TOP STORIES:

FOLLOW US

ಫ್ರೆಂಡ್ಸ್ ಬಲ್ಲಾಳ್ ಬಾಗ್ “ಬಿರುವೆರ್ ಕುಡ್ಲದ ” ಉದಯಣ್ಣ ಓರ್ವ ವ್ಯಕ್ತಿಯಲ್ಲ ಸಮಾಜದ ಶಕ್ತಿ..


ಒಂದೇ ಜಾತಿ ಒಂದೇ ಮತ ಒಂದೇ ದೇವರುಎಂಬ ನೀತಿ ಸಂದೇಶವನ್ನು ವಿಶ್ವಕ್ಕೆ ಸಾರಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣಗುರುಗಳ ತತ್ವಾದರ್ಶವನ್ನು ಪಾಲಿಸಿಕೊಂಡು ಜನ ಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಕರುಣೆ ಮಮತೆಯ ದೀವಿಗೆಯಾಗಿ ಸಮಾಜಸೇವೆಯನ್ನೇ ತನ್ನ ಉಸಿರಾಗಿಸಿಕೊಂಡು ಪರರ ನೋವು ನಲಿವುಗಳಿಗೆ ಧ್ವನಿಯಾಗಿ ಕಷ್ಟ ಎಂದು ಕಂಬನಿ ಮಿಡಿಯುವ ಮನಗಳಿಗೆಅವರ ಕಣ್ಣೀರೋರೆಸಿ ಮನ  ಮನೆಯಲ್ಲಿ ನಂದಾದೀಪ ಬೆಳಗಿಸಿದವೇ ನಮ್ಮ ಪ್ರೀತಿಯ ಬಿರುವೆರ್ ಕುಡ್ಲ ಸಂಘಟನೆಯ ರೂವಾರಿಉದಯ ಪೂಜಾರಿ ಬಲ್ಲಾಳ್ ಬಾಗ್.

ಆಡಡೆಲೆ ಮಾಡುವವನು ರೂಢಿಯೊಳಗುತ್ತಮಎನ್ನುವ ಸರ್ವಜ್ಞನ ಸಾರದಂತೆ ಯಾವುದೇ ಸದ್ದುಗದ್ದಲವಿಲ್ಲದೆ ಸಮಾಜದಸೇವೆಗಾಗಿ ತನ್ನ ಜೀವನವನ್ನು ಮುಡಿಪಾಗಿಟ್ಟವರು. ಮಾತ್ರವಲ್ಲದೆ ಸಮಾಜ ಒದಗಿಸಿರೋ ಅವಕಾಶವನ್ನು ಸಮಾಜದ ಸೇವೆಗಾಗಿಮೀಸಲಾಗಿಟ್ಟವರು.

ಬಿರುವೆರ್ ಕುಡ್ಲ ಸ್ಥಾಪನೆಯಾಗಿ 7ವರ್ಷ ಕಳೆದಿಲ್ಲ ಆದರೆ ಕಡಿಮೆ ಅವಧಿಯಲ್ಲಿ ಮಹತ್ತರವಾದ ಸೇವೆಯ ಮುಖೇನ ಸುಮಾರು20 ಘಟಕಗಳನ್ನು ಸ್ಥಾಪಿಸಿ  ಕೋಟ್ಯಾತರ ರೂಪಾಯಿ ಮೊತ್ತದ  ಸಹಾಯಹಸ್ತವನ್ನು ಸಮಾಜದ ಬಡ ಜನರಿಗಾಗಿ ನೀಡಿರುವುದುಮಾತ್ರವಲ್ಲದೆ ಕೊರೊನಾ ಮಹಾಮಾರಿಯಿಂದ ಜನತೆ ತತ್ತರಿಸುತ್ತಿರುವ ಸಂಧರ್ಭದಲ್ಲಿ ಲಕ್ಷಾಂತರ ರೂಪಾಯಿ ಮೊತ್ತದ ಆಂಬುಲೆನ್ಸ್ನ್ನು ಜನರ ಸೇವೆಗಾಗಿ ನೀಡಿದ್ದು ಒಂದು ದಾಖಲೆಯೇ ಸರಿ. ಇಂತಹ ಸಮಾಜಮುಖಿ ಚಿಂತನೆಯ ಫ್ರೆಂಡ್ಸ್ ಬಲ್ಲಾಳ್ ಬಾಗ್ಬಿರುವೆರ್ ಕುಡ್ಲ ಸಂಘಟನೆಯ  ಕೀರ್ತಿ,  ಶ್ರೇಯಸ್ಸನ್ನು ಕಂಡು ಕೆಲವರಿಗೆ ಸಹಿಸಲಾಗಲಿಲ್ಲವೋ ಏನೋ, ಅದಕ್ಕಾಗಿಯೇ ಸಂಚುರೂಪಿಸಿ ಸಂಘಟನೆಯ ಹೆಸರಿಗೆ ಕಪ್ಪು ಚುಕ್ಕಿ ತರುವ ಪ್ರಯತ್ನ ಮಾಡುತ್ತಿರುವುದು ಅವರ ಕೀಳು ಮನಸ್ಥಿತಿಯನ್ನು ಎತ್ತಿತೋರಿಸುತ್ತದೆ.

ನಿಟ್ಟಿನಲ್ಲಿ ಶರಣ್ ಪಂಪ್ ವೆಲ್ ಅವರು ಬಿರುವೆರ್ ಕುಡ್ಲದ ಸಾಧನೆ  ಸೇವೆ ಕಣ್ಣಿಗೆ ಬಿದ್ದರೂ ಅರಗಿಸಿಕೊಳ್ಳಲಾಗಲ್ಲಿವೇನೋಅನಿಸುತ್ತಿದೆ. ಶರಣ್ ಅಣ್ಣ ನಿಮ್ಮ ಹಿಂದೂಪರ ಹೋರಾಟದ ಬಗ್ಗೆ ನಮಗೆ ತುಂಬಾ ಅಭಿಮಾನ ಹೆಮ್ಮೆ ಇತ್ತು.. ಗೌರವ ಇತ್ತು.. ಆದರೆಈಗ ನೀವು ಬಿರುವೆರ್ ಕುಡ್ಲ ಸಂಘಟನೆಯ ಬಗ್ಗೆ ಇಲ್ಲ ಸಲ್ಲದ ಆರೋಪ ಮಾಡಿ ಪ್ರತಿಭಟಿಸುದನ್ನು ಕಂಡು ಅದೆಲ್ಲವನ್ನೂಕಳೆದಕೊಂಡಿರಿ..

ಒಂದು ಜಾತಿ ಧರ್ಮ, ಸಮುದಾಯವನ್ನು ಮೀರಿ ಬೆಳೆದು ನಿಂತು ಎಲ್ಲಾ ಸಮಾಜದ ಪ್ರೀತಿಗೆ ಪಾತ್ರರಾದ ಬಿರುವೆರ್ ಕುಡ್ಲಸಂಘಟನೆಯ ಬಗ್ಗೆ ಅನವಶ್ಯಕವಾಗಿ ಆರೋಪ ಮಾಡಿದ ಹಿನ್ನಲೆಯಲ್ಲಿ  ಅದರ ಹಿಂದಿರುವ ಕಾಣದ ಕೈಗಳ ಕೈವಾಡಖಂಡಿತವಾಗಿಯೂ ಒಂದಲ್ಲ ಒಂದು ದಿನ ಜನರ ಮುಂದೆ ಬರುತ್ತದೆ.

ಪಂಪ್ ವೆಲ್ ರವರೆ ಒಮ್ಮೆ ಯೋಚಿಸಿ ಶುಭ ಮಂಗಳ ಕಾರ್ಯದ ಸಮಯದಲ್ಲಿಉದಯಣ್ಣ ಸ್ಥಾನದಲ್ಲಿ ನೀವಿರುತ್ತಿದ್ದರೆಹೇಗಾಗುತ್ತಿತ್ತು!!!!!!!! ಎಂದು. ಕನಿಷ್ಠ ಮಾನವೀಯತೆಯನ್ನೂ ಮರೆತು ನೀವು ರೀತಿ ಮಾಡುತ್ತಿರುವುದು ಬಿರುವೆರ್ ಕುಡ್ಲಸಂಘಟನೆ ಮಾತ್ರವಲ್ಲ ಲಕ್ಷಾಂತರ ತುಳು ಕನ್ನಡಿಗ ಉದಯಣ್ಣನ ಅಭಿಮಾನಿ ಬಳಗಕ್ಕೆ ಅತೀವ ನೋವಾಗಿದೆ.

ಶರಣ್ ರವರೆ,…. ಹಣ ಅಧಿಕಾರ ಅಂತಸ್ತು ಯಾವುದೂ ಶಾಶ್ವತವಲ್ಲ ಆದರೇ ಎಲ್ಲಕ್ಕಿಂತ ಮಿಗಿಲಾದುದು ಮಾನವೀಯತೆ, ಮಾನವೀಯ ಮೌಲ್ಯಗಳುಅದನ್ನು ತುಳಿದು ನಡೆಯಬೇಡಿ….

ನಮ್ಮಂತಹ ನೂರಾರು ಜನರಿಗೆ ನಿಮ್ಮ ಮೇಲೆ ಗೌರವ ಅಭಿಮಾನ ವಿತ್ತು ಆದರೆ ಅರ್ಹತೆಯನ್ನು ನಿಮ್ಮ ಕೀಳುಮಟ್ಟದರಾಜಕಾರಣದಿಂದ ಮಣ್ಣುಪಾಲು ಮಾಡಿದಿರಿ.. ಎಲ್ಲದಕ್ಕೂ ಭಗವಂತ ಹಾಗೂ ತುಳುನಾಡಿನ ಸತ್ಯಗಳು ನಿಮಗೆ ಒಳ್ಳೆಯ ಬುದ್ದಿನೀಡಲಿ ಎಂದು ಆಶಿಸುತ್ತೇವೆ.

ಉದಯಣ್ಣ ಸತ್ಯಕ್ಕೆ ಜಯವಿದೆ.

ನಿಮ್ಮೊಂದಿಗೆ ನಾವಿದ್ದೇವೆ

ಪ್ರೀತಿ ಅಭಿಮಾನ ಗೌರವ ಅನವರತ….

ಜೈ ಬಿರುವೆರ್ ಕುಡ್ಲ ಜೈ ಉದಯಣ್ಣ..

✒️ಪ್ರಭಾಕರ ಬೆಳುವಾಯಿ

(ನಮನ ಫ್ರೆಂಡ್ಸ್ ಮುಂಬಯಿ)


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »