TOP STORIES:

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 54 ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ(ರಿ) ಬಜಪೆ ಘಟಕ
ಸ್ಪಂದನ 54 ನೇ ಸೇವಾ ಯೋಜನೆ

ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ ತರುವ ಪಣವನ್ನು ತೊಟ್ಟಿರುವ ಶ್ರೀ ಉದಯ ಪೂಜಾರಿ ನೇತ್ರತ್ವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂರು ಕರ್ನಾಟಕ ಇದರ ಹೃದಯವಂತರು-2020 ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ 54ನೇ ಸೇವಾಯೋಜನೆಯಡಿಯಲ್ಲಿ ಸಹಾಯಧನವನ್ನು ದಿನಾಂಕ: 04.02.2021ನೇ ಗುರುವಾರದಂದು ಶಿಬರೂರು ನಿವಾಸಿ ಪೂವಪ್ಪ ಪೂಜಾರಿ ಇವರಿಗೆ ವೈದ್ಯಕೀಯ ನೆರವಿಗಾಗಿ ನೀಡಲಾಯಿತು.
ಪೂವಪ್ಪ ಪೂಜಾರಿ ಇವರು ಶಿಬರೂರಿನ ರಾಜೀವ‌ ನಗರದ ನಿವಾಸಿಯಾಗಿದ್ದು, ಜನವರಿ 4ನೇ ತಾರೀಕಿನಂದು ಕೆಲಸಕ್ಕೆ ಹೋಗುವ ಸಂದರ್ಭದಲ್ಲಿ ಬಸ್ ಡಿಕ್ಕಿ ಹೊಡೆದು ತಲೆಗೆ ಗಂಭೀರ ಗಾಯಗೊಂಡು ಕಂಕನಾಡಿಯ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ ಇವರ ಆರ್ಥಿಕ ಪರಿಸ್ಥಿತಿ ತುಂಬಾ ಸಂಕಷ್ಟದಲ್ಲಿ ಇದೆ. ಇವರ ಕುಟುಂಬ ಅತಿ ಕಡುಬಡತನದಲ್ಲಿ ಇದ್ದು ಮುಂದಿನ ಚಿಕಿತ್ಸೆಗಾಗಿ ಹಣದ ಕೊರತೆಯಿರುವುದರಿಂದ ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಸಹಾಯ ಕೋರಿ ಮನವಿ ಸಲ್ಲಿಸಿದ್ದರು. ಇವರ ಪರಿಸ್ಥಿತಿಯನ್ನು ಗಮನಿಸಿ ತಕ್ಷಣವೇ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ ಮುಖಾಂತರ ಇವರಿಗೆ ಆಸ್ಪತ್ರೆಯ ಖರ್ಚಿಗೆ ಧನಸಹಾಯ ಮಾಡಲಾಯಿತು.
ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಅಧ್ಯಕ್ಷರು ಪ್ರಶಾಂತ್‌ ಕುಮಾರ್ ಕೆಂಜಾರು ಕಾನ, ಕೀರ್ತನ್ ಅಮೀನ್ ಪೆರ್ಮುದೆ, ನಿರಂಜನ್ ಕರ್ಕೇರ ಪೋರ್ಕೊಡಿ, ಸಂದೇಶ್ ಶೆಟ್ಟಿ ‌ಜೋಕಟ್ಟೆ, ಪ್ರಸಾದ್ ಬೈದ್ಯ, ಜೀವನ್ ಪೆರ್ಮುದೆ, ರಮಾನಂದ ಪೂಜಾರಿ ಕಟೀಲು, ಅಖಿಲೇಶ್ ಅಮೀನ್ ಜೋಕಟ್ಟೆ, ಮನೀಶ್ ಪೂಜಾರಿ ಜೋಕಟ್ಟೆ ಉಪಸ್ಥಿತರಿದ್ದರು.


Related Posts

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »

ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ


Share         ಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶ್ರೀಯುತ ಮಂಜುನಾಥ ಪೂಜಾರಿ ಮುದ್ರಾಡಿ ಅವರಿಗೆ ರಾಜ್ಯ ಸಚಿವರ ಸ್ಥಾನಮಾನ ಲಭಿಸಿರುವುದು ನಮ್ಮ ಸಮಾಜಕ್ಕೆ ಹೆಮ್ಮೆಯ ಸಂಗತಿ. ಈ ಕುರಿತು ಏಪ್ರಿಲ್ 2ರಂದು ಸರಕಾರದ


Read More »

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »