TOP STORIES:

FOLLOW US

ಬಂಟ್ವಾಳ : ಬಿರುವೆರ್ ಕುಡ್ಲ ಮಹಾ ಸೇವಾ ಯೋಜನೆಯ ಅಡಿಯಲ್ಲಿ ನಿರ್ಮಿಸಲಾದ ನೂತನ ಸುಸಜ್ಜಿತ ಮನೆಯ ಹಸ್ತಾಂತರ


ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಕಷ್ಟ ಕಣ್ಣೀರಿನಲ್ಲಿರುವವರಿಗೆ ನೆರವು ನೀಡುವುದೇ ಭಗವಂತನ ಪೂಜೆಯಾಗಿದ್ದು, ಬ್ರಹ್ಮಶ್ರೀ ನಾರಾಯಣ ಗುರುಗಳು ಕೂಡ ಇದನ್ನೇ ಪ್ರತಿಪಾದಿಸಿದ್ದರು‌. ಒಂದು ಸರಕಾರ ಮಾಡುವ ಕಾರ್ಯವನ್ನು ಬಿರುವೆರ್ ಕುಡ್ಲ ಮಾಡುತ್ತಿದೆ ಎಂದು ದ.ಕ.ಸಂಸದ ನಳಿನ್ ಕುಮಾರ್ ಕಟೀಲು ಹೇಳಿದರು.

 

ಬಂಟ್ವಾಳ:   ಬಿರುವೆರ್ ಕುಡ್ಲ ಇದರ ಮಹಾ ಸೇವಾ ಯೋಜನೆಯ ಅಂಗವಾಗಿ ಬಂಟ್ವಾಳದ ಭಂಡಾರಿ ಬೆಟ್ಟುವಿನಲ್ಲಿ ಬಡಕುಟುಂಬದ ಲಿಂಗಪ್ಪ ದಂಪತಿಗಳಿಗೆ ಸುಸಜ್ಜಿತ ಮನೆ ನಿರ್ಮಿಸಿದ್ದು ಬುಧವಾರ ಹಸ್ತಾಂತರ ಕಾರ್ಯಕ್ರಮ ನಡೆಯಿತು.

ಬಿಜೆಪಿ ರಾಜ್ಯಾಧ್ಯಕ್ಷ  ನಳಿನ್ ಕುಮಾರ್ ಕಟೀಲ್ ಅವರು ಮನೆ ಹಸ್ತಾಂತರಿಸಿದರು.ಬಳಿಕ ಮಾತನಾಡಿದ ಅವರು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯಪೂಜಾರಿ ನೇತೃತ್ವದಲ್ಲಿ ಸಂಘಟನೆಯ ಯುವಕರು ಮಾದರಿ ಕೆಲಸ ಮಾಡುತ್ತಿದ್ದಾರೆ.

ಯಾವುದೇ ಒಳ್ಳೆಯ ಕೆಲಸ ಮಾಡುವಾಗ ಟೀಕೆ ಸಹಜ.ಅದನ್ನು ಎದುರಿಸಿಕೊಂಡೇ ಇಂದು ಈ ಸಂಘಟನೆ ಈ ಮಟ್ಟಕ್ಕೆ ಬೆಳೆದಿದೆ.ಬಡವರಿಗೆ ಸೇವೆ ಮಾಡುವುದೂ ಕೂಡ ದೇವರ ಪೂಜಾ ಕಾರ್ಯ ಎನಿಸಿಕೊಳ್ಳುತ್ತದೆ.ಸರಕಾರ ಮಾಡಬೇಕಾದ ಕೆಲಸ ಬಿರುವೆರ್ ಕುಡ್ಲದಿಂದ ನಡೆದಿದೆ.ಈ ಸಂಘಟನೆ ರಾಜ್ಯ ಮಟ್ಟದಲ್ಲಿ ಬೆಳೆಯಲಿ ಎಂದು ಹಾರೈಸಿದರು.

ಬಿಜೆಪಿ ದ.ಕ ಜಿಲ್ಲಾಧ್ಯಕ್ಷ  ಸುದರ್ಶನ್ , ಬಂಟ್ವಾಳ ಶಾಸಕ ರಾಜೇಶ್ ನೈ್ಕ್ ,ನ್ಯಾಯವಾದಿ ಪ್ರಸಾದ್ ,ಮತ್ತಿತರರು ಶುಭ ಹಾರೈಸಿದರು. ಬಿರುವೆರ್ ಕುಡ್ಲದ ಮಹಿಳಾ ಘಟಕ ಸಹಿತ  22 ಘಟಕಗಳು ಸಂಯುಕ್ತವಾಗಿ ಸೇರಿ ಈ ಮಹಾ ಸೇವಾ ಯೋಜನೆ ಕಾರ್ಯ ಹಮ್ಮಿಕೊಂಡಿದೆ.ಬಂಟ್ವಾಳದಲ್ಲಿ  ನಿರ್ಮಿಸಿದ ಮನೆ 5ನೇಯದ್ದಾಗಿದೆ.ಇದರ ಜತೆಗೆ ಇತೃ 500ಕ್ಕೂ ಅಧಿಕ ಸಮಾಜಮುಖೀ ಸೇವಾ ಯೋಜನೆ ಮಾಡಿದೆ.ಉದಯ ಪೂಜಾರಿ ನೇತೃತ್ವದಲ್ಲಿ ಪ್ರಧಾನ ಸಂಘಟನೆ ಈಗಾಗಲೇ ಅಂದಾಜು 2 ಕೋಟಿಗೂ ಮಿಕ್ಕಿ ಆರ್ಥಿಕವಾಗಿ ಸಂಕಷ್ಟದಲ್ಲಿರುವ ಕುಟುಂಬದ ಆರೋಗ್ಯ ಚಿಕಿತ್ಸೆಗೆ,ವಿಕಲ ಚೇತನರಿಗೆ  ಗಾಲಿ ಕುರ್ಚಿ,ಶಿಕ್ಷಣಕ್ಕೆ  ಮತ್ತಿತರ ಯೋಜನೆಗೆ ವಿತರಿಸಿದೆ.ಸಂಘಟನೆಯ ಸದಸ್ಯರ,ದಾನಿಗಳ ನೆರವಿನಿಂದ  ನಿರಂತರವಾಗಿ ಸಮಾಜದಲ್ಲಿ ಕಳೆದ 7 ವರ್ಷಗಳಲ್ಲಿ  ಸೇವಾ ನಿರತವಾಗಿದೆ.ಕಾರ್ಯಕ್ರಮದಲ್ಲಿ ವಸಂತಪೂಜಾರಿ,ಬುಡಾ ಅಧ್ಯಕ್ಷರು,ಬಿರುವೆರ್ ಕುಡ್ಲ ಸ್ಥಾಪಕ ಉದಯಪೂಜಾರಿ,ಸಂಘಟಕ ಚಂದ್ರಕುಮಾರ್, ಮತ್ತಿತರರು ಉಪಸ್ಥಿತರಿದ್ದರು


Share:

More Posts

Category

Send Us A Message

Related Posts

ACP ರೀನಾ ಸುವರ್ಣಗೆ ಜೀ ಕನ್ನಡ ನ್ಯೂಸ್‌ ಅಚೀವರ್ಸ್‌ ಅವಾರ್ಡ್ಸ್‌- 2025


Share       3ನೇ ವಾರ್ಷಿಕೋತ್ಸವದ ಅಂಗವಾಗಿ ಜೀ ಕನ್ನಡ ನ್ಯೂಸ್‌ ವತಿಯಿಂದ, Zee Achievers Awards ಕಾರ್ಯಕ್ರಮವನ್ನು ದಿ ರಿಟ್ಸ್‌ ಕಾರ್ಲ್‌ಟರ್ನ್‌ನಲ್ಲಿ ಆಯೋಜಿಸಲಾಗಿತ್ತು, ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಗಣ್ಯಾತಿಗಣ್ಯರನ್ನು ಗುರುತಿಸಿ ಜೀ ಕನ್ನಡ


Read More »

ಮುಂಬಯಿ ಎನ್‌ಸಿಪಿ (ಎಸ್‌ಪಿ) ಈಶಾನ್ಯ ಜಿಲ್ಲಾ ನಿರೀಕ್ಷಕರಾಗಿ ಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಆಯ್ಕೆ


Share       ಮುಂಬಯಿ, ಮಾ. 21: ಎನ್‌ಸಿಪಿ (ಎಸ್‌ಪಿ) ಈಶಾನ್ಯ (ಉತ್ತರ ಮುಂಬಯಿ) ಜಿಲ್ಲಾ ನಿರೀಕ್ಷಕರಾಗಿ ತುಳು-ಕನ್ನಡಿಗಲಕ್ಷ್ಮಣ್ ಸಿ. ಪೂಜಾರಿ ಚಿತ್ರಾಪು ಅವರನ್ನು ಪಕ್ಷದ ಅಧ್ಯಕ್ಷೆ ರಾಖಿ ಜಾಧವ್ ಅವರು ನೇಮಕ ಮಾಡಿದ್ದಾರೆ. ಮಂಗಳೂರು ಚಿತ್ರಾಪು


Read More »

ಬಿಲ್ಲವಾಸ್ ಫ್ಯಾಮಿಲಿ ದುಬೈ ಸಂಘಟನೆ ; ಉಪ ಪೊಲೀಸ್ ಅಧಿಕ್ಷಕರಾದ ಎಸ್ ಮಹೇಶ್ ಕುಮಾರ್ ರವರ ಮನದಾಳದ ಮಾತು


Share       ಬಿಲ್ಲವಾಸ್ ಫ್ಯಾಮಿಲಿ ದುಬೈ, ಸಮುದಾಯದ ಸಾಮಾಜಿಕ ಚಟುವಟಿಕೆಗಳಲ್ಲಿ ಮಂಚೂಣಿ ಯಲ್ಲಿರುವ ಸಂಘಟನೆ. ಇತ್ತೀಚೆಗೆ ಖಾಸಗಿ ಕಾರ್ಯಕ್ರಮದ ನಿಮಿತ್ತ ದುಬೈಗೆ ಪ್ರಯಾಣ ಬೆಳೆಸಿದಾಗ ಈ ಸಂಘಟನೆಯ ಕಾರ್ಯವೈಖರಿ ಯನ್ನು ಕಣ್ಣಾರೆ ನೋಡುವ ಅವಕಾಶ ಒದಗಿ


Read More »

ನಾರಾಯಣ ಗುರುಗಳ ತತ್ವದಂತೆ ಎಲ್ಲರೂ ಜೊತೆಗೂಡಿ ಮುನ್ನೆಡೆಯಬೇಕು : ಪದ್ಮರಾಜ್ ಆರ್ ಪೂಜಾರಿ


Share       ಬಂಟ್ವಾಳ: ಯುವವಾಹಿನಿ(ರಿ.) ಮಾಣಿ ಘಟಕದ 2025-26 ನೇ ಸಾಲಿನ ನೂತನ ಕಾರ್ಯಕಾರಿ ಸಮಿತಿಯ ಪದಗ್ರಹಣ ಸಮಾರಂಭ ದಿನಾಂಕ 10-03-2025 ರ ಸೋಮವಾರದಂದು ಬ್ರಹ್ಮಶ್ರೀ ನಾರಾಯಣ ಗುರು ಸಭಾಭವನದ ನೂತನ ನಿವೇಶನದಲ್ಲಿ ಜರುಗಿತು. ಪದಗ್ರಹಣ


Read More »

ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ಕತಾರ್ ಬಿಲ್ಲವಸ್ ಸಂಘದ ಮೊಟ್ಟ ಮೊದಲ ಬಾರಿಗೆ ಮಹಿಳಾ ಅಧ್ಯಕ್ಷರಾಗಿ ಆಯ್ಕೆಯಾದ ಶ್ರೀಮತಿ ಅಪರ್ಣ ಶರತ್


Share       ಕೊಲ್ಲಿ ರಾಷ್ಟ್ರ ಕತಾ‌ರ್ ದೇಶದಲ್ಲಿ ನಮ್ಮ ತುಳುವರು ಹಲವಾರು ವರ್ಷಗಳಿಂದ ವಾಸವಿದ್ದಿದ್ದು, ಇಂದಿಗೂ ತುಳುವ ಮಣ್ಣಿನ ಪ್ರೀತಿಯನ್ನು ಮರೆತಿಲ್ಲ. ತುಳುನಾಡಿನ ಸಂಸ್ಕೃತಿ, ಆಚಾರ-ವಿಚಾರಗಳನ್ನು ಮರೆಯದೆ ಇಂದಿಗೂ ತಾವು ನೆಲೆ ನಿಂತ ಮಣ್ಣಿನಲ್ಲಿ ಸಂಭ್ರಮಿಸುತ್ತಾರೆ


Read More »

ದಮ್ಮಾಮ್: ಸೌದಿ ಬಿಲ್ಲವಾಸ್ ದಮ್ಮಾಮ್ ಸಂಘದ ಮಹಾಸಭೆ


Share       ದಮ್ಮಾಮ್: ಶ್ರೀ ನಾರಾಯಣ ಗುರು ಅವರ ತತ್ವ ಸಂದೇಶಗಳನ್ನು ಅಳವಡಿಸಿಕೊಂಡು ದಮ್ಮಾಮ್ ಬಿಲ್ಲವಾಸ್ ಸೌದಿ ಅರೇಬಿಯ ಸಂಘವನ್ನು ಮುನ್ನಡೆಸಬೇಕೆಂದು ಹಾಗು ಸಮಾಜದಲ್ಲಿರುವ ಶೋಷಿತರ , ಅಸಹಾಯಕರ ಮತ್ತು ಆರ್ಥಿಕವಾಗಿ ಹಿಂದುಳಿದವರಿಗೆ ಸಹಾಯ ಹಾಗು


Read More »