಾ ಸಮಾರಂಭವನ್ನು ಆಯೋಜಿಸಿದೆ.


Share         ಬ್ರಿಟನ್ ಬಿಲ್ಲವ ಬಳಗ ಯುಕೆಯ ಉದ್ಘಾಟನಾ ಸಮಾರಂಭವು ಸೆಪ್ಟೆಂಬರ್ 13 ರ ಶನಿವಾರದಂದು ಕೋವೆಂಟ್ರಿ ಹಾಲಿಡೇ ಇನ್ ಎಕ್ಸ್‌ಪ್ರೆಸ್ ಹೋಟೆಲ್‌ನಲ್ಲಿ ಸಂಘದ ಆಯ್ಕೆಯಾದ ಅಧ್ಯಕ್ಷ ಡಾ. ಪಿ.ಕೆ. ಮನೋಜ್ ಪೂಜಾರಿ ಅವರ ನೇತೃತ್ವದಲ್ಲಿ


Read More »

ಬಾರ್ಕೂರು ನಾಗರ ಮಠದ ಕ್ರೀಡಾ ಬಹು ಮುಖ ಪ್ರತಿಭೆಯ ಧನ್ವಿತಪೂಜಾರಿ ಧನ್ವಿತಪೂಜಾರಿ ಅವರಿಗೆ ಮೂರು ಪ್ರಶಸ್ತಿಗಳ ಗರಿ


Share         ಜನತಾ ಪದವಿ ಪೂರ್ವ ಕಾಲೇಜು ಹೆಮ್ಮಾಡಿ ಕಿರಿಮಂಜೇಶ್ವರ ಜನತಾ ನ್ಯೂ ಇಂಗ್ಲಿಷ್ ಮೀಡಿಯಂ ಕಿರಿ, ಮಂಜೇಶ್ವರ ಶಾಲಾ ಶಿಕ್ಷಣ ಇಲಾಖೆ ಪದವಿ ಪೂರ್ವ ಉಡುಪಿ ಜಿಲ್ಲೆ ಇವರ ಆಶ್ರಯದಲ್ಲಿ  ದಿನಾಂಕ 30-08-2025 ರಂದು


Read More »

ಸತತ 216 ಗಂಟೆಗಳ ಭರತನಾಟ್ಯ ಮಾಡುವುದರ ಮೂಲಕ ಗೋಲ್ಡನ್ ಬುಕ್ ವಲ್ಡ್ ರೆಕಾರ್ಡ್ ನಲ್ಲಿ ತನ್ನ ಹೆಸರನ್ನು ಬರೆಸಿಕೊಂಡ ನವರಸಧಾರ ದೀಕ್ಷಾ. ವಿ


Share         ದೀಕ್ಷಾ ವಿ. ಅವರ ಜೀವನವು ಕಲೆಯ ತಪಸ್ಸಿನ ಜೀವಂತ ಪ್ರತೀಕವಾಗಿದೆ. ತಂದೆ ಶ್ರೀ ವಿಠಲ್ ಪೂಜಾರಿ ಮತ್ತು ತಾಯಿ ಶುಭಾ ವಿಠಲ್ ಅವರ ಮಗಳಾದ ಅವರು, ಬಾಲ್ಯದಿಂದಲೇ ಕಲೆಯ ಕಡೆ ಮನಸ್ಸು ತಿರುಗಿಸಿಕೊಂಡಿದ್ದರು.


Read More »