TOP STORIES:

ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ನಟ ದರ್ಶನ್ ಅವರ ಹುಟ್ಟು ಹಬ್ಬ ಆಚರಣೆ


ಶಕ್ತಿನಗರ: ಖ್ಯಾತ ಕನ್ನಡ ಚಲನ ಚಿತ್ರ ನಟ, ಡಿ ಬಾಸ್ ಖ್ಯಾತಿಯ ದರ್ಶನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಡಿಬಾಸ್ ಅವರ ಆತ್ಮೀಯ ಗೆಳೆಯ ಫ್ರೆಂಡ್ಸ್ ಬಳ್ಳಾಲ್ ಬಾಗ್ ಬಿರುವೆರ್ ಕುಡ್ಲ ಇದರ ಸ್ಥಾಪಕ ಅಧ್ಯಕ್ಷ ಪೂಜಾರಿ ಬಳ್ಳಾಲ್ ಬಾಗ್ ನೇತೃತ್ವದಲ್ಲಿ ಬಿರುವೆರ್ ಕುಡ್ಲದ ಸದಸ್ಯರು ಒಟ್ಟಾಗಿ ಶಕ್ತಿ ನಗರದಲ್ಲಿರುವ ಸಾನಿಧ್ಯ ವಸತಿ ಶಾಲೆಯ ವಿಶೇಷ ಮಕ್ಕಳೊಂದಿಗೆ ಹುಟ್ಟು ಹಬ್ಬದ ಆಚರಣೆ, ಕೇಕ್ ಕಟ್ಟಿಂಗ್ ಮದ್ಯಾಹ್ನ ಉಟದ ವಿತರಣೆ ಮಾಡಲಾಯಿತು.

ಸ್ವತಃ ಉದಯ್ ಪೂಜಾರಿ ಬಳ್ಳಾಲ್ ಬಾಗ್ ಹಾಗೂ ಸದಸ್ಯರು ವಿಶೇಷ ಚೇತನ ಮಕ್ಕಳಿಗೆ ಊಟವನ್ನು ಬಡಿಸಿದರು. ಮಕ್ಕಳೊಂದಿಗೆ ಕುಳಿತು ಊಟ ಮಾಡಿ ಸ್ವಲ್ಪ ಸಮಯ ಕಳೆದರು. ಮಕ್ಕಳಿಗೆಂದೇ ವಿಶೇಷ ಅಡುಗೆಯನ್ನು ತಯಾರು ಮಾಡಿಸಲಾಗಿತ್ತು. ಬಿರಿಯಾನಿ, ಪಾಯಸ, ಮಾಂಸಹಾರದ ಊಟದ ಜತೆಗೆ ಸಸ್ಯಹಾರದ ಊಟವನ್ನೂ ಮಕ್ಕಳ ಇಚ್ಚೆಗೆ ತಕ್ಕಂತೆ ಬಡಿಸಲಾಯಿತು.

ಸಂಸ್ಥೆಯ ಮುಖ್ಯಸ್ಥರಾದ ವಸಂತ್ ಕುಮಾರ್ ಶೆಟ್ಟಿ ಅವರು ಫ್ರೆಂಡ್ಸ್ ಬಳ್ಳಾಲ್‍ಬಾಗ್ ತಂಡವು ದರ್ಶನ್ ಅವರ ಹುಟ್ಟು ಹಬ್ಬವನ್ನು ನಮ್ಮ ಸಂಸ್ಥೆಯಲ್ಲಿ ಆಚರಿಸಿಕೊಂಡಿರುವುದು ಸಂತಸ ತಂದಿದೆ ಎಂದರು. ಮಕ್ಕಳು ತಯಾರಿಸಿದ ವಿಶೇಷ ಹೂವಿನ ಗುಚ್ಚವನ್ನು ಉದಯ್ ಕುಮಾರ್ ಅವರಿಗೆ ಹಸ್ತಾಂತರಿಸಿದರು. ಸಂಸ್ಥೆಯು ಬೆಳೆದು ಬಂದ ಬಗೆಯನ್ನು ವಿವರಿಸಿದರು. ಕಾಪೆರ್Çರೇಟರ್ ಜಗದೀಶ್ ಶೆಟ್ಟಿ ಶುಭ ಹಾರೈಸಿದರು.

ರಾಕೇಶ್ ಪೂಜಾರಿ ಬಳ್ಳಾಲ್‍ಬಾಗ್, ರಾಕೇಶ್ ಸಾಲ್ಯಾನ ಚಿಲಿಂಬಿ,ಕಿಶೋರ್ ಬಾಬು,ಲೋಹಿತ್ ಗಟ್ಟಿ,ರಾಮ್ ಪ್ರಸಾದ್,ರೋಶನ್ ಮಿನೇಜಸ್,ಪ್ರಾಣೇಶ್ ಬಂಗೇರ,ಮನೋಜ್ ಕುಮಾರ್ ಶೆಟ್ಟಿ,ಚೇತನ್ ರಾಜ್,ರೋಶನ್ ಬಳ್ಳಾಲ್ ಬಾಗ್,ಮಹೇಶ್,ರಾಜೇಶ್ ಉರ್ವ,ವಿನೀತ್ ಬಳ್ಳಾಲ್‍ಬಾಗ್,ವಿಘ್ನೆಶ್ ಚಿಲಿಂಬಿ,ಲಕ್ಷ್ಮೀಶ್ ಸುವರ್ಣ,ಸಾಗರ್ ಪೂಜಾರಿ,ಓಝಿ ಪದವಿನಂಗಡಿ,ಯಶ್ವಿನ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.


Related Posts

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »

ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ


Share         ಅಕ್ಷತಾ ಪೂಜಾರಿಗೆ ಎಂಬ ಮುಗ್ದ ಯುವತಿಯ ಮೇಲೆ ಪೋಲಿಸರಿಂದ ಹಲ್ಲೆ- ವಕೀಲ‌ ಪ್ರವೀಣ್ ಪೂಜಾರಿ ಆಕ್ರೋಶ ಉಡುಪಿ: ಪ್ರಕರಣವೊಂದಕ್ಕೆ ಸಂಬಂಧಿಸಿ ನ್ಯಾಯಾಲಯದ ಜಾರಿ ಆದೇಶವನ್ನು ಕಾರ್ಯಗತಗೊಳಿಸುವ ನೆಪದಲ್ಲಿ ಪೊಲೀಸರು ಮಹಿಳೆಯರಿದ್ದ ಮನೆಗೆ ಬೆಳ್ಳಂ


Read More »

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »