TOP STORIES:

ಬಣ್ಣದ ಲೋಕದಲ್ಲಿ ಚರಿತ್ರೆ ಸೃಷ್ಟಿಸುವತ್ತ….ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ||ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ


ಭವಿಷ್ಯದ ಹಾದಿಗೆ ಸಾಧನೆಯ ನಿರಂತರತೆಯ ಬೆಳಕು ಪಸರಿಸಿ ಚಿತ್ತದಲಿ ಚಿಂತನೆಯು ಟಿಸಿಲೊಡೆದಾಗ ಸಂಕಲ್ಪಿತದೆಡೆ ಸಾಕ್ಷಾತ್ಕಾರ ಸಾಧ್ಯ. ಬದುಕಿನಲ್ಲಿ ಹಾಗೆ-ಹೀಗೆಯ ಕನವರಿಕೆಗೆ ಕನರದೆ ಗುರಿಯೆಡೆಗೆ ಸಾಗಿ ಚರಿತ್ರೆ ಸೃಷ್ಟಿಸಲು ಹೊರಟಿರೋ ಕನಸಿಗ ಚರಿತ್ ಬಾಳಪ್ಪ ಪೂಜಾರಿ ಇವರ ಬಾಲ್ಯದ ಬಗ್ಗೆ ತಿಳಿಯುವುದಾದರೆ ತಂದೆ ಬಾಳಪ್ಪ ಕೊಡಗಿನ ಕೊಡ್ಲಿಪೇಟೆಯವರು. ತಾಯಿ ಪ್ರೇಮ ದಕ್ಷಿಣ ಕನ್ನಡದ ಬಂಟ್ವಾಳದವರು.

ಚರಿತ್ ಬಂಟ್ವಾಳದಲ್ಲಿ ಹುಟ್ಟಿದರೂ ಪ್ರಾಥಮಿಕ, ಪಿಯು ಶಿಕ್ಷಣದವರೆಗೆ ಕೊಡಗನ್ನು ಆಶ್ರಯಿಸಿ ನಂತರದ ಶಿಕ್ಷಣವನ್ನು ಕರಾವಳಿಯಲ್ಲಿ ಮುಂದುವರೆಸಿದರು. ಕೊಡಗೆಂಬ ವೀರತ್ವದ ಮಣ್ಣಲ್ಲಿ ಆಡಿ ಬೆಳೆದ ಇವರಿಗೆ ಸೈನ್ಯಕ್ಕೆ ಸೇರಬೇಕು ಅಥವಾ ಸೇವಾ ಧರ್ಮದ ವೈದ್ಯನಾಗಬೇಕೆಂಬ ಹಂಬಲವಿತ್ತು. ಕಾಲೇಜು ದಿನದಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಇವರು ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದ ಬಗೆಗೂ ಆಸಕ್ತಿಯುತರಾದರು. ಕಬಡ್ಡಿ, ವಾಲಿಬಾಲ್, ಶಟಲ್ ಇತ್ಯಾದಿ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ದೈನಂದಿನ ದೈಹಿಕ ಕಸರತ್ತಿನ ಮೂಲಕ ಸದೃಢ ಮೈಕಟ್ಟು ಕೂಡ ನಟನಾ ಕ್ಷೇತ್ರಕ್ಕೆ ಪೂರಕವಾದಂತಿತ್ತು. ಮುಂದೆ ಸ್ನಾತಕೋತ್ತರ ಪದವಿಯನ್ನು ಪಡೆದು ಉದ್ಯೋಗಕ್ಕೆ ಸೇರಿ ಕೈತುಂಬ ಸಂಬಳವಿದ್ದರು, ಮನಸ್ಸು ಬಣ್ಣದ ಬದುಕಿಗೆ ಮುಖಮಾಡಿತ್ತು.

ಏನಾದರಾಗಲಿ ಅಂದುಕೊಂಡು ಕೆಲಸಕ್ಕೆ ಗುಡ್ ಬೈ ಹೇಳಿ ನಟನಾ ಕ್ಷೇತ್ರದತ್ತ ಪಥ ಬದಲಿಸಿದರು. ಒಂದೆರಡು ವರ್ಷ ಕಾದರೂ ಅವಕಾಶ ಇವರ ಪಾಲಿಗೆ ಒಲಿಯಲಿಲ್ಲ. ಹೆತ್ತವರ ವಿರೋಧವು ಉಂಟಾಗಿ ಮತ್ತೆ ಮನಸ್ಸು ಉದ್ಯೋಗದತ್ತ ವಾಲಿತು. ದುಡಿದರೂ ಮನಸ್ಸಿನ ಮೂಲೆಯಲ್ಲಿ ಬಣ್ಣದ ಕನಸು ಹಾಗೆಯೇ ಇತ್ತು. ರಜಾ ಸಮಯ ಗೆಳೆಯನೊಬ್ಬನ ಕರೆಯಂತೆ ‘ಲವಲವಿಕೆ’ ಧಾರವಾಹಿಯ ಆಡಿಷನ್ನಲ್ಲಿ ಭಾಗವಹಿಸಿದರು. ಅಲ್ಲಿ ಆಯ್ಕೆಯಾದರು. ಮುಂದೆ 300 ಕಂತುಗಳನ್ನು ಪೂರೈಸಿದ ಈ ಧಾರವಾಹಿಯ ‘ಲಕ್ಕಿಯ’ ಪಾತ್ರ ಜನಮಾನಸದಲ್ಲಿ ಮೆಚ್ಚುಗೆಯಾಯಿತು.

‘ಅಮ್ಮ’ ಧಾರಾವಾಹಿಯಲ್ಲಿ ‘ನವೀನ’ ನಾಗಿ ಮಿಂಚಿದ್ದಾರೆ. ಉತ್ತಮ ನಟನೆಗಾಗಿ ”ಅತ್ಯುತ್ತಮ ನಟ ಪ್ರಶಸ್ತಿ”ಯ ಗರಿಯು ಇವರಿಗೆ ದೊರೆಯಿತು. ‘ಸರ್ಪ ಸಂಬಂಧ’ ಧಾರಾವಾಹಿಯ ನಂತರ ಸ್ಟಾರ್ ಸುವರ್ಣ ಚಾನೆಲ್ನ 700 ಕಂತು ಪೂರೈಸಿದ ‘ಮುದ್ದುಲಕ್ಷ್ಮಿ’ ಧಾರಾವಾಹಿಯಲ್ಲಿ ‘ಡಾ|| ಧ್ರುವಂತ್’ ಪಾತ್ರಧಾರಿಯಾಗಿ ಜನ-ಮನ ಗೆದ್ದಿದ್ದಾರೆ. ಕನ್ನಡ, ಮಲೆಯಾಳಿ, ತಮಿಳು ಭಾಷೆಯ ಜಾಹೀರಾತುಗಳಲ್ಲಿಯೂ ನಟಿಸಿದ್ದಾರೆ. ಇವರು ಸಿನಿಮಾ ಕ್ಷೇತ್ರಕ್ಕೂ ಪಾದರ್ಪಣೆ ಮಾಡಿರುತ್ತಾರೆ. ಕರ್ಮಯೋಗಿ ಚಲನಚಿತ್ರದೊಂದಿಗೆ, ಹಲವಾರು ಚಿತ್ರಗಳಲ್ಲಿ ನಟಿಸುವ ಬಗ್ಗೆ ಮಾತುಕತೆಯೂ ನಡೆದಿದೆ. ಆಸಕ್ತಿಗೆ ಸದಾ ಬೆನ್ನೆಲುಬಾಗಿ ಪತ್ನಿ ಮಂಜುಶ್ರೀ ಅವರಿದ್ದಾರೆ. ತನಗೆ ಬಂದ ಪಾತ್ರಗಳಿಗೆ ಶ್ರದ್ಧಾಪೂರ್ವಕವಾಗಿ ಜೀವ ತುಂಬುತ್ತಿರುವ ಚರಿತ್ ಅವಕಾಶ ನೀಡಿದ ನಿರ್ಮಾಪಕರು, ನಿರ್ದೇಶಕರಿಗೆ ಸದಾ ಚಿರ ಋಣಿಯಾಗಿದ್ದಾರೆ. ತಾನು ಆಸೆ ಪಟ್ಟಂತಹ ಈ ಕ್ಷೇತ್ರಕ್ಕೆ ಶ್ರಮಪಟ್ಟು ಕಾರ್ಯನಿರ್ವಹಿಸುತ್ತೇನೆ ಎಂಬ ಗಟ್ಟಿತನದ ಮಾತಿನ ಚರಿತ್ ಬಾಳಪ್ಪ ಪೂಜಾರಿ ರವರ ಬಣ್ಣದ ಬದುಕಿಗೆ ಶುಭವಾಗಲಿ ಎಂದು ಹಾರೈಸೋಣ.

✍️ ದೀಪಕ್ ಬೀರ ಪಡುಬಿದ್ರಿ


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »