TOP STORIES:

ಬಣ್ಣದ ಲೋಕದಲ್ಲಿ ಚರಿತ್ರೆ ಸೃಷ್ಟಿಸುವತ್ತ….ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ||ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ


ಭವಿಷ್ಯದ ಹಾದಿಗೆ ಸಾಧನೆಯ ನಿರಂತರತೆಯ ಬೆಳಕು ಪಸರಿಸಿ ಚಿತ್ತದಲಿ ಚಿಂತನೆಯು ಟಿಸಿಲೊಡೆದಾಗ ಸಂಕಲ್ಪಿತದೆಡೆ ಸಾಕ್ಷಾತ್ಕಾರ ಸಾಧ್ಯ. ಬದುಕಿನಲ್ಲಿ ಹಾಗೆ-ಹೀಗೆಯ ಕನವರಿಕೆಗೆ ಕನರದೆ ಗುರಿಯೆಡೆಗೆ ಸಾಗಿ ಚರಿತ್ರೆ ಸೃಷ್ಟಿಸಲು ಹೊರಟಿರೋ ಕನಸಿಗ ಚರಿತ್ ಬಾಳಪ್ಪ ಪೂಜಾರಿ ಇವರ ಬಾಲ್ಯದ ಬಗ್ಗೆ ತಿಳಿಯುವುದಾದರೆ ತಂದೆ ಬಾಳಪ್ಪ ಕೊಡಗಿನ ಕೊಡ್ಲಿಪೇಟೆಯವರು. ತಾಯಿ ಪ್ರೇಮ ದಕ್ಷಿಣ ಕನ್ನಡದ ಬಂಟ್ವಾಳದವರು.

ಚರಿತ್ ಬಂಟ್ವಾಳದಲ್ಲಿ ಹುಟ್ಟಿದರೂ ಪ್ರಾಥಮಿಕ, ಪಿಯು ಶಿಕ್ಷಣದವರೆಗೆ ಕೊಡಗನ್ನು ಆಶ್ರಯಿಸಿ ನಂತರದ ಶಿಕ್ಷಣವನ್ನು ಕರಾವಳಿಯಲ್ಲಿ ಮುಂದುವರೆಸಿದರು. ಕೊಡಗೆಂಬ ವೀರತ್ವದ ಮಣ್ಣಲ್ಲಿ ಆಡಿ ಬೆಳೆದ ಇವರಿಗೆ ಸೈನ್ಯಕ್ಕೆ ಸೇರಬೇಕು ಅಥವಾ ಸೇವಾ ಧರ್ಮದ ವೈದ್ಯನಾಗಬೇಕೆಂಬ ಹಂಬಲವಿತ್ತು. ಕಾಲೇಜು ದಿನದಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಇವರು ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದ ಬಗೆಗೂ ಆಸಕ್ತಿಯುತರಾದರು. ಕಬಡ್ಡಿ, ವಾಲಿಬಾಲ್, ಶಟಲ್ ಇತ್ಯಾದಿ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ದೈನಂದಿನ ದೈಹಿಕ ಕಸರತ್ತಿನ ಮೂಲಕ ಸದೃಢ ಮೈಕಟ್ಟು ಕೂಡ ನಟನಾ ಕ್ಷೇತ್ರಕ್ಕೆ ಪೂರಕವಾದಂತಿತ್ತು. ಮುಂದೆ ಸ್ನಾತಕೋತ್ತರ ಪದವಿಯನ್ನು ಪಡೆದು ಉದ್ಯೋಗಕ್ಕೆ ಸೇರಿ ಕೈತುಂಬ ಸಂಬಳವಿದ್ದರು, ಮನಸ್ಸು ಬಣ್ಣದ ಬದುಕಿಗೆ ಮುಖಮಾಡಿತ್ತು.

ಏನಾದರಾಗಲಿ ಅಂದುಕೊಂಡು ಕೆಲಸಕ್ಕೆ ಗುಡ್ ಬೈ ಹೇಳಿ ನಟನಾ ಕ್ಷೇತ್ರದತ್ತ ಪಥ ಬದಲಿಸಿದರು. ಒಂದೆರಡು ವರ್ಷ ಕಾದರೂ ಅವಕಾಶ ಇವರ ಪಾಲಿಗೆ ಒಲಿಯಲಿಲ್ಲ. ಹೆತ್ತವರ ವಿರೋಧವು ಉಂಟಾಗಿ ಮತ್ತೆ ಮನಸ್ಸು ಉದ್ಯೋಗದತ್ತ ವಾಲಿತು. ದುಡಿದರೂ ಮನಸ್ಸಿನ ಮೂಲೆಯಲ್ಲಿ ಬಣ್ಣದ ಕನಸು ಹಾಗೆಯೇ ಇತ್ತು. ರಜಾ ಸಮಯ ಗೆಳೆಯನೊಬ್ಬನ ಕರೆಯಂತೆ ‘ಲವಲವಿಕೆ’ ಧಾರವಾಹಿಯ ಆಡಿಷನ್ನಲ್ಲಿ ಭಾಗವಹಿಸಿದರು. ಅಲ್ಲಿ ಆಯ್ಕೆಯಾದರು. ಮುಂದೆ 300 ಕಂತುಗಳನ್ನು ಪೂರೈಸಿದ ಈ ಧಾರವಾಹಿಯ ‘ಲಕ್ಕಿಯ’ ಪಾತ್ರ ಜನಮಾನಸದಲ್ಲಿ ಮೆಚ್ಚುಗೆಯಾಯಿತು.

‘ಅಮ್ಮ’ ಧಾರಾವಾಹಿಯಲ್ಲಿ ‘ನವೀನ’ ನಾಗಿ ಮಿಂಚಿದ್ದಾರೆ. ಉತ್ತಮ ನಟನೆಗಾಗಿ ”ಅತ್ಯುತ್ತಮ ನಟ ಪ್ರಶಸ್ತಿ”ಯ ಗರಿಯು ಇವರಿಗೆ ದೊರೆಯಿತು. ‘ಸರ್ಪ ಸಂಬಂಧ’ ಧಾರಾವಾಹಿಯ ನಂತರ ಸ್ಟಾರ್ ಸುವರ್ಣ ಚಾನೆಲ್ನ 700 ಕಂತು ಪೂರೈಸಿದ ‘ಮುದ್ದುಲಕ್ಷ್ಮಿ’ ಧಾರಾವಾಹಿಯಲ್ಲಿ ‘ಡಾ|| ಧ್ರುವಂತ್’ ಪಾತ್ರಧಾರಿಯಾಗಿ ಜನ-ಮನ ಗೆದ್ದಿದ್ದಾರೆ. ಕನ್ನಡ, ಮಲೆಯಾಳಿ, ತಮಿಳು ಭಾಷೆಯ ಜಾಹೀರಾತುಗಳಲ್ಲಿಯೂ ನಟಿಸಿದ್ದಾರೆ. ಇವರು ಸಿನಿಮಾ ಕ್ಷೇತ್ರಕ್ಕೂ ಪಾದರ್ಪಣೆ ಮಾಡಿರುತ್ತಾರೆ. ಕರ್ಮಯೋಗಿ ಚಲನಚಿತ್ರದೊಂದಿಗೆ, ಹಲವಾರು ಚಿತ್ರಗಳಲ್ಲಿ ನಟಿಸುವ ಬಗ್ಗೆ ಮಾತುಕತೆಯೂ ನಡೆದಿದೆ. ಆಸಕ್ತಿಗೆ ಸದಾ ಬೆನ್ನೆಲುಬಾಗಿ ಪತ್ನಿ ಮಂಜುಶ್ರೀ ಅವರಿದ್ದಾರೆ. ತನಗೆ ಬಂದ ಪಾತ್ರಗಳಿಗೆ ಶ್ರದ್ಧಾಪೂರ್ವಕವಾಗಿ ಜೀವ ತುಂಬುತ್ತಿರುವ ಚರಿತ್ ಅವಕಾಶ ನೀಡಿದ ನಿರ್ಮಾಪಕರು, ನಿರ್ದೇಶಕರಿಗೆ ಸದಾ ಚಿರ ಋಣಿಯಾಗಿದ್ದಾರೆ. ತಾನು ಆಸೆ ಪಟ್ಟಂತಹ ಈ ಕ್ಷೇತ್ರಕ್ಕೆ ಶ್ರಮಪಟ್ಟು ಕಾರ್ಯನಿರ್ವಹಿಸುತ್ತೇನೆ ಎಂಬ ಗಟ್ಟಿತನದ ಮಾತಿನ ಚರಿತ್ ಬಾಳಪ್ಪ ಪೂಜಾರಿ ರವರ ಬಣ್ಣದ ಬದುಕಿಗೆ ಶುಭವಾಗಲಿ ಎಂದು ಹಾರೈಸೋಣ.

✍️ ದೀಪಕ್ ಬೀರ ಪಡುಬಿದ್ರಿ


Related Posts

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »