TOP STORIES:

FOLLOW US

ಬಿರುವೆರ್ ಕುಡ್ಲ(ರಿ.) ಬಜಪೆ ಘಟಕ ಸ್ಪಂದನ ತಂಡದ 66ನೇ ಸೇವಾ ಯೋಜನೆ.


ದಿನಾಂಕ 14.12.2021 ನೇ ಮಂಗಳವಾರ ನಮ್ಮ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾನ್ವಿತ ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ ಇವರ ಹುಟ್ಟು ಹಬ್ಬದ ಪ್ರಯುಕ್ತ ಸೇವಾ ಯೋಜನೆ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗೆ ಸಹಾಯಧನ ನೀಡಲಾಯಿತು.

ಬಜಪೆ ನಿವಾಸಿ ದಿನೇಶ್ ರವರು ಪೈಟಿಂಗ್ ಕೆಲಸ ಮಾಡುತ್ತಿರುವಾಗ ಮೇಲಿನಿಂದ ಕೆಳಗೆ ಬಿದ್ದು ತನ್ನ ಬೆನ್ನುಮೂಳೆಮುರಿತಕ್ಕೊಳಪಟ್ಟು ನಾಲ್ಕು ವರ್ಷದಿಂದ ವೀಲ್ ಚೇರ್ ನಲ್ಲಿ ಓಡಾಡುವ ಸ್ಥಿತಿಯಲ್ಲಿ ಇದ್ದಾರೆ. ಎಷ್ಟೇ ಪ್ರಯತ್ನ ಪಟ್ಟರು ಬೆನ್ನುಮೂಳೆಸರಿಪಡಿಸಲು ಸಾಧ್ಯವಾಗಲಿಲ್ಲ. ಜೀವನದಲ್ಲಿ ಏನಾದರೂ ಸಾಧನೆ ಮಾಡಬೇಕು ಎಂಬ ಛಲವಿದ್ದರು ಇವರ ಕುಟುಂಬದ ಆರ್ಥಿಕಪರಿಸ್ಥಿತಿ ತುಂಬಾ ಹದಗೆಟ್ಟಿರುವುದರಿಂದ ಇವರ ಜೀವನ ಸಾಗಿಸಲು ತುಂಬಾ ಕಷ್ಟ ಪಡುತ್ತಿದ್ದಾರೆ. ಮಲಗಲು ನೀರಿನ ಹಾಸಿಗೆ ಹಾಗೂವೈದ್ಯಕೀಯ ನೆರವು ಇವರಿಗೆ ಅತ್ಯವಶ್ಯಕವಾಗಿ ಬೇಕಾಗಿರುವುದರಿಂದ ದಿನೇಶ್ ರವರು ಬಿರುವೆರ್ ಕುಡ್ಲ ಬಜಪೆ ಘಟಕಕ್ಕೆಮನವಿಯನ್ನು ಮಾಡಿರುತ್ತಾರೆ. ಮನವಿಯನ್ನು ತಕ್ಷಣವೇ ಪರಿಗಣಿಸಿದ ಬಿರುವೆರ್ ಕುಡ್ಲ ಬಜಪೆ ಘಟಕದ ಸ್ಪಂದನ ತಂಡದಸದಸ್ಯರು ಇವರಿಗೆ ಮಲಗಲು ನೀರಿನ ಹಾಸಿಗೆ ಹಾಗೂ ವೈದ್ಯಕೀಯ ನೆರವಿಗಾಗಿ ಸಹಾಯಧನವನ್ನು ನೀಡಲಾಯಿತು.

ಸಂದರ್ಭದಲ್ಲಿ ಬಿರುವೆರ್ ಕುಡ್ಲ ಬಜಪೆ ಘಟಕದ ಗೌರವಾಧ್ಯಕ್ಷರಾದ ಶ್ರೀ ಶರತ್ ಪೂಜಾರಿ ಬಜಪೆ, ಅಧ್ಯಕ್ಷರಾದ ಶ್ರೀ ಪ್ರಶಾಂತ್ಕುಮಾರ್ ಕೆಂಜಾರು ಕಾನ, ಉಪಾಧ್ಯಕ್ಷರುಗಾಳದ  ಶ್ರೀ ಚಂದ್ರಶೇಖರ್ ಎಂ ಅಮೀನ್, ಚಂದ್ರಪೂಜಾರಿ ಪೆರಾರ, ದಿನೇಶ್ ಬಂಗೇರ, ಸಂಘಟನಾ ಕಾರ್ಯದರ್ಶಿಯಾದ ಶ್ರೀ ಚೇತನ್ ಬಂಗೇರ, ಪೆರ್ಮುದೆ ಸಂಚಾಲಕರಾದ ಕೀರ್ತನ್ ಅಮೀನ್, ಬ್ರಿಜೇಶ್ ಬಜಪೆ, ದೇವಿಪ್ರಸಾದ್ ಬಜಪೆ, ಕಿರಣ್ ಪೂಜಾರಿ ಎಕ್ಕಾರು, ಪ್ರಖ್ಯಾತ್ ಕೆಂಜಾರು ಕಾನ, ಸಂದೇಶ್ ಶೆಟ್ಟಿ ಜೋಕಟ್ಟೆ ಉಪಸ್ಥಿತರಿದ್ದರು.

ವಂದನೆಗಳೊಂದಿಗೆ

ಬ್ರಹ್ಮಶ್ರೀ ನಾರಾಯಣ ಗುರುವೇ ನಮಃ.

ಅಧ್ಯಕ್ಷರು ಹಾಗೂ ಸರ್ವ ಸದಸ್ಯರು.

ಬಿರುವೆರ್ ಕುಡ್ಲ ಬಜಪೆ ಘಟಕ


Share:

More Posts

Category

Send Us A Message

Related Posts

ಬೈದ್ಯೆರುಗಳಲ್ಲಿ ಲೀನವಾದ ದರ್ಶನ ಪಾತ್ರಿ ಶ್ರೀ ಸುರೇಶ್ ಪೂಜಾರಿ


Share         ಪ್ರಸಿದ್ದ ಬೈದ್ಯೇರುಗಳ ಪಾತ್ರಿಯಾದ  ಶ್ರೀ ಸುರೇಶ್ ಪೂಜಾರಿಯವರು ಅಲ್ಪಕಾಲದ  ಅಸೌಖ್ಯದ ಕಾರಣ ಇಂದು ಭಗವಂತನ ಪಾದ ಸೇರಿದರು. ಕಳತ್ತೂರು ಹಿರಿಯಣ್ಣ ಪೂಜಾರಿ ಹಾಗೂ ಶ್ರೀಮತಿ ಲೀಲಾವತಿ ಪೂಜಾರಿಯವರ ಮಗನಾದ ಶ್ರೀ ಸುರೇಶ್


Read More »

ಭಾರತ್ ಬ್ಯಾಂಕ್‌ನ ಕಾರ್ಯಾಧ್ಯಕ್ಷರಾದ ಸೂರ್ಯಕಾಂತ್ ಜಯ ಸುವರ್ಣರಿಗೆ ಐವತ್ತರ ಸಂಭ್ರಮ


Share       ಸಮಾಜದಲ್ಲಿ ಮಹತ್ವದ ಜವಾಬ್ದಾರಿಯನ್ನು ವಹಿಸಿಕೊಂಡಿರುವ ವ್ಯಕ್ತಿ ಸಾಮಾಜಿಕವಾಗಿ ಮತ್ತು ಭಾವನಾತ್ಮಕವಾಗಿ ಸಮತೋಲನವನ್ನು ಸಾಧಿಸಿದರೆ ಮಾತ್ರ ಅವನು ಯಶಸ್ಸಿನ ಮೆಟ್ಟಿಲೇರಲು ಸಾಧ್ಯ. ‘ಸುಖ-ದುಃಖ, ಲಾಭ -ನಷ್ಟ ಸೋಲು-ಗೆಲುವನ್ನು ಸಮಾನವಾಗಿ ತೆಗೆದುಕೊಳ್ಳುವವನೇ ನಿಜವಾದ ಸುಖಿ’ ಎಂಬ


Read More »

ಮೂಡಬಿದಿರಿಯಲ್ಲೊಂದು 75 ಸಂಭ್ರಮ ಕ್ಕೆ ಸ್ನೇಹ ಸೇತುವಾದ ಸಿಂಗಾಪೂರ ಬಿಲ್ಲವ ಅಸೋಸಿಯೇಷನ್


Share       ಮೂಡಬಿದಿರಿಯಿಂದ ಸಿಂಗಪೂರಿಗೆ 🇸🇬: ಜಾಗತಿಕ ಸಮುದಾಯ ಸಂಬಂಧಗಳ ಬಲವರ್ಧನೆ: ಜಾಗತಿಕ ಸಮುದಾಯ ಸಂಬಂಧಗಳನ್ನು ಬಲಪಡಿಸುವ ದಿಕ್ಕಿನಲ್ಲಿ ಮಹತ್ವಪೂರ್ಣ ಹೆಜ್ಜೆವಹಿಸಿ, ಬಿಲ್ಲವ ಅಸೋಸಿಯೇಷನ್ ಸಿಂಗಪೂರಿನ ಸ್ಥಾಪಕರಾದ ಅಶ್ವಿತ್ ಬಂಗೇರಾ ಅವರು, ಬಿಲ್ಲವ ಅಸೋಸಿಯೇಷನ್ ಮೂಡಬಿದಿರಿಯ


Read More »

ಬಿಲ್ಲವಾಸ್ ಕತಾರ್ ನ ಇತಿಹಾಸದಲ್ಲಿ ಇನ್ನೊಂದು ಮೈಲಿಗಲ್ಲು. ಉಚಿತ ಆರೋಗ್ಯತಪಾಸಣಾ ಶಿಬಿರ ಮತ್ತು ಬಿಲ್ಲವಾಸ್ ಕತಾರ್ ನ ಅಧೀಕೃತ ಲಾಂಛನ (ಲೋಗೋ) ಬಿಡುಗಡೆ


Share       Noಹಲವು ಸಮಾಜಮುಖಿ ಕಾರ್ಯಕ್ರಮಗಳ ಮೂಲಕ ಗಮನ ಸೆಳೆಯುತ್ತಿರುವ ಬಿಲ್ಲವಾಸ್ ಕತಾರ್ ರವರ  ವತಿಯಿಂದ ದಿನಾಂಕ ೧೧.೦೪.೨೦೨೫ ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಕಿಮ್ಸ್ ಮೆಡಿಕಲ್ ಸೆಂಟರ್, ಅಲ್ ಮಿಶಾಫ್, ಕತಾರ್ ಅವರ


Read More »

“ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ ” ಪ್ರತಿಭಾ ಕುಳಾಯಿ ಆಯ್ಕೆ 


Share       ಮಂಗಳೂರು: ಸಮಾಜ ಸೇವೆಗಾಗಿ ಕುಳಾಯಿ ಫೌಂಡೇಶನ್ ರಚಿಸಿ ೫೦೦ಕ್ಕೂ ಹೆಚ್ಚು ಮಹಿಳೆ ಮತ್ತು ಮಕ್ಕಳಿಗೆ ಬದುಕು ಕಟ್ಟಿಕೊಡುತ್ತಿರುವ, ಯುವ ರಾಜಕಾರಣಿ ಪ್ರತಿಭಾ ಕುಳಾಯಿ, ವಿಶ್ವವಾಣಿ ಗ್ಲೋಬಲ್ ಅಚೀವರ್ಸ್ ಅವಾರ್ಡ್ಸ್ ಗೆ ಆಯ್ಕೆಯಾಗಿದ್ದಾರೆ. ರಷ್ಯಾದ


Read More »

ವಿದೇಶದ ಇಸ್ರೇಲ್ ನಲ್ಲಿದ್ದು ತುಳುನಾಡಿನ ಸಂಕಷ್ಟದ ಕುಟುಂಬಕ್ಕೆ ಆರ್ಥಿಕ ಶಕ್ತಿ ತುಂಬಿದ ಮಹನೀಯ ವ್ಯಕ್ತಿ ದಿನಕರ ಪೂಜಾರಿ


Share       ನಾನು ನನ್ನವರು ಎಂಬ ಈ ಕಾಲ ಘಟ್ಟದಲ್ಲಿ ಸಮಾನ ಮನಸ್ಕರ ಜೊತೆ  ಸೇರಿ ದುಡಿದದ್ದರಲ್ಲಿ ಸ್ವಲ್ಪ ಪಾಲನ್ನು ಸಮಾಜಕ್ಕಾಗಿ ವಿನಿಯೋಗಿಸುವ ಮಹೋನ್ನತ ಕಾರ್ಯಗೈಯುತ್ತಿರುವ ವ್ಯಕ್ತಿ ದಿನಕರ ಪೂಜಾರಿ. ವಿದೇಶದಲ್ಲಿದ್ದು ಸಂಕಷ್ಟದ ಕುಟುಂಬಕ್ಕೆ ಆರ್ಥಿಕ


Read More »