TOP STORIES:

ಬಿರುವೆರ್ ಕುಡ್ಲ(ರಿ) ಬಜಪೆ ಘಟಕ ಸ್ಪಂದನ 55 ನೇ ಸೇವಾ ಯೋಜನೆ


ಬಿರುವೆರ್ ಕುಡ್ಲ(ರಿ) ಬಜಪೆ ಘಟಕ
ಸ್ಪಂದನ 55 ನೇ ಸೇವಾ ಯೋಜನೆ

ಬ್ರಹಶ್ರೀ ನಾರಾಯಣಗುರು ಸ್ವಾಮಿಗಳ ವೇದವಾಕ್ಯವಾದ ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ತತ್ವದಡಿಯಲ್ಲಿ ಅಶಕ್ತರ ಪಾಲಿನ ನಂದಾದೀಪವಾಗಿ ಸಮಾಜವನ್ನು ಸುಸ್ಥಿತಿಗೆ ತರುವ ಪಣವನ್ನು ತೊಟ್ಟಿರುವ ಶ್ರೀ ಉದಯ ಪೂಜಾರಿ ನೇತ್ರತ್ವದ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಹಾಗೂ 13ನೇ ರಾಷ್ಟ್ರೀಯ ಕನ್ನಡ ಸಂಸ್ಕೃತಿ ಸಮ್ಮೇಳನ ಮಂಗಳೂರು ಕರ್ನಾಟಕ ಇದರ ಹೃದಯವಂತರು-2020 ಪ್ರಶಸ್ತಿ ಪುರಸ್ಕೃತ ಫ್ರೆಂಡ್ಸ್ ಬಳ್ಳಾಲ್ ಭಾಗ್ ಬಿರುವೆರ್ ಕುಡ್ಲ(ರಿ) ಇದರ ಅಂಗ ಸಂಸ್ಥೆಯಾದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ 55ನೇ ಸೇವಾಯೋಜನೆಯಡಿಯಲ್ಲಿ ಎಕ್ಕಾರು ನಿವಾಸಿ ಪ್ರೇಮ ಇವರಿಗೆ wheelchair ಹಸ್ತಾಂತರ ಮಾಡಲಾಯಿತು.
ಎಕ್ಕಾರು ಕೆಂಚಗುಡ್ಡೆ ನಿವಾಸಿಯಾಗಿರುವ ಪ್ರೇಮ ಇವರು ಕಳೆದ ಕೆಲವು ದಿನಗಳಿಂದ ತಲೆಯಲ್ಲಿ ರಕ್ತ ಹೆಪ್ಪು ಗಟ್ಟಿ ಆಸ್ಪತ್ರೆಯಲ್ಲಿ ಕೆಲವು ದಿನಗಳ ಕಾಲ ಚಿಕಿತ್ಸೆ ಪಡೆದು ಮನೆಗೆ ಬಂದಿರುತ್ತಾರೆ. ಇವರು ಈಗ ನಡೆದುಕೊಂಡು ಹೋಗುವ ಪರಿಸ್ಥಿತಿಯಲ್ಲಿ ಇಲ್ಲ. ಇವರಿಗೆ wheelchair ನ ಅಗತ್ಯವಿತ್ತು. ಇದನ್ನು ಗಮನಿಸಿದ ಎಕ್ಕಾರು ಗ್ರಾಮ ಪಂಚಾಯತ್ ನ ಸದಸ್ಯರಾದ ಶ್ರೀ ಅನಿಲ್ ಕುಲಾಲ್ ಎಕ್ಕಾರು ಇವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಇವರಿಗೆ ಸಹಾಯಮಾಡುವಂತೆ ಮನವಿಯನ್ನು ಮಾಡಿದರು. ಇವರ ಮನವಿಗೆ ತಕ್ಷಣವೇ ಸ್ಪಂದಿಸುವ ಭರವಸೆ ಕೊಟ್ಟು, ತಾ: 17.02.2021ರಂದು ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದ ಸದಸ್ಯರು ಪ್ರೇಮ ಇವರ ಮನೆಗೆ ತೆರಳಿ WHEELCHAIR ಅವರಿಗೆ ನೀಡಲಾಯಿತು.
ಈ ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಪೆರ್ಮುದೆ ವಲಯದ ಸಂಚಾಲಕರು ಶ್ರೀ ಕೀರ್ತನ್ ಅಮಿನ್ ಪೆರ್ಮುದೆ, ಸಹಸಂಚಾಲಕರು ಜೀವರಾಜ್ ಕೋಟ್ಯಾನ್ ಪೆರ್ಮುದೆ, ಶ್ರೀ ಸಂದೇಶ್ ಶೆಟ್ಟಿ ಜೋಕಟ್ಟೆ, ಎಕ್ಕಾರು ಗ್ರಾಮ ಪಂಚಾಯತ್ ಸದಸ್ಯರು ಶ್ರೀ ಅನಿಲ್ ಕುಲಾಲ್ ಎಕ್ಕಾರು, ಘಟಕದ ಸಾಂಸ್ಕೃತಿಕ ಕಾರ್ಯದರ್ಶಿ ಶ್ರೀ ರಮಾನಂದ ಪೂಜಾರಿ ಕಟೀಲು, ಬಿರುವೆರ್ ಕುಡ್ಲ ಬಜಪೆ ಘಟಕದ ಎಕ್ಕಾರು ವಲಯದ ಪ್ರಮುಖರಾದ ಶ್ರೀ ಕಿರಣ್ ಪೂಜಾರಿ ಎಕ್ಕಾರು, Auto ಬೋಜ ಪೂಜಾರಿ ಸುದರ್ಶನ್ ಪೂಜಾರಿ, ಶಂಕರ್ ಪೂಜಾರಿ, ನಾಗೇಶ್ ಪೂಜಾರಿ ಉಪಸ್ಥಿತರಿದ್ದರು.

ತುರ್ತು ಸೇವಾಯೋಜನೆಯ WHEELCHAIR ಸಿದ್ಧ ಪಡಿಸಿದ ಪರಿ:
ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆ ಮನವಿ ಬಂದ ಕೂಡಲೇ ನಮ್ಮ ಘಟಕದ ಅಧ್ಯಕ್ಷರು ಶ್ರೀ ಪ್ರಶಾಂತ್ ಕುಮಾರ್ ಕೆಂಜಾರು ಕಾನ ಇವರು ತಕ್ಷಣವೇ ಒಂದು WHEELCHAIRನ್ನು ಗುರುತಿಸಿ, ಅದನ್ನು ಹೊಸ ರೂಪಕ್ಕೆ ತರುವಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಉಪಾಧ್ಯಕ್ಷರು ಶ್ರೀ ಚಂದ್ರ ಪೂಜಾರಿ ಪೆರಾರ ಮತ್ತು ಬಿರುವೆರ್ ಕುಡ್ಲ ಬಜಪೆ ಘಟಕದ ಸಕ್ರಿಯ ಸದಸ್ಯರು ಶ್ರೀ ಸಂದೇಶ್ ಶೆಟ್ಟಿ ಜೋಕಟ್ಟೆ ಇವರು ಸೇರಿ ಖುದ್ದಾಗಿ ಕೆಲಸ ಮಾಡಿ WHEELCHAIR ಕೊಡುವಲ್ಲಿ ನೆರವಾಗಿರುತ್ತಾರೆ. ಇವರಿಗೆ ಧನ್ಯವಾದಗಳು.

ಪ್ರಕಟಣೆ: ಬಿರುವೆರ್ ಕುಡ್ಲ ಬಜಪೆ ಘಟಕ


Related Posts

ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನಮ್ಮ ಸಮಾಜದ ಹೆಮ್ಮೆ ಎಸಿಪಿ ಶ್ರೀ ಎಸ್. ಮಹೇಶ್ ಕುಮಾರ್


Share         ಶ್ರೀ ಎಸ್. ಮಹೇಶ್ ಕುಮಾರ್ ಅವರು ಕಳೆದ 25 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ನಿಸ್ವಾರ್ಥ ಸೇವೆ ಸಲ್ಲಿಸಿ “ಜನಸ್ನೇಹಿ ಪೊಲೀಸ್” ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವುದು ಅವರ ಕರ್ತವ್ಯನಿಷ್ಠೆ ಮತ್ತು ಮಾನವೀಯತೆಯ ಪ್ರತೀಕವಾಗಿದೆ. 2012ರಲ್ಲಿ


Read More »

10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ ಲೀಡಿಂಗ್ ಬ್ಯಾಂಕ್ ಅವಾರ್ಡ್.


Share         ಪುಣೆಯ ಕೊರೆಗಾಂವ್ ಪಾರ್ಕ್‌ನ ಹೋಟೆಲ್ ವೆಸ್ಟಿನ್‌ನಲ್ಲಿ ನಡೆದ 10ನೇ ಅಖಿಲ ಭಾರತ ಅರ್ಬನ್ ಕೋ-ಆಪರೇಟಿವ್ ಬ್ಯಾಂಕಿಂಗ್ ಶೃಂಗಸಭೆಯಲ್ಲಿ ಭಾರತ್ ಬ್ಯಾಂಕಿಗೆ ಪ್ರತಿಷ್ಠಿತ “ಲೀಡಿಂಗ್ ಬ್ಯಾಂಕ್ ಅವಾರ್ಡ್” (Leading Bank Award) ನೀಡಿ ಗೌರವಿಸಲಾಯಿತು.


Read More »

ಕುದ್ರೋಳಿ ಗೋಕರ್ಣ ಕ್ಷೇತ್ರ ಅಭಿವೃದ್ಧಿ ರೂವಾರಿ ಬಿ. ಜನಾರ್ದನ ಪೂಜಾರಿ ಅವರ ಉಪಸ್ಥಿತಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪದ್ಮರಾಜ್ ಆರ್. ಸ್ಪಷ್ಟನೆ


Share         ಮಂಗಳೂರು: ಕುದ್ರೋಳಿ ಗೋಕರ್ಣನಾಥ ಕ್ಷೇತ್ರದ ಆಡಳಿತ ನಿರ್ವಹಣೆಗೆ ಪ್ರಸ್ತುತ ಇರುವ ಸಮಿತಿಯ ಹೊರತಾಗಿ ಯಾವುದೇ ಹೊಸ ಸಮಿತಿ ರಚನೆಯಾಗಿಲ್ಲ ಎಂದು ಸಮಿತಿಯ ಕೋಶಾಧಿಕಾರಿ ಪದ್ಮರಾಜ್ ಆರ್. ಶನಿವಾರ ಇಲ್ಲಿ ತಿಳಿಸಿದರು. ಕ್ಷೇತ್ರದ ಅಭಿವೃದ್ಧಿ


Read More »

ಶೈಕ್ಷಣಿಕ ಸಾಧನೆಯಲ್ಲೂ ‘ಸೇಮ್ ಟು ಸೇಮ್’: ಕುಂದಾಪುರದ ಅವಳಿ ಸಹೋದರಿಯರ SSLC ಪವಾಡ!


Share         ​ಕುಂದಾಪುರ: ಅವಳಿ ಜವಳಿ ಮಕ್ಕಳು ಅಂದಮೇಲೆ ಅವರ ರೂಪ, ಬಣ್ಣ, ನಡವಳಿಕೆ ಹಾಗೂ ಆಲೋಚನೆಗಳಲ್ಲಿ ಸಾಮ್ಯತೆ ಇರುವುದು ಸಹಜ ಸಂಗತಿ. ಆದರೆ, ಕುಂದಾಪುರದ ಈ ಇಬ್ಬರು ಸಹೋದರಿಯರು ಶೈಕ್ಷಣಿಕ ಸಾಧನೆಯಲ್ಲೂ ತಾವು ಸಂಪೂರ್ಣವಾಗಿ


Read More »

ಮಂಗಳೂರು ದಸರಾ ಇತಿಹಾಸದಲ್ಲಿ ಹೊಸ ಮೈಲಿಗಲ್ಲು – ₹67 ಕೋಟಿ ವೆಚ್ಚದ ಭೂಗತ ಕೇಬಲ್ ಯೋಜನೆಗೆ ಮಂಜೂರಾತಿ


Share         ವಿಶ್ವವಿಖ್ಯಾತ ಮಂಗಳೂರು ದಸರಾ ಮಹೋತ್ಸವದ ಮೆರವಣಿಗೆಗೆ ದಶಕಗಳಿಂದ ಎದುರಾಗಿದ್ದ ತಾಂತ್ರಿಕ ಸವಾಲಿಗೆ ಈಗ ಶಾಶ್ವತ ಪರಿಹಾರ ಸಿಕ್ಕಂತಾಗಿದೆ. ಕುದ್ರೋಳಿ ಶ್ರೀ ಗೋಕರ್ನಾಥ ಕ್ಷೇತ್ರದ ಆಡಳಿತ ಮಂಡಳಿಯ ಸುದೀರ್ಘ ಪ್ರಯತ್ನದ ಫಲವಾಗಿ, ಮೆರವಣಿಗೆ ಮಾರ್ಗದಲ್ಲಿ


Read More »

ಉಡುಪಿ ಸಿಟಿ ಬಸ್‌ ಚಾಲಕನ ಮಗಳು ಶಾಲೆಗೆ ಪ್ರಥಮ ರಾಂಕ್ – ದ್ರುತಿ ಪೂಜಾರಿ ಸಾಧನೆ…


Share         ಉಡುಪಿ: ಶ್ರಮ, ಸಂಕಲ್ಪ ಮತ್ತು ಕುಟುಂಬದ ಬೆಂಬಲ ಇದ್ದರೆ ಯಾವ ಸಾಧನೆಯೂ ಅಸಾಧ್ಯವಲ್ಲ ಎಂಬುದಕ್ಕೆ ನಗರದ ಸಿಟಿ ಬಸ್ ಚಾಲಕರ ಮಗಳು ದ್ರುತಿ ಪೂಜಾರಿ ಉತ್ತಮ ಉದಾಹರಣೆ ಆಗಿದ್ದಾಳೆ. 23/04/2026 ರಂದು ಪ್ರಕಟವಾದ


Read More »