TOP STORIES:

ಬಣ್ಣದ ಲೋಕದಲ್ಲಿ ಚರಿತ್ರೆ ಸೃಷ್ಟಿಸುವತ್ತ….ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ||ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ


ಭವಿಷ್ಯದ ಹಾದಿಗೆ ಸಾಧನೆಯ ನಿರಂತರತೆಯ ಬೆಳಕು ಪಸರಿಸಿ ಚಿತ್ತದಲಿ ಚಿಂತನೆಯು ಟಿಸಿಲೊಡೆದಾಗ ಸಂಕಲ್ಪಿತದೆಡೆ ಸಾಕ್ಷಾತ್ಕಾರ ಸಾಧ್ಯ. ಬದುಕಿನಲ್ಲಿ ಹಾಗೆ-ಹೀಗೆಯ ಕನವರಿಕೆಗೆ ಕನರದೆ ಗುರಿಯೆಡೆಗೆ ಸಾಗಿ ಚರಿತ್ರೆ ಸೃಷ್ಟಿಸಲು ಹೊರಟಿರೋ ಕನಸಿಗ ಚರಿತ್ ಬಾಳಪ್ಪ ಪೂಜಾರಿ ಇವರ ಬಾಲ್ಯದ ಬಗ್ಗೆ ತಿಳಿಯುವುದಾದರೆ ತಂದೆ ಬಾಳಪ್ಪ ಕೊಡಗಿನ ಕೊಡ್ಲಿಪೇಟೆಯವರು. ತಾಯಿ ಪ್ರೇಮ ದಕ್ಷಿಣ ಕನ್ನಡದ ಬಂಟ್ವಾಳದವರು.

ಚರಿತ್ ಬಂಟ್ವಾಳದಲ್ಲಿ ಹುಟ್ಟಿದರೂ ಪ್ರಾಥಮಿಕ, ಪಿಯು ಶಿಕ್ಷಣದವರೆಗೆ ಕೊಡಗನ್ನು ಆಶ್ರಯಿಸಿ ನಂತರದ ಶಿಕ್ಷಣವನ್ನು ಕರಾವಳಿಯಲ್ಲಿ ಮುಂದುವರೆಸಿದರು. ಕೊಡಗೆಂಬ ವೀರತ್ವದ ಮಣ್ಣಲ್ಲಿ ಆಡಿ ಬೆಳೆದ ಇವರಿಗೆ ಸೈನ್ಯಕ್ಕೆ ಸೇರಬೇಕು ಅಥವಾ ಸೇವಾ ಧರ್ಮದ ವೈದ್ಯನಾಗಬೇಕೆಂಬ ಹಂಬಲವಿತ್ತು. ಕಾಲೇಜು ದಿನದಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಇವರು ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದ ಬಗೆಗೂ ಆಸಕ್ತಿಯುತರಾದರು. ಕಬಡ್ಡಿ, ವಾಲಿಬಾಲ್, ಶಟಲ್ ಇತ್ಯಾದಿ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ದೈನಂದಿನ ದೈಹಿಕ ಕಸರತ್ತಿನ ಮೂಲಕ ಸದೃಢ ಮೈಕಟ್ಟು ಕೂಡ ನಟನಾ ಕ್ಷೇತ್ರಕ್ಕೆ ಪೂರಕವಾದಂತಿತ್ತು. ಮುಂದೆ ಸ್ನಾತಕೋತ್ತರ ಪದವಿಯನ್ನು ಪಡೆದು ಉದ್ಯೋಗಕ್ಕೆ ಸೇರಿ ಕೈತುಂಬ ಸಂಬಳವಿದ್ದರು, ಮನಸ್ಸು ಬಣ್ಣದ ಬದುಕಿಗೆ ಮುಖಮಾಡಿತ್ತು.

ಏನಾದರಾಗಲಿ ಅಂದುಕೊಂಡು ಕೆಲಸಕ್ಕೆ ಗುಡ್ ಬೈ ಹೇಳಿ ನಟನಾ ಕ್ಷೇತ್ರದತ್ತ ಪಥ ಬದಲಿಸಿದರು. ಒಂದೆರಡು ವರ್ಷ ಕಾದರೂ ಅವಕಾಶ ಇವರ ಪಾಲಿಗೆ ಒಲಿಯಲಿಲ್ಲ. ಹೆತ್ತವರ ವಿರೋಧವು ಉಂಟಾಗಿ ಮತ್ತೆ ಮನಸ್ಸು ಉದ್ಯೋಗದತ್ತ ವಾಲಿತು. ದುಡಿದರೂ ಮನಸ್ಸಿನ ಮೂಲೆಯಲ್ಲಿ ಬಣ್ಣದ ಕನಸು ಹಾಗೆಯೇ ಇತ್ತು. ರಜಾ ಸಮಯ ಗೆಳೆಯನೊಬ್ಬನ ಕರೆಯಂತೆ ‘ಲವಲವಿಕೆ’ ಧಾರವಾಹಿಯ ಆಡಿಷನ್ನಲ್ಲಿ ಭಾಗವಹಿಸಿದರು. ಅಲ್ಲಿ ಆಯ್ಕೆಯಾದರು. ಮುಂದೆ 300 ಕಂತುಗಳನ್ನು ಪೂರೈಸಿದ ಈ ಧಾರವಾಹಿಯ ‘ಲಕ್ಕಿಯ’ ಪಾತ್ರ ಜನಮಾನಸದಲ್ಲಿ ಮೆಚ್ಚುಗೆಯಾಯಿತು.

‘ಅಮ್ಮ’ ಧಾರಾವಾಹಿಯಲ್ಲಿ ‘ನವೀನ’ ನಾಗಿ ಮಿಂಚಿದ್ದಾರೆ. ಉತ್ತಮ ನಟನೆಗಾಗಿ ”ಅತ್ಯುತ್ತಮ ನಟ ಪ್ರಶಸ್ತಿ”ಯ ಗರಿಯು ಇವರಿಗೆ ದೊರೆಯಿತು. ‘ಸರ್ಪ ಸಂಬಂಧ’ ಧಾರಾವಾಹಿಯ ನಂತರ ಸ್ಟಾರ್ ಸುವರ್ಣ ಚಾನೆಲ್ನ 700 ಕಂತು ಪೂರೈಸಿದ ‘ಮುದ್ದುಲಕ್ಷ್ಮಿ’ ಧಾರಾವಾಹಿಯಲ್ಲಿ ‘ಡಾ|| ಧ್ರುವಂತ್’ ಪಾತ್ರಧಾರಿಯಾಗಿ ಜನ-ಮನ ಗೆದ್ದಿದ್ದಾರೆ. ಕನ್ನಡ, ಮಲೆಯಾಳಿ, ತಮಿಳು ಭಾಷೆಯ ಜಾಹೀರಾತುಗಳಲ್ಲಿಯೂ ನಟಿಸಿದ್ದಾರೆ. ಇವರು ಸಿನಿಮಾ ಕ್ಷೇತ್ರಕ್ಕೂ ಪಾದರ್ಪಣೆ ಮಾಡಿರುತ್ತಾರೆ. ಕರ್ಮಯೋಗಿ ಚಲನಚಿತ್ರದೊಂದಿಗೆ, ಹಲವಾರು ಚಿತ್ರಗಳಲ್ಲಿ ನಟಿಸುವ ಬಗ್ಗೆ ಮಾತುಕತೆಯೂ ನಡೆದಿದೆ. ಆಸಕ್ತಿಗೆ ಸದಾ ಬೆನ್ನೆಲುಬಾಗಿ ಪತ್ನಿ ಮಂಜುಶ್ರೀ ಅವರಿದ್ದಾರೆ. ತನಗೆ ಬಂದ ಪಾತ್ರಗಳಿಗೆ ಶ್ರದ್ಧಾಪೂರ್ವಕವಾಗಿ ಜೀವ ತುಂಬುತ್ತಿರುವ ಚರಿತ್ ಅವಕಾಶ ನೀಡಿದ ನಿರ್ಮಾಪಕರು, ನಿರ್ದೇಶಕರಿಗೆ ಸದಾ ಚಿರ ಋಣಿಯಾಗಿದ್ದಾರೆ. ತಾನು ಆಸೆ ಪಟ್ಟಂತಹ ಈ ಕ್ಷೇತ್ರಕ್ಕೆ ಶ್ರಮಪಟ್ಟು ಕಾರ್ಯನಿರ್ವಹಿಸುತ್ತೇನೆ ಎಂಬ ಗಟ್ಟಿತನದ ಮಾತಿನ ಚರಿತ್ ಬಾಳಪ್ಪ ಪೂಜಾರಿ ರವರ ಬಣ್ಣದ ಬದುಕಿಗೆ ಶುಭವಾಗಲಿ ಎಂದು ಹಾರೈಸೋಣ.

✍️ ದೀಪಕ್ ಬೀರ ಪಡುಬಿದ್ರಿ


Related Posts

ರಾಜ್ಯದಲ್ಲಿ ರಚನೆಯಾಗಲಿರುವ ನೂತನ ಸಚಿವ ಸಂಪುಟ ಸಚಿವ ಸಂಪುಟದಲ್ಲಿ ಬಿಲ್ಲವ ಸಮಾಜಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಬೇಕು


Share         ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ. ಹರಿಪ್ರಸಾದ್ ಅವರಿಗೆ ಸಚಿವ ಸ್ಥಾನ ನೀಡಬೇಕು ಬಿಲ್ಲವ ಸಮಾಜಕ್ಕೆ ನ್ಯಾಯಯುತ ಪ್ರಾತಿನಿಧ್ಯ ಒದಗಿಸಬೇಕು ಸೋಲೂರು ಮಠದ ಪೀಠಾಧಿಪತಿಗಳಾದ ಶ್ರೀ ಶ್ರೀ ವಿಖ್ಯಾತಾನಂದ ಸ್ವಾಮೀಜಿ ಆಗ್ರಹ ರಾಜ್ಯದಲ್ಲಿ ರಚನೆಯಾಗಲಿರುವ


Read More »

ಕುಂದಾಪುರ ಬಿಲ್ಲವ ಸಮಾಜ ಸೇವಾ ಸಂಘದ ಅಧ್ಯಕ್ಷರಾಗಿ ಅಶೋಕ್ ಪೂಜಾರಿ ಪುನಾರಾಯ್ಕೆ


Share         ಕುಂದಾಪುರ, ಮೇ 24: ಬಿಲ್ಲವ ಸಮಾಜ ಸೇವಾ ಸಂಘ ಕುಂದಾಪುರ ಇದರ 2025-26ನೇ ಸಾಲಿನ ವಾರ್ಷಿಕ ಮಹಾಸಭೆಯು ರವಿವಾರ ಶ್ರೀ ನಾರಾಯಣ ಗುರು ಕಲ್ಯಾಣ ಮಂಟಪದಲ್ಲಿ ಜರಗಿತು. ಕುಂದಾಪುರ ಬಿಲ್ಲವ ಸಮಾಜ ಸೇವಾ


Read More »

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »