TOP STORIES:

ಬಿರುವೆರ್ ಕುಡ್ಲ(ರಿ.) ಬಜಪೆ ಘಟಕ ಸ್ಪಂದನ ತಂಡದ 66ನೇ ಸೇವಾ ಯೋಜನೆ.


ದಿನಾಂಕ 14.12.2021 ನೇ ಮಂಗಳವಾರ ನಮ್ಮ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಯೋಜನೆ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗೆ ಸಹಾಯಧನ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರು ಪೈಟಿಂಗ್ ಕೆಲಸ ಮಾಡುತ್ತಿರುವಾಗ ಮೇಲಿನಿಂದ ಕೆಳಗೆ ಬಿದ್ದು ತನ್ನ ಬೆನ್ನುಮೂಳೆಮುರಿತಕ್ಕೊಳಪಟ್ಟು ನಾಲ್ಕು ವರ್ಷದಿಂದ ವೀಲ್ ಚೇರ್ ನಲ್ಲಿ ಓಡಾಡುವ ಸ್ಥಿತಿಯಲ್ಲಿ ಇದ್ದಾರೆ. ಎಷ್ಟೇ ಪ್ರಯತ್ನ ಪಟ್ಟರು ಬೆನ್ನುಮೂಳೆಸರಿಪಡಿಸಲು ಸಾಧ್ಯವಾಗಲಿಲ್ಲ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲವಿದ್ದರು ಇವರ ಕುಟುಂಬದ ಆರ್ಥಿಕಪರಿಸ್ಥಿತಿ ತುಂಬಾ ಹದಗೆಟ್ಟಿರುವುದರಿಂದ ಇವರ ಜೀವನ ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮಲಗಲು ನೀರಿನ ಹಾಸಿಗೆ ಹಾಗೂವೈದ್ಯಕೀಯ ನೆರವು ಇವರಿಗೆ ಅತ್ಯವಶ್ಯಕವಾಗಿ ಬೇಕಾಗಿರುವುದರಿಂದ ದಿನೇಶ್ ರವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆಮನವಿಯನ್ನು ಮಾಡಿರುತ್ತಾರೆ. ಮನವಿಯನ್ನು ತಕ್ಷಣವೇ ಪರಿಗಣಿಸಿದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದಸದಸ್ಯರು ಇವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗಾಗಿ ಸಹಾಯಧನವನ್ನು ನೀಡಲಾಯಿತು.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾಧ್ಯಕ್ಷರಾದ ಶ್ರೀ ಶರತ್ ಪೂಜಾರಿ ಬಜಪೆ, ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ, ಉಪಾಧ್ಯಕ್ಷರುಗಾಳದ  ಶ್ರೀ ಚಂದ್ರಶೇಖರ್ ಎಂ ಅಮೀನ್, ಚಂದ್ರಪೂಜಾರಿ ಪೆರಾರ, ದಿನೇಶ್ ಬಂಗೇರ, ಸಂಘಟನಾ ಕಾರ್ಯದರ್ಶಿಯಾದ ಶ್ರೀ ಚೇತನ್ ಬಂಗೇರ, ಪೆರ್ಮುದೆ ಸಂಚಾಲಕರಾದ ಕೀರ್ತನ್ ಅಮೀನ್, ಬ್ರಿಜೇಶ್ ಬಜಪೆ, ದೇವಿಪ್ರಸಾದ್ ಬಜಪೆ, ಕಿರಣ್ ಪೂಜಾರಿ ಎಕ್ಕಾರು, ಪ್ರಖ್ಯಾತ್ ಕೆಂಜಾರು ಕಾನ, ಸಂದೇಶ್ ಶೆಟ್ಟಿ ಜೋಕಟ್ಟೆ ಉಪಸ್ಥಿತರಿದ್ದರು.

ವಂದನೆಗಳೊಂದಿಗೆ

ಬ್ರಹ್ಮಶ್ರೀ ನಾರಾಯಣ ಗುರುವೇ ನಮಃ.

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು.

ಬಿರುವೆರ್ ಕುಡ್ಲ ಬಜಪೆ ಘಟಕ


Related Posts

ಕಾರ್ಕಳದ ಸುಧಾಕರ್ ಪೂಜಾರಿಗೆ ‘ಐಕಾನಿಕ್ ಟ್ರೈನರ್’ ಗೌರವ ಪದವಿ


Share         ಬೆಂಗಳೂರು: ಎಕ್ಕಾರ ಲೈಫ್ ಸೈನ್ಸಸ್ ಪ್ರೈವೇಟ್ ಲಿಮಿಟೆಡ್ ಇದರ ಆಡಳಿತ ನಿರ್ದೇಶಕರಾದ ಕಾರ್ಕಳದ ಸುಧಾಕರ್ ಪೂಜಾರಿ ಅವರಿಗೆ ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ವತಿಯಿಂದ “ಐಕಾನಿಕ್ ಟ್ರೈನರ್” ಎಂಬ ಗೌರವಪೂರ್ಣ ಪದವಿ ಪ್ರದಾನ ಮಾಡಲಾಗಿದೆ.


Read More »

ಅನಿತಾ ಪಿ. ತಾಕೊಡೆ ಅವರ ‘ಮೇಣಕ್ಕಂಟಿದ ಬತ್ತಿ’ ಕವನಕ್ಕೆ ಒಲಿದ ಸಂಕಮ್ಮ ಸಂಕಣ್ಣನವರ್ ದತ್ತಿ ಪ್ರಶಸ್ತಿ


Share         ಕರ್ನಾಟಕ ಲೇಖಕಿಯರ ಸಂಘವು 2025ನೇ ಸಾಲಿನ ವಿವಿಧ ದತ್ತಿನಿಧಿ ವಾರ್ಷಿಕ ಪ್ರಶಸ್ತಿಗಳನ್ನು ಪ್ರಕಟಿಸಿದೆ. ಹಸ್ತಪ್ರತಿಯಲ್ಲಿ ಗವಿಸಿದ್ದ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿ ಪಡೆದ, ಅನಿತಾ ತಾಕೊಡೆಯವರ ‘ಮೇಣಕ್ಕಂಟಿದ ಬತ್ತಿ’ ಕವನ ಸಂಕಲನ ಕ್ಕೆ 


Read More »

ಚಿಕ್ಕ ವಯಸ್ಸಿನಲ್ಲಿ ಸಾಧನೆ ಇಂಡಿಯಾ ಬುಕ್ ಆಫ್ ರೆಕಾರ್ಡ್‌ನಲ್ಲಿ ಬಾಲಕ ಸುಹಾಂಶ್‌ನ ಎಸ್ ಬಂಗೇರ ದಾಖಲೆ


Share         ದಾವಣಗೆರೆ : ನಗರದ ಶಾಂತಪ್ಪ ಪೂಜಾರಿ ಹಾಗೂ ಶ್ರೀಮತಿ ಹೇಮಾ ಶಾಂತಪ್ಪ ಪೂಜಾರಿ ಇವರ ಮೊಮ್ಮಗನಾದ ಕು. ಸುಹಾಂಶ್ ಎಸ್ ಬಂಗೇರ “ಇಂಡಿಯಾ ಬುಕ್ ಆಫ್ ರೆಕಾರ್ಡ್’ನ ಸಾಧಕನಾಗಿದ್ದು, ಸರಿಸುಮಾರು 195 ರಾಷ್ಟ್ರಗಳ


Read More »

ಖೇಲೋ ಇಂಡಿಯಾ ರಾಷ್ಟ್ರೀಯ ಕರಾಟೆ ತಂಡಕ್ಕೆ ಆಯ್ಕೆಯಾದ ಕರಾಟೆ ಪಟು ಛಾಯಾ ಎಸ್. ಪೂಜಾರಿ.


Share         ಚಿನ್ನ 30 ಬೆಳ್ಳಿ 1 ಕಂಚು – ಇದು ಛಾಯಾ ಎಸ್. ಪೂಜಾರಿ ಅವರ ಒಂದು ದಶಕದ ಪರಿಶ್ರಮ ಹಾಗೂ ಸಾಧನೆಗೆ ಸಂದಿರುವ ಗೌರವದ ತುರಾಯಿ. ಉಡುಪಿ ಜಿಲ್ಲೆಯ ಹೆರ್ಗ ಕಾಂತಾ ಬೆಟ್ಟು


Read More »

ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಅವರಿಗೆ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ


Share         ನಮ್ಮ ಹೆಮ್ಮೆಯ ಕರಾವಳಿಯ ಪ್ರತಿಭೆ, ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಕ್ರೀಡಾಪಟು ಶ್ರೀಮತಿ ಅಕ್ಷತಾ ಪೂಜಾರಿ ಸಿದ್ದಕಟ್ಟೆ ಅವರಿಗೆ ಫಸ್ಟ್ ನ್ಯೂಸ್ ವಾಹಿನಿಯ ಪ್ರತಿಷ್ಠಿತ ‘ಮಹಿಳಾ ಮಾಣಿಕ್ಯ’ ಪ್ರಶಸ್ತಿ ಲಭಿಸಿರುವುದು ನಾಡಿಗೆ ಸಂದ ಗೌರವ. ಗ್ರಾಮೀಣ


Read More »

ಪುತ್ತೂರು:ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯ ಮಾಜಿ ಅಧ್ಯಕ್ಷ ರವಿಕುಮಾರ್ ಕಲ್ಕಾರ್ ನಿಧನ


Share         ಪುತ್ತೂರು: ಶಾಂತಿಗೋಡು ಕಲ್ಕಾರ್ ನಿವಾಸಿ ರವಿಕುಮಾರ್ ಕಲ್ಕಾರ್(48ವ.)ರವರು ಫೆ.15ರಂದು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ಬ್ರಹ್ಮಶ್ರೀ ನಾರಾಯಣ ಗುರುಪೂಜೆ ಸಂದರ್ಭ ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿ ವತಿಯಿಂದ ನಡೆಸಲ್ಪಟ್ಟ ಕ್ರೀಡಾಕೂಟದಲ್ಲಿ ರವಿ ಕಲ್ಕಾರ್ ರವರು


Read More »