TOP STORIES:

FOLLOW US

ಬಣ್ಣದ ಲೋಕದಲ್ಲಿ ಚರಿತ್ರೆ ಸೃಷ್ಟಿಸುವತ್ತ….ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ||ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ


ಭವಿಷ್ಯದ ಹಾದಿಗೆ ಸಾಧನೆಯ ನಿರಂತರತೆಯ ಬೆಳಕು ಪಸರಿಸಿ ಚಿತ್ತದಲಿ ಚಿಂತನೆಯು ಟಿಸಿಲೊಡೆದಾಗ ಸಂಕಲ್ಪಿತದೆಡೆ ಸಾಕ್ಷಾತ್ಕಾರ ಸಾಧ್ಯ. ಬದುಕಿನಲ್ಲಿ ಹಾಗೆ-ಹೀಗೆಯ ಕನವರಿಕೆಗೆ ಕನರದೆ ಗುರಿಯೆಡೆಗೆ ಸಾಗಿ ಚರಿತ್ರೆ ಸೃಷ್ಟಿಸಲು ಹೊರಟಿರೋ ಕನಸಿಗ ಚರಿತ್ ಬಾಳಪ್ಪ ಪೂಜಾರಿ ಇವರ ಬಾಲ್ಯದ ಬಗ್ಗೆ ತಿಳಿಯುವುದಾದರೆ ತಂದೆ ಬಾಳಪ್ಪ ಕೊಡಗಿನ ಕೊಡ್ಲಿಪೇಟೆಯವರು. ತಾಯಿ ಪ್ರೇಮ ದಕ್ಷಿಣ ಕನ್ನಡದ ಬಂಟ್ವಾಳದವರು.

ಚರಿತ್ ಬಂಟ್ವಾಳದಲ್ಲಿ ಹುಟ್ಟಿದರೂ ಪ್ರಾಥಮಿಕ, ಪಿಯು ಶಿಕ್ಷಣದವರೆಗೆ ಕೊಡಗನ್ನು ಆಶ್ರಯಿಸಿ ನಂತರದ ಶಿಕ್ಷಣವನ್ನು ಕರಾವಳಿಯಲ್ಲಿ ಮುಂದುವರೆಸಿದರು. ಕೊಡಗೆಂಬ ವೀರತ್ವದ ಮಣ್ಣಲ್ಲಿ ಆಡಿ ಬೆಳೆದ ಇವರಿಗೆ ಸೈನ್ಯಕ್ಕೆ ಸೇರಬೇಕು ಅಥವಾ ಸೇವಾ ಧರ್ಮದ ವೈದ್ಯನಾಗಬೇಕೆಂಬ ಹಂಬಲವಿತ್ತು. ಕಾಲೇಜು ದಿನದಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಇವರು ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದ ಬಗೆಗೂ ಆಸಕ್ತಿಯುತರಾದರು. ಕಬಡ್ಡಿ, ವಾಲಿಬಾಲ್, ಶಟಲ್ ಇತ್ಯಾದಿ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ದೈನಂದಿನ ದೈಹಿಕ ಕಸರತ್ತಿನ ಮೂಲಕ ಸದೃಢ ಮೈಕಟ್ಟು ಕೂಡ ನಟನಾ ಕ್ಷೇತ್ರಕ್ಕೆ ಪೂರಕವಾದಂತಿತ್ತು. ಮುಂದೆ ಸ್ನಾತಕೋತ್ತರ ಪದವಿಯನ್ನು ಪಡೆದು ಉದ್ಯೋಗಕ್ಕೆ ಸೇರಿ ಕೈತುಂಬ ಸಂಬಳವಿದ್ದರು, ಮನಸ್ಸು ಬಣ್ಣದ ಬದುಕಿಗೆ ಮುಖಮಾಡಿತ್ತು.

ಏನಾದರಾಗಲಿ ಅಂದುಕೊಂಡು ಕೆಲಸಕ್ಕೆ ಗುಡ್ ಬೈ ಹೇಳಿ ನಟನಾ ಕ್ಷೇತ್ರದತ್ತ ಪಥ ಬದಲಿಸಿದರು. ಒಂದೆರಡು ವರ್ಷ ಕಾದರೂ ಅವಕಾಶ ಇವರ ಪಾಲಿಗೆ ಒಲಿಯಲಿಲ್ಲ. ಹೆತ್ತವರ ವಿರೋಧವು ಉಂಟಾಗಿ ಮತ್ತೆ ಮನಸ್ಸು ಉದ್ಯೋಗದತ್ತ ವಾಲಿತು. ದುಡಿದರೂ ಮನಸ್ಸಿನ ಮೂಲೆಯಲ್ಲಿ ಬಣ್ಣದ ಕನಸು ಹಾಗೆಯೇ ಇತ್ತು. ರಜಾ ಸಮಯ ಗೆಳೆಯನೊಬ್ಬನ ಕರೆಯಂತೆ ‘ಲವಲವಿಕೆ’ ಧಾರವಾಹಿಯ ಆಡಿಷನ್ನಲ್ಲಿ ಭಾಗವಹಿಸಿದರು. ಅಲ್ಲಿ ಆಯ್ಕೆಯಾದರು. ಮುಂದೆ 300 ಕಂತುಗಳನ್ನು ಪೂರೈಸಿದ ಈ ಧಾರವಾಹಿಯ ‘ಲಕ್ಕಿಯ’ ಪಾತ್ರ ಜನಮಾನಸದಲ್ಲಿ ಮೆಚ್ಚುಗೆಯಾಯಿತು.

‘ಅಮ್ಮ’ ಧಾರಾವಾಹಿಯಲ್ಲಿ ‘ನವೀನ’ ನಾಗಿ ಮಿಂಚಿದ್ದಾರೆ. ಉತ್ತಮ ನಟನೆಗಾಗಿ ”ಅತ್ಯುತ್ತಮ ನಟ ಪ್ರಶಸ್ತಿ”ಯ ಗರಿಯು ಇವರಿಗೆ ದೊರೆಯಿತು. ‘ಸರ್ಪ ಸಂಬಂಧ’ ಧಾರಾವಾಹಿಯ ನಂತರ ಸ್ಟಾರ್ ಸುವರ್ಣ ಚಾನೆಲ್ನ 700 ಕಂತು ಪೂರೈಸಿದ ‘ಮುದ್ದುಲಕ್ಷ್ಮಿ’ ಧಾರಾವಾಹಿಯಲ್ಲಿ ‘ಡಾ|| ಧ್ರುವಂತ್’ ಪಾತ್ರಧಾರಿಯಾಗಿ ಜನ-ಮನ ಗೆದ್ದಿದ್ದಾರೆ. ಕನ್ನಡ, ಮಲೆಯಾಳಿ, ತಮಿಳು ಭಾಷೆಯ ಜಾಹೀರಾತುಗಳಲ್ಲಿಯೂ ನಟಿಸಿದ್ದಾರೆ. ಇವರು ಸಿನಿಮಾ ಕ್ಷೇತ್ರಕ್ಕೂ ಪಾದರ್ಪಣೆ ಮಾಡಿರುತ್ತಾರೆ. ಕರ್ಮಯೋಗಿ ಚಲನಚಿತ್ರದೊಂದಿಗೆ, ಹಲವಾರು ಚಿತ್ರಗಳಲ್ಲಿ ನಟಿಸುವ ಬಗ್ಗೆ ಮಾತುಕತೆಯೂ ನಡೆದಿದೆ. ಆಸಕ್ತಿಗೆ ಸದಾ ಬೆನ್ನೆಲುಬಾಗಿ ಪತ್ನಿ ಮಂಜುಶ್ರೀ ಅವರಿದ್ದಾರೆ. ತನಗೆ ಬಂದ ಪಾತ್ರಗಳಿಗೆ ಶ್ರದ್ಧಾಪೂರ್ವಕವಾಗಿ ಜೀವ ತುಂಬುತ್ತಿರುವ ಚರಿತ್ ಅವಕಾಶ ನೀಡಿದ ನಿರ್ಮಾಪಕರು, ನಿರ್ದೇಶಕರಿಗೆ ಸದಾ ಚಿರ ಋಣಿಯಾಗಿದ್ದಾರೆ. ತಾನು ಆಸೆ ಪಟ್ಟಂತಹ ಈ ಕ್ಷೇತ್ರಕ್ಕೆ ಶ್ರಮಪಟ್ಟು ಕಾರ್ಯನಿರ್ವಹಿಸುತ್ತೇನೆ ಎಂಬ ಗಟ್ಟಿತನದ ಮಾತಿನ ಚರಿತ್ ಬಾಳಪ್ಪ ಪೂಜಾರಿ ರವರ ಬಣ್ಣದ ಬದುಕಿಗೆ ಶುಭವಾಗಲಿ ಎಂದು ಹಾರೈಸೋಣ.

✍️ ದೀಪಕ್ ಬೀರ ಪಡುಬಿದ್ರಿ


Share:

More Posts

Category

Send Us A Message

Related Posts

ವಿಶ್ವ ಮಾನ್ಯ ಕನ್ನಡಿಗ. 2024 ಪ್ರಶಸ್ತಿಗೆ ಭಾಜನರಾದ ಸನ್ಮಾನ್ಯ ಶ್ರೀ ಕೆ.ಪಿ ಮಂಜುನಾಥ್ ಸಾಗರ್ 


Share       ಅಮೆರಿಕದ ರಿಚ್ಮಂಡ್ ನಗರ ದ ಗ್ರೇಟರ್ ರಿಚ್ಮಂಡ್ ಕನ್ವೆನ್ಷನ್ ಸೆಂಟರ್ ನಲ್ಲಿ ನಡೆದ 12 ನೇ ಅಕ್ಕ ವಿಶ್ವ ಮಾನ್ಯ ಕನ್ನಡ ಸಮ್ಮೇಳನವು ನಡೆಯಿತು. ಈ ಸಂದರ್ಭದಲ್ಲಿ ಕನ್ನಡ ಭಾಷೆ, ಸಂಸ್ಕೃತಿ, ಸಾಹಿತ್ಯ


Read More »

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮದಲ್ಲಿ ಶಾಲೆಗೆ ಶಾಲಾ ವಾಹನ ಕೊಡುಗೆ ನೀಡಿದ ಉದ್ಯಮಿ…!! ಸುಭಾಷ್ ಪೂಜಾರಿ


Share       ಬೈಂದೂರು : ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಗ್ಗರ್ಸೆ – ಬೈಂದೂರು ಇಲ್ಲಿ 78 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆಯನ್ನು  ಎಸ್.ಡಿ.ಎಮ್.ಸಿ ಅಧ್ಯಕ್ಷರಾದ ಸುರೇಶ್ ಪೂಜಾರಿ ಧ್ವಜಾರೋಹಣ ಕಾರ್ಯಕ್ರಮ ನೆರೆವೆರೆಸಿದರು. ಈ ಸಮಯದಲ್ಲಿ ಶಾಲೆಗೆ


Read More »

ಬಿರುವೆರ್ ಕುಡ್ಲದಿಂದ ಸ್ವಾತಂತ್ರ್ಯ ದಿನಾಚರಣೆ ಮೂರು ಕುಟುಂಬಗಳಿಗೆ 1 ಲಕ್ಷ ರೂ.ನೆರವು


Share       ಕುದ್ರೋಳಿ,ಆ.15: ಬಿರುವೆರ್ ಕುಡ್ಲ ದಿಂದ ಲೇಡಿಹಿಲ್ ಸರ್ಕಲ್ ನಲ್ಲಿ ಅದ್ದೂರಿಯ ಸ್ವಾತಂತ್ರ್ಯ ದಿನಾಚರಣೆ ಹಾಗೂ ಮೂರು ಕುಟುಂಬಗಳಿಗೆ ಒಂದು ಲಕ್ಷ ರೂ.ನೆರವು ಹಸ್ತಾಂತರ ಕಾರ್ಯಕ್ರಮವು ಬಿರುವೆರ್ ಕುಡ್ಲ ಸ್ಥಾಪಕಾಧ್ಯಕ್ಷ ಉದಯ ಪೂಜಾರಿ ಬಳ್ಳಾಲ್


Read More »

ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆ : ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷ ಉದಯ ಪೂಜಾರಿಗೆ ಸಮ್ಮಾನ


Share       ಶ್ರೀ ರಾಮ್ ಫ್ರೆಂಡ್ಸ್ ಕಟೀಲ್ ಸಂಸ್ಥೆಯ 5 ನೇ ವಾರ್ಷಿಕೋತ್ಸವದ ಸಂಭ್ರಮ. ಕಾರ್ಯಕ್ರಮದಲ್ಲಿ ಫ್ರೆಂಡ್ಸ್ ಬಲ್ಲಾಳ್ ಭಾಗ್,ಬಿರುವೆರ್ ಕುಡ್ಲ ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾದ ಶ್ರೀ ಉದಯ ಪೂಜಾರಿಯವರ ಸಮಾಜ ಸೇವೆಯನ್ನು ಗುರುತಿಸಿ ಸಮ್ಮಾನ


Read More »

ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ ನಿಧನ


Share       ವಿಟ್ಲ; ವಿಟ್ಲ ಕಸಬಾ ಗ್ರಾಮದ ನೆತ್ರೆಕೆರೆ ನಿವಾಸಿ ನಿವೃತ್ತ ಶಿಕ್ಷಕ ಗುಡ್ಡಪ್ಪ ಪೂಜಾರಿ( 92 ವರ್ಷ) ಇತ್ತೀಚಿಗೆ ತನ್ನ ಸ್ವಗೃಹದಲ್ಲಿ ವಯೋ ಸಹಜವಾಗಿ ನಿಧನರಾದರು. ಇವರು ಸರಕಾರಿ ಪ್ರಾಥಮಿಕ ಶಾಲೆ ಅನಿಲಕಟ್ಟೆಯಲ್ಲಿ ಶಿಕ್ಷಕರಾಗಿ


Read More »

ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ (ರಿ )ವತಿಯಿಂದ ಸಹಾಯ ಧನ ವಿತರಣೆ


Share       ಫ್ರೆಂಡ್ಸ್ ಸುರತ್ಕಲ್ ತುಳುನಾಡ ಬಿರುವೆರ್ ಸಂಘಟನೆಯ ಸಕ್ರಿಯ ಕಾರ್ಯಕರ್ತ ಹಾಗೂ ನಮ್ಮೆಲ್ಲರ ಅತ್ಮೀಯರಾದ ಯಶೋಧರ ಹೊಸಬೆಟ್ಟು ರುವರು ಹಲವು ದಿನಗಳ ಹಿಂದೆ ತೀವ್ರ ಅನಾರೋಗ್ಯಕ್ಕಿಡಾಗಿದ್ದು,  ಅವರ ಚಿಕಿತ್ಸೆಗಾಗಿ ಲಕ್ಷಾಂತರ ರೂಪಾಯಿಗಳ ಅಗತ್ಯವಿದ್ದು, ಅವರ


Read More »