TOP STORIES:

FOLLOW US

ಬಣ್ಣದ ಲೋಕದಲ್ಲಿ ಚರಿತ್ರೆ ಸೃಷ್ಟಿಸುವತ್ತ….ಕಿರುತೆರೆಯ ಮುದ್ದುಲಕ್ಷ್ಮಿ ಧಾರಾವಾಹಿಯ ಡಾ||ಧ್ರುವಂತ್ ಪಾತ್ರಧಾರಿ : ಚರಿತ್ ಬಾಳಪ್ಪ ಪೂಜಾರಿ


ಭವಿಷ್ಯದ ಹಾದಿಗೆ ಸಾಧನೆಯ ನಿರಂತರತೆಯ ಬೆಳಕು ಪಸರಿಸಿ ಚಿತ್ತದಲಿ ಚಿಂತನೆಯು ಟಿಸಿಲೊಡೆದಾಗ ಸಂಕಲ್ಪಿತದೆಡೆ ಸಾಕ್ಷಾತ್ಕಾರ ಸಾಧ್ಯ. ಬದುಕಿನಲ್ಲಿ ಹಾಗೆ-ಹೀಗೆಯ ಕನವರಿಕೆಗೆ ಕನರದೆ ಗುರಿಯೆಡೆಗೆ ಸಾಗಿ ಚರಿತ್ರೆ ಸೃಷ್ಟಿಸಲು ಹೊರಟಿರೋ ಕನಸಿಗ ಚರಿತ್ ಬಾಳಪ್ಪ ಪೂಜಾರಿ ಇವರ ಬಾಲ್ಯದ ಬಗ್ಗೆ ತಿಳಿಯುವುದಾದರೆ ತಂದೆ ಬಾಳಪ್ಪ ಕೊಡಗಿನ ಕೊಡ್ಲಿಪೇಟೆಯವರು. ತಾಯಿ ಪ್ರೇಮ ದಕ್ಷಿಣ ಕನ್ನಡದ ಬಂಟ್ವಾಳದವರು.

ಚರಿತ್ ಬಂಟ್ವಾಳದಲ್ಲಿ ಹುಟ್ಟಿದರೂ ಪ್ರಾಥಮಿಕ, ಪಿಯು ಶಿಕ್ಷಣದವರೆಗೆ ಕೊಡಗನ್ನು ಆಶ್ರಯಿಸಿ ನಂತರದ ಶಿಕ್ಷಣವನ್ನು ಕರಾವಳಿಯಲ್ಲಿ ಮುಂದುವರೆಸಿದರು. ಕೊಡಗೆಂಬ ವೀರತ್ವದ ಮಣ್ಣಲ್ಲಿ ಆಡಿ ಬೆಳೆದ ಇವರಿಗೆ ಸೈನ್ಯಕ್ಕೆ ಸೇರಬೇಕು ಅಥವಾ ಸೇವಾ ಧರ್ಮದ ವೈದ್ಯನಾಗಬೇಕೆಂಬ ಹಂಬಲವಿತ್ತು. ಕಾಲೇಜು ದಿನದಲ್ಲಿ ಪಠ್ಯೇತರ ಚಟುವಟಿಕೆಯಲ್ಲಿ ಭಾಗಿಯಾಗಿದ್ದ ಇವರು ಮಾಡೆಲಿಂಗ್ ಮತ್ತು ನಟನಾ ಕ್ಷೇತ್ರದ ಬಗೆಗೂ ಆಸಕ್ತಿಯುತರಾದರು. ಕಬಡ್ಡಿ, ವಾಲಿಬಾಲ್, ಶಟಲ್ ಇತ್ಯಾದಿ ಕ್ರೀಡೆಗಳಲ್ಲಿ ಭಾಗಿಯಾಗಿದ್ದು, ದೈನಂದಿನ ದೈಹಿಕ ಕಸರತ್ತಿನ ಮೂಲಕ ಸದೃಢ ಮೈಕಟ್ಟು ಕೂಡ ನಟನಾ ಕ್ಷೇತ್ರಕ್ಕೆ ಪೂರಕವಾದಂತಿತ್ತು. ಮುಂದೆ ಸ್ನಾತಕೋತ್ತರ ಪದವಿಯನ್ನು ಪಡೆದು ಉದ್ಯೋಗಕ್ಕೆ ಸೇರಿ ಕೈತುಂಬ ಸಂಬಳವಿದ್ದರು, ಮನಸ್ಸು ಬಣ್ಣದ ಬದುಕಿಗೆ ಮುಖಮಾಡಿತ್ತು.

ಏನಾದರಾಗಲಿ ಅಂದುಕೊಂಡು ಕೆಲಸಕ್ಕೆ ಗುಡ್ ಬೈ ಹೇಳಿ ನಟನಾ ಕ್ಷೇತ್ರದತ್ತ ಪಥ ಬದಲಿಸಿದರು. ಒಂದೆರಡು ವರ್ಷ ಕಾದರೂ ಅವಕಾಶ ಇವರ ಪಾಲಿಗೆ ಒಲಿಯಲಿಲ್ಲ. ಹೆತ್ತವರ ವಿರೋಧವು ಉಂಟಾಗಿ ಮತ್ತೆ ಮನಸ್ಸು ಉದ್ಯೋಗದತ್ತ ವಾಲಿತು. ದುಡಿದರೂ ಮನಸ್ಸಿನ ಮೂಲೆಯಲ್ಲಿ ಬಣ್ಣದ ಕನಸು ಹಾಗೆಯೇ ಇತ್ತು. ರಜಾ ಸಮಯ ಗೆಳೆಯನೊಬ್ಬನ ಕರೆಯಂತೆ ‘ಲವಲವಿಕೆ’ ಧಾರವಾಹಿಯ ಆಡಿಷನ್ನಲ್ಲಿ ಭಾಗವಹಿಸಿದರು. ಅಲ್ಲಿ ಆಯ್ಕೆಯಾದರು. ಮುಂದೆ 300 ಕಂತುಗಳನ್ನು ಪೂರೈಸಿದ ಈ ಧಾರವಾಹಿಯ ‘ಲಕ್ಕಿಯ’ ಪಾತ್ರ ಜನಮಾನಸದಲ್ಲಿ ಮೆಚ್ಚುಗೆಯಾಯಿತು.

‘ಅಮ್ಮ’ ಧಾರಾವಾಹಿಯಲ್ಲಿ ‘ನವೀನ’ ನಾಗಿ ಮಿಂಚಿದ್ದಾರೆ. ಉತ್ತಮ ನಟನೆಗಾಗಿ ”ಅತ್ಯುತ್ತಮ ನಟ ಪ್ರಶಸ್ತಿ”ಯ ಗರಿಯು ಇವರಿಗೆ ದೊರೆಯಿತು. ‘ಸರ್ಪ ಸಂಬಂಧ’ ಧಾರಾವಾಹಿಯ ನಂತರ ಸ್ಟಾರ್ ಸುವರ್ಣ ಚಾನೆಲ್ನ 700 ಕಂತು ಪೂರೈಸಿದ ‘ಮುದ್ದುಲಕ್ಷ್ಮಿ’ ಧಾರಾವಾಹಿಯಲ್ಲಿ ‘ಡಾ|| ಧ್ರುವಂತ್’ ಪಾತ್ರಧಾರಿಯಾಗಿ ಜನ-ಮನ ಗೆದ್ದಿದ್ದಾರೆ. ಕನ್ನಡ, ಮಲೆಯಾಳಿ, ತಮಿಳು ಭಾಷೆಯ ಜಾಹೀರಾತುಗಳಲ್ಲಿಯೂ ನಟಿಸಿದ್ದಾರೆ. ಇವರು ಸಿನಿಮಾ ಕ್ಷೇತ್ರಕ್ಕೂ ಪಾದರ್ಪಣೆ ಮಾಡಿರುತ್ತಾರೆ. ಕರ್ಮಯೋಗಿ ಚಲನಚಿತ್ರದೊಂದಿಗೆ, ಹಲವಾರು ಚಿತ್ರಗಳಲ್ಲಿ ನಟಿಸುವ ಬಗ್ಗೆ ಮಾತುಕತೆಯೂ ನಡೆದಿದೆ. ಆಸಕ್ತಿಗೆ ಸದಾ ಬೆನ್ನೆಲುಬಾಗಿ ಪತ್ನಿ ಮಂಜುಶ್ರೀ ಅವರಿದ್ದಾರೆ. ತನಗೆ ಬಂದ ಪಾತ್ರಗಳಿಗೆ ಶ್ರದ್ಧಾಪೂರ್ವಕವಾಗಿ ಜೀವ ತುಂಬುತ್ತಿರುವ ಚರಿತ್ ಅವಕಾಶ ನೀಡಿದ ನಿರ್ಮಾಪಕರು, ನಿರ್ದೇಶಕರಿಗೆ ಸದಾ ಚಿರ ಋಣಿಯಾಗಿದ್ದಾರೆ. ತಾನು ಆಸೆ ಪಟ್ಟಂತಹ ಈ ಕ್ಷೇತ್ರಕ್ಕೆ ಶ್ರಮಪಟ್ಟು ಕಾರ್ಯನಿರ್ವಹಿಸುತ್ತೇನೆ ಎಂಬ ಗಟ್ಟಿತನದ ಮಾತಿನ ಚರಿತ್ ಬಾಳಪ್ಪ ಪೂಜಾರಿ ರವರ ಬಣ್ಣದ ಬದುಕಿಗೆ ಶುಭವಾಗಲಿ ಎಂದು ಹಾರೈಸೋಣ.

✍️ ದೀಪಕ್ ಬೀರ ಪಡುಬಿದ್ರಿ


Share:

More Posts

Category

Send Us A Message

Related Posts

ಗೆಜ್ಜೆಗಿರಿಯ ಮೂಲಕ ಬಿಲ್ಲವ ಸಮಾಜಕ್ಕೆ ಸಂಘಟಾನಾತ್ಮಕ ಬಲ ತುಂಬಲು ಹೊರಟ ಗೆಜ್ಜೆಗಿರಿ ಕ್ಷೇತ್ರಾಡಳಿತ ಸಮಿತಿಗೆ ಅಭಿನಂದನೆ


Share       ಬಿಲ್ಲವ ಸಮಾಜ ಸೇವಾ ಸಂಘ(ರಿ) ಕುಂದಾಪುರ ಇದರ ಅಧ್ಯಕ್ಷರಾದ ಅಶೋಕ್ ಪೂಜಾರಿ ಬಿಜಾಡಿ ಹಾಗೂ ಸಂಘದ ಪಧಾಧಿಕಾರಿಗಳು  ಬ್ರಹ್ಮ ಶ್ರೀ ನಾರಾಯಣ ಗುರುಗಳ ವಿದ್ಯೆಯಿಂದ ಸ್ವತಂತ್ರರಾಗಿರಿ ಸಂಘಟನೆಯಿಂದ  ಬಲಯುತರಾಗಿ ಎಂಬ ತತ್ವದಂತೆ  ಬಿಲ್ಲವ


Read More »

ರಕ್ತಹೀನತೆಯಿಂದ ಬಳಲುತ್ತಿರುವವರು ಹುರುಳಿ ಸೇವನೆ ಮಾಡಿ


Share       ಹುರುಳಿ ನಾಲಿಗೆಗೆ ರುಚಿ ನೀಡುವುದರ ಜೊತೆಗೆ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ. ಏಕೆಂದರೆ ಇದು ಪೌಷ್ಠಿಕಾಂಶಗಳಿಂದ ಸಮೃದ್ಧವಾಗಿದ್ದು, ಪ್ರೋಟೀನ್, ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಭಂಡಾರವಾಗಿದೆ. ಇದು ದೇಹಕ್ಕೆ ಅಗತ್ಯ ಪ್ರಯೋಜನಗಳನ್ನು ನೀಡುವ ಧಾನ್ಯವಾಗಿದೆ.


Read More »

ಬಂಟ್ವಾಳ ತಾಲೂಕು ಬಿಲ್ಲವ ಸಂಘದಲ್ಲಿ ಗೆಜ್ಜೆಗಿರಿ ಜಾತ್ರೋತ್ಸವ ಸಮಾಲೋಚನಾ ಸಭೆ


Share       ಬಂಟ್ವಾಳ : ಬಂಟ್ವಾಳ ತಾಲೂಕು ಬಿಲ್ಲವ ಸಮಾಜ ಸೇವಾ ಸಂಘದ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಆಡಳಿತ ಸಮಿತಿಯ ಪದಾಧಿಕಾರಿಗಳು ಕ್ಷೇತ್ರದ ವಾರ್ಷಿಕ ಜಾತ್ರಾ ಮಹೋತ್ಸಕ್ಕೆ ಆಮಂತ್ರಿಸಿದರು. ಗೆಜ್ಜೆಗಿರಿ ಕ್ಷೇತ್ರಾಡಳಿತ


Read More »

ಫುಡ್ ಫೆಸ್ಟ್ ನಿಂದ ಬಂದ ಹಣ ಬಡವರ್ಗಕ್ಜೆ ಮೀಸಲಿಡುತ್ತಿರುವ ಬಿರುವೆರ್ ಕುಡ್ಲ; 3 ಲಕ್ಷ ಮೌಲ್ಯದ ಕೃತಕ ಅಂಗಾಂಗ ಸಲಕರಣೆ ವಿತರಣೆ


Share       ಮಂಗಳೂರು: ಅವರೆಲ್ಲಾ ತಿಂಗಳ ಸಂಬಳಕ್ಕಾಗಿ ದುಡಿಯುವ ಯುವಕರು. ಆದ್ರೆ ದುಡಿದ ಹಣದಲ್ಲಿ ಸಮಾಜ ಸೇವೆಗಾಗಿ ಮೀಸಲಿಟ್ಟು ಸೇವಾ ಕಾರ್ಯ ನಡೆಸುತ್ತಿರುವ ಆ ತಂಡ ಮನೆಯಿಲ್ಲದವರಿಗೆ ಮನೆ,ಅನಾರೋಗ್ಯಕ್ಕೀಡಾದವರಿಗೆ ಚಿಕಿತ್ಸೆಗೆ ಹಣಕಾಸಿನ ನೆರವು,ದಿನಸಿ ಕಿಟ್ ,ಆಂಬುಲೆನ್ಸ್


Read More »

ಮಹಾ ಕುಂಭಮೇಳ: ಮಹಾಮಂಡಲೇಶ್ವರರಾಗಿ ಪಟ್ಟಾಭಿಶಕ್ತರಾದ ಕನ್ಯಾಡಿ ಶ್ರೀರಾಮ ಕ್ಷೇತ್ರದ ಬ್ರಹ್ಮಾನಂದ ಶ್ರೀ ಕರ್ನಾಟಕಕ್ಕೆ ಸಂದ ಮೊದಲ ಗೌರವ


Share       ಬೆಳ್ತಂಗಡಿ: ಧರ್ಮಸ್ಥಳ ಗ್ರಾಮದ ನಿತ್ಯಾನಂದ ನಗರದ ಕನ್ಯಾಡಿ ಶ್ರೀರಾಮ ಕ್ಷೇತ್ರ ಮಹಾಸಂಸ್ಥಾನದ ಪೀಠಾಧೀಶರಾದ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತೀ ಸ್ವಾಮೀಜಿಯವರಿಗೆ ಜ.31 ರಂದು ಪ್ರಯಾಗ್ ರಾಜ್ ನಲ್ಲಿ ನಡೆದ ಮಹಾ ಕುಂಬಮೇಳದಲ್ಲಿ ಉತ್ತರ


Read More »

ರಾಷ್ಟ್ರಮಟ್ಟದ ನ್ಯಾಷನಲ್ ಗೇಮ್ಸ್ -2025 ಗೆ ಕರ್ನಾಟಕ ತಂಡಕ್ಕೆ ಆಯ್ಕೆಯಾದ ಕಾಣಿಯೂರಿನ ಸೌಮ್ಯ ಪೂಜಾರಿ


Share       ಪುತ್ತೂರು: ಉತ್ತರಾಖಂಡದ ಹರಿದ್ವಾರದಲ್ಲಿ ನಡೆಯಲಿರುವ 38ನೇ ನ್ಯಾಷನಲ್ ಗೇಮ್ಸ್ -2025 ರಲ್ಲಿ ರಾಷ್ಟ್ರೀಯ ಮಹಿಳೆಯರ ಕಬಡ್ಡಿ ಚಾಂಪಿಯನ್‌ಶಿಪ್ ನಲ್ಲಿ ಭಾಗವಹಿಸಲು ಕರ್ನಾಟಕ ತಂಡಕ್ಕೆ ಕಾಣಿಯೂರಿನ ಸೌಮ್ಯ ಪೂಜಾರಿ ರವರು ಆಯ್ಕೆ ಆಗಿರುತ್ತಾರೆ. ಇವರು


Read More »