TOP STORIES:

ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ


“ಸೌರಭ ರತ್ನ” ರಾಜ್ಯ ಪ್ರಶಸ್ತಿ ಪುರಸ್ಕೃತ ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ.

ಕರ್ನಾಟಕ ರಾಜ್ಯೋತ್ಸವದ ಅಂಗವಾಗಿ ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ (ರಿ) ಬೆಂಗಳೂರು ವತಿಯಿಂದ ಕಿಂಚಿತ್ತು ಸಾಹಿತ್ಯ ಹಾಗೂ ಇತರ ಕ್ಷೇತ್ರಗಳ ಸೇವೆಯನ್ನು ಗುರುತಿಸಿ ಉದಯೋನ್ಮುಖರಿಗೆ, ಯುವ ಪ್ರತಿಭೆಗಳಿಗೆ ಕೊಡಮಾಡುವ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ರಾಜ್ಯೋತ್ಸವ ಸಂಭ್ರಮಾಚರಣೆ ನಕ್ಷತ್ರ ಹಾಲ್ , ಅಂಬರ್ ಎಲಿಗೆನ್ಸ್ ಕುಮಾರಸ್ವಾಮಿ ಲೇಔಟ್ ನಲ್ಲಿ ನವೆಂಬರ್ 22 ರಂದು ನಡೆಯಿತು. ಈ ಸಂದರ್ಭದಲ್ಲಿ ಕವಯಿತ್ರಿ, ನಿರೂಪಕಿ, ನೃತ್ಯಗಾರ್ತಿ, ಹಾಡುಗಾರ್ತಿ, ಬಹುಮುಖ ಪ್ರತಿಭೆ ರಶ್ಮಿ ಸನಿಲ್ (ರಶ್ಮಿತಾ) ಅವರಿಗೆ “ಉತ್ತಿಷ್ಠ ಸಾಧಕ ರತ್ನ” ರಾಜ್ಯ ಪ್ರಶಸ್ತಿ ನೀಡಿ ಗಣ್ಯರ ಸಮ್ಮುಖದಲ್ಲಿ ಗೌರವಿಸಲಾಯಿತು. ಉತ್ತಿಷ್ಠ ಚಾರಿಟೆಬಲ್ ಸೇವಾ ಟ್ರಸ್ಟ್ (ರಿ) ನ ಸಂಸ್ಥಾಪಕಧ್ಯಕ್ಷರು ಶ್ರೀಮತಿ ಸುಜಾತ ಎಂ.ಹಾಗೂ ಗೌರವಾಧ್ಯಕ್ಷರು ಶ್ರೀ ನರಸಿಂಹ ಮೂರ್ತಿ ಮುಂತಾದ ಗಣ್ಯರು ಉಪಸ್ಥಿತರಿದ್ದರು.

ಇನ್ಫೋಸಿಸ್ ಸಂಸ್ಥೆಯಲ್ಲಿ ಲೆಕ್ಕಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿರುವ ರಶ್ಮಿ ಸನಿಲ್ ಅವರು, ಕನ್ನಡ ತುಳು ಭಾಷೆಯಲ್ಲಿ ಹಿಡಿತವನ್ನು ಹೊಂದಿದ್ದು ನೂರಾರು ಕವನ ರಚಿಸಿ ಮನೆ ಮಾತಾದವರು, ಕವಿಗೋಷ್ಠಿಗಳಲ್ಲಿ ಪ್ರೌಢಿಮೆ ತೋರಿರುವ ಇವರು ತನ್ನ ಕವನಗಳಿಗಾಗಿ 300 ಕ್ಕೂ ಅಧಿಕ ಬಹುಮಾನ ಪಡೆದುಕೊಂಡವರು, ಲೇಖಕಿಯಾಗಿ, ಬರಹಗಾರ್ತಿಯಾಗಿ, ನೃತ್ಯಪಟುವಾಗಿ, ನಿರೂಪಕಿಯಾಗಿಯೂ ಮಿಂಚಿದವರು.


Related Posts

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »

🩸 ಓಮಾನ್ ಬಿಲ್ಲವಾಸ್ ವತಿಯಿಂದ ಆಯೋಜಿಸಲಾದ ಸಾಮೂಹಿಕ ರಕ್ತದಾನ ಶಿಬಿರ 🩸 ಬೌಶರ್ ಬ್ಲಡ್ ಬ್ಯಾಂಕ್, ಘಾಲಾ ಇಲ್ಲಿ ಯಶಸ್ವಿಯಾಗಿ ನಡೆಯಿತು.


Share          ಒಂದು ಕಾಲದಲ್ಲಿ ತುಳುನಾಡಿನ ಮೂಲದವರಾದ ಬಿಲ್ಲವರು ಕೃಷಿಕರಾಗಿ ಹಾಗೂ ಬೈದರಾಗಿ ತಮ್ಮ ಪರಿಶ್ರಮ, ಶ್ರಮಸಾಧನೆ ಮತ್ತು ಸಾಮಾಜಿಕ ಜವಾಬ್ದಾರಿಗಳ ಮೂಲಕ ಸಮಾಜದಲ್ಲಿ ಗೌರವಯುತ ಸ್ಥಾನವನ್ನು ಪಡೆದವರು. ಪ್ರಕೃತಿಯೊಂದಿಗೆ ಸಮನ್ವಯದಿಂದ ಬದುಕನ್ನು ಸಾಗಿಸುತ್ತಾ, ಪರಸ್ಪರ


Read More »

ನಾನು ಕಂಡ ಪ್ರವೀಣ್ ಪೂಜಾರಿ


Share         ನಾನು ಕಂಡ ಪ್ರವೀಣ್ ಪೂಜಾರಿ ಸಾಧಾರಣ 15 ವರ್ಷಗಳಿಂದ ನಮ್ಮ ಆತ್ಮೀಯತೆ ಬಿಲ್ಲವ ಸಮಾಜದ ಸಾಮಾನ್ಯ ಜನರಿಗೂ ಸಮಸ್ಯೆ ಬಂದಂತ ಸಂದರ್ಭದಲ್ಲಿ ವಕೀಲನಾಗಿ ಅಥವಾ ಸಾಮಾಜಿಕ ಕಾರ್ಯಕರ್ತನಾಗಿ ನ್ಯಾಯ ದೊರಕಿಸಿಕೊಟ್ಟಂತಹ ಒಬ್ಬ ನಮ್ಮ


Read More »

ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ನಿಶಾ ಪೂಜಾರಿ ಉತ್ತೀರ್ಣರಾಗಿದ್ದಾರೆ.


Share         ಮುಂಬಯಿ : ಕಾಂದಿವಲಿ ಪೂರ್ವದ ಠಾಕೂರ್ ಕಾಂಪ್ಲೆಕ್ಸ್ ನಿವಾಸಿ ನಿಶಾ ಪೂಜಾರಿ ಅವರು ಇತ್ತೀಚೆಗೆ ಸೆಪ್ಟೆಂಬರ್‌ನಲ್ಲಿ ನಡೆದ ಚಾರ್ಟರ್ಡ್ ಅಕೌಂಟೆಂಟ್ (CA) ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕಗಳನ್ನು ಗಳಿಸಿ ಯಶಸ್ವಿಯಾಗಿ ಉತ್ತೀರ್ಣರಾಗಿದ್ದಾರೆ. ಅವರು ಕಾರ್ಕಳ


Read More »

ಬಹುಮುಖ ಪ್ರತಿಭಾವಂತೆ ಹರ್ಷಿಕಾ ಕಾಣಿಯೂರು ಅವರಿಗೆ ಅಭಿನಂದನೆಗಳು


Share         ಹರ್ಷಿಕಾ ಕಾಣಿಯೂರು ಅವರ ಬಾಲ್ಯದ ವಯಸ್ಸಿನಲ್ಲಿಯೇ ಕೃಷಿ ಕಾರ್ಯದ ಮೇಲಿನ ಆಸಕ್ತಿ ಹಾಗೂ ಶ್ರಮವನ್ನು ಗುರುತಿಸಿ ಸೈಟ್ ರೀಟಾ ವಿದ್ಯಾ ಸಂಸ್ಥೆ ಗೌರವಿಸಿದ ಕ್ಷಣ ನಿಜಕ್ಕೂ ಹೆಮ್ಮೆಯದು. 🌾🌱👏   ಅಷ್ಟೇ ಅಲ್ಲದೆ,


Read More »