TOP STORIES:

ಬಣ್ಣದ ಲೋಕದಲ್ಲಿ ಚರಿತ್ರೆ ಸೃಷ್ಟಿಸುವತ್ತ….ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ||ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ


ಭವಿಷ್ಯದ ಹಾದಿಗೆ ಸಾಧನೆಯ ನಿರಂತರತೆಯ ಬೆಳಕು ಪಸರಿಸಿ ಚಿತ್ತದಲಿ ಚಿಂತನೆಯು ಟಿಸಿಲೊಡೆದಾಗ ಸಂಕಲ್ಪಿತದೆಡೆ ಸಾಕ್ಷಾತ್ಕಾರ ಸಾಧ್ಯ. ಬದುಕಿನಲ್ಲಿ ಹಾಗೆ-ಹೀಗೆಯ ಕನವರಿಕೆಗೆ ಕನರದೆ ಗುರಿಯೆಡೆಗೆ ಸಾಗಿ ಚರಿತ್ರೆ ಸೃಷ್ಟಿಸಲು ಹೊರಟಿರೋ ಕನಸಿಗ ಚರಿತ್ ಬಾಳಪ್ಪ ಪೂಜಾರಿ ಇವರ ಬಾಲ್ಯದ ಬಗ್ಗೆ ತಿಳಿಯುವುದಾದರೆ ತಂದೆ ಬಾಳಪ್ಪ ಕೊಡಗಿನ ಕೊಡ್ಲಿಪೇಟೆಯವರು. ತಾಯಿ ಪ್ರೇಮ ದಕ್ಷಿಣ ಕನ್ನಡದ ಬಂಟ್ವಾಳದವರು.

ಚರಿತ್ ಬಂಟ್ವಾಳದಲ್ಲಿ ಹುಟ್ಟಿದರೂ ಪ್ರಾಥಮಿಕ, ಪಿಯು ಶಿಕ್ಷಣದವರೆಗೆ ಕೊಡಗನ್ನು ಆಶ್ರಯಿಸಿ ನಂತರದ ಶಿಕ್ಷಣವನ್ನು ಕರಾವಳಿಯಲ್ಲಿ ಮುಂದುವರೆಸಿದರು. ಕೊಡಗೆಂಬ ವೀರತ್ವದ ಮಣ್ಣಲ್ಲಿ ಆಡಿ ಬೆಳೆದ ಇವರಿಗೆ ಸೈನ್ಯಕ್ಕೆ ಸೇರಬೇಕು ಅಥವಾ ಸೇವಾ ಧರ್ಮದ ವೈದ್ಯನಾಗಬೇಕೆಂಬ ಹಂಬಲವಿತ್ತು. ಕಾಲೇಜು ದಿನದಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಇವರು ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದ ಬಗೆಗೂ ಆಸಕ್ತಿಯುತರಾದರು. ಕಬಡ್ಡಿ, ವಾಲಿಬಾಲ್, ಶಟಲ್ ಇತ್ಯಾದಿ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ದೈನಂದಿನ ದೈಹಿಕ ಕಸರತ್ತಿನ ಮೂಲಕ ಸದೃಢ ಮೈಕಟ್ಟು ಕೂಡ ನಟನಾ ಕ್ಷೇತ್ರಕ್ಕೆ ಪೂರಕವಾದಂತಿತ್ತು. ಮುಂದೆ ಸ್ನಾತಕೋತ್ತರ ಪದವಿಯನ್ನು ಪಡೆದು ಉದ್ಯೋಗಕ್ಕೆ ಸೇರಿ ಕೈತುಂಬ ಸಂಬಳವಿದ್ದರು, ಮನಸ್ಸು ಬಣ್ಣದ ಬದುಕಿಗೆ ಮುಖಮಾಡಿತ್ತು.

ಏನಾದರಾಗಲಿ ಅಂದುಕೊಂಡು ಕೆಲಸಕ್ಕೆ ಗುಡ್ ಬೈ ಹೇಳಿ ನಟನಾ ಕ್ಷೇತ್ರದತ್ತ ಪಥ ಬದಲಿಸಿದರು. ಒಂದೆರಡು ವರ್ಷ ಕಾದರೂ ಅವಕಾಶ ಇವರ ಪಾಲಿಗೆ ಒಲಿಯಲಿಲ್ಲ. ಹೆತ್ತವರ ವಿರೋಧವು ಉಂಟಾಗಿ ಮತ್ತೆ ಮನಸ್ಸು ಉದ್ಯೋಗದತ್ತ ವಾಲಿತು. ದುಡಿದರೂ ಮನಸ್ಸಿನ ಮೂಲೆಯಲ್ಲಿ ಬಣ್ಣದ ಕನಸು ಹಾಗೆಯೇ ಇತ್ತು. ರಜಾ ಸಮಯ ಗೆಳೆಯನೊಬ್ಬನ ಕರೆಯಂತೆ ‘ಲವಲವಿಕೆ’ ಧಾರವಾಹಿಯ ಆಡಿಷನ್ನಲ್ಲಿ ಭಾಗವಹಿಸಿದರು. ಅಲ್ಲಿ ಆಯ್ಕೆಯಾದರು. ಮುಂದೆ 300 ಕಂತುಗಳನ್ನು ಪೂರೈಸಿದ ಈ ಧಾರವಾಹಿಯ ‘ಲಕ್ಕಿಯ’ ಪಾತ್ರ ಜನಮಾನಸದಲ್ಲಿ ಮೆಚ್ಚುಗೆಯಾಯಿತು.

‘ಅಮ್ಮ’ ಧಾರಾವಾಹಿಯಲ್ಲಿ ‘ನವೀನ’ ನಾಗಿ ಮಿಂಚಿದ್ದಾರೆ. ಉತ್ತಮ ನಟನೆಗಾಗಿ ”ಅತ್ಯುತ್ತಮ ನಟ ಪ್ರಶಸ್ತಿ”ಯ ಗರಿಯು ಇವರಿಗೆ ದೊರೆಯಿತು. ‘ಸರ್ಪ ಸಂಬಂಧ’ ಧಾರಾವಾಹಿಯ ನಂತರ ಸ್ಟಾರ್ ಸುವರ್ಣ ಚಾನೆಲ್ನ 700 ಕಂತು ಪೂರೈಸಿದ ‘ಮುದ್ದುಲಕ್ಷ್ಮಿ’ ಧಾರಾವಾಹಿಯಲ್ಲಿ ‘ಡಾ|| ಧ್ರುವಂತ್’ ಪಾತ್ರಧಾರಿಯಾಗಿ ಜನ-ಮನ ಗೆದ್ದಿದ್ದಾರೆ. ಕನ್ನಡ, ಮಲೆಯಾಳಿ, ತಮಿಳು ಭಾಷೆಯ ಜಾಹೀರಾತುಗಳಲ್ಲಿಯೂ ನಟಿಸಿದ್ದಾರೆ. ಇವರು ಸಿನಿಮಾ ಕ್ಷೇತ್ರಕ್ಕೂ ಪಾದರ್ಪಣೆ ಮಾಡಿರುತ್ತಾರೆ. ಕರ್ಮಯೋಗಿ ಚಲನಚಿತ್ರದೊಂದಿಗೆ, ಹಲವಾರು ಚಿತ್ರಗಳಲ್ಲಿ ನಟಿಸುವ ಬಗ್ಗೆ ಮಾತುಕತೆಯೂ ನಡೆದಿದೆ. ಆಸಕ್ತಿಗೆ ಸದಾ ಬೆನ್ನೆಲುಬಾಗಿ ಪತ್ನಿ ಮಂಜುಶ್ರೀ ಅವರಿದ್ದಾರೆ. ತನಗೆ ಬಂದ ಪಾತ್ರಗಳಿಗೆ ಶ್ರದ್ಧಾಪೂರ್ವಕವಾಗಿ ಜೀವ ತುಂಬುತ್ತಿರುವ ಚರಿತ್ ಅವಕಾಶ ನೀಡಿದ ನಿರ್ಮಾಪಕರು, ನಿರ್ದೇಶಕರಿಗೆ ಸದಾ ಚಿರ ಋಣಿಯಾಗಿದ್ದಾರೆ. ತಾನು ಆಸೆ ಪಟ್ಟಂತಹ ಈ ಕ್ಷೇತ್ರಕ್ಕೆ ಶ್ರಮಪಟ್ಟು ಕಾರ್ಯನಿರ್ವಹಿಸುತ್ತೇನೆ ಎಂಬ ಗಟ್ಟಿತನದ ಮಾತಿನ ಚರಿತ್ ಬಾಳಪ್ಪ ಪೂಜಾರಿ ರವರ ಬಣ್ಣದ ಬದುಕಿಗೆ ಶುಭವಾಗಲಿ ಎಂದು ಹಾರೈಸೋಣ.

✍️ ದೀಪಕ್ ಬೀರ ಪಡುಬಿದ್ರಿ


Related Posts

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »