TOP STORIES:

FOLLOW US

ಬಜ್ಪೆಯ ವಿಮಾನ ನಿಲ್ದಾಣದ ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?


ಮಂಗಳೂರು ವಿಮಾನ ನಿಲ್ದಾಣದ ಮರುನಾಮಕರಣದ ಬಗ್ಗೆ ನನ್ನ ವೈಯುಕ್ತಿಕ ಅನಿಸಿಕೆ ಸತ್ಯಾಂಶ ಇದ್ದಲ್ಲಿ ಧಾರಾಳವಾಗಿ ಶೇರ್ ಮಾಡಬಹುದು..

ಅತ್ತ ಮಂಗಳೂರಿನಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆ ಆಗಿದೆ, ಇತ್ತ ಉಡುಪಿಯಲ್ಲಿ ಒಂದು ರಸ್ತೆಯ ಹೆಸರು ಬದಲಾವಣೆಯಾಗಿದೆ,

ಆಗಲಿ ಒಳ್ಳೆಯ ವಿಚಾರ ಯಾಕೆಂದರೆ ಹಿಂದೂಗಳ ಹೆಸರಿನಿಂದಲೇ ಮರುನಾಮಕರಣ ಆಗಿರೋದು..
ಬಜ್ಪೆ ಗ್ರಾಮ ಪಂಚಾಯತ್ ನಿಂದ “ಕೋಟಿ ಚೆನ್ನಯ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಮಂಗಳೂರು”ಎಂಬ ಹೆಸರು ಬದಲಾವಣೆಗಾಗಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದರು ಕೂಡಾ ಬಜ್ಪೆಯ ಅಂತಾರಷ್ಟ್ರೀಯ ವಿಮಾನ ನಿಲ್ದಾಣದ *ಹೆಸರು ಇನ್ನು ಕೂಡಾ ಬದಲಾವಣೆ ಆಗಿಲ್ಲ ಯಾಕೆ?

ಉಡುಪಿಯಲ್ಲಿ ಮತ್ತು ಮಂಗಳೂರಿನಲ್ಲಿ ಎರಡು ರಸ್ತೆಗಳ ಹೆಸರು ಬದಲಾವಣೆ ಈಗಾಗಲೇ ಆಗಿದ್ದು ಅದಕ್ಕೆ ಮನವಿ ಸಲ್ಲಿಸಿದ್ದು ಯಾರು ಮತ್ತು ಅದರ *ಹೆಸರು ಬದಲಾವಣೆ ಅಷ್ಟು ಸಲೀಸಾಗಿ ಯಾಕಾಯಿತು?

ಕೋಟಿ ಚೆನ್ನಯ ಅಥವಾ ಬ್ರಹ್ಮಶ್ರೀ ನಾರಾಯಣ ಗುರುಗಳ ಹೆಸರನ್ನು ಇಡಬೇಕ್ಕೆನ್ನುವಾಗ ನನ್ನದು ಒಂದಿರಲಿ ಅಂತ ಬರುವವರು ಯಾರು?

ಮಂಗಳೂರಿನ ದಿಲ್ ರಾಜ್ ಆಳ್ವರೇ…
“ತುಳುನಾಡ್ ಇಂಟರ್ನ್ಯಾಷನಲ್ ಏರ್ಪೋರ್ಟ್”ಅನ್ನೋ ಹೆಸರು ಸೂಕ್ತವಾಗಿದೆ, ಒಪ್ಪಿಕೊಳ್ಳುವಂತದ್ದೇ..
ಆದರೂ ಕೂಡಾ ಈಗಾಗಲೇ ಒಂದು ಹೆಸರಿನ ಬಗ್ಗೆ ಮನವಿ ಸಲ್ಲಿಸಿರುವಾಗ ಯಾರು ಊಹಿಸದ ಹೆಸರನ್ನು ಏಕಾಏಕಿ ಸೃಷ್ಟಿ ಮಾಡಿ ಅದನ್ನೇ ಇಡಬೇಕೆಂದರೆ ಇದು ಯಾವ ರೀತಿಯ ನ್ಯಾಯ?
ಕೋಟಿ ಚೆನ್ನಯ v/s ತುಳುನಾಡು ಅಂದ ಹಾಗಾಯಿತು ನಿಮ್ಮ ಕಥೆ.. ನಿಮಗೂ ಗೊತ್ತಿರಬಹುದಲ್ಲವೇ?
ಇವೆರಡು ಒಂದೇ ನಾಣ್ಯದ ಎರಡು ಮುಖಗಳು.. ಹೆಡ್ or ಟೆಲ್ ಅಂದಾಗ? ನಾನಂತು ಮೌನಿಯಾಗುತ್ತೇನೆ..
ಯಾಕಂದ್ರೆ ತುಳುನಾಡು, ತುಳುಭಾಷೆ ನಮಗೆ ಏನು ಕೊಟ್ಟಿದೆ ನೋಡಿ ಅದನ್ನು ಎಂದಿಗೂ ಮರೆಯೋಕೆ ಸಾಧ್ಯ ಇಲ್ಲ.. ಹಾಗಾಗಿ ತುಳುವರೇ ತುಳುನಾಡಿನಲ್ಲಿ ಮೇರೆದಾಡಿದಂತಹ ಕಾರಣಿಕ ಪುರುಷರ ಹೆಸರನ್ನು ಇಡಲು ಹೊರಟಾಗ ಬೆಂಬಲ ಸೂಚಿಸುವ ಬದಲು ಈ ರೀತಿ ನನ್ನದು ಒಂದಿರಲಿ ಅನ್ನೋದು ಸಮಂಜಸವೇ?

ಉಡುಪಿಯ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮಿಗಳೇ..
ತುಳುನಾಡಿನಲ್ಲಿ 66 ಗರಡಿಗಳನ್ನು ಕಟ್ಟಿಸಿಕೊಂಡಂತಹ ಅವಳಿ ವೀರರ ಹೆಸರು ಇಡಬೇಕೆಂದು ಈಗಾಗಲೇ ಮನವಿ ಸಲ್ಲಿಸಿಯಾಗಿದೆ.
ಈ ನಡುವೆ ಶಂಕರಾಚಾರ್ಯ, ಮದ್ವಾಚಾರ್ಯರಂತಹ ದಾರ್ಶನಿಕರ ಹೆಸರನ್ನೇಕೆ ಬಳಸುತ್ತಿರಿ? ಅದಕ್ಕಿಂತ ನಿಮ್ಮ ಹೆಸರನ್ನೇ ಇಡಬೇಕೆಂದು ಆಗ್ರಹಿಸಬಹುದಿತ್ತಲ್ಲವೇ?
ಕೋಟಿ ಚೆನ್ನಯರು ಕೂಡಾ ಹಿಂದೂ ಧರ್ಮದ ಭಾಗವೇ ಆಗಿರುವಾಗ ಅವರ ಹೆಸರಿಗೆ ಯಾಕೆ ನಿಮ್ಮ ಆಕ್ಷೇಪ?
ಅದಕ್ಕಿಂತ ಉಡುಪಿಯ ಇಂದ್ರಾಳಿ ರೈಲ್ವೆ ಸ್ಟೇಷನ್ ಹೆಸರನ್ನು ಬದಲಾವಣೆ ಮಾಡಿ “ಮದ್ವಾಚಾರ್ಯ ರೈಲ್ವೆ ಸ್ಟೇಷನ್ ಉಡುಪಿ” ಅಥವಾ “ಶಂಕರಾಚಾರ್ಯ ರೈಲ್ವೆ ಸ್ಟೇಷನ್ ಉಡುಪಿ” ಎಂದು ಮರುನಾಮಕರಣ ಮಾಡಲು ಮನವಿ ಸಲ್ಲಿಸಬಹುದಿತ್ತಲ್ವಾ? ವಿವಾದಗಳ ನಡುವೆ ವಿವಾದ ಸೃಷ್ಟಿಸುವ ಹೇಳಿಕೆ ಯಾತಕ್ಕಾಗಿ ಕೊಡ್ತೀರಾ ಸ್ವಾಮಿ?

ಇನ್ನು ಮಾನ್ಯ ಮಿಥುನ್ ರೈಯವರು ಮಾಡಿದಂತಹ ಪ್ರತಿಭಟನೆ ರಾಜಕೀಯ ಉದ್ದೇಶ ರಹಿತ ಆಗಿದ್ದರೆ ಕೋಟಿ ಚೆನ್ನಯರ ಆಶೀರ್ವಾದ ಸದಾ ಅವರ ಮೇಲಿರಲಿ…
ರಾಜಕೀಯದ ಉದ್ದೇಶ ಕೂಡಿದ್ದರೆ ನಾನು ಹೇಳಬೇಕೆಂದಿಲ್ಲ ಕೋಟಿಚೆನ್ನಯರ ಸುರಿಯದ ತುದಿಗಳು ಸುಗಮವಾದ ದಾರಿಯನ್ನೇ ತೋರಿಸುತ್ತವೆ..

ಹಿಂದೂಪರ ಸಂಘಟನೆಗಳು ಜಾಣ ಮೌನಕ್ಕೆ ಶರಣಾಗದಿರಿ*
ನ್ಯಾಯಕ್ಕೆ ಎದೆಯಲ್ಲಿ ಜಾಗ ತೋರಿಸುತ್ತೇವೆ,
ಅನ್ಯಾಯಕ್ಕೆ ಕತ್ತಿಯಲ್ಲಿ ಜಾಗ ತೋರಿಸುತ್ತೇವೆ. (ನ್ಯಾಯೋಗ್ ತಿಗಲೆಡ್ ಸಾದಿ ಕೊರ್ಪ, ಅನ್ಯಾಯೋಗ್ ಸುರಿಯಡ್ ಸಾದಿ ತೋಜಾವ)
“ನಂಬಿನಕಲೇ ಇಂಬು ಕೊರ್ಪ ಸತ್ಯ ಗೆಂದಾದ್ ಕೊರ್ಪ” ಎಂದು ವಾಗ್ದಾನ ಕೊಟ್ಟಂತಹ ಅವಳಿ ವೀರರ ಹೆಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ರಾರಾಜಿಸುವಂತಾಗಲಿ..

ಇನ್ನು, ಮೇಲೆಯೂ ನಮ್ಮದೇ ಸರ್ಕಾರ, ಕೆಳಗೆಯೂ ನಮ್ಮದೇ ಸರ್ಕಾರ ಅನ್ನೋರಿಗೆ ಚಪ್ಪಲಿ ತಗೊಂಡು ಹೊಡಿಯೋದೊಂದು ಬಾಕಿ ಇದೆ ಅಷ್ಟೇ..

ವಿಕ್ಕಿ ಪೂಜಾರಿ ಮಡುಂಬು


Share:

More Posts

Category

Send Us A Message

Related Posts

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »

ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ


Share       ಡಾ . ರಶ್ಮಿ ಹರ್ಷ ಪೂಜಾರಿಯವರಿಗೆ ಡಾಕ್ಟರೇಟ್ ಪದವಿ ಡಾ. ಪವಿತ್ರ ಜಿ. ಪಿ. ಹಾಗೂ ಪ್ರವೀಣ್ ಬಿ.ಎಮ್  ರವರ ಮಾರ್ಗದರ್ಶನದಲ್ಲಿ  ಡಾ. ರಶ್ಮಿ ಹರ್ಷ ಪೂಜಾರಿ ಇವರು ರಸಾಯನ ಶಾಸ್ತ್ರ ವಿಭಾಗದಲ್ಲಿ


Read More »

ದುಬೈಯಲ್ಲಿ ಯಶಸ್ವಿ ಉದ್ಯಮಿಯಾಗಿ ಲೆಕ್ಕವಿಲ್ಲದಷ್ಟು ಸೇವೆಯನ್ನು ಸಮಾಜಕ್ಕೆ ಅರ್ಪಿಸುತ್ತಿರು ಸೇವಾ ಮಾಣಿಕ್ಯ ನಿಟ್ಟೆ ಸಂದೀಪ್ ಕೋಟ್ಯಾನ್ ಕಾರ್ಕಳ..!


Share       ಅನೇಕ ಜನ ಉದ್ಯಮ ಕ್ಷೇತ್ರದ ಯಶಸ್ವಿಯಾಗಿ ಮುಂದುವರೆದ ಉದ್ಯಮಿಗಳು ಪ್ರಸ್ತುತ ದಿನಗಳಲ್ಲಿ ಸಿಗುತ್ತಾರೆ, ಆದರೆ ತಾವು ಸಂಪಾದಿಸಿರುವ ಹಣವನ್ನು ಮಾತ್ರ ಸಮಾಜದಲ್ಲಿ ಕೇವಲ ಕಾರ್ಯಕ್ರಮ ಮನೊರಂಜನೆಗಳಿಗೆ ಬಳಸಿ ರಾಜಕೀಯ ನಾಯಕರು, ಉದ್ಯಮಿಗಳನ್ನು ಕರೆದು


Read More »

ಮಂಗಳೂರಿನ ಖ್ಯಾತ ಯುರೋಲಜಿಸ್ಟ್ ಡಾ. ಸದಾನಂದ ಪೂಜಾರಿಯವರಿಗೆ ಪ್ರೈಡ್ ಆಫ್ ನ್ಯಾಷನ್ ಅವಾರ್ಡ್.


Share       ಮಂಗಳೂರು : ಕಳೆದ ವರ್ಷ ಕರ್ನಾಟಕ ಸರಕಾರದಿಂದ ಡಾ. ಬಿ.ಸಿ.ರಾಯ್ ರಾಜ್ಯ ಪ್ರಶಸ್ತಿ ಪುರಸ್ಕೃತ ಡಾ. ಸದಾನಂದ ಪೂಜಾರಿಯವರಿಗೆ ಬೆಂಗಳೂರಿನ ಅಶೋಕ ಪಂಚತಾರ ಹೋಟೆಲ್ ನಲ್ಲಿ ನಡೆದ ಏಷ್ಯಾ ಟುಡೇ ಹಮ್ಮಿ ಕೊಂಡಿದ್ದ


Read More »

ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ


Share       ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿನುಗುತ್ತಿರುವ ನಕ್ಷತ್ರ ಮೇರು ವ್ಯಕ್ತಿತ್ವದ ಬಿಲ್ಲವ ಸಮಾಜದ ಕಣ್ಮಣಿ ಡಾ ಅಂಚನ್ ಸಿ.ಕೆ ಅವರಿಗೆ ಜನುಮದಿನದ ಶುಭಾಶಯಗಳು🎂 ಅವರ ಬಗ್ಗೆ ಮಾಹಿತಿ ಡಾ.ಅಂಚನ್ ಸಿ ಕೆ, ಅಂತರರಾಷ್ಟ್ರೀಯ ವ್ಯಾಪಾರ ಮತ್ತು


Read More »

ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ


Share       ಕುಂದಾಪುರ ಮಾತ ಆಸ್ಪತ್ರೆಯ ಮಾಲಿಕ ಡಾ. ಸತೀಶ್ ಪೂಜಾರಿ ಹೃದಯಾಘಾತದಿಂದ ನಿಧನ ಕೋಟ: ಶ್ರೀಮಾತಾ ಅಸ್ಪತ್ರೆಯ ಮಾಲಿಕರಾದ ಡಾ.ಸತೀಶ ಪೂಜಾರಿ (54) ಅವರು ಗುರುವಾರ ಬೆಳಿಗ್ಗೆ ಅವರ ಕೋಟತಟ್ಟು ಮಣೂರು ಸ್ವಗೃಹದಲ್ಲಿ ಹೃದಯಾಘಾತದಿಂದ


Read More »