TOP STORIES:

ಬಂಬ್ರಾಣ ಕೊಟ್ಯದ ಮನೆ ”ಆನೆ ಬೈದ್”ಯ ಬಿರುದಾಂಕಿತ ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ


ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯನ್ನು ಮಾಡುತ್ತಿರುವ ಕುಂಬಳೆ ಸಮೀಪದ ಬಂಬ್ರಾಣ ಕೊಟ್ಯದ ಮನೆ “ಆನೆ ವೈದ್ಯ ” ಬಿರುದಾಂಕಿತ ಶ್ರೀ ನಾರಾಯಣ ಪೂಜಾರಿ ಯವರ 70ನೇ ಹುಟ್ಟುಹಬ್ಬದ ಅಂಗವಾಗಿ 20-02-2022 ಭಾನುವಾರ ಬಂಬ್ರಾಣ ಕೊಟ್ಯದ ಮನೆಯಲ್ಲಿ ಭೀಮರಥ ಶಾಂತಿ, ಸತ್ಯನಾರಾಯಣ ಪೂಜೆ, ನಾಗತಂಬಿಲ.. ಹೀಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ,ಅಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ವರ್ಕಳ ಶಿವಗಿರಿ ಮಠದ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಕ್ಷೇತ್ರದ ತಂತ್ರಿ ವರ್ಯರಾದ ಬ್ರಹ್ಮ ಶ್ರೀ ಚಕ್ರಪಾಣಿ ದೇವಪೂಜಿತ್ತಾಯರ ಮಾರ್ಗದರ್ಶನದಂತೆ ಜರಗಿದ ಈ ಕಾರ್ಯಕ್ರಮದಲ್ಲಿ, ಕುದ್ರೋಳಿ ಗೋಕರ್ಣನಾಥೆಶ್ವರ ಕ್ಷೇತ್ರದ ಕೋಶಾಧಿಕಾರಿ ಹಾಗೂ ಗುರುಬೆಳದಿಂಗಳು(ರಿ) ಅಧ್ಯಕ್ಷರಾದ ಶ್ರೀ ಪದ್ಮರಾಜ್. ಆರ್. ರವರು ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ನೂತನ ವಿಧ್ಯಾನಿಧಿ ಟ್ರಸ್ಟ್ ಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಖ್ಯಾತ ರಂಗ ಭೂಮಿ ಹಾಗೂ ಚಲನ ಚಿತ್ರ ನಟರಾದ ಶ್ರೀ ಅರವಿಂದ ಬೋಳಾರ್, ಶ್ರೀ ಸಂಜೀವ ಪೂಜಾರಿ ಕೂರೇಲು, ಶ್ರೀ ಪಿ ಮುರಲೀಧರನ್ ನ್ಯಾಯವಾದಿ , ವಾರ್ಡ್ ಸದಸ್ಯ ಶ್ರೀ ಮೋಹನ್ ಬಂಬ್ರಾಣ , ಡಾl ರವೀಶ್ ಪಡುಮಲೆ, ಶ್ರೀ ವಿಶ್ವನಾಥ್ ಕೆಮ್ಮಣ್ಣು ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 70 ರ “ಸಪ್ತತಿ ಸಂಭ್ರಮ “ದ ಸವಿ ನೆನಪಿಗಾಗಿ 70 ಔಷಧೀಯ ಗುಣವುಳ್ಳ ಸಸ್ಯವನ್ನು ವಿತರಣೆ ಮಾಡಲಾಯಿತು.

ಸಮಾಜದ ಪ್ರಮುಖ ಸಾಧಕರಾದ ಕುಟುಂಬದ ಸದಸ್ಯರಾಗಿರುವ ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ
ಸಹಾಯಕ ಪೊಲೀಸ್ ನಿರ್ದೇಶಕರಾದ ಶ್ರೀ ಕುಮಾರ ಚಂದ್ರ ರವರನ್ನು, ಲಕ್ಷಾಂತರ ಗಿಡಗಳನ್ನು ನೆಟ್ಟು ಪರಿಸರವನ್ನು ಹಸಿರಾಗಿರುವಲ್ಲಿ ತೆರೆ ಮರೆಯಲ್ಲಿ ಶ್ರಮಿಸುತ್ತಿರುವ ಪರಿಸರ ಪ್ರೇಮಿ ಶ್ರೀ ಮಾಧವ ಉಳ್ಳಾಲ, ಯಕ್ಷರಂಗದ ಯಕ್ಷಗಾನ ಕಲಾವಿದರಾಗಿ ಕಟೀಲು 1ನೇ ಮೇಳದಲ್ಲಿ ದೇವಿಯ ಪಾತ್ರವನ್ನು ನಿರ್ವಹಿಸುತ್ತಿರುವ ಶ್ರೀ ರಾಜೇಶ್ ಬೆಳ್ಳಾರೆ, ಕಂಬಳದಲ್ಲಿ ಅಪ್ರತಿಮ ಸಾಧನೆ ಗೈದು ಸತತವಾಗಿ 3 ಬಾರಿ ಬಹುಮಾನ ಗಳನ್ನು ಬಾಚಿ ಕೊಳ್ಳುವಲ್ಲಿ ಯಶಸ್ವಿಯಾದ ವಂದಿತ್ ಶೆಟ್ಟಿ ಬಂಬ್ರಾಣ,
ಭಾರತ ಮಾತೆಯ ವೀರ ಸೇನಾನಿಯಾಗಿ ಕಾರ್ತಿಕ್ ಬೆಳ್ಳೂರು ರವರನ್ನು ಸೇರಿ 5 ಸಾಧಕರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ರಾಮ್ ಕುಮಾರ್ ಮುಂಡಿತಡ್ಕ, ಹಾಗೂ ರಮೇಶ್ ಬಾಳ್ಯ್ ರು ರವರು ನಿರೂಪಿಸಿ, ಹೇಮಾನಾಥ್ ಮೈತಡ್ಕ ರವರು ವಂದಿಸಿದರು.

 


Related Posts

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »