TOP STORIES:

ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ಸಂದೀಪ್ ಪೂಜಾರಿ


ಇಂದಿನ ಯುವ ಪೀಳಿಗೆ ಫೋಕಸ್ ಮಾಡುವುದು ಜಿಮ್ ಬಗ್ಗೆ. ಕಟ್ಟು ಮಸ್ತಾದ ಬಾಡಿಗಾಗಿ ಅದೆಷ್ಟೋ ಕಸರತ್ತು ಮಾಡುತ್ತಾರೆ. ಹೀಗೆ ಬಾಡಿ ಬಿಲ್ಡರ್ ಆಗಿ ದೊಡ್ಡ ಸಾಧನೆ ಮಾಡಲು ಹೊರಟಿರುವ ಬಜ್ಪೆಯ ಪ್ರತಿಭೆ ನಮ್ಮ ಸಂದೀಪ್ ಪೂಜಾರಿ

ಬಜ್ಪೆ ಯ ಕರಂಬರ್ ಗ್ರಾಮದ ರಮೇಶ್ ಪೂಜಾರಿ ಮತ್ತು ನಳಿನಾಕ್ಷಿ ದಂಪತಿಗಳ ಮಗ ಸಂದೀಪ್ ಪೂಜಾರಿ, ಇವರು ತನ್ನ ಪ್ರಾಥಮಿಕ ಹಾಗೂ ಪ್ರೌಢ ವಿದ್ಯಾ ಭ್ಯಾಸ ವನ್ನು ಹಿರಿಯ ಪ್ರಾಥಮಿಕ ಸಂತ ಜೋಸೆಫ್ ಪಿ.ಯು. ಕಾಲೇಜು ಬಜ್ಪೆ ಇಲ್ಲಿ ಮಾಡಿ ನಂತರ ಪದವಿಯನ್ನು ಶ್ರೀ ದುರ್ಗಾ ಪರಮೇಶ್ವರಿ ಫಸ್ಟ್ ಗ್ರೇಡ್ ಕಾಲೇಜ್ ಕಟೀಲ್ ಇಲ್ಲಿ ಮಾಡಿ ಮುಗಿಸಿದರು. ಬಾಡಿ ಬಿಲ್ಡಿಂಗ್ ಬಗ್ಗೆ ತುಂಬಾನೇ ಆಸಕ್ತಿ ಹೊಂದಿರುವ ಇವರು ಪರ್ಸನಲ್ ಟ್ರೈನರ್ ಆಗಿ ಹೊರದೇಶದಲ್ಲಿ ಸೇವೆಯನ್ನು ಸಲ್ಲಿಸುತ್ತಿದ್ದಾರೆ.ಇವರಿಗೆ ತರಬೇತಿಯನ್ನು ರವಿ ದೇವಾಡಿಗ ಮುಕ್ಕ ನೀಡುತ್ತಿದ್ದರು

ಬಡತನದಲ್ಲಿಯೇ ಬೆಳೆದು ಮೇಲೆ ಬಂದ ಇವರಿಗೆ ತಂದೆ ತಾಯಿ ಇಬ್ಬರು ಸಹೋದರಿಯರು ಅಲ್ಲದೆ ಬೇರೆ ಯಾರ ಪ್ರೋತ್ಸಾಹ ಬೆಂಬಲ ಸಿಗಲಿಲ್ಲಿ.ಸಾಧಿಸುವ ಛಲ ಒಂದು ಇದ್ದರೆ ಏನು ಬೇಕಾದರೂ ಸಾಧಿಸಬಹುದು ಎನ್ನುದಕ್ಕೆ ಇವರೇ ಸಾಕ್ಷಿ.

“ಜಿಮ್” ಕಸ್ಟಮರ್ ಗೆ ಟೀಚ್ ಮಾಡಿ ಕಾಂಫಿಟೇಷನ್ಗೆ ಪ್ರಿಪೇರ್ ಮಾಡುವುದು ಇವರ ಕನಸು. ಎರಡು ಮೂರು ಕಾಂಫಿಟೇಷನಲ್ಲಿ ಭಾಗವಹಿಸಿದ ಇವರಿಗೆ ಜಾಸ್ತಿ ಯಾಗಿ ಸರ್ಟಿಫೈ ಡ್ ಪರ್ಸನಲ್ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸುವ ಆಸೆ . ಸರ್ಟಿಫಿಕೇಟೆಡ್ ಪರ್ಸನಲ್ ಟ್ರೈನಿಂಗ್ ಮುಗಿಸಿದ ಇವರು ಇಲ್ಲಿಗಿಂತ ಹೊರದೇಶ( ಅಬ್ರಾಡ್) ದಲ್ಲಿಯೇ ಟ್ರೈನರ್ ಆಗಿ ಸೇವೆಯನ್ನು ಸಲ್ಲಿಸಿದ್ದಾರೆ

ಇಷ್ಟು ಮಾತ್ರ ಅಲ್ಲದೆ ಇವರು ಒಬ್ಬ ನಿಸ್ವಾರ್ಥ ಸಮಾಜ ಸೇವಕ ಬಡ ಜನರಿಗೆ, ಆಶ್ರಮ ಹೀಗೆ ಅನೇಕ ಕಡೆ ತನ್ನ ಕೈಲಾದಷ್ಟು ಸಹಾಯ ಮಾಡುವುದು ಅಲ್ಲದೆ 32ನೇ ಬಾರಿ ರಕ್ತ ದಾನ ಮಾಡಿದ ಯುವ ಸಮಾಜ ಸೇವಕರು ಹೌದು.

ತನ್ನದೇ ಆದ ತರಬೇತಿ ಸೆಂಟರ್ ನ್ನು ಇಟ್ಟು ಇಂದಿನ ಯುವ ಪೀಳಿಗೆಗೆ ಉತ್ತಮ ರೀತಿಯ ತರಬೇತಿ ಕೊಟ್ಟು ಸ್ಪರ್ಧೆ ಗೆ ತಯಾರಿ ಮಾಡುವ ಇವರ ಬಹು ದೊಡ್ಡ ಕನಸು ನನಸಾಗಲಿ ಹಾಗೆಯೇ ಇವರು ನಂಬಿರುವ ದೈವದೇವರುಗಳ ಅನುಗ್ರಹ ಹಾಗೂ ಕಟೀಲು ಅಮ್ಮನ ಅನುಗ್ರಹ ಸದಾ ಇವರ ಮತ್ತು ಇವರ ಕುಟುಂಬದ ಮೇಲಿರಲಿ ಇನ್ನಷ್ಟು ಸೇವೆ ಮಾಡಲು ಶಕ್ತಿ ಕೊಡಲಿ ಎಲ್ಲಾ ಒಳ್ಳೆಯದಾಗಲಿ ಎಂದು ಹಾರೈಸುವ

✍️ ನಮ್ಮ ಬಿರ್ವೆರ್ ಉಡುಪಿ

 


Related Posts

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »

ಉದಯೋನ್ಮುಖ ಪ್ರತಿಭಾ ಪುರಸ್ಕಾರಕ್ಕೆ ಅಕ್ಷತಾ ಸುಧೀರ್


Share         ಮಂಗಳೂರು/ಬೆಂಗಳೂರು: ಕರ್ನಾಟಕ ಆರ್ಯ ಈಡಿಗ ಮಹಿಳಾ ಸಂಘದ ವತಿಯಿಂದ ಆಯೋಜಿಸಲಾದ ರಾಷ್ಟ್ರೀಯ ಸಮ್ಮೇಳನದಲ್ಲಿ, ಯುವವಾಹಿನಿಯ ಬೆಂಗಳೂರು ಘಟಕದ ಹೆಮ್ಮೆಯ ಸದಸ್ಯೆಯೂ ಹಾಗೂ ಪ್ರಸಕ್ತ ಲೆಕ್ಕಪರಿಶೋಧಕರೂ ಆಗಿರುವ ಶ್ರೀಮತಿ ಅಕ್ಷತಾ ಸುಧೀರ್ ಅವರಿಗೆ ಉದಯೋನ್ಮುಖ


Read More »

ಕಲರ್ಸ್ ಕನ್ನಡ ಬಿಗ್ ಬಾಸ್ 12ರ ಸ್ಪರ್ಧಿ ಧ್ರುವಂತ್ (ಚರಿತ್ ಬಾಳಪ್ಪ ಪೂಜಾರಿ) ಜೀವನದ ಯಶೋಗಾಥೆ


Share         ಜೀವನದಲ್ಲಿ ಅದೆಷ್ಟೋ ಕಷ್ಟಗಳನ್ನು ಸಹಿಸಿಕೊಂಡು, ಅವಕಾಶಗಳಿಂದ ವಂಚಿತನಾದರೂ ಧೃತಿಗೆಡದೆ, ಸಾಧನೆಯ ಹಾದಿಯಲ್ಲಿ ಹಂತ ಹಂತವಾಗಿ ಮುನ್ನಡೆಯುತ್ತ ಇಂದು ಎಲ್ಲರ ಮನಗಳಲ್ಲಿ ಮನೆ ಮಾಡಿರುವಂತಹ ನಮ್ಮೆಲ್ಲರ ಹೆಮ್ಮೆಯ ಸಾಧಕ ಧ್ರುವಂತ್ ಇವರ ಯಶಸ್ಸಿನ ಹಿಂದಿನ


Read More »