TOP STORIES:

ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ -ವಸಂತ್ ಗಿಳಿಯಾರ್


ಬನ್ನಾಡಿ ಗರೋಡಿ ಚಾಂಪ ಪೂಜಾರಿ ಎಂಬ ಹಿರಿಯರೊಬ್ಬರ ಬಗ್ಗೆ
-ವಸಂತ್ ಗಿಳಿಯಾರ್

ಇವತ್ತು ಚಾಂಪ ಪೂಜಾರಿಯವರಿಲ್ಲ! ಆದರೆ ಅವರ ಹೆಸರು ಉಳಿದಿದೆ, ಧರ್ಮಸ್ಥಳ ಎಂದರೆ ನಮ್ಮ ಭಾಗದಲ್ಲಿ ಎಂದಿಗೂ ನೆನಪಾಗುವ ಹೆಸರದು. ಧರ್ಮಸ್ಥಳದ ಸತ್ಯ, ಧರ್ಮ,ನ್ಯಾಯ,ನೀತಿ ಎಂಬ ಆಶಯಗಳನ್ನೇ ಬದುಕಿ ತನ್ನ ಬದುಕನ್ನೇ ಸತ್ಯವೃತವಾಗಿಸಿಕೊಂಡು ಕಾಯವನ್ನ ಗಂದದ ಕೊರಡಿನಂತೆ ಸವೆಸಿದ ಕೀರ್ತಿಶೇಷರು ಚಾಂಪ ಪೂಜಾರಿ.

ಆ ಕಾಲದಲ್ಲಿ ಈ ಊರಿನಿಂದ ಧರ್ಮಸ್ಥಳಕ್ಕೆ ಹೋಗಬೇಕಿದ್ದರೆ, ಖಾವಂದರ ನ್ಯಾಯ ಛಾವಡಿಯಲ್ಲಿ ವಾಗ್ ಕಲಹ ಪರಿಹಾರವಾಗಬೇಕಿದ್ದರೆ, ಸಸೂತ್ರವಾಗಿ ಮಂಜುನಾಥ ಸ್ವಾಮಿಯ ದರ್ಶನವಾಗಬೇಕಿದ್ದರೆ, ಯಾವ ದಿನ ಬೇಕಿದ್ದರೂ ಧರ್ಮಸ್ಥಳಕ್ಕೆ ಹೋಗಿ ಸುರಕ್ಷಿತವಾಗಿ ಮರಳ ಬಲ್ಲೆ ಎಂಬ ವಿಶ್ವಾಸ ಆ ಕಾಲದ ಭಕ್ತ ಕುಟುಂಬಗಳಿಗೆ ಬಂದದ್ದಿದ್ದರೆ ಈ ಭಾಗದಲ್ಲಿ ಅದೆಲ್ಲದಕ್ಕೂ ಏಕೈಕ ಹೆಸರು ಬನ್ನಾಡಿ ಚಾಂಪ ಪೂಜಾರಿಯವರದ್ದು.

ಚಾಂಪ ಫುಜಾರಿ ಎಂದರೆ ತೆಂಕಣದ ಧರ್ಮದೊಡೆಯನ ಹೃದಯ ಮಂದಿರದಲ್ಲಿಟ್ಟು ಪೂಜಿಸಿದ ಪುಣ್ಯಾತ್ಮ. ಅವರಿಗೆ ಪೂಜ್ಯ ಖಾವಂದರೆಂದರೆ ರಾಮನ ಮುಂದೆ ಹನುಮ ಭಾಗಿದಂತಹ ನಿಷ್ಠೆ, ಅವರದ್ದು ನಿಷ್ಕಳಂಕ ಮನಸ್ಸು, ಪರಿಶುಭ್ರ ಚಾರಿತ್ರ್ಯ. ಬನ್ನಾಡಿ ಗರೋಡಿಯ ಪೂಜೆಯವರಾಗಿದ್ದ ಚಾಂಪ ಫೂಜಾರಿಯವರ ಪೂಜೆಗೆ, ಯಾವ ದೈವವೂ ನಲಿದು, ಒಲಿದು ಬರಬೇಕು, ಅಂಥಹ ತಾದಾತ್ಮ್ಯತೆ

ಚಾಂಪ ಪೂಜಾರಿ ತನ್ನ ವ್ಯಾನಿನ ಮೂಲಕ ಬನ್ನಾಡಿ, ಗಿಳಿಯಾರು,ಕಾವಡಿ, ವಡ್ಡರ್ಸೆ,ಕೋಟ, ಪಡುಕರೆ,ಉಪ್ಲಾಡಿ ಹೀಗೆ ಪುಟ್ಟ ಪುಟ್ಟ ಊರಿನ ದಾರಿಗಳೂ ಧರ್ಮಸ್ಥಳಕ್ಕೆ ಬೆಸೆಯುವ ಸೇತುವೆಯಾದವರು.ಧರ್ಮಸ್ಥಳದ ಪೂಜ್ಯ ಖಾವಂದರಿಗೆ ಇಂದಿಗೂ ಚಾಂಪ ಪೂಜಾರಿಯವರ ಮೇಲೆ ಅಪಾರ ಪ್ರೀತಿ ನೆನೆಕೆ, ಖಾವಂದರ ಹೃದಯ ಗೆದ್ದವರು ಚಾಂಪ ಪೂಜಾರಿ. ಅವರ ನಗೆಯೇ ಒಂದು ಪ್ರೀತಿಯ ಕಡಲು ಈ ಪೋಟೋದಲ್ಲೆ ನೋಡಿ ಅವರ ಮುಖದಲ್ಲಿನ ತೇಜೋಪೂರ್ಣ ವರ್ಚಸ್ಸು.

ಚಾಂಪ ಪೂಜಾರಿ ಒಂದರ್ಥದಲ್ಲಿ ಅಕ್ಷರವಿಲ್ಲದ, ಜಗದ ಅರಿವಿಲ್ಲದ ಆ ಕಾಲದ ಮುಗ್ದ ಕುಟುಂಬದ ಪಾಲಿಗೆ ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ನಮ್ಮ ಭಾಗದ ದ್ವಾರವೇ ಆಗಿದ್ದರು. ನಾಡಿದ್ದು ಅಭಿಮತ ಸಂಭ್ರಮಕ್ಕೆ ನೀವು ಬರುವುದಾದರೆ ’ಬನ್ನಾಡಿ ಚಾಂಪ ಪೂಜಾರಿ ಮಹಾದ್ವಾರದ ಮೂಲಕವೇ ಬರಬೇಕು. ಹೌದು, ಅಭಿಮತ ಸಂಭ್ರಮದ ಮಹಾದ್ವಾರಕ್ಕೆ ಚಾಂಪ ಪೂಜಾರಿಯವರ ಹೆಸರನ್ನ ಇರಿಸಲಿದ್ದೇವೆ. ಇದು ನಾವು ಅವರನ್ನ ಗೌರವದಿಂದ ನೆನೆಯುವ ಪರಿ. ಬರುತ್ತೀರಿ ತಾನೆ?

ಬನ್ನಿ ಗಿಳಿಯಾರಿಗೆ;ತೀರ ನಿಮ್ಮದೇ ಎನಿಸುವ ಊರಿಗೆ !

ಫೋಟೋ ಕೃಪೆ, ಅವರ ಮೊಮ್ಮಗ ಬಿಗ್ ಬಾಸ್ Dhanraj Cm ❤

Vasanth Giliyar


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »