TOP STORIES:

ಬಂಬ್ರಾಣ ಕೊಟ್ಯದ ಮನೆ ”ಆನೆ ಬೈದ್”ಯ ಬಿರುದಾಂಕಿತ ನಾರಾಯಣ ಪೂಜಾರಿಯವರ 70 ನೇ ಹುಟ್ಟುಹಬ್ಬ ಆಚರಣೆ


ಕಾಸರಗೋಡು ಜಿಲ್ಲೆ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಹಲವಾರು ಧಾರ್ಮಿಕ ಕ್ಷೇತ್ರಗಳಲ್ಲಿ ಕಳೆದ 30 ವರ್ಷಗಳಿಂದ ಸಕ್ರಿಯವಾಗಿ ಪಾಲ್ಗೊಂಡು ಮಾರ್ಗದರ್ಶನ ನೀಡುತ್ತಾ ಸಮಾಜ ಸೇವೆಯನ್ನು ಮಾಡುತ್ತಿರುವ ಕುಂಬಳೆ ಸಮೀಪದ ಬಂಬ್ರಾಣ ಕೊಟ್ಯದ ಮನೆ “ಆನೆ ವೈದ್ಯ ” ಬಿರುದಾಂಕಿತ ಶ್ರೀ ನಾರಾಯಣ ಪೂಜಾರಿ ಯವರ 70ನೇ ಹುಟ್ಟುಹಬ್ಬದ ಅಂಗವಾಗಿ 20-02-2022 ಭಾನುವಾರ ಬಂಬ್ರಾಣ ಕೊಟ್ಯದ ಮನೆಯಲ್ಲಿ ಭೀಮರಥ ಶಾಂತಿ, ಸತ್ಯನಾರಾಯಣ ಪೂಜೆ, ನಾಗತಂಬಿಲ.. ಹೀಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ,ಅಯೋಜಿಸಲಾಯಿತು. ಈ ಕಾರ್ಯಕ್ರಮದಲ್ಲಿ ವರ್ಕಳ ಶಿವಗಿರಿ ಮಠದ ಶ್ರೀ ಶ್ರೀ ಸತ್ಯಾನಂದ ತೀರ್ಥ ಸ್ವಾಮೀಜಿಯವರು ಆಶೀರ್ವಚನ ನೀಡಿದರು.

ಕ್ಷೇತ್ರದ ತಂತ್ರಿ ವರ್ಯರಾದ ಬ್ರಹ್ಮ ಶ್ರೀ ಚಕ್ರಪಾಣಿ ದೇವಪೂಜಿತ್ತಾಯರ ಮಾರ್ಗದರ್ಶನದಂತೆ ಜರಗಿದ ಈ ಕಾರ್ಯಕ್ರಮದಲ್ಲಿ, ಕುದ್ರೋಳಿ ಗೋಕರ್ಣನಾಥೆಶ್ವರ ಕ್ಷೇತ್ರದ ಕೋಶಾಧಿಕಾರಿ ಹಾಗೂ ಗುರುಬೆಳದಿಂಗಳು(ರಿ) ಅಧ್ಯಕ್ಷರಾದ ಶ್ರೀ ಪದ್ಮರಾಜ್. ಆರ್. ರವರು ವಿದ್ಯಾರ್ಥಿಗಳಿಗೆ ನೆರವಾಗುವ ನಿಟ್ಟಿನಲ್ಲಿ ನೂತನ ವಿಧ್ಯಾನಿಧಿ ಟ್ರಸ್ಟ್ ಗೆ ಚಾಲನೆ ನೀಡಿದರು.

ವೇದಿಕೆಯಲ್ಲಿ ಖ್ಯಾತ ರಂಗ ಭೂಮಿ ಹಾಗೂ ಚಲನ ಚಿತ್ರ ನಟರಾದ ಶ್ರೀ ಅರವಿಂದ ಬೋಳಾರ್, ಶ್ರೀ ಸಂಜೀವ ಪೂಜಾರಿ ಕೂರೇಲು, ಶ್ರೀ ಪಿ ಮುರಲೀಧರನ್ ನ್ಯಾಯವಾದಿ , ವಾರ್ಡ್ ಸದಸ್ಯ ಶ್ರೀ ಮೋಹನ್ ಬಂಬ್ರಾಣ , ಡಾl ರವೀಶ್ ಪಡುಮಲೆ, ಶ್ರೀ ವಿಶ್ವನಾಥ್ ಕೆಮ್ಮಣ್ಣು ರವರು ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ 70 ರ “ಸಪ್ತತಿ ಸಂಭ್ರಮ “ದ ಸವಿ ನೆನಪಿಗಾಗಿ 70 ಔಷಧೀಯ ಗುಣವುಳ್ಳ ಸಸ್ಯವನ್ನು ವಿತರಣೆ ಮಾಡಲಾಯಿತು.

ಸಮಾಜದ ಪ್ರಮುಖ ಸಾಧಕರಾದ ಕುಟುಂಬದ ಸದಸ್ಯರಾಗಿರುವ ಪೊಲೀಸ್ ಇಲಾಖೆಯಲ್ಲಿ ದಕ್ಷ ಅಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ಮಂಗಳೂರಿನ
ಸಹಾಯಕ ಪೊಲೀಸ್ ನಿರ್ದೇಶಕರಾದ ಶ್ರೀ ಕುಮಾರ ಚಂದ್ರ ರವರನ್ನು, ಲಕ್ಷಾಂತರ ಗಿಡಗಳನ್ನು ನೆಟ್ಟು ಪರಿಸರವನ್ನು ಹಸಿರಾಗಿರುವಲ್ಲಿ ತೆರೆ ಮರೆಯಲ್ಲಿ ಶ್ರಮಿಸುತ್ತಿರುವ ಪರಿಸರ ಪ್ರೇಮಿ ಶ್ರೀ ಮಾಧವ ಉಳ್ಳಾಲ, ಯಕ್ಷರಂಗದ ಯಕ್ಷಗಾನ ಕಲಾವಿದರಾಗಿ ಕಟೀಲು 1ನೇ ಮೇಳದಲ್ಲಿ ದೇವಿಯ ಪಾತ್ರವನ್ನು ನಿರ್ವಹಿಸುತ್ತಿರುವ ಶ್ರೀ ರಾಜೇಶ್ ಬೆಳ್ಳಾರೆ, ಕಂಬಳದಲ್ಲಿ ಅಪ್ರತಿಮ ಸಾಧನೆ ಗೈದು ಸತತವಾಗಿ 3 ಬಾರಿ ಬಹುಮಾನ ಗಳನ್ನು ಬಾಚಿ ಕೊಳ್ಳುವಲ್ಲಿ ಯಶಸ್ವಿಯಾದ ವಂದಿತ್ ಶೆಟ್ಟಿ ಬಂಬ್ರಾಣ,
ಭಾರತ ಮಾತೆಯ ವೀರ ಸೇನಾನಿಯಾಗಿ ಕಾರ್ತಿಕ್ ಬೆಳ್ಳೂರು ರವರನ್ನು ಸೇರಿ 5 ಸಾಧಕರನ್ನು ಗೌರವಿಸಲಾಯಿತು. ಕಾರ್ಯಕ್ರಮವನ್ನು ರಾಮ್ ಕುಮಾರ್ ಮುಂಡಿತಡ್ಕ, ಹಾಗೂ ರಮೇಶ್ ಬಾಳ್ಯ್ ರು ರವರು ನಿರೂಪಿಸಿ, ಹೇಮಾನಾಥ್ ಮೈತಡ್ಕ ರವರು ವಂದಿಸಿದರು.

 


Related Posts

ಯುವ ವೈಭವ 2025 -ಯುವವಾಹಿನಿ (ರಿ.)ಬೆಂಗಳೂರು ಘಟಕದ ಪತ್ರಿಕಾಗೋಷ್ಠಿ


Share         #ಯುವ ವೈಭವ 2025 05/12/25 ಇಂದು ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಇಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಯುವವಾಹಿನಿ (ರಿ.)ಬೆಂಗಳೂರು ಘಟಕ ಅಧ್ಯಕ್ಷರಾದ ಶಶಿಧರ್ ಕೋಟ್ಯಾನ್ ಮತ್ತು ಕಾರ್ಯದರ್ಶಿ ಸಂತೋಷ್ ಪೂಜಾರಿ ಪಣಪಿಲ ಅವರು


Read More »

ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ


Share         ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ ಮಂಗಳೂರಿನಲ್ಲಿ ಸ್ಥಾಪಿಸಲು ಅಗತ್ಯ ಇರುವ ಐದು ಎಕರೆ ಜಮೀನನ್ನು ಒದಗಿಸಲಾಗುವುದು : ಮುಖ್ಯಮಂತ್ರಿ ಸಿದ್ದರಾಮಯ್ಯ ಉಳ್ಳಾಲ: ಕೇರಳದ ಶಿವಗಿರಿಯ ಶಾಖಾ ಮಠವನ್ನು ಉಡುಪಿ ಅಥವಾ


Read More »

ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ


Share         ಕಲಾಸೇತು — ಬಂಟ್ವಾಳ ತಾಲೂಕಿನ ಕಾವಳಕಟ್ಟೆಯ ಗುರಿಮಜಲ್ ಹಿದಾಯ ವಿಶೇಷ ಮಕ್ಕಳ ವಸತಿ ಶಾಲೆ ದಶಮಾನೋತ್ಸವ ಕಾರ್ಯಕ್ರಮದಲ್ಲಿ, ವಿಶೇಷ ಮಕ್ಕಳ ಕಲೆಗಾರಿಕೆಯಿಂದ ರೂಪುಗೊಂಡ ಜನನಾಯಕ ಪದ್ಮರಾಜ್ ಆರ್. ಪೂಜಾರಿಯವರ ಭಾವಚಿತ್ರ ವನ್ನು ಶಾಲೆಯ


Read More »

ಯುವವಾಹಿನಿ ಪುತ್ತೂರು ಘಟಕದಿಂದ ಅವಿಭಜಿತ ಪುತ್ತೂರು ತಾ ಮಟ್ಟದ ಕೋಟಿ-ಚೆನ್ನಯ ಕ್ರೀಡಾಕೂಟ ಸಮಾರೋಪ.


Share         ಪುತ್ತೂರು:ವಿದ್ಯೆ, ಉದ್ಯೋಗ, ಸಂಪರ್ಕ ಧ್ಯೇಯವನ್ನೊಳಗೊಂಡ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಯುವವಾಹಿನಿ ಪುತ್ತೂರು ಘಟಕ ಇದರ ಆಶ್ರಯದಲ್ಲಿ ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಇದರ ವ್ಯಾಪ್ತಿಗೆ ಒಳಪಟ್ಟ ಸಮಾಜ ಬಾಂಧವರಿಗಾಗಿ


Read More »

🏆ವಿಶ್ವ ಚಾಂಪಿಯನ್ ಭಾರತ 🇮🇳🏆ಮೂಡಬಿದಿರೆಯ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಧನಲಕ್ಷ್ಮಿ ಪೂಜಾರಿ


Share         🏆ವಿಶ್ವ ಚಾಂಪಿಯನ್ ಭಾರತ 🇮🇳🏆 ಢಾಕಾದಲ್ಲಿ ನಡೆದ 2025ರ ಕಬಡ್ಡಿ ವಿಶ್ವಕಪ್ ಟೂರ್ನಿಯಲ್ಲಿ ಚೈನೀಸ್ ತೈಪೆ ತಂಡವನ್ನು ರೋಚಕವಾಗಿ ಮಣಿಸಿ ಪ್ರತಿಷ್ಠಿತ ಕಬಡ್ಡಿ ವಿಶ್ವಕಪ್ ಟ್ರೋಫಿಯನ್ನು ಗೆದ್ದ ಭಾರತೀಯ ಮಹಿಳಾ ಕಬಡ್ಡಿ ತಂಡಕ್ಕೆ


Read More »

ಮಸ್ಕತ್ ನ ಭೀಷ್ಮ ಎಂಬ ಹೆಗ್ಗಳಿಕೆಗೆ ಪಾತ್ರರಾದ ಹಿರಿಯ ಉದ್ಯಮಿ ಶ್ರೀಯುತ ಎಸ್ ಕೆ ಪೂಜಾರಿ


Share         ಮೂಲತಃ ಗಂಜಿಮಠ ಪೆರಾರ ಎಂಬಲ್ಲಿ 1956 ರಲ್ಲಿ ಜನಿಸಿದ ಶ್ರೀಯುತರು ಕಿರಿಯ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ಊರಿನಲ್ಲಿ ಪ್ರಾರಂಭಿಸಿ ನಂತರ ಮುಂಬೈಗೆ ಬಂದು ಕೆಲಸದ ಜೊತೆಗೆ ಹೆಚ್ಚಿನ ವಿದ್ಯಾಭ್ಯಾಸವನ್ನು ಮುಂಬೈನಲ್ಲಿ ಪ್ರಾರಂಭಿಸಿ


Read More »